Homeಕರ್ನಾಟಕ'ನೀವೊಬ್ಬ ಕಾಮಿಡಿ ಪೀಸ್': ತನ್ನ ಮೇಲೆ ಜಾತಿ ತಾರತಮ್ಯ ಆರೋಪ ಮಾಡಿದ ವಕೀಲನ ವಿರುದ್ಧ ಹೈಕೋರ್ಟ್...

‘ನೀವೊಬ್ಬ ಕಾಮಿಡಿ ಪೀಸ್’: ತನ್ನ ಮೇಲೆ ಜಾತಿ ತಾರತಮ್ಯ ಆರೋಪ ಮಾಡಿದ ವಕೀಲನ ವಿರುದ್ಧ ಹೈಕೋರ್ಟ್ ನ್ಯಾಯಾಧೀಶ ಕಿಡಿ

- Advertisement -
- Advertisement -

ನ್ಯಾಯಾಧೀಶ ಮತ್ತು ವಕೀಲನ ನಡುವಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠ ಸೋಮವಾರ (ಜುಲೈ 28) ಅಸಾಧಾರಣ ಸಂದರ್ಭಕ್ಕೆ ಸಾಕ್ಷಿಯಾಯಿತು. ತನ್ನ ವಿರುದ್ದದ ವಕೀಲನ ಆರೋಪಗಳ ಕುರಿತು ಸ್ವತಃ ವಿಚಾರಣೆ ನಡೆಸಿದ ನ್ಯಾಯಾಧೀಶ, ವಕೀಲನ ವಿರುದ್ದ ಕಿಡಿಕಾರಿದರು.

ನ್ಯಾಯಮೂರ್ತಿ ಜಿ.ಆರ್ ಸ್ವಾಮಿನಾಥನ್ ಅವರು ಹಿರಿಯ ವಕೀಲ ಎಸ್‌. ವಂಚಿನಾಥನ್ ವಿರುದ್ದ ವಾಗ್ದಾಳಿ ನಡೆಸಿದ್ದು, ತನ್ನ ವಿರುದ್ದ ಜಾತಿ ಮತ್ತು ಕೋಮು ಪಕ್ಷಪಾತದ ಆರೋಪ ಮಾಡಿರುವ ವಂಚಿನಾಥನ್ ವಿರುದ್ದ ವಿಚಾರಣೆ ವೇಳೆ ಆಕ್ರೋಶ ವ್ಯಕ್ತಪಡಿಸಿದರು. ವಕೀಲ ವಂಚಿನಾಥನ್ ಅವರನ್ನು “ನೀವೊಬ್ಬರು ಕಾಮಿಡಿ ಪೀಸ್” ಎಂದು ಜರೆದರು.

ನ್ಯಾಯಮೂರ್ತಿ ಸ್ವಾಮಿನಾಥನ್ ಅವರು ನ್ಯಾಯಾಲಯದಲ್ಲಿ ಜಾತಿ ಪೂರ್ವಾಗ್ರಹ ಪ್ರದರ್ಶಿಸುತ್ತಿದ್ದಾರೆ ಎಂಬ ಆರೋಪಕ್ಕೆ ಸಂಬಂಧಪಟ್ಟಂತೆ ವಕೀಲ ವಂಚಿನಾಥನ್ ಅವರನ್ನು ನ್ಯಾಯಾಲಯಕ್ಕೆ ಕರೆಸಲಾಗಿತ್ತು. ತನ್ನ ವಿರುದ್ದ ಹೇಳಿಕೆ ನೀಡಿರುವ ವಂಚಿನಾಥನ್ ವಿರುದ್ದ ನ್ಯಾಯಮೂರ್ತಿ ಸ್ವಾಮಿನಾಥನ್ ‘ನ್ಯಾಯಾಂಗ ನಿಂದನೆ’ಯ ಆರೋಪ ಹೊರಿಸಿದ್ದಾರೆ ಎಂದು ವರದಿಯಾಗಿದೆ.

‘ಪೀಪಲ್ಸ್ ರೈಟ್ಸ್ ಪ್ರೊಟೆಕ್ಷನ್ ಸೆಂಟರ್’ ಸಂಸ್ಥೆಯ ರಾಜ್ಯ ಸಂಯೋಜಕ ಎಂಬ ಹೆಸರಿನಲ್ಲಿ ಜೂನ್ 14ರಂದು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಮತ್ತು ಇತರ ನ್ಯಾಯಾಧೀಶರಿಗೆ ಪತ್ರ ಬರೆದಿದ್ದ ವಕೀಲ ವಂಚಿನಾಥನ್ ನ್ಯಾಯಮೂರ್ತಿ ಸ್ವಾಮಿನಾಥನ್ ವಿರುದ್ಧ ಸೈದ್ಧಾಂತಿಕ ಪಕ್ಷಪಾತ, ನ್ಯಾಯಾಂಗ ನೇಮಕಾತಿಗಳಲ್ಲಿ ಜಾತಿ ಪಕ್ಷಪಾತ ಮತ್ತು ಕೋಮು ಒಲವು ಸೇರಿದಂತೆ 15 ಗಂಭೀರ ಆರೋಪಗಳನ್ನು ಮಾಡಿದ್ದರು. ಇತರ ವಿಷಯಗಳ ಜೊತೆಗೆ, ವಿವಾದಾತ್ಮಕ ಲಾವಣ್ಯ ಆತ್ಮಹತ್ಯೆ ಪ್ರಕರಣದಲ್ಲಿ ನ್ಯಾಯಾಧೀಶರ ಪಾತ್ರ ಮತ್ತು ದ್ರಾವಿಡ ಮಾದರಿ ಆಡಳಿತದ ವಿರುದ್ಧ ಅವರ ಹೇಳಿಕೆಗಳನ್ನು ಉಲ್ಲೇಖಿಸಿದ್ದರು ಎಂದು ವರದಿಗಳು ಹೇಳಿವೆ.

ಪತ್ರ ಬರೆಯುವುದರ ಜೊತೆಗೆ ನ್ಯಾಯಮೂರ್ತಿ ಸ್ವಾಮಿನಾಥನ್ ವಿರುದ್ದ ವಂಚಿನಾಥನ್ ಅವರು ಯೂಟ್ಯೂಬ್ ಚಾನೆಲ್‌ಗಳಲ್ಲಿ ಸಂದರ್ಶನಗಳನ್ನು ನೀಡಿದ್ದರು. ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ಗಳನ್ನು ಹಾಕಿದ್ದರು. ಸಂದರ್ಶನವೊಂದರಲ್ಲಿ, ಒಬ್ಬ ದಲಿತ ಹಿರಿಯ ವಕೀಲರನ್ನು ಗುರಿಯಾಗಿಸಲಾಗಿದೆ. ಆದರೆ, ಬ್ರಾಹ್ಮಣ ವಕೀಲರಿಗೆ ಯಾವುದೇ ಕ್ರಮ ತೆಗೆದುಕೊಳ್ಳಲಾಗಿಲ್ಲ ಎಂದು ಸ್ವಾಮಿನಾಥನ್ ವಿರುದ್ದ ವಕೀಲ ವಂಚಿನಾಥನ್ ಆರೋಪ ಮಾಡಿದ್ದರು.

ಇದನ್ನು ನ್ಯಾಯಾಂಗ ನಿಂದನೆ ಎಂದು ಪರಿಗಣಿಸಿ ವಕೀಲ ವಂಚಿನಾಥನ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಲಾಗಿತ್ತು. ಅದರಂತೆ, ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠದ ಮುಂದೆ ಜುಲೈ 24ರಂದು ವಂಚಿನಾಥನ್ ಹಾಜರಾಗಿದ್ದರು. ಅಲ್ಲಿ, ಸ್ವತಃ ನ್ಯಾಯಮೂರ್ತಿ ಸ್ವಾಮಿನಾಥನ್ ಮತ್ತು ಕೆ. ರಾಜಶೇಖರ್ ಅವರ ಪೀಠ ವಂಚಿನಾಥನ್ ಅವರ ವಿಚಾರಣೆ ನಡೆಸಿದೆ. ಆದರೆ, ನ್ಯಾಯಾಲಯದ ಪ್ರಶ್ನೆಗೆ ಮೌಖಿಕವಾಗಿ ಉತ್ತರಿಸಲು ವಂಚಿನಾಥನ್ ನಿರಾಕರಿಸಿದ್ದರು. ಲಿಖಿತ ಉತ್ತರ ನೀಡುವುದಾಗಿ ಹೇಳಿದ್ದರು. ಹಾಗಾಗಿ, ವಿಚಾರಣೆಯನ್ನು ಜುಲೈ 28ಕ್ಕೆ ಮುಂದೂಡಲಾಗಿತ್ತು.

ಜುಲೈ 28ರಂದು, ಅಂದರೆ ಸೋಮವಾರ ವಿಚಾರಣೆ ವೇಳೆ, ನ್ಯಾಯಮೂರ್ತಿ ಸ್ವಾಮಿಥಾನ್ ವಕೀಲ ವಂಚಿನಾಥನ್ ವಿರುದ್ದ ಕಿಡಿಕಾರಿದ್ದಾರೆ. “ನಿಮ್ಮನೆಲ್ಲ ಕ್ರಾಂತಿಕಾರಿಗಳು ಎಂದವರು ಯಾರು? ನೀವೊಬ್ಬರು ಕಾಮಿಡಿ ಪೀಸ್” ಎಂದು ವಕೀಲನ ವಿರುದ್ದ ಹೇಳಿಕೆ ನೀಡಿದ್ದಾರೆ.

“ವಂಚಿನಾಥನ್ ಅವರೇ, ನನ್ನ ತೀರ್ಪುಗಳನ್ನು ಟೀಕಿಸುವ ನಿಮ್ಮ ಹಕ್ಕನ್ನು ನಾನು 100 ಶೇಕಡ ಗೌರವಿಸುತ್ತೇನೆ. ಆದರೆ, ನೀವು ಜಾತಿ ಪಕ್ಷಪಾತವನ್ನು ಆರೋಪಿಸಿದಾಗ ವಿಷಯ ವಿಭಿನ್ನ ತಿರುವು ಪಡೆಯುತ್ತವೆ” ಎಂದಿದ್ದಾರೆ.

ಬಾರ್ & ಬೆಂಚ್ ಪ್ರಕಾರ, “ಕಳೆದ ನಾಲ್ಕು ವರ್ಷಗಳಿಂದ ನೀವು ನನ್ನ ವಿರುದ್ಧ ಅಪಪ್ರಚಾರ ಮಾಡುತ್ತಿದ್ದೀರಿ. ಆದರೆ, ನಾನು ನಿಮ್ಮ ವಿರುದ್ದ ಯಾವುದೇ ಕ್ರಮ ಕೈಗೊಂಡಿಲ್ಲ. ಏಕೆಂದರೆ, ಕಾರ್ಯ ವಿಧಾನದ ನಿಯಮಗಳ ಬಗ್ಗೆ ನಮಗೆ ಗೊತ್ತಿದೆ. ಆದರೆ, ನಾವು ಮೂರ್ಖರಲ್ಲ. ನಾವು ಈ ಪ್ರಕರಣವನ್ನು ಮುಖ್ಯ ನ್ಯಾಯಾಧೀಶರು ಅಥವಾ ಸೂಕ್ತ ಪೀಠದ ಮುಂದೆ ಇಡುತ್ತೇವೆ. ಇಡೀ ವ್ಯವಸ್ಥೆಯೇ ನಮ್ಮ ವಿರುದ್ಧ ಇದೆ ಎಂದು ಗೊತ್ತಿದೆ. ಆದರೆ, ನಾವು ಭಯಪಡುವುದಿಲ್ಲ, ನಮ್ಮನ್ನು ಬೆದರಿಸಲು ಸಾಧ್ಯವಿಲ್ಲ. ನ್ಯಾಯಾಂಗದ ಸ್ವಾತಂತ್ರ್ಯ ಸರ್ವೋಚ್ಚವಾಗಿದೆ” ಎಂದು ನ್ಯಾಯಮೂರ್ತಿ ಸ್ವಾಮಿನಾಥನ್ ಹೇಳಿದ್ದಾರೆ.

ಇದೇ ವೇಳೆ, ವಂಚಿನಾಥನ್ ಅವರು ಸುಪ್ರೀಂ ಕೋರ್ಟ್‌ಗೆ ಕಳುಹಿಸಿರುವ ಗೌಪ್ಯ ಪತ್ರಕ್ಕೂ, ಅವರ ವಿರುದ್ದದ ವಿಚಾರಣೆಗೂ ಯಾವುದೇ ಸಂಬಂಧವಿಲ್ಲ ಎಂದು ಪೀಠ ಸ್ಪಷ್ಟಪಡಿಸಿದೆ.

ಸೋಮವಾರ ಪ್ರಕರಣದ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿಯ ಪೀಠಕ್ಕೆ ಪ್ರಸ್ತಾಪಿಸಲಾಗಿದೆ. ಏಕೆಂದರೆ, ಇದು ನ್ಯಾಯಮೂರ್ತಿ ಸ್ವಾಮಿನಾಥನ್ ಅವರಿಗೆ ಸಂಬಂಧಪಡುವುದರಿಂದ, ಸ್ವತಃ ಅವರೇ ವಿಚಾರಣೆ ನಡೆಸುವುದು ಸೂಕ್ತವಲ್ಲ ಎಂದು ತೀರ್ಮಾನಿಸಲಾಗಿದೆ. ಹಾಗಾಗಿ, ಮುಖ್ಯ ನ್ಯಾಯಮೂರ್ತಿ ಮುಂದೆ ಯಾವ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂಬುವುದರ ಮೇಲೆ ಪ್ರಕರಣದ ಬೆಳವಣಿಗೆ ನಡೆಯಲಿದೆ.

ಛತ್ತೀಸ್‌ಗಢ| ಕ್ರಿಶ್ಚಿಯನ್ ಸಮುದಾಯದಲ್ಲಿ ಆತಂಕ ಮೂಡಿಸಿದ ಸನ್ಯಾಸಿನಿಯರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...