Homeಕರ್ನಾಟಕ'ನೀವೊಬ್ಬ ಕಾಮಿಡಿ ಪೀಸ್': ತನ್ನ ಮೇಲೆ ಜಾತಿ ತಾರತಮ್ಯ ಆರೋಪ ಮಾಡಿದ ವಕೀಲನ ವಿರುದ್ಧ ಹೈಕೋರ್ಟ್...

‘ನೀವೊಬ್ಬ ಕಾಮಿಡಿ ಪೀಸ್’: ತನ್ನ ಮೇಲೆ ಜಾತಿ ತಾರತಮ್ಯ ಆರೋಪ ಮಾಡಿದ ವಕೀಲನ ವಿರುದ್ಧ ಹೈಕೋರ್ಟ್ ನ್ಯಾಯಾಧೀಶ ಕಿಡಿ

- Advertisement -
- Advertisement -

ನ್ಯಾಯಾಧೀಶ ಮತ್ತು ವಕೀಲನ ನಡುವಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠ ಸೋಮವಾರ (ಜುಲೈ 28) ಅಸಾಧಾರಣ ಸಂದರ್ಭಕ್ಕೆ ಸಾಕ್ಷಿಯಾಯಿತು. ತನ್ನ ವಿರುದ್ದದ ವಕೀಲನ ಆರೋಪಗಳ ಕುರಿತು ಸ್ವತಃ ವಿಚಾರಣೆ ನಡೆಸಿದ ನ್ಯಾಯಾಧೀಶ, ವಕೀಲನ ವಿರುದ್ದ ಕಿಡಿಕಾರಿದರು.

ನ್ಯಾಯಮೂರ್ತಿ ಜಿ.ಆರ್ ಸ್ವಾಮಿನಾಥನ್ ಅವರು ಹಿರಿಯ ವಕೀಲ ಎಸ್‌. ವಂಚಿನಾಥನ್ ವಿರುದ್ದ ವಾಗ್ದಾಳಿ ನಡೆಸಿದ್ದು, ತನ್ನ ವಿರುದ್ದ ಜಾತಿ ಮತ್ತು ಕೋಮು ಪಕ್ಷಪಾತದ ಆರೋಪ ಮಾಡಿರುವ ವಂಚಿನಾಥನ್ ವಿರುದ್ದ ವಿಚಾರಣೆ ವೇಳೆ ಆಕ್ರೋಶ ವ್ಯಕ್ತಪಡಿಸಿದರು. ವಕೀಲ ವಂಚಿನಾಥನ್ ಅವರನ್ನು “ನೀವೊಬ್ಬರು ಕಾಮಿಡಿ ಪೀಸ್” ಎಂದು ಜರೆದರು.

ನ್ಯಾಯಮೂರ್ತಿ ಸ್ವಾಮಿನಾಥನ್ ಅವರು ನ್ಯಾಯಾಲಯದಲ್ಲಿ ಜಾತಿ ಪೂರ್ವಾಗ್ರಹ ಪ್ರದರ್ಶಿಸುತ್ತಿದ್ದಾರೆ ಎಂಬ ಆರೋಪಕ್ಕೆ ಸಂಬಂಧಪಟ್ಟಂತೆ ವಕೀಲ ವಂಚಿನಾಥನ್ ಅವರನ್ನು ನ್ಯಾಯಾಲಯಕ್ಕೆ ಕರೆಸಲಾಗಿತ್ತು. ತನ್ನ ವಿರುದ್ದ ಹೇಳಿಕೆ ನೀಡಿರುವ ವಂಚಿನಾಥನ್ ವಿರುದ್ದ ನ್ಯಾಯಮೂರ್ತಿ ಸ್ವಾಮಿನಾಥನ್ ‘ನ್ಯಾಯಾಂಗ ನಿಂದನೆ’ಯ ಆರೋಪ ಹೊರಿಸಿದ್ದಾರೆ ಎಂದು ವರದಿಯಾಗಿದೆ.

‘ಪೀಪಲ್ಸ್ ರೈಟ್ಸ್ ಪ್ರೊಟೆಕ್ಷನ್ ಸೆಂಟರ್’ ಸಂಸ್ಥೆಯ ರಾಜ್ಯ ಸಂಯೋಜಕ ಎಂಬ ಹೆಸರಿನಲ್ಲಿ ಜೂನ್ 14ರಂದು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಮತ್ತು ಇತರ ನ್ಯಾಯಾಧೀಶರಿಗೆ ಪತ್ರ ಬರೆದಿದ್ದ ವಕೀಲ ವಂಚಿನಾಥನ್ ನ್ಯಾಯಮೂರ್ತಿ ಸ್ವಾಮಿನಾಥನ್ ವಿರುದ್ಧ ಸೈದ್ಧಾಂತಿಕ ಪಕ್ಷಪಾತ, ನ್ಯಾಯಾಂಗ ನೇಮಕಾತಿಗಳಲ್ಲಿ ಜಾತಿ ಪಕ್ಷಪಾತ ಮತ್ತು ಕೋಮು ಒಲವು ಸೇರಿದಂತೆ 15 ಗಂಭೀರ ಆರೋಪಗಳನ್ನು ಮಾಡಿದ್ದರು. ಇತರ ವಿಷಯಗಳ ಜೊತೆಗೆ, ವಿವಾದಾತ್ಮಕ ಲಾವಣ್ಯ ಆತ್ಮಹತ್ಯೆ ಪ್ರಕರಣದಲ್ಲಿ ನ್ಯಾಯಾಧೀಶರ ಪಾತ್ರ ಮತ್ತು ದ್ರಾವಿಡ ಮಾದರಿ ಆಡಳಿತದ ವಿರುದ್ಧ ಅವರ ಹೇಳಿಕೆಗಳನ್ನು ಉಲ್ಲೇಖಿಸಿದ್ದರು ಎಂದು ವರದಿಗಳು ಹೇಳಿವೆ.

ಪತ್ರ ಬರೆಯುವುದರ ಜೊತೆಗೆ ನ್ಯಾಯಮೂರ್ತಿ ಸ್ವಾಮಿನಾಥನ್ ವಿರುದ್ದ ವಂಚಿನಾಥನ್ ಅವರು ಯೂಟ್ಯೂಬ್ ಚಾನೆಲ್‌ಗಳಲ್ಲಿ ಸಂದರ್ಶನಗಳನ್ನು ನೀಡಿದ್ದರು. ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ಗಳನ್ನು ಹಾಕಿದ್ದರು. ಸಂದರ್ಶನವೊಂದರಲ್ಲಿ, ಒಬ್ಬ ದಲಿತ ಹಿರಿಯ ವಕೀಲರನ್ನು ಗುರಿಯಾಗಿಸಲಾಗಿದೆ. ಆದರೆ, ಬ್ರಾಹ್ಮಣ ವಕೀಲರಿಗೆ ಯಾವುದೇ ಕ್ರಮ ತೆಗೆದುಕೊಳ್ಳಲಾಗಿಲ್ಲ ಎಂದು ಸ್ವಾಮಿನಾಥನ್ ವಿರುದ್ದ ವಕೀಲ ವಂಚಿನಾಥನ್ ಆರೋಪ ಮಾಡಿದ್ದರು.

ಇದನ್ನು ನ್ಯಾಯಾಂಗ ನಿಂದನೆ ಎಂದು ಪರಿಗಣಿಸಿ ವಕೀಲ ವಂಚಿನಾಥನ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಲಾಗಿತ್ತು. ಅದರಂತೆ, ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠದ ಮುಂದೆ ಜುಲೈ 24ರಂದು ವಂಚಿನಾಥನ್ ಹಾಜರಾಗಿದ್ದರು. ಅಲ್ಲಿ, ಸ್ವತಃ ನ್ಯಾಯಮೂರ್ತಿ ಸ್ವಾಮಿನಾಥನ್ ಮತ್ತು ಕೆ. ರಾಜಶೇಖರ್ ಅವರ ಪೀಠ ವಂಚಿನಾಥನ್ ಅವರ ವಿಚಾರಣೆ ನಡೆಸಿದೆ. ಆದರೆ, ನ್ಯಾಯಾಲಯದ ಪ್ರಶ್ನೆಗೆ ಮೌಖಿಕವಾಗಿ ಉತ್ತರಿಸಲು ವಂಚಿನಾಥನ್ ನಿರಾಕರಿಸಿದ್ದರು. ಲಿಖಿತ ಉತ್ತರ ನೀಡುವುದಾಗಿ ಹೇಳಿದ್ದರು. ಹಾಗಾಗಿ, ವಿಚಾರಣೆಯನ್ನು ಜುಲೈ 28ಕ್ಕೆ ಮುಂದೂಡಲಾಗಿತ್ತು.

ಜುಲೈ 28ರಂದು, ಅಂದರೆ ಸೋಮವಾರ ವಿಚಾರಣೆ ವೇಳೆ, ನ್ಯಾಯಮೂರ್ತಿ ಸ್ವಾಮಿಥಾನ್ ವಕೀಲ ವಂಚಿನಾಥನ್ ವಿರುದ್ದ ಕಿಡಿಕಾರಿದ್ದಾರೆ. “ನಿಮ್ಮನೆಲ್ಲ ಕ್ರಾಂತಿಕಾರಿಗಳು ಎಂದವರು ಯಾರು? ನೀವೊಬ್ಬರು ಕಾಮಿಡಿ ಪೀಸ್” ಎಂದು ವಕೀಲನ ವಿರುದ್ದ ಹೇಳಿಕೆ ನೀಡಿದ್ದಾರೆ.

“ವಂಚಿನಾಥನ್ ಅವರೇ, ನನ್ನ ತೀರ್ಪುಗಳನ್ನು ಟೀಕಿಸುವ ನಿಮ್ಮ ಹಕ್ಕನ್ನು ನಾನು 100 ಶೇಕಡ ಗೌರವಿಸುತ್ತೇನೆ. ಆದರೆ, ನೀವು ಜಾತಿ ಪಕ್ಷಪಾತವನ್ನು ಆರೋಪಿಸಿದಾಗ ವಿಷಯ ವಿಭಿನ್ನ ತಿರುವು ಪಡೆಯುತ್ತವೆ” ಎಂದಿದ್ದಾರೆ.

ಬಾರ್ & ಬೆಂಚ್ ಪ್ರಕಾರ, “ಕಳೆದ ನಾಲ್ಕು ವರ್ಷಗಳಿಂದ ನೀವು ನನ್ನ ವಿರುದ್ಧ ಅಪಪ್ರಚಾರ ಮಾಡುತ್ತಿದ್ದೀರಿ. ಆದರೆ, ನಾನು ನಿಮ್ಮ ವಿರುದ್ದ ಯಾವುದೇ ಕ್ರಮ ಕೈಗೊಂಡಿಲ್ಲ. ಏಕೆಂದರೆ, ಕಾರ್ಯ ವಿಧಾನದ ನಿಯಮಗಳ ಬಗ್ಗೆ ನಮಗೆ ಗೊತ್ತಿದೆ. ಆದರೆ, ನಾವು ಮೂರ್ಖರಲ್ಲ. ನಾವು ಈ ಪ್ರಕರಣವನ್ನು ಮುಖ್ಯ ನ್ಯಾಯಾಧೀಶರು ಅಥವಾ ಸೂಕ್ತ ಪೀಠದ ಮುಂದೆ ಇಡುತ್ತೇವೆ. ಇಡೀ ವ್ಯವಸ್ಥೆಯೇ ನಮ್ಮ ವಿರುದ್ಧ ಇದೆ ಎಂದು ಗೊತ್ತಿದೆ. ಆದರೆ, ನಾವು ಭಯಪಡುವುದಿಲ್ಲ, ನಮ್ಮನ್ನು ಬೆದರಿಸಲು ಸಾಧ್ಯವಿಲ್ಲ. ನ್ಯಾಯಾಂಗದ ಸ್ವಾತಂತ್ರ್ಯ ಸರ್ವೋಚ್ಚವಾಗಿದೆ” ಎಂದು ನ್ಯಾಯಮೂರ್ತಿ ಸ್ವಾಮಿನಾಥನ್ ಹೇಳಿದ್ದಾರೆ.

ಇದೇ ವೇಳೆ, ವಂಚಿನಾಥನ್ ಅವರು ಸುಪ್ರೀಂ ಕೋರ್ಟ್‌ಗೆ ಕಳುಹಿಸಿರುವ ಗೌಪ್ಯ ಪತ್ರಕ್ಕೂ, ಅವರ ವಿರುದ್ದದ ವಿಚಾರಣೆಗೂ ಯಾವುದೇ ಸಂಬಂಧವಿಲ್ಲ ಎಂದು ಪೀಠ ಸ್ಪಷ್ಟಪಡಿಸಿದೆ.

ಸೋಮವಾರ ಪ್ರಕರಣದ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿಯ ಪೀಠಕ್ಕೆ ಪ್ರಸ್ತಾಪಿಸಲಾಗಿದೆ. ಏಕೆಂದರೆ, ಇದು ನ್ಯಾಯಮೂರ್ತಿ ಸ್ವಾಮಿನಾಥನ್ ಅವರಿಗೆ ಸಂಬಂಧಪಡುವುದರಿಂದ, ಸ್ವತಃ ಅವರೇ ವಿಚಾರಣೆ ನಡೆಸುವುದು ಸೂಕ್ತವಲ್ಲ ಎಂದು ತೀರ್ಮಾನಿಸಲಾಗಿದೆ. ಹಾಗಾಗಿ, ಮುಖ್ಯ ನ್ಯಾಯಮೂರ್ತಿ ಮುಂದೆ ಯಾವ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂಬುವುದರ ಮೇಲೆ ಪ್ರಕರಣದ ಬೆಳವಣಿಗೆ ನಡೆಯಲಿದೆ.

ಛತ್ತೀಸ್‌ಗಢ| ಕ್ರಿಶ್ಚಿಯನ್ ಸಮುದಾಯದಲ್ಲಿ ಆತಂಕ ಮೂಡಿಸಿದ ಸನ್ಯಾಸಿನಿಯರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...