Homeಕರ್ನಾಟಕ'ನೀವೊಬ್ಬ ಕಾಮಿಡಿ ಪೀಸ್': ತನ್ನ ಮೇಲೆ ಜಾತಿ ತಾರತಮ್ಯ ಆರೋಪ ಮಾಡಿದ ವಕೀಲನ ವಿರುದ್ಧ ಹೈಕೋರ್ಟ್...

‘ನೀವೊಬ್ಬ ಕಾಮಿಡಿ ಪೀಸ್’: ತನ್ನ ಮೇಲೆ ಜಾತಿ ತಾರತಮ್ಯ ಆರೋಪ ಮಾಡಿದ ವಕೀಲನ ವಿರುದ್ಧ ಹೈಕೋರ್ಟ್ ನ್ಯಾಯಾಧೀಶ ಕಿಡಿ

- Advertisement -
- Advertisement -

ನ್ಯಾಯಾಧೀಶ ಮತ್ತು ವಕೀಲನ ನಡುವಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠ ಸೋಮವಾರ (ಜುಲೈ 28) ಅಸಾಧಾರಣ ಸಂದರ್ಭಕ್ಕೆ ಸಾಕ್ಷಿಯಾಯಿತು. ತನ್ನ ವಿರುದ್ದದ ವಕೀಲನ ಆರೋಪಗಳ ಕುರಿತು ಸ್ವತಃ ವಿಚಾರಣೆ ನಡೆಸಿದ ನ್ಯಾಯಾಧೀಶ, ವಕೀಲನ ವಿರುದ್ದ ಕಿಡಿಕಾರಿದರು.

ನ್ಯಾಯಮೂರ್ತಿ ಜಿ.ಆರ್ ಸ್ವಾಮಿನಾಥನ್ ಅವರು ಹಿರಿಯ ವಕೀಲ ಎಸ್‌. ವಂಚಿನಾಥನ್ ವಿರುದ್ದ ವಾಗ್ದಾಳಿ ನಡೆಸಿದ್ದು, ತನ್ನ ವಿರುದ್ದ ಜಾತಿ ಮತ್ತು ಕೋಮು ಪಕ್ಷಪಾತದ ಆರೋಪ ಮಾಡಿರುವ ವಂಚಿನಾಥನ್ ವಿರುದ್ದ ವಿಚಾರಣೆ ವೇಳೆ ಆಕ್ರೋಶ ವ್ಯಕ್ತಪಡಿಸಿದರು. ವಕೀಲ ವಂಚಿನಾಥನ್ ಅವರನ್ನು “ನೀವೊಬ್ಬರು ಕಾಮಿಡಿ ಪೀಸ್” ಎಂದು ಜರೆದರು.

ನ್ಯಾಯಮೂರ್ತಿ ಸ್ವಾಮಿನಾಥನ್ ಅವರು ನ್ಯಾಯಾಲಯದಲ್ಲಿ ಜಾತಿ ಪೂರ್ವಾಗ್ರಹ ಪ್ರದರ್ಶಿಸುತ್ತಿದ್ದಾರೆ ಎಂಬ ಆರೋಪಕ್ಕೆ ಸಂಬಂಧಪಟ್ಟಂತೆ ವಕೀಲ ವಂಚಿನಾಥನ್ ಅವರನ್ನು ನ್ಯಾಯಾಲಯಕ್ಕೆ ಕರೆಸಲಾಗಿತ್ತು. ತನ್ನ ವಿರುದ್ದ ಹೇಳಿಕೆ ನೀಡಿರುವ ವಂಚಿನಾಥನ್ ವಿರುದ್ದ ನ್ಯಾಯಮೂರ್ತಿ ಸ್ವಾಮಿನಾಥನ್ ‘ನ್ಯಾಯಾಂಗ ನಿಂದನೆ’ಯ ಆರೋಪ ಹೊರಿಸಿದ್ದಾರೆ ಎಂದು ವರದಿಯಾಗಿದೆ.

‘ಪೀಪಲ್ಸ್ ರೈಟ್ಸ್ ಪ್ರೊಟೆಕ್ಷನ್ ಸೆಂಟರ್’ ಸಂಸ್ಥೆಯ ರಾಜ್ಯ ಸಂಯೋಜಕ ಎಂಬ ಹೆಸರಿನಲ್ಲಿ ಜೂನ್ 14ರಂದು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಮತ್ತು ಇತರ ನ್ಯಾಯಾಧೀಶರಿಗೆ ಪತ್ರ ಬರೆದಿದ್ದ ವಕೀಲ ವಂಚಿನಾಥನ್ ನ್ಯಾಯಮೂರ್ತಿ ಸ್ವಾಮಿನಾಥನ್ ವಿರುದ್ಧ ಸೈದ್ಧಾಂತಿಕ ಪಕ್ಷಪಾತ, ನ್ಯಾಯಾಂಗ ನೇಮಕಾತಿಗಳಲ್ಲಿ ಜಾತಿ ಪಕ್ಷಪಾತ ಮತ್ತು ಕೋಮು ಒಲವು ಸೇರಿದಂತೆ 15 ಗಂಭೀರ ಆರೋಪಗಳನ್ನು ಮಾಡಿದ್ದರು. ಇತರ ವಿಷಯಗಳ ಜೊತೆಗೆ, ವಿವಾದಾತ್ಮಕ ಲಾವಣ್ಯ ಆತ್ಮಹತ್ಯೆ ಪ್ರಕರಣದಲ್ಲಿ ನ್ಯಾಯಾಧೀಶರ ಪಾತ್ರ ಮತ್ತು ದ್ರಾವಿಡ ಮಾದರಿ ಆಡಳಿತದ ವಿರುದ್ಧ ಅವರ ಹೇಳಿಕೆಗಳನ್ನು ಉಲ್ಲೇಖಿಸಿದ್ದರು ಎಂದು ವರದಿಗಳು ಹೇಳಿವೆ.

ಪತ್ರ ಬರೆಯುವುದರ ಜೊತೆಗೆ ನ್ಯಾಯಮೂರ್ತಿ ಸ್ವಾಮಿನಾಥನ್ ವಿರುದ್ದ ವಂಚಿನಾಥನ್ ಅವರು ಯೂಟ್ಯೂಬ್ ಚಾನೆಲ್‌ಗಳಲ್ಲಿ ಸಂದರ್ಶನಗಳನ್ನು ನೀಡಿದ್ದರು. ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ಗಳನ್ನು ಹಾಕಿದ್ದರು. ಸಂದರ್ಶನವೊಂದರಲ್ಲಿ, ಒಬ್ಬ ದಲಿತ ಹಿರಿಯ ವಕೀಲರನ್ನು ಗುರಿಯಾಗಿಸಲಾಗಿದೆ. ಆದರೆ, ಬ್ರಾಹ್ಮಣ ವಕೀಲರಿಗೆ ಯಾವುದೇ ಕ್ರಮ ತೆಗೆದುಕೊಳ್ಳಲಾಗಿಲ್ಲ ಎಂದು ಸ್ವಾಮಿನಾಥನ್ ವಿರುದ್ದ ವಕೀಲ ವಂಚಿನಾಥನ್ ಆರೋಪ ಮಾಡಿದ್ದರು.

ಇದನ್ನು ನ್ಯಾಯಾಂಗ ನಿಂದನೆ ಎಂದು ಪರಿಗಣಿಸಿ ವಕೀಲ ವಂಚಿನಾಥನ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಲಾಗಿತ್ತು. ಅದರಂತೆ, ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠದ ಮುಂದೆ ಜುಲೈ 24ರಂದು ವಂಚಿನಾಥನ್ ಹಾಜರಾಗಿದ್ದರು. ಅಲ್ಲಿ, ಸ್ವತಃ ನ್ಯಾಯಮೂರ್ತಿ ಸ್ವಾಮಿನಾಥನ್ ಮತ್ತು ಕೆ. ರಾಜಶೇಖರ್ ಅವರ ಪೀಠ ವಂಚಿನಾಥನ್ ಅವರ ವಿಚಾರಣೆ ನಡೆಸಿದೆ. ಆದರೆ, ನ್ಯಾಯಾಲಯದ ಪ್ರಶ್ನೆಗೆ ಮೌಖಿಕವಾಗಿ ಉತ್ತರಿಸಲು ವಂಚಿನಾಥನ್ ನಿರಾಕರಿಸಿದ್ದರು. ಲಿಖಿತ ಉತ್ತರ ನೀಡುವುದಾಗಿ ಹೇಳಿದ್ದರು. ಹಾಗಾಗಿ, ವಿಚಾರಣೆಯನ್ನು ಜುಲೈ 28ಕ್ಕೆ ಮುಂದೂಡಲಾಗಿತ್ತು.

ಜುಲೈ 28ರಂದು, ಅಂದರೆ ಸೋಮವಾರ ವಿಚಾರಣೆ ವೇಳೆ, ನ್ಯಾಯಮೂರ್ತಿ ಸ್ವಾಮಿಥಾನ್ ವಕೀಲ ವಂಚಿನಾಥನ್ ವಿರುದ್ದ ಕಿಡಿಕಾರಿದ್ದಾರೆ. “ನಿಮ್ಮನೆಲ್ಲ ಕ್ರಾಂತಿಕಾರಿಗಳು ಎಂದವರು ಯಾರು? ನೀವೊಬ್ಬರು ಕಾಮಿಡಿ ಪೀಸ್” ಎಂದು ವಕೀಲನ ವಿರುದ್ದ ಹೇಳಿಕೆ ನೀಡಿದ್ದಾರೆ.

“ವಂಚಿನಾಥನ್ ಅವರೇ, ನನ್ನ ತೀರ್ಪುಗಳನ್ನು ಟೀಕಿಸುವ ನಿಮ್ಮ ಹಕ್ಕನ್ನು ನಾನು 100 ಶೇಕಡ ಗೌರವಿಸುತ್ತೇನೆ. ಆದರೆ, ನೀವು ಜಾತಿ ಪಕ್ಷಪಾತವನ್ನು ಆರೋಪಿಸಿದಾಗ ವಿಷಯ ವಿಭಿನ್ನ ತಿರುವು ಪಡೆಯುತ್ತವೆ” ಎಂದಿದ್ದಾರೆ.

ಬಾರ್ & ಬೆಂಚ್ ಪ್ರಕಾರ, “ಕಳೆದ ನಾಲ್ಕು ವರ್ಷಗಳಿಂದ ನೀವು ನನ್ನ ವಿರುದ್ಧ ಅಪಪ್ರಚಾರ ಮಾಡುತ್ತಿದ್ದೀರಿ. ಆದರೆ, ನಾನು ನಿಮ್ಮ ವಿರುದ್ದ ಯಾವುದೇ ಕ್ರಮ ಕೈಗೊಂಡಿಲ್ಲ. ಏಕೆಂದರೆ, ಕಾರ್ಯ ವಿಧಾನದ ನಿಯಮಗಳ ಬಗ್ಗೆ ನಮಗೆ ಗೊತ್ತಿದೆ. ಆದರೆ, ನಾವು ಮೂರ್ಖರಲ್ಲ. ನಾವು ಈ ಪ್ರಕರಣವನ್ನು ಮುಖ್ಯ ನ್ಯಾಯಾಧೀಶರು ಅಥವಾ ಸೂಕ್ತ ಪೀಠದ ಮುಂದೆ ಇಡುತ್ತೇವೆ. ಇಡೀ ವ್ಯವಸ್ಥೆಯೇ ನಮ್ಮ ವಿರುದ್ಧ ಇದೆ ಎಂದು ಗೊತ್ತಿದೆ. ಆದರೆ, ನಾವು ಭಯಪಡುವುದಿಲ್ಲ, ನಮ್ಮನ್ನು ಬೆದರಿಸಲು ಸಾಧ್ಯವಿಲ್ಲ. ನ್ಯಾಯಾಂಗದ ಸ್ವಾತಂತ್ರ್ಯ ಸರ್ವೋಚ್ಚವಾಗಿದೆ” ಎಂದು ನ್ಯಾಯಮೂರ್ತಿ ಸ್ವಾಮಿನಾಥನ್ ಹೇಳಿದ್ದಾರೆ.

ಇದೇ ವೇಳೆ, ವಂಚಿನಾಥನ್ ಅವರು ಸುಪ್ರೀಂ ಕೋರ್ಟ್‌ಗೆ ಕಳುಹಿಸಿರುವ ಗೌಪ್ಯ ಪತ್ರಕ್ಕೂ, ಅವರ ವಿರುದ್ದದ ವಿಚಾರಣೆಗೂ ಯಾವುದೇ ಸಂಬಂಧವಿಲ್ಲ ಎಂದು ಪೀಠ ಸ್ಪಷ್ಟಪಡಿಸಿದೆ.

ಸೋಮವಾರ ಪ್ರಕರಣದ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿಯ ಪೀಠಕ್ಕೆ ಪ್ರಸ್ತಾಪಿಸಲಾಗಿದೆ. ಏಕೆಂದರೆ, ಇದು ನ್ಯಾಯಮೂರ್ತಿ ಸ್ವಾಮಿನಾಥನ್ ಅವರಿಗೆ ಸಂಬಂಧಪಡುವುದರಿಂದ, ಸ್ವತಃ ಅವರೇ ವಿಚಾರಣೆ ನಡೆಸುವುದು ಸೂಕ್ತವಲ್ಲ ಎಂದು ತೀರ್ಮಾನಿಸಲಾಗಿದೆ. ಹಾಗಾಗಿ, ಮುಖ್ಯ ನ್ಯಾಯಮೂರ್ತಿ ಮುಂದೆ ಯಾವ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂಬುವುದರ ಮೇಲೆ ಪ್ರಕರಣದ ಬೆಳವಣಿಗೆ ನಡೆಯಲಿದೆ.

ಛತ್ತೀಸ್‌ಗಢ| ಕ್ರಿಶ್ಚಿಯನ್ ಸಮುದಾಯದಲ್ಲಿ ಆತಂಕ ಮೂಡಿಸಿದ ಸನ್ಯಾಸಿನಿಯರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...