Homeಕವನನೀನೂ ಅಲ್ಲಿರಲಿಲ್ಲ: ಕಾಶ್ಮೀರದ ಜನರ ಸಂಕಟ, ತಲ್ಲಣ, ಅತಂತ್ರ-ಅನಿಶ್ಚಿತತೆಯನ್ನು ಕಟ್ಟಿಕೊಡುವ ಕವಿತೆ

ನೀನೂ ಅಲ್ಲಿರಲಿಲ್ಲ: ಕಾಶ್ಮೀರದ ಜನರ ಸಂಕಟ, ತಲ್ಲಣ, ಅತಂತ್ರ-ಅನಿಶ್ಚಿತತೆಯನ್ನು ಕಟ್ಟಿಕೊಡುವ ಕವಿತೆ

- Advertisement -
- Advertisement -

ಕಾಶ್ಮೀರಕ್ಕೆ ವಿಶೇಷ ಸ್ಥಾನ ನೀಡಿದ್ದ 370 ವಿಧಿಯನ್ನು ರದ್ದುಗೊಳಿಸಿ ಆಗಸ್ಟ್ 5ಕ್ಕೆ ಒಂದು ವರ್ಷ. ಹಲವು ತಿಂಗಳುಗಳ ಕಾಲ ಹೇರಿದ್ದ ಕರ್ಫ್ಯೂ ಸಂದರ್ಭದಲ್ಲಿ ಕಾಶ್ಮೀರದ ಸಾಮಾನ್ಯ ಜನರ ಸಂಕಟ, ತಲ್ಲಣ, ಅತಂತ್ರ-ಅನಿಶ್ಚಿತತೆಯನ್ನು ಕಟ್ಟಿಕೊಡುವ ಈ ಕಾಶ್ಮೀರಿ ಕವಿತೆಗಳನ್ನು ಸಂವರ್ಥ ಸಾಹಿಲ್ ಕನ್ನಡಕ್ಕೆ ಅನುವಾದಿಸಿದ್ದಾರೆ.

ನಾವು ಮುಷ್ಠಿ ಬಿಚ್ಚಿದರೆ

ಅದು ಮತ್ತೊಂದು ಯುದ್ಧವನ್ನು

ಬಿಗಿಹಿಡಿಯಲು.

ಬೇಲಿಯ ಮೇಲೆ ಬಿದ್ದು ಸಾಯುತ್ತಾರೆ

ನಮ್ಮ ಜನ ಬಾಗಿಲ ಹಿಂದುಗಡೆ

ನೇತುಹಾಕಿದ ಬಟ್ಟೆಯಂತೆ.

ಬೆಚ್ಚಗಿನ ವಸ್ತ್ರ ತೊಟ್ಟು ಮಕ್ಕಳು

ಮಂದ ಬೆಳಕಿನ ಓಣಿಯಲ್ಲಿ

ಆಟದ ಗನ್ ಹಿಡಿದು

ಒಬ್ಬರನ್ನೊಬ್ಬರು ಎದುರಾಗುತ್ತಾರೆ.

“ಘನತೆಯ ಸಾವಾಗಿರಲಿ”

ಎಂದು ಒಬ್ಬ ಬೊಬ್ಬಿಡುತ್ತಾನೆ

ಮತ್ತೊಬ್ಬ ನೆಲಕ್ಕುರುಳುವ

ನಟನೆ ಮಾಡುತ್ತಾನೆ.

ಸದಾ ಯುದ್ಧದಲ್ಲಿರುವ

ಮಕ್ಕಳು ನಾವು

ಯುದ್ಧದ ಮಕ್ಕಳು ನಾವು.

ಮುಯಿನ್ ಮೆಹ್ರಾಜ್

***

 

ಸಂಶಯಿಸಬೇಡ ಪ್ರಶ್ನಿಸಬೇಡ ನನ್ನನು

ಹೇಳುತೇನೆ ಕೇಳು ನನ್ನ ಕಾವ್ಯದ ಶಕ್ತಿಯ

ನನ್ನ ಕಾವ್ಯವೊಂದು ಜಾದೂ ಅಲ್ಲವೇ ಅಲ್ಲ

ಅದನ್ನು ಮೀರಿದ

ಪವಾಡವನ್ನೇ ತನ್ನೊಳಗೆ ಇರಿಸಿಕೂಂಡ

ಕಾವ್ಯ ನನ್ನದು

ನಿನ್ನ ಬಾಂಬುಗಳನ್ನು ಹಕ್ಕಿಯಾಗಿಸಬಲ್ಲದು

ನಿನ್ನ ಕಾಡತೂಸುಗಳನ್ನು ಪ್ರಾಸವಾಗಿಸಬಲ್ಲದು

ನಿನ್ನ ಚಿತ್ರಹಿಂಸೆಯನ್ನು ಸ್ವರಸಮ್ಮೇಳನವಾಗಿಸಬಲ್ಲದು

ನಿನಗೆಂದೂ ಅರ್ಥವಾಗದು ನನ್ನ ಕಾವ್ಯ

ಆದರೂ ನಾನು ಹಾಡುವುದನ್ನು ನಿಲ್ಲಿಸುವುದಿಲ್ಲ

ಯಾಕೆಂದರದು ನಿನ್ನ ವಿಷವನ್ನು ನಿಷ್ಕ್ರಿಯಗೊಳಿಸಬಲ್ಲದು

ನಿನ್ನ ಸಂಸತ್ತನ್ನು ಬುಡಸಮೇತ ನಡುಗಿಸಬಲ್ಲದು

ನನ್ನ ಕಾವ್ಯ ನಿನ್ನ ಚರ್ಮವನ್ನು ಸಿಗಿದು

ನೀ ಬಚ್ಚಿಡುವ ನಿನ್ನ ಘೋರ ವಿಕಾರವನ್ನು ಬಿಚ್ಚಿಡಬಲ್ಲದು

ಕಣ್ಣೀರನ್ನು ಪ್ರವಾಹವಾಗಿಸಬಲ್ಲದು ನನ್ನ ಕಾವ್ಯ

ಪ್ರವಾಹವನ್ನು ಚಂಡಮಾರುತವಾಗಿಸಬಲ್ಲದು

ಚಂಡಮಾರುತವನ್ನು ಹೊಸ ಮುಂಜಾವಿನ

ಸ್ವಾತಂತ್ರ ಮತ್ತು ಭರವಸೆಯಾಗಿಸಬಲ್ಲದು

ನಿನ್ನ ನಾಲಿಗೆಗೆ ರುಚಿಸದೆ ಹೋಗಬಹುದು ನನ್ನ ಕಾವ್ಯ

ಆದರೆ ನನ್ನ ಹೃದಯಕ್ಕೆ ಅದರ ಕಹಿಯೇ ಔಷದ

ನಿನ್ನ ಕಿವಿಗಳಿಗೆ ಹಾಯಾಗಿ ಕೇಳಿಸದೆ ಇರಬಹುದು

ಆದರೆ ಅವುಗಳ ತಪ್ಪಿದ ಪ್ರಾಸ ತಪ್ಪಿದ ಛಂದಸ್ಸು

ನನ್ನ ಎದೆಯ ಬಡಿತವನ್ನು ಧ್ವನಿಸುತ್ತದೆ

ಅದು ನನ್ನ ಕನಸನ್ನು ಜೀವಂತವಾಗಿರಿಸುತ್ತದೆ

ಸ್ವಾತಂತ್ರದ ಕನಸು

ಎಚ್ಚರ!

ನನ್ನ ಕಾವ್ಯ ಸುಡಬಲ್ಲದು ನಿನ್ನನು

ಹಾಗಾಗಿ ಓದು

ಗಮನವಿಟ್ಟು ಓದು

ಆಸ್ವಾದಿಸು

ನಿನ್ನ ದಬ್ಬಾಳಿಕೆಯ ಫಿರಂಗಿಯಿಂದ ಹೊರಮ್ಮಲಾರದ್ದು

ನನ್ನ ಬೇಗುದಿಯ ಗರ್ಭದಿಂದ ಹೊರಹೊಮ್ಮುವುದು.

ತನ್ನ ಹೆಸರನ್ನು ಬಹಿರಂಗಪಡಿಸಲು ಇಚ್ಚಿಸದ ಕಾಶ್ಮೀರದ ಕವಯತ್ರಿ

***

ನಾನು

ವ್ಯಕ್ತಪಡಿಸುವ ಪ್ರತಿ ಆಲೋಚನೆಗೆ, ಸಂದಾಯ ಪಡೆಯುತ್ತೇನೆ

ಬರೆಯುವ ಪ್ರತಿ ಅಕ್ಷರಕ್ಕೆ, ಸಂದಾಯ ಪಡೆಯುತ್ತೇನೆ

ಕೂಗುವ ಪ್ರತಿ ಘೋಷಣೆಗೆ, ಸಂದಾಯ ಪಡೆಯುತ್ತೇನೆ

ಎಸೆಯುವ ಪ್ರತಿ ಕಲ್ಲಿಗೂ, ಸಂದಾಯ ಪಡೆಯುತ್ತೇನೆ

ನಾನು

ದೋಚಿದ ಬಂದೂಕಿಗೆ ಸಂದಾಯ ಪಡೆಯುತ್ತೇನೆ

ನನ್ನೆದೆ ಸೀಳಿದ ಗುಂಡಿಗೆ ಸಂದಾಯ ಪಡೆಯುತ್ತೇನೆ

ಅಂತ್ಯಕ್ರಿಯೆಗಳಲ್ಲಿ ಪಾಲ್ಗೊಳ್ಳುವುದಕ್ಕೆ ಸಂದಾಯ ಪಡೆಯುತ್ತೇನೆ

ಹುತಾತ್ಮರ ಮನೆಗೆ ಭೇಟಿ ನೀಡುವುದಕ್ಕೆ ಸಂದಾಯ ಪಡೆಯುತ್ತೇನೆ

ನೀನು

ನಮ್ಮ ಕಣಿವೆಗೆ ನುಗ್ಗಿದಾಗ, ಸಂದಾಯ ಪಡೆದಿರುವೆ

ಇಲ್ಲಿ ಕಳೆಯುವ ಪ್ರತಿ ದಿನಕ್ಕೂ ಸಂದಾಯ ಪಡೆದಿರುವೆ

ನಿನ್ನಿಂದಾದ ಪೀಡನೆ, ಚಿತ್ರಹಿಂಸೆ, ಕೊಲೆ, ದಹನಕ್ಕೆ ಸಂದಾಯ ಪಡೆದಿರುವೆ

ನಾನು ಸಂದಾಯ ಪಡೆಯುತ್ತೇನೆ ಎನ್ನುವುದಕ್ಕೂ ಸಂದಾಯ ಪಡೆದಿರುವೆ

ನನ್ನ ಪ್ರತಿಭಟನೆಯ ಪ್ರತಿ ರೂಪವೂ ಸಂದಾಯ ಪಡೆದಿದ್ದರೆ

ನಿನ್ನ ಆಕ್ರಮಣವೂ ಸಂದಾಯ ಪಡೆದಿದೆ

ವ್ಯತ್ಯಾಸವಿಷ್ಟೆ:

ಹಣ ಮತ್ತು ಭಡ್ತಿಯ ಮೂಲಕ ನೀ ಸಂದಾಯ ಪಡೆದರೆ

ನಾನು ನಿನ್ನ ಅತಿಕ್ರಮಣವನ್ನು ಅಂತ್ಯಗೊಳಿಸುವ

ಭರವಸೆಯನ್ನು ಸಂದಾಯವಾಗಿ ಪಡೆಯುತ್ತೇನೆ.

ನಾಸಿರ್ ಪಟಿಗರು

***

ನೀನು ಅಲ್ಲಿರಲಿಲ್ಲ

ಹೌದು, ನೀನು ಅಲ್ಲಿರಲಿಲ್ಲ

ನನ್ನ ತಲೆಯ ಮೇಲಿನ ಸ್ಕಾರ್ಫ್

ಅವರು ಹಿಡಿದೆಳೆದು ವಶಪಡಿಸಿಕೊಂಡಾಗ

ಕಂಡಿಲ್ಲ ನೀನು

ಕಗ್ಗತ್ತಲ ರಾತ್ರಿಯಲ್ಲಿ ಅವರು

ನಮ್ಮ ಮನೆಯನ್ನು ನುಗ್ಗುವುದನ್ನು

ಉದ್ದೇಶಪೂರ್ವಕವಾಗಿಯೇ

ನಮ್ಮ ಉಗ್ರಾಣವನ್ನೇ ಆಯ್ದು

ಚಹಾದ ಸೊಪ್ಪಿಗೆ ಅರಶಿಣ ಬೆರಸುತ್ತಿದ್ದರು

ಅಲ್ಲಿ ಸಣ್ಣ ಸಂದೊಂದರಿಂದ

ಇಣುಕಿ ನೋಡುತ್ತಿದ್ದೆ ನಾನು

ಗಂಟೆಗಟ್ಟಲೆ

ನನ್ನಮ್ಮನ ಅಳುವನ್ನು, ಚೀರನ್ನು

ಆಕೆ ಮರಗಟ್ಟುವತನಕ

ಅವರು ಒದೆಯುತ್ತಿದ್ದದ್ದನ್ನು

ನೀನು ಕೇಳಿಲ್ಲ

ಅವರು ವಾಚಾಮಗೋಚರವಾಗಿ

ನನ್ನ ಬಯ್ಯುವುದನ್ನು

ಸುತ್ತಲಿನ ಹೊಲಸಿಗಾಗಿ

ಅವರನ್ನು ನಾ ದುರುಗುಟ್ಟಿ ನೋಡಿದಾಗ

ಹೇಗನ್ನಿಸಬೇಡ

ಏಕಕಾಲಕ್ಕೆ ನೂರಾರು ಕಲ್ಲುಗಳನ್ನು

ಅವರು ಎಸೆದಾಗ

ಕಿಟಕಿಯ ಗಾಜನ್ನಲ್ಲ

ಇರುಳಿನ ನಿಶಬ್ದತೆಯನ್ನು ಒಡೆಯಲು

ಒಂದೇ ಏಟಿಗೆ ಇಲ್ಲವಾಗಿಸಿದಾಗ

ಮನೆಯ ಒಬ್ಬೇಒಬ್ಬ ದುಡಿಯುವವನನ್ನು

ನೀನು ಇರಲಿಲ್ಲ

ಇವಕ್ಕೆಲ್ಲ ಸಾಕ್ಷಿಯಾಗಲು.

ಸುಂಟರಗಾಳಿಯಂತೆ ಬಂದು

ಆತನನ್ನು ಅವರು ಗಿರಗಿರ ಸುತ್ತಿಸಿದ

ಆ ಇರುಳು

ಅವರು ನೂಕಿದ ಮತ್ತು ಕಪಾಳಕ್ಕೆ ಹೊಡೆದ ಸದ್ದು

ಇಂದಿಗೂ ನನ್ನ ಕಿವಿಯಲ್ಲಿ ಗುಯ್ಗುಟ್ಟುತ್ತಿದೆ

ದೀರ್ಘವಾದ ‘ಬೀಪ್’ ಸದ್ದನ್ನು ಹಿಂಬಾಲಿಸುವ

ರಭಸದ ಆ ಪ್ರತಿ ತುಳಿತ

ಆಕ್ರಮಣಕ್ಕೆ ಬೆದರಿ

ಕೇಳಲಿಲ್ಲ ನಮ್ಮ ತಪ್ಪೇನೆಂದು

ನಾನು ನೋಡಿದ್ದು, ಮರುಕಪಟ್ಟಿದ್ದು

ಎಲ್ಲವೂ ಮೌನದಲ್ಲಿ

ಶಾಂತ ಸಮುದ್ರ ತೀರದಂತೆ

ಈಗ ನನ್ನಣ್ಣನೂ ಇಲ್ಲ.

ಅಮ್ಮನ ಉಳುಕಿಗೆ ಈಗ

ನೋವಿನ ಅನುಭವವೂ ಆಗುತ್ತಿಲ್ಲ

ಅಪ್ಪ ಅಳುತ್ತಾರೆ

ಕಣ್ಣೀರು ಕೆನ್ನೆಯ ಮೇಲೆ

ಜಾರದ ಹಾಗೆ.

ಈಗ ನಾನು ಬೀದಿಯ ಮೇಲಿದ್ದೇನೆ

ಯಾವುದೇ ಕಿರುಕುಳಕ್ಕೆ ಹೆದರದೆ

ನಮ್ಮ ಮನೆಯ ಮೇಲೆ ನೀನೆಸೆದ

ಅದೇ ಕಲ್ಲುಗಳನ್ನು ಈಗ

ನಾನು ನಿನ್ನತ್ತ ಎಸೆಯುತ್ತೇನೆ

ನೀನು ನನ್ನ ಸಹೋದರರನ್ನು

ಅಟ್ಟಿಸಿದಂತೆ ನಿನ್ನನ್ನು ಅಟ್ಟಾಡಿಸಿ

ಓಡಿ ಹೋಗುವಂತೆ ಮಾಡುತ್ತೇನೆ

ನಿನ್ನಿಂದ ಕಿತ್ತುಕೊಳ್ಳುತೇನೆ

ನಿನ್ನ ಬಂದೂಕನ್ನು

ನೀನು ನನ್ನ ಸ್ಕಾರ್ಫ್ ಅನ್ನು

ನನ್ನಿಂದ ಕಿತ್ತುಕೊಂಡಂತೆ

ನಿನ್ನ ಮೇಲೆ ಮರುಪ್ರಯೋಗಿಸುತ್ತೇನೆ

ನನ್ನ ಮೇಲೆ ನೀ ಪ್ರಯೋಗಿಸಿದ್ದ

ಆ ಎಲ್ಲಾ ಬಯ್ಗುಳಗಳನ್ನು

ನನ್ನ ವಲಯವನ್ನು ನನ್ನಿಂದ ಕಸಿದುಕೊಂಡರೆ

ಏನಾಗಬಹುದೆಂಬುದರ ಸೂಚನೆಯಷ್ಟೆ ಇದು.

ಇಕ್ರಾ ಅಖೂನ್

ಕನ್ನಡಾನುವಾದ: ಸಂವರ್ತ ‘ಸಾಹಿಲ್’

ಇದನ್ನು ಓದಿ: ದೇಗುಲದಲ್ಲಿ ದೇವರಿಲ್ಲ; 120 ವರ್ಷ ಹಳೆಯ ರವೀಂದ್ರನಾಥ ಠಾಕೂರರ ಕವಿತೆ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...