Homeಮುಖಪುಟ'ನೀವು ಶಂಕಿತ' : ಮುಹಮ್ಮದ್ ದೀಪಕ್‌ಗೆ ಉತ್ತರಾಖಂಡ ಹೈಕೋರ್ಟ್ ತರಾಟೆ!

‘ನೀವು ಶಂಕಿತ’ : ಮುಹಮ್ಮದ್ ದೀಪಕ್‌ಗೆ ಉತ್ತರಾಖಂಡ ಹೈಕೋರ್ಟ್ ತರಾಟೆ!

- Advertisement -
- Advertisement -

ಇತ್ತೀಚೆಗೆ ಹಿಂದುತ್ವವಾದಿಗಳ ದಾಳಿಯಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿ ಶ್ಲಾಘನೆಗೆ ಪಾತ್ರರಾದ ಮುಹಮ್ಮದ್ ದೀಪಕ್ (ದೀಪಕ್ ಕುಮಾರ್) ಅವರನ್ನು ಉತ್ತರಾಖಂಡ ಹೈಕೋರ್ಟ್ ಗುರುವಾರ (ಮಾ.19) ತೀವ್ರ ತರಾಟೆಗೆ ತೆಗೆದುಕೊಂಡಿದೆ ಎಂದು barandbench.com ವರದಿ ಮಾಡಿದೆ.

ತನ್ನ ವಿರುದ್ಧ ಬಲಪಂಥೀಯ ಗುಂಪು ದಾಖಲಿಸಿರುವ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ದೀಪಕ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರಾಕೇಶ್ ಥಪ್ಲಿಯಾಲ್ ಅವರು, “ದೀಪಕ್ ತನ್ನ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜಿಯನ್ನು ಸಲ್ಲಿಸುವ ಮೂಲಕ ಪೊಲೀಸರ ಮೇಲೆ ಒತ್ತಡ ಹೇರಲು ಪ್ರಯತ್ನಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.

ಎಫ್‌ಐಆರ್ ರದ್ದುಗೊಳಿಸುವಂತೆ ಸಲ್ಲಿಸಲಾದ ಅರ್ಜಿಯಲ್ಲಿ ದೀಪಕ್ ಬೆದರಿಕೆಗಳಿಂದ ರಕ್ಷಣೆ ಪಡೆಯುವುದು ಹೇಗೆ ಎಂದು ನ್ಯಾಯಾಲಯ ಪ್ರಶ್ನಿಸಿದೆ.

“ಇದು ಸಂಪೂರ್ಣವಾಗಿ ಕಾನೂನು ಪ್ರಕ್ರಿಯೆಯ ದುರುಪಯೋಗವಾಗಿದೆ. ಆರೋಪಿಯಾಗಿರುವ ವ್ಯಕ್ತಿಯು ರಕ್ಷಣೆಗಾಗಿ ಪ್ರಾರ್ಥಿಸುತ್ತಿದ್ದಾರೆಯೇ? ಅವರು [ಪೊಲೀಸರು] ಸಮರ್ಥರಾಗಿದ್ದಾರೆ. ಅವರ ಮೇಲೆ ನಂಬಿಕೆಯಿರಲಿ. ನೀವು ಶಂಕಿತ ಆರೋಪಿ” ಎಂದು ನ್ಯಾಯ ಪೀಠ ಹೇಳಿದೆ.

ಈ ಪ್ರಕರಣದಲ್ಲಿ ಪಕ್ಷಪಾತದ ವರ್ತನೆ ತೋರಿದ್ದಾರೆ ಎನ್ನಲಾದ ‘ತಪ್ಪಿತಸ್ಥ’ ಪೊಲೀಸ್ ಅಧಿಕಾರಿಗಳ ವಿರುದ್ಧ ಇಲಾಖಾ ತನಿಖೆಗೆ ಕೋರಿ ದೀಪಕ್ ಸಲ್ಲಿಸಿದ ಅರ್ಜಿಯನ್ನು ಸಹ ನ್ಯಾಯಾಲಯ ಪ್ರಶ್ನಿಸಿದೆ.

“ಇದು ಯಾವ ರೀತಿಯ ಕೋರಿಕೆ? ನೀವು ಈ ರೀತಿ ಕೋರಲು ಸಾಧ್ಯವೇ? ಇದು ಕೇವಲ ಒತ್ತಡ ಹೇರುವ ತಂತ್ರವಾಗಿದೆ. ನಾನು ನಿಮ್ಮ ಮೇಲೆ ದಂಡ ವಿಧಿಸಿ ಈ ಅರ್ಜಿಯನ್ನು ವಜಾಗೊಳಿಸುತ್ತೇನೆ. ನೀವು ಅರ್ಜಿ ಸಲ್ಲಿಸುವಾಗ, ನೀವು ಯಾರು ಮತ್ತು ಅರ್ಜಿಯಲ್ಲಿ ನಿಮ್ಮ ಸ್ಥಾನಮಾನವೇನು ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. ಪ್ರಸ್ತುತ ನಿಮ್ಮ ಸ್ಥಾನಮಾನ ಒಬ್ಬ ಶಂಕಿತ ಆರೋಪಿಯದ್ದು. ಶಂಕಿತ ಆರೋಪಿಯಾಗಿರುವ ವ್ಯಕ್ತಿಯೊಬ್ಬರು ಇಲಾಖಾ ತನಿಖೆಗಾಗಿ ಕೋರುತ್ತಿದ್ದಾರೆ. ಒಬ್ಬ ಶಂಕಿತ ಆರೋಪಿ ರಕ್ಷಣೆಗಾಗಿ ಕೋರುತ್ತಿದ್ದಾರೆ” ಎಂದು ನ್ಯಾಯಾಪೀಠ ಖಾರವಾಗಿ ಹೇಳಿದೆ.

ದೀಪಕ್ ಈ ವಿಷಯವನ್ನು ಸಂವೇದನಾಶೀಲಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ನ್ಯಾಯಾಲಯ ಹೇಳಿದೆ. ಈ ಅರ್ಜಿಯನ್ನು ಸಲ್ಲಿಸುವ ಮೂಲಕ ಅವರು ಪೊಲೀಸರ ಮೇಲೆ ‘ಹೊರೆ’ ಹೇರುತ್ತಿದ್ದಾರೆ ಎಂದು ನ್ಯಾಯಾಲಯವು ಇದೇ ಸಂದರ್ಭದಲ್ಲಿ ತಿಳಿಸಿದೆ.

ದೀಪಕ್ ಪರ ವಕೀಲರಾದ ನವನೀಶ್ ನೇಗಿ ಅವರು ವಾದ ಮಂಡಿಸುತ್ತಾ, “ದ್ವೇಷ ಭಾಷಣ ಮತ್ತು ಕ್ರಿಮಿನಲ್ ಬೆದರಿಕೆಯ ಘಟನೆ ನಡೆದಾಗ ದೀಪಕ್ ಅವರು ಪರಿಸ್ಥಿತಿಯನ್ನು ತಿಳಿಗೊಳಿಸಲು ಪ್ರಯತ್ನಿಸಿದ್ದಾರೆ ಎಂದು ತಿಳಿಸಿದ್ದಾರೆ. ಅಲ್ಲದೆ, ಬಜರಂಗದಳದ ಸದಸ್ಯರ ವಿರುದ್ಧ ಕುಮಾರ್ ಮತ್ತು ಇತರರು ಸಲ್ಲಿಸಿದ್ದ ದೂರುಗಳನ್ನು ಸಹ ನೇಗಿ ಅವರು ಈ ಸಂದರ್ಭದಲ್ಲಿ ಓದಿದ್ದಾರೆ.

ನ್ಯಾಯಾಲಯವು ಈ ಹಂತದಲ್ಲಿ ಮಧ್ಯಪ್ರವೇಶಿಸಿ, ವಕೀಲರು ಘಟನೆಯ ವಿವರಗಳ ಮೇಲೆ ಗಮನ ಹರಿಸದೆ, ಅರ್ಜಿಯಲ್ಲಿ ಕೋರಿರುವ ಪರಿಹಾರಗಳ ಬಗ್ಗೆ ಮಾತನಾಡಲು ಸೂಚಿಸಿದ್ದಾರೆ. ಎಫ್‌ಐಆರ್ ರದ್ದುಪಡಿಸುವ ಕುರಿತಾದ ಕೋರಿಕೆಯನ್ನು ಪರಿಗಣಿಸಬಹುದು ಎಂದಿರುವ ನ್ಯಾಯಾಧೀಶರು, ದೀಪಕ್ ಅವರು ಕೋರಿರುವ ಇತರ ಪರಿಹಾರಗಳ (ಪೊಲೀಸರ ವಿರುದ್ದ ಇಲಾಖಾ ತನಿಖೆ ಇತ್ಯಾದಿ) ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ನೀವು ರಿಟ್ ವ್ಯಾಪ್ತಿಯಲ್ಲಿ ಇದನ್ನು ಕೋರಲು ಸಾಧ್ಯವೇ? ನೀವು ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಕೋರುತ್ತಿದ್ದೀರಿ” ಎಂದು ನ್ಯಾಯಾಲಯವು ಹೇಳಿದೆ.

ಪೂರಕ ಪೊಲೀಸ್ ರಕ್ಷಣೆಯ ಬೇಡಿಕೆಗೆ ಸಂಬಂಧಿಸಿದಂತೆ, ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಆಡಳಿತವು ಸಮರ್ಥವಾಗಿದೆ ಮತ್ತು ಅದಕ್ಕೆ ಕಾನೂನುಬದ್ಧ ಹೊಣೆಗಾರಿಕೆಯನ್ನು ಹೊಂದಿದೆ ಎಂದು ನ್ಯಾಯಾಲಯವು ತಿಳಿಸಿದೆ.

ದೀಪಕ್ ಅವರಿಗೆ ಯಾವುದೇ ಜೀವ ಬೆದರಿಕೆಯ ಆತಂಕವಿಲ್ಲ ಎಂಬ ಸರ್ಕಾರದ ಸಲ್ಲಿಕೆಯನ್ನು ಕೂಡ ನ್ಯಾಯಾಲಯವು ಗಮನಿಸಿದೆ.

ದೀಪಕ್ ಅವರು ಸತತವಾಗಿ ಬೆದರಿಕೆಗಳನ್ನು ಸ್ವೀಕರಿಸುತ್ತಿದ್ದಾರೆ ಎಂದು ಅವರ ಪರ ವಕೀಲರು ತಿಳಿಸಿದ್ದರು. ಆದಾಗ್ಯೂ, ದೀಪಕ್ ಅವರು ತನಿಖೆಯನ್ನು ಎದುರಿಸುತ್ತಿದ್ದಾರೆ ಮತ್ತು ಅವರ ಜೀವ ಹಾಗೂ ಸ್ವಾತಂತ್ರ್ಯವನ್ನು ರಕ್ಷಿಸುವುದು ಪೊಲೀಸರ ಕಾನೂನುಬದ್ಧ ಹೊಣೆಗಾರಿಕೆಯಾಗಿದೆ ಎಂದು ನ್ಯಾಯಾಲಯವು ಪುನರುಚ್ಚರಿಸಿದೆ.

ಕೆಲವು ಪ್ರಕರಣಗಳು ಸಾಮಾನ್ಯವಾಗಿ ಸಮಾಜದ ಮೇಲೆ ಪರಿಣಾಮ ಬೀರುತ್ತವೆ ಎಂದು ನ್ಯಾಯಾಲಯವು ಹೇಳಿದೆ.

ನ್ಯಾಯಾಲಯವು ದೀಪಕ್ ಅವರ ಕೋರಿಕೆಗಳನ್ನು ತಿರಸ್ಕರಿಸುವ ಒಲವು ಹೊಂದಿದ್ದರೂ, ಪ್ರಕರಣಕ್ಕೆ ಸಂಬಂಧಿಸಿದ ಕೆಲವು ಅಂಶಗಳನ್ನು ಪರಿಶೀಲಿಸಲು ವಕೀಲರು ಸಮಯಾವಕಾಶ ಕೋರಿದ ನಂತರ ವಿಚಾರಣೆಯನ್ನು ಶುಕ್ರವಾರಕ್ಕೆ (ಮಾ.20) ಮುಂದೂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...