Homeಕರ್ನಾಟಕ‘ನೀವು ಹಿಟ್‌ ವಿಕೆಟ್‌ ಆಗಿದ್ದೀರಿ’ - ಸಿದ್ದರಾಮಯ್ಯ ಅವರಿಗೆ ಕುಮಾರಸ್ವಾಮಿ

‘ನೀವು ಹಿಟ್‌ ವಿಕೆಟ್‌ ಆಗಿದ್ದೀರಿ’ – ಸಿದ್ದರಾಮಯ್ಯ ಅವರಿಗೆ ಕುಮಾರಸ್ವಾಮಿ

ಲಸಿಕೆಯ ವಿಚಾರದಲ್ಲಿ ಬಿಜೆಪಿ ಸರ್ಕಾರ ರಾಜಕೀಯ ಮಾಡುವುದನ್ನು ವಿರೋಧ ಪಕ್ಷವಾಗಿ ನೀವ್ಯಾಕೆ ಪ್ರಶ್ನಿಸಿಲ್ಲ ಎಂದು ಸಾರ್ವಜನಿಕ ವಲಯದಲ್ಲಿ ಕುಮಾರಸ್ವಾಮಿ ವಿರುದ್ದ ಪ್ರಶ್ನೆಗಳೆದ್ದಿವೆ.

- Advertisement -
- Advertisement -

ಶಾಂತಿ ಕಾಲದಲ್ಲಿ ಕಲಹಕ್ಕೆ ಬರುವುದು, ನೆರೆ ಮನೆ ಬೆಂಕಿಯಲ್ಲಿ ಬೇಳೆ ಬೇಯಿಸುವುದು ಕಾಂಗ್ರೆಸ್‌ನ ಜಾಡ್ಯ. ಈ ಅಂಟುರೋಗಕ್ಕೆ ಒಳಗಾದವರು ಸಿದ್ದರಾಮಯ್ಯ. ಲಸಿಕೆ ವಿಚಾರದಲ್ಲಿ ಕಾಂಗ್ರೆಸ್‌ನ ಆತ್ಮವಂಚನೆ ನೆನಪಿಸಿದ್ದಕ್ಕೆ ಸಿದ್ದರಾಮಯ್ಯ ನನ್ನ ವಿರುದ್ಧ ಕಾಲು ಕೆರೆದುಕೊಂಡು ಬಂದಿದ್ದಾರೆ. ಅವರ ಪ್ರತಿ ಎಸೆತಕ್ಕೆ ಸಿಕ್ಸರ್‌ ಕೊಡಬೇಕೆನಿಸಿದೆ ಎಂದು ಗುರುವಾರ ಮಾಜಿ ಸಿಎಂ ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ಅವರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ಸಿದ್ದರಾಮಯ್ಯ ಅವರು ಲಸಿಕೆ ವಿಚಾರವಾಗಿ ಬಿಜೆಪಿ ಹಾಗೂ ಕುಮಾರಸ್ವಾಮಿ ಅವರ ವಿರುದ್ದ ಬುಧವಾರ ಕಿಡಿಕಾರಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ ಇಂದು ಸರಣಿ ಟ್ವೀಟ್‌ ಮಾಡಿರುವ ಕುಮಾರಸ್ವಾಮಿ, “ಕೋವಿಡ್‌ ಲಸಿಕೆ ವಿಚಾರದಲ್ಲಿನ ಕಾಂಗ್ರೆಸ್‌ನ ಆತ್ಮವಂಚನೆಯನ್ನು ಪ್ರಸ್ತಾಪಿಸಿದ್ದಕ್ಕೆ ನಾನು ಸ್ವಯಂ ಗೋಲು ಹೊಡೆದುಕೊಂಡಿರುವುದಾಗಿ ನೀವು ಹೇಳಿದ್ದೀರಿ. ಸಿದ್ದರಾಮಯ್ಯನವರೇ ಲಸಿಕೆ ವಿಚಾರದಲ್ಲಿ ರಾಷ್ಟ್ರದ ಎದುರು ಬೆತ್ತಲಾಗಿ, ನಿಂತಿರುವುದು ಕಾಂಗ್ರೆಸ್‌. ಈ ವಿಚಾರದಲ್ಲಿ ನನ್ನನ್ನು ಟೀಕಿಸಲು ಬಂದು ನೀವು ಹಿಟ್‌ ವಿಕೆಟ್‌ ಆಗಿದ್ದೀರಿ” ಎಂದು ಅವರು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ‘56 ಇಂಚಿನ ಎದೆಯ ಧೈರ್ಯ ಎಂದರೆ ಇದೇನಾ?’- ಸಿದ್ದರಾಮಯ್ಯ ಆಕ್ರೋಶ

“ಲಸಿಕೆ ವಿಚಾರವಾಗಿ ಕಾಂಗ್ರೆಸ್ ಅನುಮಾನದ ಮಾತುಗಳನ್ನು ಆಡಲಿಲ್ಲವೇ? ಭಾರತದ್ದೇ ಕೋವ್ಯಾಕ್ಸಿನ್‌ನ ಬಗ್ಗೆ ಅಪಪ್ರಚಾರ ಮಾಡಲಿಲ್ಲವೇ? ನಮ್ಮದೇ ಲಸಿಕೆಯನ್ನು ನೀವು ಪ್ರೋತ್ಸಾಹಿಸಬೇಕಿತ್ತೋ ಇಲ್ಲವೋ? ಅದು ಬಿಟ್ಟು ನೀವು ಮಾಡಿದ್ದೇನು? ಅಡಿಗಡಿಗೆ ಲಸಿಕೆ ಮೇಲೆ ಅನುಮಾನ. ಈ ಮೂಲಕ ಭಾರತೀಯ ವಿಜ್ಞಾನಿಗಳ ಅಪಮಾನ. ಇದನ್ನೇ ಅಲ್ಲವೇ ನಾನು ಹೇಳಿದ್ದು?” ಎಂದು ಅವರು ಪ್ರಶ್ನಿಸಿದ್ದಾರೆ.

“ಕಾಂಗ್ರೆಸ್‌ನ ಲಸಿಕೆ ರಾಜಕಾರಣವನ್ನು ನಾನು ವಿವರಿಸಿದ್ದೇನೆ. ಕಾಂಗ್ರೆಸ್‌ನ ಅಪಪ್ರಚಾರದಿಂದ ಜನ ಲಸಿಕೆ ಹಾಕಿಸಿಕೊಳ್ಳುತ್ತಿಲ್ಲ ಎಂದು ನಾನು ಹೇಳಿಲ್ಲ. ಲಸಿಕೆಗಾಗಿ ಜನರು ಸಿದ್ದರಾಗಿಯೇ ಇದ್ದಾರೆ. ಕಾಂಗ್ರೆಸ್‌ ಹೇಳಿದ ಮಾತ್ರಕ್ಕೆ ಜನ ಲಸಿಕೆಯಿಂದ ವಿಮುಖರಾಗಿಲ್ಲ. ಜನ ಕಾಂಗ್ರೆಸ್‌ ಮಾತು ಕೇಳುತ್ತಾರೆ ಎಂಬ ಭ್ರಮೆ ಸಿದ್ದರಾಮಯ್ಯನವರಿಗೆ ಬೇಡ” ಎಂದು ಕುಮಾರಸ್ವಾಮಿ ಹೇಳಿದ್ದಾರೆ.

“ಲಸಿಕೆಯೊಂದು ಸಿಕ್ಕಾಗ ಅದನ್ನು ಮೊದಲಿಗೆ ಮುಂಚೂಣಿ ಹೋರಾಟಗಾರರಿಗೆ ನೀಡಲಾಗುತ್ತದೆ. ಇದು ನಿಮಗೆ ತಿಳಿದಿರಲಿ. ದೇಶದಲ್ಲಿ ಮೊದಲು ಕೋವಿಡ್‌ ವಾರಿಯರ್‌ಗಳಿಗೆ ಲಸಿಕೆ ನೀಡಲಾಯಿತು. ನನ್ನ ಸರದಿ ಬಂದಾಗ ನಾನು ಲಸಿಕೆ ಪಡೆದೆ. ಇಲ್ಲಿ ಕಾಂಗ್ರೆಸ್‌ ಮಾತು ನಂಬಿ ಕೂರುವಂಥದ್ದೇನಿತ್ತು. ಕಾಂಗ್ರೆಸ್‌ ಮಾತನ್ನು 50 ವರ್ಷದಿಂದಲೂ ಕೇಳದ ಕುಟುಂಬ ನಮ್ಮದು!” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಕೇರಳದ ‘ಆರೋಗ್ಯ’ ಮತ್ತೆ ಮಹಿಳೆಯ ಕೈಗೇ!: ಟೀಚರ್ ಜಾಗಕ್ಕೆ ಪತ್ರಕರ್ತೆ!

“ದೇಶದಲ್ಲಿ ಸರ್ವರಿಗೂ ಉಚಿತ ಲಸಿಕೆ ಹಾಕುವಂತೆ ಸೋನಿಯಾ ಗಾಂಧಿ ಅವರ ಜೊತೆಗೂಡಿ ಎಚ್‌.ಡಿ ದೇವೇಗೌಡರು ಪ್ರಧಾನಿಗೆ ಪತ್ರ ಬರೆದರು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಸಿದ್ದರಾಮಯ್ಯನವರೇ, ದೇಶದ ಹಲವು ವಿರೋಧಪಕ್ಷಗಳ ನಾಯಕರ ಜೊತೆಗೂಡಿ ದೇವೇಗೌಡರು ಪ್ರಧಾನಿಗೆ ಪತ್ರ ಬರೆದರೇ ಹೊರತು, ಸೋನಿಯಾ ಗಾಂಧಿ ಅವರ ಜೊತೆಗೂಡಿ ಪತ್ರ ಬರೆಯಲಿಲ್ಲ ನೆನಪಿರಲಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಅಷ್ಟಕ್ಕೂ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರಕ್ಕೆ ಸಹಿ ಮಾಡುವಂತೆ ದೇವೇಗೌಡರಿಗೆ ಯಾರೆಲ್ಲ ವಿನಂತಿಸಿದ್ದರು, ಎಷ್ಟು ಬೇಡಾಡಿದರು ಎಂಬುದು ಸಿದ್ದರಾಮಯ್ಯನವರಿಗೆ ಗೊತ್ತಿದೆಯೇ? ದೆಹಲಿಗೆ ಹೋಗಿ ಈ ವಿಚಾರವಾಗಿ ಸಿದ್ದರಾಮಯ್ಯನವರು ಮಾಹಿತಿ ಪಡೆದು ಬರಲಿ. ಮಾಹಿತಿ ಇಲ್ಲದೇ ಮಾತಾಡುವುದು ಸಿದ್ದರಾಮಯ್ಯನವರಿಗಿರುವ ದೊಡ್ಡ ಸಮಸ್ಯೆ” ಎಂದು ಅವರು ಹೇಳಿದ್ದಾರೆ.

“ಅಸಮರ್ಪಕ ಲಸಿಕೆ ಅಭಿಯಾನ ವಿರುದ್ಧ ನಮ್ಮದೂ ಆಕ್ಷೇಪಣೆಗಳಿವೆ. ಆದರೆ, ಲಸಿಕೆ ವಿರುದ್ಧ ನಮ್ಮ ನಿಲುವು ಇಲ್ಲ. ಲಸಿಕೆ ಅಭಿಯಾನ ಸಮರ್ಪಕವಾಗಿ ನಡೆಯಬೇಕೆಂದು ಒತ್ತಾಯಿಸಿ ನಾನು ಸರ್ಕಾರಗಳಿಗೆ ಹಲವು ಸಲಹೆ ನೀಡಿದ್ದೇನೆ. ಆದರೆ, ಕಾಂಗ್ರೆಸ್‌ ಲಸಿಕೆ ವಿರುದ್ಧವೇ ಮಾತಾಡಿತು. ಈಗ ಲಸಿಕೆ, ಲಸಿಕೆ ಎನ್ನುತ್ತಿದೆ. ಇದು ಕಾಂಗ್ರೆಸ್‌ನ ಇಬ್ಬಗೆ ನೀತಿ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಕುಮಾರಸ್ವಾಮಿಯದ್ದು ಬಾಲಿಷ ಹೇಳಿಕೆ: ಸಿದ್ದರಾಮಯ್ಯ

“ಸೋಂಕು ಹೆಚ್ಚುತ್ತಿದ್ದರೂ, ಲಾಕ್‌ಡೌನ್‌ ಜಾರಿಯಲ್ಲಿ ಇದ್ದರೂ ರಾಜ್ಯದಲ್ಲಿ ಕಾಂಗ್ರೆಸ್‌ ನಾಯಕರು ಬೀದಿಗೆ ಬಿದ್ದಿದ್ದಾರೆ. ಜನರಿಗೆ ನೆರವಾಗುವುದು ಇವರ ಉದ್ದೇಶವಲ್ಲ. ರಾಜಕೀಯ ಮೈಲೇಜ್‌ ಪಡೆಯುವುದು ಇವರ ಉದ್ದೇಶ. ಜೊತೆಗೆ ಸಿಎಂ ಆಗುವ ಕನಸುಗಳು. ಶಾಂತಿ ಕಾಲದಲ್ಲಿ ಕಾಂಗ್ರೆಸ್‌ ಕಲಹಕ್ಕೆ ಇಳಿದು ಲಾಭ ಪಡೆಯುತ್ತದೆ ಎಂಬುದಕ್ಕೆ ಇದು ಸಾಕ್ಷಿ” ಎಂದು ಕುಮಾರಸ್ವಾಮಿ ಹೇಳಿದ್ದಾರೆ.

“ಲಸಿಕೆಗಾಗಿ ₹100 ಕೋಟಿ ಕೊಟ್ಟಿದ್ದಾಗಿ ಕಾಂಗ್ರೆಸ್‌ ಹೇಳುತ್ತಿದೆ. ಇದೇನು ಸಿದ್ದರಾಮಯ್ಯನವರ ಮನೆ ಗಂಟೇ? ಕಾಂಗ್ರೆಸ್‌ ಜನಪ್ರತಿನಿಧಿಗಳ ಕ್ಷೇತ್ರಾಭಿವೃದ್ಧಿ ನಿಧಿಯಲ್ಲವೇ? ಕ್ಷೇತ್ರಾಭಿವೃದ್ಧಿ ನಿಧಿಯನ್ನು ಸರ್ಕಾರಕ್ಕೇ ನೀಡಿರುವುದಾಗಿ ಹೇಳಬೇಕಿದ್ದ ಕಾಂಗ್ರೆಸ್‌, ಲಸಿಕೆಗಾಗಿ ಕೈಯಿಂದ 100 ಕೋಟಿ ಕೊಟ್ಟಂತೆ ಹೇಳಿದೆ. ಎಂಥ ವಂಚಕ ನಡೆ?” ಎಂದು ಅವರು ಹೇಳಿದ್ದಾರೆ.

ಕುಮಾರಸ್ವಾಮಿ ವಿರುದ್ದ ಸಾರ್ವಜನಿಕರ ಆಕ್ರೋಶ

ಕುಮಾರಸ್ವಾಮಿ ಅವರ ಈ ಹೇಳಿಕೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಕೊರೊನಾ ಲಸಿಕೆಯ ವಿಚಾರದಲ್ಲಿ ರಾಜಕೀಯ ಮಾಡಿದ್ದನ್ನು ಕಾಂಗ್ರೆಸ್‌ ಪ್ರಶ್ನಿಸಿದ್ದು ತಪ್ಪೆ ಎಂದು ಪ್ರಶ್ನಿಸಿದ್ದಾರೆ. ಲಸಿಕೆಯನ್ನು ಬೇಗನೆ ತಯಾರಿಸುವಂತೆ ಒತ್ತಾಯಿಸಿದ್ದು, ಕ್ಲಿನಿಕಲ್‌ ಟ್ರಯಲ್‌ಗೂ ಮುಂಚೆ ಅದಕ್ಕೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿದ್ದು ಸರಿಯಾದ್ದಲ್ಲವೆ, ಈ ವಿಚಾರದಲ್ಲಿ ವಿರೋಧ ಪಕ್ಷವಾಗಿ ನೀವು ಯಾಕೆ ಪ್ರಶ್ನಿಸಿಲ್ಲ ಎಂದು ಪ್ರಶ್ನಿಸಿದ್ದಾರೆ.

ಜೊತೆಗೆ ಲಸಿಕೆ ವಿಚಾರದಲ್ಲಿ ಕುಮಾರಸ್ವಾಮಿ ಅವರು ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರವನ್ನು ಪ್ರಶ್ನಿಸಬೇಕೆ ಹೊರತು ವಿಪಕ್ಷವನ್ನಲ್ಲ ಎಂಬ ಅಭಿಪ್ರಾಯ ಕೂಡಾ ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತವಾಗಿದೆ.

ಇದನ್ನೂ ಓದಿ: ನಿಗಮಗಳಿಗೆ ನೂರಾರು ಕೋಟಿಯಿದೆ; ಕೊರೊನಾ ಪರಿಹಾರಕ್ಕೆ ಹಣವಿಲ್ಲವೆ: ಕುಮಾರಸ್ವಾಮಿ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....