Homeಕರ್ನಾಟಕ'ನೀವೊಬ್ಬ ಕಾಮಿಡಿ ಪೀಸ್': ತನ್ನ ಮೇಲೆ ಜಾತಿ ತಾರತಮ್ಯ ಆರೋಪ ಮಾಡಿದ ವಕೀಲನ ವಿರುದ್ಧ ಹೈಕೋರ್ಟ್...

‘ನೀವೊಬ್ಬ ಕಾಮಿಡಿ ಪೀಸ್’: ತನ್ನ ಮೇಲೆ ಜಾತಿ ತಾರತಮ್ಯ ಆರೋಪ ಮಾಡಿದ ವಕೀಲನ ವಿರುದ್ಧ ಹೈಕೋರ್ಟ್ ನ್ಯಾಯಾಧೀಶ ಕಿಡಿ

- Advertisement -
- Advertisement -

ನ್ಯಾಯಾಧೀಶ ಮತ್ತು ವಕೀಲನ ನಡುವಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠ ಸೋಮವಾರ (ಜುಲೈ 28) ಅಸಾಧಾರಣ ಸಂದರ್ಭಕ್ಕೆ ಸಾಕ್ಷಿಯಾಯಿತು. ತನ್ನ ವಿರುದ್ದದ ವಕೀಲನ ಆರೋಪಗಳ ಕುರಿತು ಸ್ವತಃ ವಿಚಾರಣೆ ನಡೆಸಿದ ನ್ಯಾಯಾಧೀಶ, ವಕೀಲನ ವಿರುದ್ದ ಕಿಡಿಕಾರಿದರು.

ನ್ಯಾಯಮೂರ್ತಿ ಜಿ.ಆರ್ ಸ್ವಾಮಿನಾಥನ್ ಅವರು ಹಿರಿಯ ವಕೀಲ ಎಸ್‌. ವಂಚಿನಾಥನ್ ವಿರುದ್ದ ವಾಗ್ದಾಳಿ ನಡೆಸಿದ್ದು, ತನ್ನ ವಿರುದ್ದ ಜಾತಿ ಮತ್ತು ಕೋಮು ಪಕ್ಷಪಾತದ ಆರೋಪ ಮಾಡಿರುವ ವಂಚಿನಾಥನ್ ವಿರುದ್ದ ವಿಚಾರಣೆ ವೇಳೆ ಆಕ್ರೋಶ ವ್ಯಕ್ತಪಡಿಸಿದರು. ವಕೀಲ ವಂಚಿನಾಥನ್ ಅವರನ್ನು “ನೀವೊಬ್ಬರು ಕಾಮಿಡಿ ಪೀಸ್” ಎಂದು ಜರೆದರು.

ನ್ಯಾಯಮೂರ್ತಿ ಸ್ವಾಮಿನಾಥನ್ ಅವರು ನ್ಯಾಯಾಲಯದಲ್ಲಿ ಜಾತಿ ಪೂರ್ವಾಗ್ರಹ ಪ್ರದರ್ಶಿಸುತ್ತಿದ್ದಾರೆ ಎಂಬ ಆರೋಪಕ್ಕೆ ಸಂಬಂಧಪಟ್ಟಂತೆ ವಕೀಲ ವಂಚಿನಾಥನ್ ಅವರನ್ನು ನ್ಯಾಯಾಲಯಕ್ಕೆ ಕರೆಸಲಾಗಿತ್ತು. ತನ್ನ ವಿರುದ್ದ ಹೇಳಿಕೆ ನೀಡಿರುವ ವಂಚಿನಾಥನ್ ವಿರುದ್ದ ನ್ಯಾಯಮೂರ್ತಿ ಸ್ವಾಮಿನಾಥನ್ ‘ನ್ಯಾಯಾಂಗ ನಿಂದನೆ’ಯ ಆರೋಪ ಹೊರಿಸಿದ್ದಾರೆ ಎಂದು ವರದಿಯಾಗಿದೆ.

‘ಪೀಪಲ್ಸ್ ರೈಟ್ಸ್ ಪ್ರೊಟೆಕ್ಷನ್ ಸೆಂಟರ್’ ಸಂಸ್ಥೆಯ ರಾಜ್ಯ ಸಂಯೋಜಕ ಎಂಬ ಹೆಸರಿನಲ್ಲಿ ಜೂನ್ 14ರಂದು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಮತ್ತು ಇತರ ನ್ಯಾಯಾಧೀಶರಿಗೆ ಪತ್ರ ಬರೆದಿದ್ದ ವಕೀಲ ವಂಚಿನಾಥನ್ ನ್ಯಾಯಮೂರ್ತಿ ಸ್ವಾಮಿನಾಥನ್ ವಿರುದ್ಧ ಸೈದ್ಧಾಂತಿಕ ಪಕ್ಷಪಾತ, ನ್ಯಾಯಾಂಗ ನೇಮಕಾತಿಗಳಲ್ಲಿ ಜಾತಿ ಪಕ್ಷಪಾತ ಮತ್ತು ಕೋಮು ಒಲವು ಸೇರಿದಂತೆ 15 ಗಂಭೀರ ಆರೋಪಗಳನ್ನು ಮಾಡಿದ್ದರು. ಇತರ ವಿಷಯಗಳ ಜೊತೆಗೆ, ವಿವಾದಾತ್ಮಕ ಲಾವಣ್ಯ ಆತ್ಮಹತ್ಯೆ ಪ್ರಕರಣದಲ್ಲಿ ನ್ಯಾಯಾಧೀಶರ ಪಾತ್ರ ಮತ್ತು ದ್ರಾವಿಡ ಮಾದರಿ ಆಡಳಿತದ ವಿರುದ್ಧ ಅವರ ಹೇಳಿಕೆಗಳನ್ನು ಉಲ್ಲೇಖಿಸಿದ್ದರು ಎಂದು ವರದಿಗಳು ಹೇಳಿವೆ.

ಪತ್ರ ಬರೆಯುವುದರ ಜೊತೆಗೆ ನ್ಯಾಯಮೂರ್ತಿ ಸ್ವಾಮಿನಾಥನ್ ವಿರುದ್ದ ವಂಚಿನಾಥನ್ ಅವರು ಯೂಟ್ಯೂಬ್ ಚಾನೆಲ್‌ಗಳಲ್ಲಿ ಸಂದರ್ಶನಗಳನ್ನು ನೀಡಿದ್ದರು. ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ಗಳನ್ನು ಹಾಕಿದ್ದರು. ಸಂದರ್ಶನವೊಂದರಲ್ಲಿ, ಒಬ್ಬ ದಲಿತ ಹಿರಿಯ ವಕೀಲರನ್ನು ಗುರಿಯಾಗಿಸಲಾಗಿದೆ. ಆದರೆ, ಬ್ರಾಹ್ಮಣ ವಕೀಲರಿಗೆ ಯಾವುದೇ ಕ್ರಮ ತೆಗೆದುಕೊಳ್ಳಲಾಗಿಲ್ಲ ಎಂದು ಸ್ವಾಮಿನಾಥನ್ ವಿರುದ್ದ ವಕೀಲ ವಂಚಿನಾಥನ್ ಆರೋಪ ಮಾಡಿದ್ದರು.

ಇದನ್ನು ನ್ಯಾಯಾಂಗ ನಿಂದನೆ ಎಂದು ಪರಿಗಣಿಸಿ ವಕೀಲ ವಂಚಿನಾಥನ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಲಾಗಿತ್ತು. ಅದರಂತೆ, ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠದ ಮುಂದೆ ಜುಲೈ 24ರಂದು ವಂಚಿನಾಥನ್ ಹಾಜರಾಗಿದ್ದರು. ಅಲ್ಲಿ, ಸ್ವತಃ ನ್ಯಾಯಮೂರ್ತಿ ಸ್ವಾಮಿನಾಥನ್ ಮತ್ತು ಕೆ. ರಾಜಶೇಖರ್ ಅವರ ಪೀಠ ವಂಚಿನಾಥನ್ ಅವರ ವಿಚಾರಣೆ ನಡೆಸಿದೆ. ಆದರೆ, ನ್ಯಾಯಾಲಯದ ಪ್ರಶ್ನೆಗೆ ಮೌಖಿಕವಾಗಿ ಉತ್ತರಿಸಲು ವಂಚಿನಾಥನ್ ನಿರಾಕರಿಸಿದ್ದರು. ಲಿಖಿತ ಉತ್ತರ ನೀಡುವುದಾಗಿ ಹೇಳಿದ್ದರು. ಹಾಗಾಗಿ, ವಿಚಾರಣೆಯನ್ನು ಜುಲೈ 28ಕ್ಕೆ ಮುಂದೂಡಲಾಗಿತ್ತು.

ಜುಲೈ 28ರಂದು, ಅಂದರೆ ಸೋಮವಾರ ವಿಚಾರಣೆ ವೇಳೆ, ನ್ಯಾಯಮೂರ್ತಿ ಸ್ವಾಮಿಥಾನ್ ವಕೀಲ ವಂಚಿನಾಥನ್ ವಿರುದ್ದ ಕಿಡಿಕಾರಿದ್ದಾರೆ. “ನಿಮ್ಮನೆಲ್ಲ ಕ್ರಾಂತಿಕಾರಿಗಳು ಎಂದವರು ಯಾರು? ನೀವೊಬ್ಬರು ಕಾಮಿಡಿ ಪೀಸ್” ಎಂದು ವಕೀಲನ ವಿರುದ್ದ ಹೇಳಿಕೆ ನೀಡಿದ್ದಾರೆ.

“ವಂಚಿನಾಥನ್ ಅವರೇ, ನನ್ನ ತೀರ್ಪುಗಳನ್ನು ಟೀಕಿಸುವ ನಿಮ್ಮ ಹಕ್ಕನ್ನು ನಾನು 100 ಶೇಕಡ ಗೌರವಿಸುತ್ತೇನೆ. ಆದರೆ, ನೀವು ಜಾತಿ ಪಕ್ಷಪಾತವನ್ನು ಆರೋಪಿಸಿದಾಗ ವಿಷಯ ವಿಭಿನ್ನ ತಿರುವು ಪಡೆಯುತ್ತವೆ” ಎಂದಿದ್ದಾರೆ.

ಬಾರ್ & ಬೆಂಚ್ ಪ್ರಕಾರ, “ಕಳೆದ ನಾಲ್ಕು ವರ್ಷಗಳಿಂದ ನೀವು ನನ್ನ ವಿರುದ್ಧ ಅಪಪ್ರಚಾರ ಮಾಡುತ್ತಿದ್ದೀರಿ. ಆದರೆ, ನಾನು ನಿಮ್ಮ ವಿರುದ್ದ ಯಾವುದೇ ಕ್ರಮ ಕೈಗೊಂಡಿಲ್ಲ. ಏಕೆಂದರೆ, ಕಾರ್ಯ ವಿಧಾನದ ನಿಯಮಗಳ ಬಗ್ಗೆ ನಮಗೆ ಗೊತ್ತಿದೆ. ಆದರೆ, ನಾವು ಮೂರ್ಖರಲ್ಲ. ನಾವು ಈ ಪ್ರಕರಣವನ್ನು ಮುಖ್ಯ ನ್ಯಾಯಾಧೀಶರು ಅಥವಾ ಸೂಕ್ತ ಪೀಠದ ಮುಂದೆ ಇಡುತ್ತೇವೆ. ಇಡೀ ವ್ಯವಸ್ಥೆಯೇ ನಮ್ಮ ವಿರುದ್ಧ ಇದೆ ಎಂದು ಗೊತ್ತಿದೆ. ಆದರೆ, ನಾವು ಭಯಪಡುವುದಿಲ್ಲ, ನಮ್ಮನ್ನು ಬೆದರಿಸಲು ಸಾಧ್ಯವಿಲ್ಲ. ನ್ಯಾಯಾಂಗದ ಸ್ವಾತಂತ್ರ್ಯ ಸರ್ವೋಚ್ಚವಾಗಿದೆ” ಎಂದು ನ್ಯಾಯಮೂರ್ತಿ ಸ್ವಾಮಿನಾಥನ್ ಹೇಳಿದ್ದಾರೆ.

ಇದೇ ವೇಳೆ, ವಂಚಿನಾಥನ್ ಅವರು ಸುಪ್ರೀಂ ಕೋರ್ಟ್‌ಗೆ ಕಳುಹಿಸಿರುವ ಗೌಪ್ಯ ಪತ್ರಕ್ಕೂ, ಅವರ ವಿರುದ್ದದ ವಿಚಾರಣೆಗೂ ಯಾವುದೇ ಸಂಬಂಧವಿಲ್ಲ ಎಂದು ಪೀಠ ಸ್ಪಷ್ಟಪಡಿಸಿದೆ.

ಸೋಮವಾರ ಪ್ರಕರಣದ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿಯ ಪೀಠಕ್ಕೆ ಪ್ರಸ್ತಾಪಿಸಲಾಗಿದೆ. ಏಕೆಂದರೆ, ಇದು ನ್ಯಾಯಮೂರ್ತಿ ಸ್ವಾಮಿನಾಥನ್ ಅವರಿಗೆ ಸಂಬಂಧಪಡುವುದರಿಂದ, ಸ್ವತಃ ಅವರೇ ವಿಚಾರಣೆ ನಡೆಸುವುದು ಸೂಕ್ತವಲ್ಲ ಎಂದು ತೀರ್ಮಾನಿಸಲಾಗಿದೆ. ಹಾಗಾಗಿ, ಮುಖ್ಯ ನ್ಯಾಯಮೂರ್ತಿ ಮುಂದೆ ಯಾವ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂಬುವುದರ ಮೇಲೆ ಪ್ರಕರಣದ ಬೆಳವಣಿಗೆ ನಡೆಯಲಿದೆ.

ಛತ್ತೀಸ್‌ಗಢ| ಕ್ರಿಶ್ಚಿಯನ್ ಸಮುದಾಯದಲ್ಲಿ ಆತಂಕ ಮೂಡಿಸಿದ ಸನ್ಯಾಸಿನಿಯರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...