Homeಮುಖಪುಟನಿಮ್ಮಂಥವರಿಂದ ಕಾಂಗ್ರೆಸ್ ದುಸ್ಥಿತಿಗಿಳಿದಿದೆ: ಪಿ.ಚಿದಂಬರಂ ವಿರುದ್ಧ ಕಾಂಗ್ರೆಸ್‌ ವಕೀಲರ ಆಕ್ರೋಶ

ನಿಮ್ಮಂಥವರಿಂದ ಕಾಂಗ್ರೆಸ್ ದುಸ್ಥಿತಿಗಿಳಿದಿದೆ: ಪಿ.ಚಿದಂಬರಂ ವಿರುದ್ಧ ಕಾಂಗ್ರೆಸ್‌ ವಕೀಲರ ಆಕ್ರೋಶ

ಪಶ್ಚಿಮ ಬಂಗಾಳದ ಕಾಂಗ್ರೆಸ್‌ ಅಧ್ಯಕ್ಷರು ಕಂಪನಿಯೊಂದರ ವಿರುದ್ಧ ಕಾನೂನು ಸಮರ ನಡೆಸುತ್ತಿದ್ದಾರೆ. ಕಾಂಗ್ರೆಸ್‌ ನಾಯಕ ಚಿದಂಬರಂ ಕಂಪನಿಯ ಪರವಾಗಿ ವಕೀಲರಾಗಿ ಹಾಜರಾಗಿದ್ದಾರೆ!

- Advertisement -
- Advertisement -

ಕಾಂಗ್ರೆಸ್ ನಾಯಕ, ರಾಜ್ಯ ಸಭಾ ಸದಸ್ಯ ಪಿ.ಚಿದಂಬರಂ ಅವರು ಪ್ರಕರಣವೊಂದರಲ್ಲಿ ವಕೀಲರಾಗಿ ಬುಧವಾರ ಕಲ್ಕತ್ತಾ ಹೈಕೋರ್ಟ್‌ಗೆ ಭೇಟಿ ನೀಡಿದಾಗ ಪಕ್ಷದ ಕಾರ್ಯಕರ್ತರು ಹಾಗೂ ವಕೀಲರು ಪ್ರತಿಭಟನೆ ಚಿದಂಬರಂ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

ನ್ಯಾಯಾಲಯದಿಂದ ಹೊರಬರಲು ಹೊರಟಿದ್ದ ಚಿದಂಬರಂ ಅವರಿಗೆ ಕಾಂಗ್ರೆಸ್ ಕಾನೂನು ಘಟಕಕ್ಕೆ ಸೇರಿದ್ದ ವಕೀಲರ ಗುಂಪು ಕಪ್ಪು ವಸ್ತ್ರ ಮತ್ತು ಧ್ವಜಗಳನ್ನು ತೋರಿಸಿ ಪ್ರತಿಭಟನೆ ನಡೆಸಿದೆ. “ನೀವು ಮಮತಾ ಬ್ಯಾನರ್ಜಿ ಅವರ ಪರ ಸಹಾನುಭೂತಿ ಹೊಂದಿದ್ದೀರಿ. ಅವರ ಏಜೆಂಟ್ ಆಗಿದ್ದೀರಿ. ನಿಮ್ಮಂಥವರ ನಾಯಕತ್ವದಿಂದಾಗಿ ಕಾಂಗ್ರೆಸ್ ಈ ದುಸ್ಥಿತಿಗೆ ಇಳಿದಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೃಷಿ ಸಂಸ್ಕರಣಾ ಸಂಸ್ಥೆ ಕೆವೆಂಟರ್‌ನ ವಕೀಲರಾಗಿ ಚಿದಂಬರಂ ಪ್ರತಿನಿಧಿಸುತ್ತಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಪಶ್ಚಿಮ ಬಂಗಾಳದ ಕಾಂಗ್ರೆಸ್ ಮುಖ್ಯಸ್ಥ ಅಧೀರ್ ಚೌಧರಿ ಅವರು ಕಂಪನಿಯ ವಿರುದ್ಧ ಪ್ರಕರಣ ದಾಖಲಿಸಿದ್ದು, ಹೀಗಿರುವ ಕಾಂಗ್ರೆಸ್ ನಾಯಕ ಚಿದಂಬರಂ ಆ ಕಂಪನಿಯನ್ನು ಹೇಗೆ ಪ್ರತಿನಿಧಿಸುತ್ತಾರೆ ಎಂದು ಪ್ರತಿಭಟನಾನಿರತ ವಕೀಲರು ಪ್ರಶ್ನಿಸಿದ್ದಾರೆ. ಮೆಟ್ರೋ ಡೈರಿಯ ಷೇರುಗಳನ್ನು ಖಾಸಗಿ ಕಂಪನಿಗೆ ಮಾರಾಟ ಮಾಡುವ ಟಿಎಂಸಿ ಸರ್ಕಾರದ ನಿರ್ಧಾರವನ್ನು ಚೌಧರಿ ಪ್ರಶ್ನಿಸಿದ್ದಾರೆ.

ಪ್ರತಿಭಟನಾಕಾರರಲ್ಲಿ ಒಬ್ಬರಾದ ವಕೀಲ ಕೌಸ್ತವ್ ಬಾಗ್ಚಿ, “ಕಾಂಗ್ರೆಸ್‌ನ ರಾಜ್ಯ ಘಟಕದ ಅಧ್ಯಕ್ಷರು ಯಾವ ಶೇರುಗಳ ಖರೀದಿಯನ್ನು ಆಕ್ಷೇಪಿಸುತ್ತಿದ್ದಾರೋ ಅದರ ವಿರುದ್ಧ ಚಿದಂಬರಂ ಹಾಜರಾಗಿದ್ದಾರೆ” ಎಂದು ಟೀಕಿಸಿದ್ದಾರೆ. ಚಿದಂಬರಂ ಅವರು ಸಿಡಬ್ಲ್ಯೂಸಿ (ಕಾಂಗ್ರೆಸ್ ಕಾರ್ಯಕಾರಿ ಸಮಿತಿ) ಸದಸ್ಯರಾಗಿದ್ದಾರೆ ಹಾಗೂ ಪ್ರಮುಖ ನಾಯಕರಾಗಿದ್ದಾರೆ ಎಂದು ಬಾಗ್ಚಿ ಉಲ್ಲೇಖಿಸಿದ್ದಾರೆ.

“ಕಾಂಗ್ರೆಸ್ ಕಾರ್ಯಕರ್ತರಾಗಿ ಪ್ರತಿಭಟನೆಯನ್ನು ನಡೆಸಿದ್ದೇನೆ. ವಕೀಲರಾಗಿ ಅಲ್ಲ. ಪಶ್ಚಿಮ ಬಂಗಾಳದಲ್ಲಿ ಪಕ್ಷದ ಹಿತಾಸಕ್ತಿಯ ವಿರುದ್ಧ ನಡೆದುಕೊಳ್ಳುವ ಯಾವುದೇ ನಾಯಕನ ವಿರುದ್ಧ ಪಕ್ಷದ ಕಾರ್ಯಕರ್ತರು ಇದೇ ರೀತಿಯ ಪ್ರತಿಭಟನೆಗಳನ್ನು ನಡೆಸುತ್ತಾರೆ” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿರಿ: ಸರ್ಕಾರದ 40% ಕಮಿಷನ್ ಭ್ರಷ್ಟಾಚಾರಕ್ಕೆ ಅಮಿತ್ ಶಾ ಅಧಿಕೃತ ಒಪ್ಪಿಗೆ: ಸಿದ್ದರಾಮಯ್ಯ ಟೀಕೆ

ಘಟನೆಯ ಕುರಿತು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಚೌದರಿ ಮಾತನಾಡಿದ್ದು, “ಕಾಂಗ್ರೆಸ್ ಬೆಂಬಲಿಗರಿಂದ ಪ್ರತಿಭಟನೆಗಳು ಸ್ವಾಭಾವಿಕವಾಗಿ ನಡೆಯುತ್ತವೆ. ಪ್ರತಿಭಟನೆಗಳು ಕಾಂಗ್ರೆಸ್‌ನ ಸ್ವಭಾವ” ಎಂದಿದ್ದಾರೆ.

“ಕಲ್ಕತ್ತಾ ಹೈಕೋರ್ಟ್‌ನಲ್ಲಿ ಹಾಜರಿದ್ದ ಕೆಲವು ಕಾಂಗ್ರೆಸ್ ಬೆಂಬಲಿಗರು ಪ್ರತಿಭಟಿಸಿದ್ದಾರೆ ಎಂದು ನಾನು ಕೇಳಿದ್ದೇನೆ. ಇದು ಅವರ ಸಹಜ ಪ್ರತಿಕ್ರಿಯೆ ಎಂದು ನಾನು ನಂಬುತ್ತೇನೆ” ಎಂದು ಚೌಧರಿ ತಿಳಿಸಿದ್ದಾರೆ.

ಚಿದಂಬರಂ ಅವರು ಪ್ರಕರಣದಲ್ಲಿ ವಕೀಲರಾಗಿ ಕಾಣಿಸಿಕೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಚೌಧ, “ವೃತ್ತಿಪರ ಜಗತ್ತಿನಲ್ಲಿ ತಮ್ಮ ಆಯ್ಕೆಗಳನ್ನು ಆಯ್ಕೆ ಮಾಡುವ ಹಕ್ಕನ್ನು ಅವರು ಹೊಂದಿದ್ದಾರೆ” ಎಂದು ಸ್ಪಷ್ಟಪಡಿಸಿದ್ದಾರೆ.

“ಇದು ವೃತ್ತಿಪರ ಜಗತ್ತು. ಇದು ವ್ಯಕ್ತಿಯ ಮೇಲೆ ಅವಲಂಬಿತವಾಗಿರುತ್ತದೆ … ಯಾರು ಯಾರಿಗೂ ನಿರ್ದೇಶಿಸಲು ಸಾಧ್ಯವಿಲ್ಲ” ಎಂದು ಚೌದರಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...