Homeಕರ್ನಾಟಕ'ನೀವೊಬ್ಬ ಕಾಮಿಡಿ ಪೀಸ್': ತನ್ನ ಮೇಲೆ ಜಾತಿ ತಾರತಮ್ಯ ಆರೋಪ ಮಾಡಿದ ವಕೀಲನ ವಿರುದ್ಧ ಹೈಕೋರ್ಟ್...

‘ನೀವೊಬ್ಬ ಕಾಮಿಡಿ ಪೀಸ್’: ತನ್ನ ಮೇಲೆ ಜಾತಿ ತಾರತಮ್ಯ ಆರೋಪ ಮಾಡಿದ ವಕೀಲನ ವಿರುದ್ಧ ಹೈಕೋರ್ಟ್ ನ್ಯಾಯಾಧೀಶ ಕಿಡಿ

- Advertisement -
- Advertisement -

ನ್ಯಾಯಾಧೀಶ ಮತ್ತು ವಕೀಲನ ನಡುವಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠ ಸೋಮವಾರ (ಜುಲೈ 28) ಅಸಾಧಾರಣ ಸಂದರ್ಭಕ್ಕೆ ಸಾಕ್ಷಿಯಾಯಿತು. ತನ್ನ ವಿರುದ್ದದ ವಕೀಲನ ಆರೋಪಗಳ ಕುರಿತು ಸ್ವತಃ ವಿಚಾರಣೆ ನಡೆಸಿದ ನ್ಯಾಯಾಧೀಶ, ವಕೀಲನ ವಿರುದ್ದ ಕಿಡಿಕಾರಿದರು.

ನ್ಯಾಯಮೂರ್ತಿ ಜಿ.ಆರ್ ಸ್ವಾಮಿನಾಥನ್ ಅವರು ಹಿರಿಯ ವಕೀಲ ಎಸ್‌. ವಂಚಿನಾಥನ್ ವಿರುದ್ದ ವಾಗ್ದಾಳಿ ನಡೆಸಿದ್ದು, ತನ್ನ ವಿರುದ್ದ ಜಾತಿ ಮತ್ತು ಕೋಮು ಪಕ್ಷಪಾತದ ಆರೋಪ ಮಾಡಿರುವ ವಂಚಿನಾಥನ್ ವಿರುದ್ದ ವಿಚಾರಣೆ ವೇಳೆ ಆಕ್ರೋಶ ವ್ಯಕ್ತಪಡಿಸಿದರು. ವಕೀಲ ವಂಚಿನಾಥನ್ ಅವರನ್ನು “ನೀವೊಬ್ಬರು ಕಾಮಿಡಿ ಪೀಸ್” ಎಂದು ಜರೆದರು.

ನ್ಯಾಯಮೂರ್ತಿ ಸ್ವಾಮಿನಾಥನ್ ಅವರು ನ್ಯಾಯಾಲಯದಲ್ಲಿ ಜಾತಿ ಪೂರ್ವಾಗ್ರಹ ಪ್ರದರ್ಶಿಸುತ್ತಿದ್ದಾರೆ ಎಂಬ ಆರೋಪಕ್ಕೆ ಸಂಬಂಧಪಟ್ಟಂತೆ ವಕೀಲ ವಂಚಿನಾಥನ್ ಅವರನ್ನು ನ್ಯಾಯಾಲಯಕ್ಕೆ ಕರೆಸಲಾಗಿತ್ತು. ತನ್ನ ವಿರುದ್ದ ಹೇಳಿಕೆ ನೀಡಿರುವ ವಂಚಿನಾಥನ್ ವಿರುದ್ದ ನ್ಯಾಯಮೂರ್ತಿ ಸ್ವಾಮಿನಾಥನ್ ‘ನ್ಯಾಯಾಂಗ ನಿಂದನೆ’ಯ ಆರೋಪ ಹೊರಿಸಿದ್ದಾರೆ ಎಂದು ವರದಿಯಾಗಿದೆ.

‘ಪೀಪಲ್ಸ್ ರೈಟ್ಸ್ ಪ್ರೊಟೆಕ್ಷನ್ ಸೆಂಟರ್’ ಸಂಸ್ಥೆಯ ರಾಜ್ಯ ಸಂಯೋಜಕ ಎಂಬ ಹೆಸರಿನಲ್ಲಿ ಜೂನ್ 14ರಂದು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಮತ್ತು ಇತರ ನ್ಯಾಯಾಧೀಶರಿಗೆ ಪತ್ರ ಬರೆದಿದ್ದ ವಕೀಲ ವಂಚಿನಾಥನ್ ನ್ಯಾಯಮೂರ್ತಿ ಸ್ವಾಮಿನಾಥನ್ ವಿರುದ್ಧ ಸೈದ್ಧಾಂತಿಕ ಪಕ್ಷಪಾತ, ನ್ಯಾಯಾಂಗ ನೇಮಕಾತಿಗಳಲ್ಲಿ ಜಾತಿ ಪಕ್ಷಪಾತ ಮತ್ತು ಕೋಮು ಒಲವು ಸೇರಿದಂತೆ 15 ಗಂಭೀರ ಆರೋಪಗಳನ್ನು ಮಾಡಿದ್ದರು. ಇತರ ವಿಷಯಗಳ ಜೊತೆಗೆ, ವಿವಾದಾತ್ಮಕ ಲಾವಣ್ಯ ಆತ್ಮಹತ್ಯೆ ಪ್ರಕರಣದಲ್ಲಿ ನ್ಯಾಯಾಧೀಶರ ಪಾತ್ರ ಮತ್ತು ದ್ರಾವಿಡ ಮಾದರಿ ಆಡಳಿತದ ವಿರುದ್ಧ ಅವರ ಹೇಳಿಕೆಗಳನ್ನು ಉಲ್ಲೇಖಿಸಿದ್ದರು ಎಂದು ವರದಿಗಳು ಹೇಳಿವೆ.

ಪತ್ರ ಬರೆಯುವುದರ ಜೊತೆಗೆ ನ್ಯಾಯಮೂರ್ತಿ ಸ್ವಾಮಿನಾಥನ್ ವಿರುದ್ದ ವಂಚಿನಾಥನ್ ಅವರು ಯೂಟ್ಯೂಬ್ ಚಾನೆಲ್‌ಗಳಲ್ಲಿ ಸಂದರ್ಶನಗಳನ್ನು ನೀಡಿದ್ದರು. ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ಗಳನ್ನು ಹಾಕಿದ್ದರು. ಸಂದರ್ಶನವೊಂದರಲ್ಲಿ, ಒಬ್ಬ ದಲಿತ ಹಿರಿಯ ವಕೀಲರನ್ನು ಗುರಿಯಾಗಿಸಲಾಗಿದೆ. ಆದರೆ, ಬ್ರಾಹ್ಮಣ ವಕೀಲರಿಗೆ ಯಾವುದೇ ಕ್ರಮ ತೆಗೆದುಕೊಳ್ಳಲಾಗಿಲ್ಲ ಎಂದು ಸ್ವಾಮಿನಾಥನ್ ವಿರುದ್ದ ವಕೀಲ ವಂಚಿನಾಥನ್ ಆರೋಪ ಮಾಡಿದ್ದರು.

ಇದನ್ನು ನ್ಯಾಯಾಂಗ ನಿಂದನೆ ಎಂದು ಪರಿಗಣಿಸಿ ವಕೀಲ ವಂಚಿನಾಥನ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಲಾಗಿತ್ತು. ಅದರಂತೆ, ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠದ ಮುಂದೆ ಜುಲೈ 24ರಂದು ವಂಚಿನಾಥನ್ ಹಾಜರಾಗಿದ್ದರು. ಅಲ್ಲಿ, ಸ್ವತಃ ನ್ಯಾಯಮೂರ್ತಿ ಸ್ವಾಮಿನಾಥನ್ ಮತ್ತು ಕೆ. ರಾಜಶೇಖರ್ ಅವರ ಪೀಠ ವಂಚಿನಾಥನ್ ಅವರ ವಿಚಾರಣೆ ನಡೆಸಿದೆ. ಆದರೆ, ನ್ಯಾಯಾಲಯದ ಪ್ರಶ್ನೆಗೆ ಮೌಖಿಕವಾಗಿ ಉತ್ತರಿಸಲು ವಂಚಿನಾಥನ್ ನಿರಾಕರಿಸಿದ್ದರು. ಲಿಖಿತ ಉತ್ತರ ನೀಡುವುದಾಗಿ ಹೇಳಿದ್ದರು. ಹಾಗಾಗಿ, ವಿಚಾರಣೆಯನ್ನು ಜುಲೈ 28ಕ್ಕೆ ಮುಂದೂಡಲಾಗಿತ್ತು.

ಜುಲೈ 28ರಂದು, ಅಂದರೆ ಸೋಮವಾರ ವಿಚಾರಣೆ ವೇಳೆ, ನ್ಯಾಯಮೂರ್ತಿ ಸ್ವಾಮಿಥಾನ್ ವಕೀಲ ವಂಚಿನಾಥನ್ ವಿರುದ್ದ ಕಿಡಿಕಾರಿದ್ದಾರೆ. “ನಿಮ್ಮನೆಲ್ಲ ಕ್ರಾಂತಿಕಾರಿಗಳು ಎಂದವರು ಯಾರು? ನೀವೊಬ್ಬರು ಕಾಮಿಡಿ ಪೀಸ್” ಎಂದು ವಕೀಲನ ವಿರುದ್ದ ಹೇಳಿಕೆ ನೀಡಿದ್ದಾರೆ.

“ವಂಚಿನಾಥನ್ ಅವರೇ, ನನ್ನ ತೀರ್ಪುಗಳನ್ನು ಟೀಕಿಸುವ ನಿಮ್ಮ ಹಕ್ಕನ್ನು ನಾನು 100 ಶೇಕಡ ಗೌರವಿಸುತ್ತೇನೆ. ಆದರೆ, ನೀವು ಜಾತಿ ಪಕ್ಷಪಾತವನ್ನು ಆರೋಪಿಸಿದಾಗ ವಿಷಯ ವಿಭಿನ್ನ ತಿರುವು ಪಡೆಯುತ್ತವೆ” ಎಂದಿದ್ದಾರೆ.

ಬಾರ್ & ಬೆಂಚ್ ಪ್ರಕಾರ, “ಕಳೆದ ನಾಲ್ಕು ವರ್ಷಗಳಿಂದ ನೀವು ನನ್ನ ವಿರುದ್ಧ ಅಪಪ್ರಚಾರ ಮಾಡುತ್ತಿದ್ದೀರಿ. ಆದರೆ, ನಾನು ನಿಮ್ಮ ವಿರುದ್ದ ಯಾವುದೇ ಕ್ರಮ ಕೈಗೊಂಡಿಲ್ಲ. ಏಕೆಂದರೆ, ಕಾರ್ಯ ವಿಧಾನದ ನಿಯಮಗಳ ಬಗ್ಗೆ ನಮಗೆ ಗೊತ್ತಿದೆ. ಆದರೆ, ನಾವು ಮೂರ್ಖರಲ್ಲ. ನಾವು ಈ ಪ್ರಕರಣವನ್ನು ಮುಖ್ಯ ನ್ಯಾಯಾಧೀಶರು ಅಥವಾ ಸೂಕ್ತ ಪೀಠದ ಮುಂದೆ ಇಡುತ್ತೇವೆ. ಇಡೀ ವ್ಯವಸ್ಥೆಯೇ ನಮ್ಮ ವಿರುದ್ಧ ಇದೆ ಎಂದು ಗೊತ್ತಿದೆ. ಆದರೆ, ನಾವು ಭಯಪಡುವುದಿಲ್ಲ, ನಮ್ಮನ್ನು ಬೆದರಿಸಲು ಸಾಧ್ಯವಿಲ್ಲ. ನ್ಯಾಯಾಂಗದ ಸ್ವಾತಂತ್ರ್ಯ ಸರ್ವೋಚ್ಚವಾಗಿದೆ” ಎಂದು ನ್ಯಾಯಮೂರ್ತಿ ಸ್ವಾಮಿನಾಥನ್ ಹೇಳಿದ್ದಾರೆ.

ಇದೇ ವೇಳೆ, ವಂಚಿನಾಥನ್ ಅವರು ಸುಪ್ರೀಂ ಕೋರ್ಟ್‌ಗೆ ಕಳುಹಿಸಿರುವ ಗೌಪ್ಯ ಪತ್ರಕ್ಕೂ, ಅವರ ವಿರುದ್ದದ ವಿಚಾರಣೆಗೂ ಯಾವುದೇ ಸಂಬಂಧವಿಲ್ಲ ಎಂದು ಪೀಠ ಸ್ಪಷ್ಟಪಡಿಸಿದೆ.

ಸೋಮವಾರ ಪ್ರಕರಣದ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿಯ ಪೀಠಕ್ಕೆ ಪ್ರಸ್ತಾಪಿಸಲಾಗಿದೆ. ಏಕೆಂದರೆ, ಇದು ನ್ಯಾಯಮೂರ್ತಿ ಸ್ವಾಮಿನಾಥನ್ ಅವರಿಗೆ ಸಂಬಂಧಪಡುವುದರಿಂದ, ಸ್ವತಃ ಅವರೇ ವಿಚಾರಣೆ ನಡೆಸುವುದು ಸೂಕ್ತವಲ್ಲ ಎಂದು ತೀರ್ಮಾನಿಸಲಾಗಿದೆ. ಹಾಗಾಗಿ, ಮುಖ್ಯ ನ್ಯಾಯಮೂರ್ತಿ ಮುಂದೆ ಯಾವ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂಬುವುದರ ಮೇಲೆ ಪ್ರಕರಣದ ಬೆಳವಣಿಗೆ ನಡೆಯಲಿದೆ.

ಛತ್ತೀಸ್‌ಗಢ| ಕ್ರಿಶ್ಚಿಯನ್ ಸಮುದಾಯದಲ್ಲಿ ಆತಂಕ ಮೂಡಿಸಿದ ಸನ್ಯಾಸಿನಿಯರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...