Homeಮುಖಪುಟ'ನೀವು ಶಂಕಿತ' : ಮುಹಮ್ಮದ್ ದೀಪಕ್‌ಗೆ ಉತ್ತರಾಖಂಡ ಹೈಕೋರ್ಟ್ ತರಾಟೆ!

‘ನೀವು ಶಂಕಿತ’ : ಮುಹಮ್ಮದ್ ದೀಪಕ್‌ಗೆ ಉತ್ತರಾಖಂಡ ಹೈಕೋರ್ಟ್ ತರಾಟೆ!

- Advertisement -
- Advertisement -

ಇತ್ತೀಚೆಗೆ ಹಿಂದುತ್ವವಾದಿಗಳ ದಾಳಿಯಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿ ಶ್ಲಾಘನೆಗೆ ಪಾತ್ರರಾದ ಮುಹಮ್ಮದ್ ದೀಪಕ್ (ದೀಪಕ್ ಕುಮಾರ್) ಅವರನ್ನು ಉತ್ತರಾಖಂಡ ಹೈಕೋರ್ಟ್ ಗುರುವಾರ (ಮಾ.19) ತೀವ್ರ ತರಾಟೆಗೆ ತೆಗೆದುಕೊಂಡಿದೆ ಎಂದು barandbench.com ವರದಿ ಮಾಡಿದೆ.

ತನ್ನ ವಿರುದ್ಧ ಬಲಪಂಥೀಯ ಗುಂಪು ದಾಖಲಿಸಿರುವ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ದೀಪಕ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರಾಕೇಶ್ ಥಪ್ಲಿಯಾಲ್ ಅವರು, “ದೀಪಕ್ ತನ್ನ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜಿಯನ್ನು ಸಲ್ಲಿಸುವ ಮೂಲಕ ಪೊಲೀಸರ ಮೇಲೆ ಒತ್ತಡ ಹೇರಲು ಪ್ರಯತ್ನಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.

ಎಫ್‌ಐಆರ್ ರದ್ದುಗೊಳಿಸುವಂತೆ ಸಲ್ಲಿಸಲಾದ ಅರ್ಜಿಯಲ್ಲಿ ದೀಪಕ್ ಬೆದರಿಕೆಗಳಿಂದ ರಕ್ಷಣೆ ಪಡೆಯುವುದು ಹೇಗೆ ಎಂದು ನ್ಯಾಯಾಲಯ ಪ್ರಶ್ನಿಸಿದೆ.

“ಇದು ಸಂಪೂರ್ಣವಾಗಿ ಕಾನೂನು ಪ್ರಕ್ರಿಯೆಯ ದುರುಪಯೋಗವಾಗಿದೆ. ಆರೋಪಿಯಾಗಿರುವ ವ್ಯಕ್ತಿಯು ರಕ್ಷಣೆಗಾಗಿ ಪ್ರಾರ್ಥಿಸುತ್ತಿದ್ದಾರೆಯೇ? ಅವರು [ಪೊಲೀಸರು] ಸಮರ್ಥರಾಗಿದ್ದಾರೆ. ಅವರ ಮೇಲೆ ನಂಬಿಕೆಯಿರಲಿ. ನೀವು ಶಂಕಿತ ಆರೋಪಿ” ಎಂದು ನ್ಯಾಯ ಪೀಠ ಹೇಳಿದೆ.

ಈ ಪ್ರಕರಣದಲ್ಲಿ ಪಕ್ಷಪಾತದ ವರ್ತನೆ ತೋರಿದ್ದಾರೆ ಎನ್ನಲಾದ ‘ತಪ್ಪಿತಸ್ಥ’ ಪೊಲೀಸ್ ಅಧಿಕಾರಿಗಳ ವಿರುದ್ಧ ಇಲಾಖಾ ತನಿಖೆಗೆ ಕೋರಿ ದೀಪಕ್ ಸಲ್ಲಿಸಿದ ಅರ್ಜಿಯನ್ನು ಸಹ ನ್ಯಾಯಾಲಯ ಪ್ರಶ್ನಿಸಿದೆ.

“ಇದು ಯಾವ ರೀತಿಯ ಕೋರಿಕೆ? ನೀವು ಈ ರೀತಿ ಕೋರಲು ಸಾಧ್ಯವೇ? ಇದು ಕೇವಲ ಒತ್ತಡ ಹೇರುವ ತಂತ್ರವಾಗಿದೆ. ನಾನು ನಿಮ್ಮ ಮೇಲೆ ದಂಡ ವಿಧಿಸಿ ಈ ಅರ್ಜಿಯನ್ನು ವಜಾಗೊಳಿಸುತ್ತೇನೆ. ನೀವು ಅರ್ಜಿ ಸಲ್ಲಿಸುವಾಗ, ನೀವು ಯಾರು ಮತ್ತು ಅರ್ಜಿಯಲ್ಲಿ ನಿಮ್ಮ ಸ್ಥಾನಮಾನವೇನು ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. ಪ್ರಸ್ತುತ ನಿಮ್ಮ ಸ್ಥಾನಮಾನ ಒಬ್ಬ ಶಂಕಿತ ಆರೋಪಿಯದ್ದು. ಶಂಕಿತ ಆರೋಪಿಯಾಗಿರುವ ವ್ಯಕ್ತಿಯೊಬ್ಬರು ಇಲಾಖಾ ತನಿಖೆಗಾಗಿ ಕೋರುತ್ತಿದ್ದಾರೆ. ಒಬ್ಬ ಶಂಕಿತ ಆರೋಪಿ ರಕ್ಷಣೆಗಾಗಿ ಕೋರುತ್ತಿದ್ದಾರೆ” ಎಂದು ನ್ಯಾಯಾಪೀಠ ಖಾರವಾಗಿ ಹೇಳಿದೆ.

ದೀಪಕ್ ಈ ವಿಷಯವನ್ನು ಸಂವೇದನಾಶೀಲಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ನ್ಯಾಯಾಲಯ ಹೇಳಿದೆ. ಈ ಅರ್ಜಿಯನ್ನು ಸಲ್ಲಿಸುವ ಮೂಲಕ ಅವರು ಪೊಲೀಸರ ಮೇಲೆ ‘ಹೊರೆ’ ಹೇರುತ್ತಿದ್ದಾರೆ ಎಂದು ನ್ಯಾಯಾಲಯವು ಇದೇ ಸಂದರ್ಭದಲ್ಲಿ ತಿಳಿಸಿದೆ.

ದೀಪಕ್ ಪರ ವಕೀಲರಾದ ನವನೀಶ್ ನೇಗಿ ಅವರು ವಾದ ಮಂಡಿಸುತ್ತಾ, “ದ್ವೇಷ ಭಾಷಣ ಮತ್ತು ಕ್ರಿಮಿನಲ್ ಬೆದರಿಕೆಯ ಘಟನೆ ನಡೆದಾಗ ದೀಪಕ್ ಅವರು ಪರಿಸ್ಥಿತಿಯನ್ನು ತಿಳಿಗೊಳಿಸಲು ಪ್ರಯತ್ನಿಸಿದ್ದಾರೆ ಎಂದು ತಿಳಿಸಿದ್ದಾರೆ. ಅಲ್ಲದೆ, ಬಜರಂಗದಳದ ಸದಸ್ಯರ ವಿರುದ್ಧ ಕುಮಾರ್ ಮತ್ತು ಇತರರು ಸಲ್ಲಿಸಿದ್ದ ದೂರುಗಳನ್ನು ಸಹ ನೇಗಿ ಅವರು ಈ ಸಂದರ್ಭದಲ್ಲಿ ಓದಿದ್ದಾರೆ.

ನ್ಯಾಯಾಲಯವು ಈ ಹಂತದಲ್ಲಿ ಮಧ್ಯಪ್ರವೇಶಿಸಿ, ವಕೀಲರು ಘಟನೆಯ ವಿವರಗಳ ಮೇಲೆ ಗಮನ ಹರಿಸದೆ, ಅರ್ಜಿಯಲ್ಲಿ ಕೋರಿರುವ ಪರಿಹಾರಗಳ ಬಗ್ಗೆ ಮಾತನಾಡಲು ಸೂಚಿಸಿದ್ದಾರೆ. ಎಫ್‌ಐಆರ್ ರದ್ದುಪಡಿಸುವ ಕುರಿತಾದ ಕೋರಿಕೆಯನ್ನು ಪರಿಗಣಿಸಬಹುದು ಎಂದಿರುವ ನ್ಯಾಯಾಧೀಶರು, ದೀಪಕ್ ಅವರು ಕೋರಿರುವ ಇತರ ಪರಿಹಾರಗಳ (ಪೊಲೀಸರ ವಿರುದ್ದ ಇಲಾಖಾ ತನಿಖೆ ಇತ್ಯಾದಿ) ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ನೀವು ರಿಟ್ ವ್ಯಾಪ್ತಿಯಲ್ಲಿ ಇದನ್ನು ಕೋರಲು ಸಾಧ್ಯವೇ? ನೀವು ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಕೋರುತ್ತಿದ್ದೀರಿ” ಎಂದು ನ್ಯಾಯಾಲಯವು ಹೇಳಿದೆ.

ಪೂರಕ ಪೊಲೀಸ್ ರಕ್ಷಣೆಯ ಬೇಡಿಕೆಗೆ ಸಂಬಂಧಿಸಿದಂತೆ, ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಆಡಳಿತವು ಸಮರ್ಥವಾಗಿದೆ ಮತ್ತು ಅದಕ್ಕೆ ಕಾನೂನುಬದ್ಧ ಹೊಣೆಗಾರಿಕೆಯನ್ನು ಹೊಂದಿದೆ ಎಂದು ನ್ಯಾಯಾಲಯವು ತಿಳಿಸಿದೆ.

ದೀಪಕ್ ಅವರಿಗೆ ಯಾವುದೇ ಜೀವ ಬೆದರಿಕೆಯ ಆತಂಕವಿಲ್ಲ ಎಂಬ ಸರ್ಕಾರದ ಸಲ್ಲಿಕೆಯನ್ನು ಕೂಡ ನ್ಯಾಯಾಲಯವು ಗಮನಿಸಿದೆ.

ದೀಪಕ್ ಅವರು ಸತತವಾಗಿ ಬೆದರಿಕೆಗಳನ್ನು ಸ್ವೀಕರಿಸುತ್ತಿದ್ದಾರೆ ಎಂದು ಅವರ ಪರ ವಕೀಲರು ತಿಳಿಸಿದ್ದರು. ಆದಾಗ್ಯೂ, ದೀಪಕ್ ಅವರು ತನಿಖೆಯನ್ನು ಎದುರಿಸುತ್ತಿದ್ದಾರೆ ಮತ್ತು ಅವರ ಜೀವ ಹಾಗೂ ಸ್ವಾತಂತ್ರ್ಯವನ್ನು ರಕ್ಷಿಸುವುದು ಪೊಲೀಸರ ಕಾನೂನುಬದ್ಧ ಹೊಣೆಗಾರಿಕೆಯಾಗಿದೆ ಎಂದು ನ್ಯಾಯಾಲಯವು ಪುನರುಚ್ಚರಿಸಿದೆ.

ಕೆಲವು ಪ್ರಕರಣಗಳು ಸಾಮಾನ್ಯವಾಗಿ ಸಮಾಜದ ಮೇಲೆ ಪರಿಣಾಮ ಬೀರುತ್ತವೆ ಎಂದು ನ್ಯಾಯಾಲಯವು ಹೇಳಿದೆ.

ನ್ಯಾಯಾಲಯವು ದೀಪಕ್ ಅವರ ಕೋರಿಕೆಗಳನ್ನು ತಿರಸ್ಕರಿಸುವ ಒಲವು ಹೊಂದಿದ್ದರೂ, ಪ್ರಕರಣಕ್ಕೆ ಸಂಬಂಧಿಸಿದ ಕೆಲವು ಅಂಶಗಳನ್ನು ಪರಿಶೀಲಿಸಲು ವಕೀಲರು ಸಮಯಾವಕಾಶ ಕೋರಿದ ನಂತರ ವಿಚಾರಣೆಯನ್ನು ಶುಕ್ರವಾರಕ್ಕೆ (ಮಾ.20) ಮುಂದೂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...