Homeಕವನನೀನೂ ಅಲ್ಲಿರಲಿಲ್ಲ: ಕಾಶ್ಮೀರದ ಜನರ ಸಂಕಟ, ತಲ್ಲಣ, ಅತಂತ್ರ-ಅನಿಶ್ಚಿತತೆಯನ್ನು ಕಟ್ಟಿಕೊಡುವ ಕವಿತೆ

ನೀನೂ ಅಲ್ಲಿರಲಿಲ್ಲ: ಕಾಶ್ಮೀರದ ಜನರ ಸಂಕಟ, ತಲ್ಲಣ, ಅತಂತ್ರ-ಅನಿಶ್ಚಿತತೆಯನ್ನು ಕಟ್ಟಿಕೊಡುವ ಕವಿತೆ

- Advertisement -
- Advertisement -

ಕಾಶ್ಮೀರಕ್ಕೆ ವಿಶೇಷ ಸ್ಥಾನ ನೀಡಿದ್ದ 370 ವಿಧಿಯನ್ನು ರದ್ದುಗೊಳಿಸಿ ಆಗಸ್ಟ್ 5ಕ್ಕೆ ಒಂದು ವರ್ಷ. ಹಲವು ತಿಂಗಳುಗಳ ಕಾಲ ಹೇರಿದ್ದ ಕರ್ಫ್ಯೂ ಸಂದರ್ಭದಲ್ಲಿ ಕಾಶ್ಮೀರದ ಸಾಮಾನ್ಯ ಜನರ ಸಂಕಟ, ತಲ್ಲಣ, ಅತಂತ್ರ-ಅನಿಶ್ಚಿತತೆಯನ್ನು ಕಟ್ಟಿಕೊಡುವ ಈ ಕಾಶ್ಮೀರಿ ಕವಿತೆಗಳನ್ನು ಸಂವರ್ಥ ಸಾಹಿಲ್ ಕನ್ನಡಕ್ಕೆ ಅನುವಾದಿಸಿದ್ದಾರೆ.

ನಾವು ಮುಷ್ಠಿ ಬಿಚ್ಚಿದರೆ

ಅದು ಮತ್ತೊಂದು ಯುದ್ಧವನ್ನು

ಬಿಗಿಹಿಡಿಯಲು.

ಬೇಲಿಯ ಮೇಲೆ ಬಿದ್ದು ಸಾಯುತ್ತಾರೆ

ನಮ್ಮ ಜನ ಬಾಗಿಲ ಹಿಂದುಗಡೆ

ನೇತುಹಾಕಿದ ಬಟ್ಟೆಯಂತೆ.

ಬೆಚ್ಚಗಿನ ವಸ್ತ್ರ ತೊಟ್ಟು ಮಕ್ಕಳು

ಮಂದ ಬೆಳಕಿನ ಓಣಿಯಲ್ಲಿ

ಆಟದ ಗನ್ ಹಿಡಿದು

ಒಬ್ಬರನ್ನೊಬ್ಬರು ಎದುರಾಗುತ್ತಾರೆ.

“ಘನತೆಯ ಸಾವಾಗಿರಲಿ”

ಎಂದು ಒಬ್ಬ ಬೊಬ್ಬಿಡುತ್ತಾನೆ

ಮತ್ತೊಬ್ಬ ನೆಲಕ್ಕುರುಳುವ

ನಟನೆ ಮಾಡುತ್ತಾನೆ.

ಸದಾ ಯುದ್ಧದಲ್ಲಿರುವ

ಮಕ್ಕಳು ನಾವು

ಯುದ್ಧದ ಮಕ್ಕಳು ನಾವು.

ಮುಯಿನ್ ಮೆಹ್ರಾಜ್

***

 

ಸಂಶಯಿಸಬೇಡ ಪ್ರಶ್ನಿಸಬೇಡ ನನ್ನನು

ಹೇಳುತೇನೆ ಕೇಳು ನನ್ನ ಕಾವ್ಯದ ಶಕ್ತಿಯ

ನನ್ನ ಕಾವ್ಯವೊಂದು ಜಾದೂ ಅಲ್ಲವೇ ಅಲ್ಲ

ಅದನ್ನು ಮೀರಿದ

ಪವಾಡವನ್ನೇ ತನ್ನೊಳಗೆ ಇರಿಸಿಕೂಂಡ

ಕಾವ್ಯ ನನ್ನದು

ನಿನ್ನ ಬಾಂಬುಗಳನ್ನು ಹಕ್ಕಿಯಾಗಿಸಬಲ್ಲದು

ನಿನ್ನ ಕಾಡತೂಸುಗಳನ್ನು ಪ್ರಾಸವಾಗಿಸಬಲ್ಲದು

ನಿನ್ನ ಚಿತ್ರಹಿಂಸೆಯನ್ನು ಸ್ವರಸಮ್ಮೇಳನವಾಗಿಸಬಲ್ಲದು

ನಿನಗೆಂದೂ ಅರ್ಥವಾಗದು ನನ್ನ ಕಾವ್ಯ

ಆದರೂ ನಾನು ಹಾಡುವುದನ್ನು ನಿಲ್ಲಿಸುವುದಿಲ್ಲ

ಯಾಕೆಂದರದು ನಿನ್ನ ವಿಷವನ್ನು ನಿಷ್ಕ್ರಿಯಗೊಳಿಸಬಲ್ಲದು

ನಿನ್ನ ಸಂಸತ್ತನ್ನು ಬುಡಸಮೇತ ನಡುಗಿಸಬಲ್ಲದು

ನನ್ನ ಕಾವ್ಯ ನಿನ್ನ ಚರ್ಮವನ್ನು ಸಿಗಿದು

ನೀ ಬಚ್ಚಿಡುವ ನಿನ್ನ ಘೋರ ವಿಕಾರವನ್ನು ಬಿಚ್ಚಿಡಬಲ್ಲದು

ಕಣ್ಣೀರನ್ನು ಪ್ರವಾಹವಾಗಿಸಬಲ್ಲದು ನನ್ನ ಕಾವ್ಯ

ಪ್ರವಾಹವನ್ನು ಚಂಡಮಾರುತವಾಗಿಸಬಲ್ಲದು

ಚಂಡಮಾರುತವನ್ನು ಹೊಸ ಮುಂಜಾವಿನ

ಸ್ವಾತಂತ್ರ ಮತ್ತು ಭರವಸೆಯಾಗಿಸಬಲ್ಲದು

ನಿನ್ನ ನಾಲಿಗೆಗೆ ರುಚಿಸದೆ ಹೋಗಬಹುದು ನನ್ನ ಕಾವ್ಯ

ಆದರೆ ನನ್ನ ಹೃದಯಕ್ಕೆ ಅದರ ಕಹಿಯೇ ಔಷದ

ನಿನ್ನ ಕಿವಿಗಳಿಗೆ ಹಾಯಾಗಿ ಕೇಳಿಸದೆ ಇರಬಹುದು

ಆದರೆ ಅವುಗಳ ತಪ್ಪಿದ ಪ್ರಾಸ ತಪ್ಪಿದ ಛಂದಸ್ಸು

ನನ್ನ ಎದೆಯ ಬಡಿತವನ್ನು ಧ್ವನಿಸುತ್ತದೆ

ಅದು ನನ್ನ ಕನಸನ್ನು ಜೀವಂತವಾಗಿರಿಸುತ್ತದೆ

ಸ್ವಾತಂತ್ರದ ಕನಸು

ಎಚ್ಚರ!

ನನ್ನ ಕಾವ್ಯ ಸುಡಬಲ್ಲದು ನಿನ್ನನು

ಹಾಗಾಗಿ ಓದು

ಗಮನವಿಟ್ಟು ಓದು

ಆಸ್ವಾದಿಸು

ನಿನ್ನ ದಬ್ಬಾಳಿಕೆಯ ಫಿರಂಗಿಯಿಂದ ಹೊರಮ್ಮಲಾರದ್ದು

ನನ್ನ ಬೇಗುದಿಯ ಗರ್ಭದಿಂದ ಹೊರಹೊಮ್ಮುವುದು.

ತನ್ನ ಹೆಸರನ್ನು ಬಹಿರಂಗಪಡಿಸಲು ಇಚ್ಚಿಸದ ಕಾಶ್ಮೀರದ ಕವಯತ್ರಿ

***

ನಾನು

ವ್ಯಕ್ತಪಡಿಸುವ ಪ್ರತಿ ಆಲೋಚನೆಗೆ, ಸಂದಾಯ ಪಡೆಯುತ್ತೇನೆ

ಬರೆಯುವ ಪ್ರತಿ ಅಕ್ಷರಕ್ಕೆ, ಸಂದಾಯ ಪಡೆಯುತ್ತೇನೆ

ಕೂಗುವ ಪ್ರತಿ ಘೋಷಣೆಗೆ, ಸಂದಾಯ ಪಡೆಯುತ್ತೇನೆ

ಎಸೆಯುವ ಪ್ರತಿ ಕಲ್ಲಿಗೂ, ಸಂದಾಯ ಪಡೆಯುತ್ತೇನೆ

ನಾನು

ದೋಚಿದ ಬಂದೂಕಿಗೆ ಸಂದಾಯ ಪಡೆಯುತ್ತೇನೆ

ನನ್ನೆದೆ ಸೀಳಿದ ಗುಂಡಿಗೆ ಸಂದಾಯ ಪಡೆಯುತ್ತೇನೆ

ಅಂತ್ಯಕ್ರಿಯೆಗಳಲ್ಲಿ ಪಾಲ್ಗೊಳ್ಳುವುದಕ್ಕೆ ಸಂದಾಯ ಪಡೆಯುತ್ತೇನೆ

ಹುತಾತ್ಮರ ಮನೆಗೆ ಭೇಟಿ ನೀಡುವುದಕ್ಕೆ ಸಂದಾಯ ಪಡೆಯುತ್ತೇನೆ

ನೀನು

ನಮ್ಮ ಕಣಿವೆಗೆ ನುಗ್ಗಿದಾಗ, ಸಂದಾಯ ಪಡೆದಿರುವೆ

ಇಲ್ಲಿ ಕಳೆಯುವ ಪ್ರತಿ ದಿನಕ್ಕೂ ಸಂದಾಯ ಪಡೆದಿರುವೆ

ನಿನ್ನಿಂದಾದ ಪೀಡನೆ, ಚಿತ್ರಹಿಂಸೆ, ಕೊಲೆ, ದಹನಕ್ಕೆ ಸಂದಾಯ ಪಡೆದಿರುವೆ

ನಾನು ಸಂದಾಯ ಪಡೆಯುತ್ತೇನೆ ಎನ್ನುವುದಕ್ಕೂ ಸಂದಾಯ ಪಡೆದಿರುವೆ

ನನ್ನ ಪ್ರತಿಭಟನೆಯ ಪ್ರತಿ ರೂಪವೂ ಸಂದಾಯ ಪಡೆದಿದ್ದರೆ

ನಿನ್ನ ಆಕ್ರಮಣವೂ ಸಂದಾಯ ಪಡೆದಿದೆ

ವ್ಯತ್ಯಾಸವಿಷ್ಟೆ:

ಹಣ ಮತ್ತು ಭಡ್ತಿಯ ಮೂಲಕ ನೀ ಸಂದಾಯ ಪಡೆದರೆ

ನಾನು ನಿನ್ನ ಅತಿಕ್ರಮಣವನ್ನು ಅಂತ್ಯಗೊಳಿಸುವ

ಭರವಸೆಯನ್ನು ಸಂದಾಯವಾಗಿ ಪಡೆಯುತ್ತೇನೆ.

ನಾಸಿರ್ ಪಟಿಗರು

***

ನೀನು ಅಲ್ಲಿರಲಿಲ್ಲ

ಹೌದು, ನೀನು ಅಲ್ಲಿರಲಿಲ್ಲ

ನನ್ನ ತಲೆಯ ಮೇಲಿನ ಸ್ಕಾರ್ಫ್

ಅವರು ಹಿಡಿದೆಳೆದು ವಶಪಡಿಸಿಕೊಂಡಾಗ

ಕಂಡಿಲ್ಲ ನೀನು

ಕಗ್ಗತ್ತಲ ರಾತ್ರಿಯಲ್ಲಿ ಅವರು

ನಮ್ಮ ಮನೆಯನ್ನು ನುಗ್ಗುವುದನ್ನು

ಉದ್ದೇಶಪೂರ್ವಕವಾಗಿಯೇ

ನಮ್ಮ ಉಗ್ರಾಣವನ್ನೇ ಆಯ್ದು

ಚಹಾದ ಸೊಪ್ಪಿಗೆ ಅರಶಿಣ ಬೆರಸುತ್ತಿದ್ದರು

ಅಲ್ಲಿ ಸಣ್ಣ ಸಂದೊಂದರಿಂದ

ಇಣುಕಿ ನೋಡುತ್ತಿದ್ದೆ ನಾನು

ಗಂಟೆಗಟ್ಟಲೆ

ನನ್ನಮ್ಮನ ಅಳುವನ್ನು, ಚೀರನ್ನು

ಆಕೆ ಮರಗಟ್ಟುವತನಕ

ಅವರು ಒದೆಯುತ್ತಿದ್ದದ್ದನ್ನು

ನೀನು ಕೇಳಿಲ್ಲ

ಅವರು ವಾಚಾಮಗೋಚರವಾಗಿ

ನನ್ನ ಬಯ್ಯುವುದನ್ನು

ಸುತ್ತಲಿನ ಹೊಲಸಿಗಾಗಿ

ಅವರನ್ನು ನಾ ದುರುಗುಟ್ಟಿ ನೋಡಿದಾಗ

ಹೇಗನ್ನಿಸಬೇಡ

ಏಕಕಾಲಕ್ಕೆ ನೂರಾರು ಕಲ್ಲುಗಳನ್ನು

ಅವರು ಎಸೆದಾಗ

ಕಿಟಕಿಯ ಗಾಜನ್ನಲ್ಲ

ಇರುಳಿನ ನಿಶಬ್ದತೆಯನ್ನು ಒಡೆಯಲು

ಒಂದೇ ಏಟಿಗೆ ಇಲ್ಲವಾಗಿಸಿದಾಗ

ಮನೆಯ ಒಬ್ಬೇಒಬ್ಬ ದುಡಿಯುವವನನ್ನು

ನೀನು ಇರಲಿಲ್ಲ

ಇವಕ್ಕೆಲ್ಲ ಸಾಕ್ಷಿಯಾಗಲು.

ಸುಂಟರಗಾಳಿಯಂತೆ ಬಂದು

ಆತನನ್ನು ಅವರು ಗಿರಗಿರ ಸುತ್ತಿಸಿದ

ಆ ಇರುಳು

ಅವರು ನೂಕಿದ ಮತ್ತು ಕಪಾಳಕ್ಕೆ ಹೊಡೆದ ಸದ್ದು

ಇಂದಿಗೂ ನನ್ನ ಕಿವಿಯಲ್ಲಿ ಗುಯ್ಗುಟ್ಟುತ್ತಿದೆ

ದೀರ್ಘವಾದ ‘ಬೀಪ್’ ಸದ್ದನ್ನು ಹಿಂಬಾಲಿಸುವ

ರಭಸದ ಆ ಪ್ರತಿ ತುಳಿತ

ಆಕ್ರಮಣಕ್ಕೆ ಬೆದರಿ

ಕೇಳಲಿಲ್ಲ ನಮ್ಮ ತಪ್ಪೇನೆಂದು

ನಾನು ನೋಡಿದ್ದು, ಮರುಕಪಟ್ಟಿದ್ದು

ಎಲ್ಲವೂ ಮೌನದಲ್ಲಿ

ಶಾಂತ ಸಮುದ್ರ ತೀರದಂತೆ

ಈಗ ನನ್ನಣ್ಣನೂ ಇಲ್ಲ.

ಅಮ್ಮನ ಉಳುಕಿಗೆ ಈಗ

ನೋವಿನ ಅನುಭವವೂ ಆಗುತ್ತಿಲ್ಲ

ಅಪ್ಪ ಅಳುತ್ತಾರೆ

ಕಣ್ಣೀರು ಕೆನ್ನೆಯ ಮೇಲೆ

ಜಾರದ ಹಾಗೆ.

ಈಗ ನಾನು ಬೀದಿಯ ಮೇಲಿದ್ದೇನೆ

ಯಾವುದೇ ಕಿರುಕುಳಕ್ಕೆ ಹೆದರದೆ

ನಮ್ಮ ಮನೆಯ ಮೇಲೆ ನೀನೆಸೆದ

ಅದೇ ಕಲ್ಲುಗಳನ್ನು ಈಗ

ನಾನು ನಿನ್ನತ್ತ ಎಸೆಯುತ್ತೇನೆ

ನೀನು ನನ್ನ ಸಹೋದರರನ್ನು

ಅಟ್ಟಿಸಿದಂತೆ ನಿನ್ನನ್ನು ಅಟ್ಟಾಡಿಸಿ

ಓಡಿ ಹೋಗುವಂತೆ ಮಾಡುತ್ತೇನೆ

ನಿನ್ನಿಂದ ಕಿತ್ತುಕೊಳ್ಳುತೇನೆ

ನಿನ್ನ ಬಂದೂಕನ್ನು

ನೀನು ನನ್ನ ಸ್ಕಾರ್ಫ್ ಅನ್ನು

ನನ್ನಿಂದ ಕಿತ್ತುಕೊಂಡಂತೆ

ನಿನ್ನ ಮೇಲೆ ಮರುಪ್ರಯೋಗಿಸುತ್ತೇನೆ

ನನ್ನ ಮೇಲೆ ನೀ ಪ್ರಯೋಗಿಸಿದ್ದ

ಆ ಎಲ್ಲಾ ಬಯ್ಗುಳಗಳನ್ನು

ನನ್ನ ವಲಯವನ್ನು ನನ್ನಿಂದ ಕಸಿದುಕೊಂಡರೆ

ಏನಾಗಬಹುದೆಂಬುದರ ಸೂಚನೆಯಷ್ಟೆ ಇದು.

ಇಕ್ರಾ ಅಖೂನ್

ಕನ್ನಡಾನುವಾದ: ಸಂವರ್ತ ‘ಸಾಹಿಲ್’

ಇದನ್ನು ಓದಿ: ದೇಗುಲದಲ್ಲಿ ದೇವರಿಲ್ಲ; 120 ವರ್ಷ ಹಳೆಯ ರವೀಂದ್ರನಾಥ ಠಾಕೂರರ ಕವಿತೆ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...