Homeಕರ್ನಾಟಕ'ನೀವೊಬ್ಬ ಕಾಮಿಡಿ ಪೀಸ್': ತನ್ನ ಮೇಲೆ ಜಾತಿ ತಾರತಮ್ಯ ಆರೋಪ ಮಾಡಿದ ವಕೀಲನ ವಿರುದ್ಧ ಹೈಕೋರ್ಟ್...

‘ನೀವೊಬ್ಬ ಕಾಮಿಡಿ ಪೀಸ್’: ತನ್ನ ಮೇಲೆ ಜಾತಿ ತಾರತಮ್ಯ ಆರೋಪ ಮಾಡಿದ ವಕೀಲನ ವಿರುದ್ಧ ಹೈಕೋರ್ಟ್ ನ್ಯಾಯಾಧೀಶ ಕಿಡಿ

- Advertisement -
- Advertisement -

ನ್ಯಾಯಾಧೀಶ ಮತ್ತು ವಕೀಲನ ನಡುವಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠ ಸೋಮವಾರ (ಜುಲೈ 28) ಅಸಾಧಾರಣ ಸಂದರ್ಭಕ್ಕೆ ಸಾಕ್ಷಿಯಾಯಿತು. ತನ್ನ ವಿರುದ್ದದ ವಕೀಲನ ಆರೋಪಗಳ ಕುರಿತು ಸ್ವತಃ ವಿಚಾರಣೆ ನಡೆಸಿದ ನ್ಯಾಯಾಧೀಶ, ವಕೀಲನ ವಿರುದ್ದ ಕಿಡಿಕಾರಿದರು.

ನ್ಯಾಯಮೂರ್ತಿ ಜಿ.ಆರ್ ಸ್ವಾಮಿನಾಥನ್ ಅವರು ಹಿರಿಯ ವಕೀಲ ಎಸ್‌. ವಂಚಿನಾಥನ್ ವಿರುದ್ದ ವಾಗ್ದಾಳಿ ನಡೆಸಿದ್ದು, ತನ್ನ ವಿರುದ್ದ ಜಾತಿ ಮತ್ತು ಕೋಮು ಪಕ್ಷಪಾತದ ಆರೋಪ ಮಾಡಿರುವ ವಂಚಿನಾಥನ್ ವಿರುದ್ದ ವಿಚಾರಣೆ ವೇಳೆ ಆಕ್ರೋಶ ವ್ಯಕ್ತಪಡಿಸಿದರು. ವಕೀಲ ವಂಚಿನಾಥನ್ ಅವರನ್ನು “ನೀವೊಬ್ಬರು ಕಾಮಿಡಿ ಪೀಸ್” ಎಂದು ಜರೆದರು.

ನ್ಯಾಯಮೂರ್ತಿ ಸ್ವಾಮಿನಾಥನ್ ಅವರು ನ್ಯಾಯಾಲಯದಲ್ಲಿ ಜಾತಿ ಪೂರ್ವಾಗ್ರಹ ಪ್ರದರ್ಶಿಸುತ್ತಿದ್ದಾರೆ ಎಂಬ ಆರೋಪಕ್ಕೆ ಸಂಬಂಧಪಟ್ಟಂತೆ ವಕೀಲ ವಂಚಿನಾಥನ್ ಅವರನ್ನು ನ್ಯಾಯಾಲಯಕ್ಕೆ ಕರೆಸಲಾಗಿತ್ತು. ತನ್ನ ವಿರುದ್ದ ಹೇಳಿಕೆ ನೀಡಿರುವ ವಂಚಿನಾಥನ್ ವಿರುದ್ದ ನ್ಯಾಯಮೂರ್ತಿ ಸ್ವಾಮಿನಾಥನ್ ‘ನ್ಯಾಯಾಂಗ ನಿಂದನೆ’ಯ ಆರೋಪ ಹೊರಿಸಿದ್ದಾರೆ ಎಂದು ವರದಿಯಾಗಿದೆ.

‘ಪೀಪಲ್ಸ್ ರೈಟ್ಸ್ ಪ್ರೊಟೆಕ್ಷನ್ ಸೆಂಟರ್’ ಸಂಸ್ಥೆಯ ರಾಜ್ಯ ಸಂಯೋಜಕ ಎಂಬ ಹೆಸರಿನಲ್ಲಿ ಜೂನ್ 14ರಂದು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಮತ್ತು ಇತರ ನ್ಯಾಯಾಧೀಶರಿಗೆ ಪತ್ರ ಬರೆದಿದ್ದ ವಕೀಲ ವಂಚಿನಾಥನ್ ನ್ಯಾಯಮೂರ್ತಿ ಸ್ವಾಮಿನಾಥನ್ ವಿರುದ್ಧ ಸೈದ್ಧಾಂತಿಕ ಪಕ್ಷಪಾತ, ನ್ಯಾಯಾಂಗ ನೇಮಕಾತಿಗಳಲ್ಲಿ ಜಾತಿ ಪಕ್ಷಪಾತ ಮತ್ತು ಕೋಮು ಒಲವು ಸೇರಿದಂತೆ 15 ಗಂಭೀರ ಆರೋಪಗಳನ್ನು ಮಾಡಿದ್ದರು. ಇತರ ವಿಷಯಗಳ ಜೊತೆಗೆ, ವಿವಾದಾತ್ಮಕ ಲಾವಣ್ಯ ಆತ್ಮಹತ್ಯೆ ಪ್ರಕರಣದಲ್ಲಿ ನ್ಯಾಯಾಧೀಶರ ಪಾತ್ರ ಮತ್ತು ದ್ರಾವಿಡ ಮಾದರಿ ಆಡಳಿತದ ವಿರುದ್ಧ ಅವರ ಹೇಳಿಕೆಗಳನ್ನು ಉಲ್ಲೇಖಿಸಿದ್ದರು ಎಂದು ವರದಿಗಳು ಹೇಳಿವೆ.

ಪತ್ರ ಬರೆಯುವುದರ ಜೊತೆಗೆ ನ್ಯಾಯಮೂರ್ತಿ ಸ್ವಾಮಿನಾಥನ್ ವಿರುದ್ದ ವಂಚಿನಾಥನ್ ಅವರು ಯೂಟ್ಯೂಬ್ ಚಾನೆಲ್‌ಗಳಲ್ಲಿ ಸಂದರ್ಶನಗಳನ್ನು ನೀಡಿದ್ದರು. ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ಗಳನ್ನು ಹಾಕಿದ್ದರು. ಸಂದರ್ಶನವೊಂದರಲ್ಲಿ, ಒಬ್ಬ ದಲಿತ ಹಿರಿಯ ವಕೀಲರನ್ನು ಗುರಿಯಾಗಿಸಲಾಗಿದೆ. ಆದರೆ, ಬ್ರಾಹ್ಮಣ ವಕೀಲರಿಗೆ ಯಾವುದೇ ಕ್ರಮ ತೆಗೆದುಕೊಳ್ಳಲಾಗಿಲ್ಲ ಎಂದು ಸ್ವಾಮಿನಾಥನ್ ವಿರುದ್ದ ವಕೀಲ ವಂಚಿನಾಥನ್ ಆರೋಪ ಮಾಡಿದ್ದರು.

ಇದನ್ನು ನ್ಯಾಯಾಂಗ ನಿಂದನೆ ಎಂದು ಪರಿಗಣಿಸಿ ವಕೀಲ ವಂಚಿನಾಥನ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಲಾಗಿತ್ತು. ಅದರಂತೆ, ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠದ ಮುಂದೆ ಜುಲೈ 24ರಂದು ವಂಚಿನಾಥನ್ ಹಾಜರಾಗಿದ್ದರು. ಅಲ್ಲಿ, ಸ್ವತಃ ನ್ಯಾಯಮೂರ್ತಿ ಸ್ವಾಮಿನಾಥನ್ ಮತ್ತು ಕೆ. ರಾಜಶೇಖರ್ ಅವರ ಪೀಠ ವಂಚಿನಾಥನ್ ಅವರ ವಿಚಾರಣೆ ನಡೆಸಿದೆ. ಆದರೆ, ನ್ಯಾಯಾಲಯದ ಪ್ರಶ್ನೆಗೆ ಮೌಖಿಕವಾಗಿ ಉತ್ತರಿಸಲು ವಂಚಿನಾಥನ್ ನಿರಾಕರಿಸಿದ್ದರು. ಲಿಖಿತ ಉತ್ತರ ನೀಡುವುದಾಗಿ ಹೇಳಿದ್ದರು. ಹಾಗಾಗಿ, ವಿಚಾರಣೆಯನ್ನು ಜುಲೈ 28ಕ್ಕೆ ಮುಂದೂಡಲಾಗಿತ್ತು.

ಜುಲೈ 28ರಂದು, ಅಂದರೆ ಸೋಮವಾರ ವಿಚಾರಣೆ ವೇಳೆ, ನ್ಯಾಯಮೂರ್ತಿ ಸ್ವಾಮಿಥಾನ್ ವಕೀಲ ವಂಚಿನಾಥನ್ ವಿರುದ್ದ ಕಿಡಿಕಾರಿದ್ದಾರೆ. “ನಿಮ್ಮನೆಲ್ಲ ಕ್ರಾಂತಿಕಾರಿಗಳು ಎಂದವರು ಯಾರು? ನೀವೊಬ್ಬರು ಕಾಮಿಡಿ ಪೀಸ್” ಎಂದು ವಕೀಲನ ವಿರುದ್ದ ಹೇಳಿಕೆ ನೀಡಿದ್ದಾರೆ.

“ವಂಚಿನಾಥನ್ ಅವರೇ, ನನ್ನ ತೀರ್ಪುಗಳನ್ನು ಟೀಕಿಸುವ ನಿಮ್ಮ ಹಕ್ಕನ್ನು ನಾನು 100 ಶೇಕಡ ಗೌರವಿಸುತ್ತೇನೆ. ಆದರೆ, ನೀವು ಜಾತಿ ಪಕ್ಷಪಾತವನ್ನು ಆರೋಪಿಸಿದಾಗ ವಿಷಯ ವಿಭಿನ್ನ ತಿರುವು ಪಡೆಯುತ್ತವೆ” ಎಂದಿದ್ದಾರೆ.

ಬಾರ್ & ಬೆಂಚ್ ಪ್ರಕಾರ, “ಕಳೆದ ನಾಲ್ಕು ವರ್ಷಗಳಿಂದ ನೀವು ನನ್ನ ವಿರುದ್ಧ ಅಪಪ್ರಚಾರ ಮಾಡುತ್ತಿದ್ದೀರಿ. ಆದರೆ, ನಾನು ನಿಮ್ಮ ವಿರುದ್ದ ಯಾವುದೇ ಕ್ರಮ ಕೈಗೊಂಡಿಲ್ಲ. ಏಕೆಂದರೆ, ಕಾರ್ಯ ವಿಧಾನದ ನಿಯಮಗಳ ಬಗ್ಗೆ ನಮಗೆ ಗೊತ್ತಿದೆ. ಆದರೆ, ನಾವು ಮೂರ್ಖರಲ್ಲ. ನಾವು ಈ ಪ್ರಕರಣವನ್ನು ಮುಖ್ಯ ನ್ಯಾಯಾಧೀಶರು ಅಥವಾ ಸೂಕ್ತ ಪೀಠದ ಮುಂದೆ ಇಡುತ್ತೇವೆ. ಇಡೀ ವ್ಯವಸ್ಥೆಯೇ ನಮ್ಮ ವಿರುದ್ಧ ಇದೆ ಎಂದು ಗೊತ್ತಿದೆ. ಆದರೆ, ನಾವು ಭಯಪಡುವುದಿಲ್ಲ, ನಮ್ಮನ್ನು ಬೆದರಿಸಲು ಸಾಧ್ಯವಿಲ್ಲ. ನ್ಯಾಯಾಂಗದ ಸ್ವಾತಂತ್ರ್ಯ ಸರ್ವೋಚ್ಚವಾಗಿದೆ” ಎಂದು ನ್ಯಾಯಮೂರ್ತಿ ಸ್ವಾಮಿನಾಥನ್ ಹೇಳಿದ್ದಾರೆ.

ಇದೇ ವೇಳೆ, ವಂಚಿನಾಥನ್ ಅವರು ಸುಪ್ರೀಂ ಕೋರ್ಟ್‌ಗೆ ಕಳುಹಿಸಿರುವ ಗೌಪ್ಯ ಪತ್ರಕ್ಕೂ, ಅವರ ವಿರುದ್ದದ ವಿಚಾರಣೆಗೂ ಯಾವುದೇ ಸಂಬಂಧವಿಲ್ಲ ಎಂದು ಪೀಠ ಸ್ಪಷ್ಟಪಡಿಸಿದೆ.

ಸೋಮವಾರ ಪ್ರಕರಣದ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿಯ ಪೀಠಕ್ಕೆ ಪ್ರಸ್ತಾಪಿಸಲಾಗಿದೆ. ಏಕೆಂದರೆ, ಇದು ನ್ಯಾಯಮೂರ್ತಿ ಸ್ವಾಮಿನಾಥನ್ ಅವರಿಗೆ ಸಂಬಂಧಪಡುವುದರಿಂದ, ಸ್ವತಃ ಅವರೇ ವಿಚಾರಣೆ ನಡೆಸುವುದು ಸೂಕ್ತವಲ್ಲ ಎಂದು ತೀರ್ಮಾನಿಸಲಾಗಿದೆ. ಹಾಗಾಗಿ, ಮುಖ್ಯ ನ್ಯಾಯಮೂರ್ತಿ ಮುಂದೆ ಯಾವ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂಬುವುದರ ಮೇಲೆ ಪ್ರಕರಣದ ಬೆಳವಣಿಗೆ ನಡೆಯಲಿದೆ.

ಛತ್ತೀಸ್‌ಗಢ| ಕ್ರಿಶ್ಚಿಯನ್ ಸಮುದಾಯದಲ್ಲಿ ಆತಂಕ ಮೂಡಿಸಿದ ಸನ್ಯಾಸಿನಿಯರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...