Homeಮುಖಪುಟ'ಈ ವ್ಯವಸ್ಥೆಯಿಂದ ನೀವು ನಲುಗಿ ಹೋಗಿದ್ದೀರಿ' : ದಲಿತ ವಿದ್ಯಾರ್ಥಿಗಳೊಂದಿಗೆ ರಾಹುಲ್ ಗಾಂಧಿ ಸಂವಾದ

‘ಈ ವ್ಯವಸ್ಥೆಯಿಂದ ನೀವು ನಲುಗಿ ಹೋಗಿದ್ದೀರಿ’ : ದಲಿತ ವಿದ್ಯಾರ್ಥಿಗಳೊಂದಿಗೆ ರಾಹುಲ್ ಗಾಂಧಿ ಸಂವಾದ

- Advertisement -
- Advertisement -

ಸಂವಿಧಾನವನ್ನು ರೂಪಿಸುವಲ್ಲಿ ದಲಿತರ ಪಾತ್ರವನ್ನು ಶ್ಲಾಘಿಸಿದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಸಂವಿಧಾನ ದಲಿತರ ಸಿದ್ಧಾಂತವನ್ನು ಪ್ರತಿಬಿಂಬಿಸುತ್ತದೆಯಾದರೂ, ದಲಿತರು ವ್ಯವಸ್ಥಿತ ದಬ್ಬಾಳಿಕೆಯನ್ನು ಎದುರಿಸುತ್ತಿದ್ದಾರೆ ಹೇಳಿದ್ದಾರೆ.

ಉತ್ತರ ಪ್ರದೇಶದ ರಾಯ್ ಬರೇಲಿಯ ಬರ್ಗಡ್ ಚೌರಾಹಾ ಬಳಿಯ ‘ಮೂಲ್ ಭಾರತಿ’ ಹಾಸ್ಟೆಲ್‌ನಲ್ಲಿ ಅಮೇಥಿಯ ಕಾಂಗ್ರೆಸ್‌ ಸಂಸದ ಕಿಶೋರಿ ಲಾಲ್ ಶರ್ಮಾ ಮತ್ತು ಪಕ್ಷದ ಇತರ ಹಿರಿಯ ಜೊತೆ ದಲಿತ ವಿದ್ಯಾರ್ಥಿಗಳೊಂದಿಗೆ ರಾಹುಲ್ ಗಾಂಧಿ ಗುರುವಾರ (ಫೆ.20) ಸಂವಾದ ನಡೆಸಿದ್ದಾರೆ.

‘ಬಿಗ್ 500’ನ ಕೆಲವು ಉನ್ನತ ಖಾಸಗಿ ಕಂಪನಿಗಳ ಹೆಸರುಗಳನ್ನು ಹೇಳಿದ ರಾಹುಲ್ ಗಾಂಧಿ, “ಇವುಗಳಲ್ಲಿ ಎಷ್ಟು ಕಂಪನಿಗಳ ನೇತೃತ್ವವನ್ನು ದಲಿತ ಯುವಕರು ವಹಿಸಿದ್ದಾರೆ?” ಎಂದು ಪ್ರಶ್ನಿಸಿದ್ದಾರೆ.

ಒಬ್ಬ ಯುವಕ “ಯಾರೂ ಇಲ್ಲ” ಎಂದು ಉತ್ತರಿಸಿದಾಗ, ರಾಹುಲ್ ಗಾಂಧಿ “ಯಾಕೆ ಇಲ್ಲ?” ಎಂದು ಮರು ಪ್ರಶ್ನೆ ಕೇಳಿದ್ದಾರೆ. ಇದಕ್ಕೆ ಉತ್ತರಿಸಿದ ಮತ್ತೊಬ್ಬ ಯುವಕ “ನಮ್ಮಲ್ಲಿ ಸಾಕಷ್ಟು ಸೌಲಭ್ಯಗಳಿಲ್ಲದ ಕಾರಣ” ಎಂದಿದ್ದಾರೆ.

ಯುವಕನ ಉತ್ತರಕ್ಕೆ ಅಸಮ್ಮತಿ ವ್ಯಕ್ತಪಡಿಸಿದ ರಾಹುಲ್ ಗಾಂಧಿ, “ಡಾ.ಬಿಆರ್ ಅಂಬೇಡ್ಕರ್ ಅವರು ಯಾವುದೇ ಸೌಲಭ್ಯ ಇಲ್ಲದಿದ್ದರೂ, ತನ್ನ ಪ್ರಯತ್ನದಿಂದ ಒಬ್ಬಂಟಿಯಾಗಿ ದೇಶದ ರಾಜಕೀಯವನ್ನು ಅಲುಗಾಡಿಸಿದರು” ಎಂದಿದ್ದಾರೆ.

“ನಿಮಗೆ ವಿರುದ್ಧವಾಗಿರುವ ಮತ್ತು ನೀವು ಪ್ರಗತಿ ಹೊಂದುವುದನ್ನು ಬಯಸದ ಒಂದು ಇಡೀ ವ್ಯವಸ್ಥೆಯೇ ಇದೆ. ಈ ವ್ಯವಸ್ಥೆಯು ಪ್ರತಿದಿನ ನಿಮ್ಮ ಮೇಲೆ ದಾಳಿ ಮಾಡುತ್ತದೆ. ಅದು ನಿಮ್ಮ ಮೇಲೆ ಹೇಗೆ ದಾಳಿ ಮಾಡುತ್ತದೆ ಎಂದು ನಿಮಗೆ ತಿಳಿದಿರುವುದಿಲ್ಲ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಮುಂದುವರಿದು, “ಸಂವಿಧಾನದ ಸಿದ್ಧಾಂತವೇ ನಿಮ್ಮ ಸಿದ್ಧಾಂತ ಎಂದು ನೀವು ಅರ್ಥಮಾಡಿಕೊಳ್ಳಬೇಕು. ಈ ದೇಶದಲ್ಲಿ ದಲಿತರು ಇಲ್ಲದಿದ್ದರೆ, ದೇಶಕ್ಕೆ ತನ್ನದೇ ಆದ ಸಂವಿಧಾನ ಸಿಗುತ್ತಿರಲಿಲ್ಲ ಎಂದು ನಾನು ನಿಮಗೆ ಖಚಿತವಾಗಿ ಹೇಳಬಲ್ಲೆ. ಸಂವಿಧಾನವೇ ನಿಮ್ಮ ಸಿದ್ಧಾಂತ. ಆದರೂ, ನೀವು ಈಗ ಎಲ್ಲಿಗೆ ಹೋದರೂ, ವ್ಯವಸ್ಥೆಯಿಂದ ನಲುಗಿ ಹೋಗುತ್ತೀರಿ” ಎಂದಿದ್ದಾರೆ.

ರಾಹುಲ್ ಗಾಂಧಿ ಗುರುವಾರ (ಫೆ.20) ತಮ್ಮ ಸಂಸದೀಯ ಕ್ಷೇತ್ರದಲ್ಲಿ ಎರಡು ದಿನಗಳ ಪ್ರವಾಸವನ್ನು ಪ್ರಾರಂಭಿಸಿದ್ದಾರೆ. ಈ ವೇಳೆ ಅವರು ರಾಯ್ ಬರೇಲಿಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಮತ್ತು ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡಲಿದ್ದಾರೆ. ಕಾರ್ಮಿಕರೊಂದಿಗೂ ಅವರು ಸಂವಾದ ನಡೆಸಲಿದ್ದಾರೆ. ಮಹಿಳಾ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ರಣಬೇನಿ ಮಾಧವ್ ಸಿಂಗ್ ಸ್ಮಾರಕ ಇಂಟರ್ ಕಾಲೇಜಿನಲ್ಲಿ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ ಮತ್ತು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಉಂಚಹಾರ್ ಮತ್ತು ಸದರ್ ಕ್ಷೇತ್ರಗಳಿಗೆ ಅನಿರೀಕ್ಷಿತ ಭೇಟಿ ನೀಡಲಿದ್ದಾರೆ. ನಂತರ ಪಕ್ಷದ ನಾಯಕರೊಂದಿಗೆ ಸಭೆ ನಡೆಸಲಿದ್ದಾರೆ.

ಕೇಂದ್ರದ ಬಿಜೆಪಿ ಸರ್ಕಾರ ಬಂಡವಾಳಶಾಹಿಗಳನ್ನು ಉತ್ತೇಜಿಸುತ್ತಿದೆ – ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...