Homeಮುಖಪುಟನಿಮ್ಮಂಥವರಿಂದ ಕಾಂಗ್ರೆಸ್ ದುಸ್ಥಿತಿಗಿಳಿದಿದೆ: ಪಿ.ಚಿದಂಬರಂ ವಿರುದ್ಧ ಕಾಂಗ್ರೆಸ್‌ ವಕೀಲರ ಆಕ್ರೋಶ

ನಿಮ್ಮಂಥವರಿಂದ ಕಾಂಗ್ರೆಸ್ ದುಸ್ಥಿತಿಗಿಳಿದಿದೆ: ಪಿ.ಚಿದಂಬರಂ ವಿರುದ್ಧ ಕಾಂಗ್ರೆಸ್‌ ವಕೀಲರ ಆಕ್ರೋಶ

ಪಶ್ಚಿಮ ಬಂಗಾಳದ ಕಾಂಗ್ರೆಸ್‌ ಅಧ್ಯಕ್ಷರು ಕಂಪನಿಯೊಂದರ ವಿರುದ್ಧ ಕಾನೂನು ಸಮರ ನಡೆಸುತ್ತಿದ್ದಾರೆ. ಕಾಂಗ್ರೆಸ್‌ ನಾಯಕ ಚಿದಂಬರಂ ಕಂಪನಿಯ ಪರವಾಗಿ ವಕೀಲರಾಗಿ ಹಾಜರಾಗಿದ್ದಾರೆ!

- Advertisement -
- Advertisement -

ಕಾಂಗ್ರೆಸ್ ನಾಯಕ, ರಾಜ್ಯ ಸಭಾ ಸದಸ್ಯ ಪಿ.ಚಿದಂಬರಂ ಅವರು ಪ್ರಕರಣವೊಂದರಲ್ಲಿ ವಕೀಲರಾಗಿ ಬುಧವಾರ ಕಲ್ಕತ್ತಾ ಹೈಕೋರ್ಟ್‌ಗೆ ಭೇಟಿ ನೀಡಿದಾಗ ಪಕ್ಷದ ಕಾರ್ಯಕರ್ತರು ಹಾಗೂ ವಕೀಲರು ಪ್ರತಿಭಟನೆ ಚಿದಂಬರಂ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

ನ್ಯಾಯಾಲಯದಿಂದ ಹೊರಬರಲು ಹೊರಟಿದ್ದ ಚಿದಂಬರಂ ಅವರಿಗೆ ಕಾಂಗ್ರೆಸ್ ಕಾನೂನು ಘಟಕಕ್ಕೆ ಸೇರಿದ್ದ ವಕೀಲರ ಗುಂಪು ಕಪ್ಪು ವಸ್ತ್ರ ಮತ್ತು ಧ್ವಜಗಳನ್ನು ತೋರಿಸಿ ಪ್ರತಿಭಟನೆ ನಡೆಸಿದೆ. “ನೀವು ಮಮತಾ ಬ್ಯಾನರ್ಜಿ ಅವರ ಪರ ಸಹಾನುಭೂತಿ ಹೊಂದಿದ್ದೀರಿ. ಅವರ ಏಜೆಂಟ್ ಆಗಿದ್ದೀರಿ. ನಿಮ್ಮಂಥವರ ನಾಯಕತ್ವದಿಂದಾಗಿ ಕಾಂಗ್ರೆಸ್ ಈ ದುಸ್ಥಿತಿಗೆ ಇಳಿದಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೃಷಿ ಸಂಸ್ಕರಣಾ ಸಂಸ್ಥೆ ಕೆವೆಂಟರ್‌ನ ವಕೀಲರಾಗಿ ಚಿದಂಬರಂ ಪ್ರತಿನಿಧಿಸುತ್ತಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಪಶ್ಚಿಮ ಬಂಗಾಳದ ಕಾಂಗ್ರೆಸ್ ಮುಖ್ಯಸ್ಥ ಅಧೀರ್ ಚೌಧರಿ ಅವರು ಕಂಪನಿಯ ವಿರುದ್ಧ ಪ್ರಕರಣ ದಾಖಲಿಸಿದ್ದು, ಹೀಗಿರುವ ಕಾಂಗ್ರೆಸ್ ನಾಯಕ ಚಿದಂಬರಂ ಆ ಕಂಪನಿಯನ್ನು ಹೇಗೆ ಪ್ರತಿನಿಧಿಸುತ್ತಾರೆ ಎಂದು ಪ್ರತಿಭಟನಾನಿರತ ವಕೀಲರು ಪ್ರಶ್ನಿಸಿದ್ದಾರೆ. ಮೆಟ್ರೋ ಡೈರಿಯ ಷೇರುಗಳನ್ನು ಖಾಸಗಿ ಕಂಪನಿಗೆ ಮಾರಾಟ ಮಾಡುವ ಟಿಎಂಸಿ ಸರ್ಕಾರದ ನಿರ್ಧಾರವನ್ನು ಚೌಧರಿ ಪ್ರಶ್ನಿಸಿದ್ದಾರೆ.

ಪ್ರತಿಭಟನಾಕಾರರಲ್ಲಿ ಒಬ್ಬರಾದ ವಕೀಲ ಕೌಸ್ತವ್ ಬಾಗ್ಚಿ, “ಕಾಂಗ್ರೆಸ್‌ನ ರಾಜ್ಯ ಘಟಕದ ಅಧ್ಯಕ್ಷರು ಯಾವ ಶೇರುಗಳ ಖರೀದಿಯನ್ನು ಆಕ್ಷೇಪಿಸುತ್ತಿದ್ದಾರೋ ಅದರ ವಿರುದ್ಧ ಚಿದಂಬರಂ ಹಾಜರಾಗಿದ್ದಾರೆ” ಎಂದು ಟೀಕಿಸಿದ್ದಾರೆ. ಚಿದಂಬರಂ ಅವರು ಸಿಡಬ್ಲ್ಯೂಸಿ (ಕಾಂಗ್ರೆಸ್ ಕಾರ್ಯಕಾರಿ ಸಮಿತಿ) ಸದಸ್ಯರಾಗಿದ್ದಾರೆ ಹಾಗೂ ಪ್ರಮುಖ ನಾಯಕರಾಗಿದ್ದಾರೆ ಎಂದು ಬಾಗ್ಚಿ ಉಲ್ಲೇಖಿಸಿದ್ದಾರೆ.

“ಕಾಂಗ್ರೆಸ್ ಕಾರ್ಯಕರ್ತರಾಗಿ ಪ್ರತಿಭಟನೆಯನ್ನು ನಡೆಸಿದ್ದೇನೆ. ವಕೀಲರಾಗಿ ಅಲ್ಲ. ಪಶ್ಚಿಮ ಬಂಗಾಳದಲ್ಲಿ ಪಕ್ಷದ ಹಿತಾಸಕ್ತಿಯ ವಿರುದ್ಧ ನಡೆದುಕೊಳ್ಳುವ ಯಾವುದೇ ನಾಯಕನ ವಿರುದ್ಧ ಪಕ್ಷದ ಕಾರ್ಯಕರ್ತರು ಇದೇ ರೀತಿಯ ಪ್ರತಿಭಟನೆಗಳನ್ನು ನಡೆಸುತ್ತಾರೆ” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿರಿ: ಸರ್ಕಾರದ 40% ಕಮಿಷನ್ ಭ್ರಷ್ಟಾಚಾರಕ್ಕೆ ಅಮಿತ್ ಶಾ ಅಧಿಕೃತ ಒಪ್ಪಿಗೆ: ಸಿದ್ದರಾಮಯ್ಯ ಟೀಕೆ

ಘಟನೆಯ ಕುರಿತು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಚೌದರಿ ಮಾತನಾಡಿದ್ದು, “ಕಾಂಗ್ರೆಸ್ ಬೆಂಬಲಿಗರಿಂದ ಪ್ರತಿಭಟನೆಗಳು ಸ್ವಾಭಾವಿಕವಾಗಿ ನಡೆಯುತ್ತವೆ. ಪ್ರತಿಭಟನೆಗಳು ಕಾಂಗ್ರೆಸ್‌ನ ಸ್ವಭಾವ” ಎಂದಿದ್ದಾರೆ.

“ಕಲ್ಕತ್ತಾ ಹೈಕೋರ್ಟ್‌ನಲ್ಲಿ ಹಾಜರಿದ್ದ ಕೆಲವು ಕಾಂಗ್ರೆಸ್ ಬೆಂಬಲಿಗರು ಪ್ರತಿಭಟಿಸಿದ್ದಾರೆ ಎಂದು ನಾನು ಕೇಳಿದ್ದೇನೆ. ಇದು ಅವರ ಸಹಜ ಪ್ರತಿಕ್ರಿಯೆ ಎಂದು ನಾನು ನಂಬುತ್ತೇನೆ” ಎಂದು ಚೌಧರಿ ತಿಳಿಸಿದ್ದಾರೆ.

ಚಿದಂಬರಂ ಅವರು ಪ್ರಕರಣದಲ್ಲಿ ವಕೀಲರಾಗಿ ಕಾಣಿಸಿಕೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಚೌಧ, “ವೃತ್ತಿಪರ ಜಗತ್ತಿನಲ್ಲಿ ತಮ್ಮ ಆಯ್ಕೆಗಳನ್ನು ಆಯ್ಕೆ ಮಾಡುವ ಹಕ್ಕನ್ನು ಅವರು ಹೊಂದಿದ್ದಾರೆ” ಎಂದು ಸ್ಪಷ್ಟಪಡಿಸಿದ್ದಾರೆ.

“ಇದು ವೃತ್ತಿಪರ ಜಗತ್ತು. ಇದು ವ್ಯಕ್ತಿಯ ಮೇಲೆ ಅವಲಂಬಿತವಾಗಿರುತ್ತದೆ … ಯಾರು ಯಾರಿಗೂ ನಿರ್ದೇಶಿಸಲು ಸಾಧ್ಯವಿಲ್ಲ” ಎಂದು ಚೌದರಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...