Homeಮುಖಪುಟನಿಮ್ಮಂಥವರಿಂದ ಕಾಂಗ್ರೆಸ್ ದುಸ್ಥಿತಿಗಿಳಿದಿದೆ: ಪಿ.ಚಿದಂಬರಂ ವಿರುದ್ಧ ಕಾಂಗ್ರೆಸ್‌ ವಕೀಲರ ಆಕ್ರೋಶ

ನಿಮ್ಮಂಥವರಿಂದ ಕಾಂಗ್ರೆಸ್ ದುಸ್ಥಿತಿಗಿಳಿದಿದೆ: ಪಿ.ಚಿದಂಬರಂ ವಿರುದ್ಧ ಕಾಂಗ್ರೆಸ್‌ ವಕೀಲರ ಆಕ್ರೋಶ

ಪಶ್ಚಿಮ ಬಂಗಾಳದ ಕಾಂಗ್ರೆಸ್‌ ಅಧ್ಯಕ್ಷರು ಕಂಪನಿಯೊಂದರ ವಿರುದ್ಧ ಕಾನೂನು ಸಮರ ನಡೆಸುತ್ತಿದ್ದಾರೆ. ಕಾಂಗ್ರೆಸ್‌ ನಾಯಕ ಚಿದಂಬರಂ ಕಂಪನಿಯ ಪರವಾಗಿ ವಕೀಲರಾಗಿ ಹಾಜರಾಗಿದ್ದಾರೆ!

- Advertisement -
- Advertisement -

ಕಾಂಗ್ರೆಸ್ ನಾಯಕ, ರಾಜ್ಯ ಸಭಾ ಸದಸ್ಯ ಪಿ.ಚಿದಂಬರಂ ಅವರು ಪ್ರಕರಣವೊಂದರಲ್ಲಿ ವಕೀಲರಾಗಿ ಬುಧವಾರ ಕಲ್ಕತ್ತಾ ಹೈಕೋರ್ಟ್‌ಗೆ ಭೇಟಿ ನೀಡಿದಾಗ ಪಕ್ಷದ ಕಾರ್ಯಕರ್ತರು ಹಾಗೂ ವಕೀಲರು ಪ್ರತಿಭಟನೆ ಚಿದಂಬರಂ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

ನ್ಯಾಯಾಲಯದಿಂದ ಹೊರಬರಲು ಹೊರಟಿದ್ದ ಚಿದಂಬರಂ ಅವರಿಗೆ ಕಾಂಗ್ರೆಸ್ ಕಾನೂನು ಘಟಕಕ್ಕೆ ಸೇರಿದ್ದ ವಕೀಲರ ಗುಂಪು ಕಪ್ಪು ವಸ್ತ್ರ ಮತ್ತು ಧ್ವಜಗಳನ್ನು ತೋರಿಸಿ ಪ್ರತಿಭಟನೆ ನಡೆಸಿದೆ. “ನೀವು ಮಮತಾ ಬ್ಯಾನರ್ಜಿ ಅವರ ಪರ ಸಹಾನುಭೂತಿ ಹೊಂದಿದ್ದೀರಿ. ಅವರ ಏಜೆಂಟ್ ಆಗಿದ್ದೀರಿ. ನಿಮ್ಮಂಥವರ ನಾಯಕತ್ವದಿಂದಾಗಿ ಕಾಂಗ್ರೆಸ್ ಈ ದುಸ್ಥಿತಿಗೆ ಇಳಿದಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೃಷಿ ಸಂಸ್ಕರಣಾ ಸಂಸ್ಥೆ ಕೆವೆಂಟರ್‌ನ ವಕೀಲರಾಗಿ ಚಿದಂಬರಂ ಪ್ರತಿನಿಧಿಸುತ್ತಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಪಶ್ಚಿಮ ಬಂಗಾಳದ ಕಾಂಗ್ರೆಸ್ ಮುಖ್ಯಸ್ಥ ಅಧೀರ್ ಚೌಧರಿ ಅವರು ಕಂಪನಿಯ ವಿರುದ್ಧ ಪ್ರಕರಣ ದಾಖಲಿಸಿದ್ದು, ಹೀಗಿರುವ ಕಾಂಗ್ರೆಸ್ ನಾಯಕ ಚಿದಂಬರಂ ಆ ಕಂಪನಿಯನ್ನು ಹೇಗೆ ಪ್ರತಿನಿಧಿಸುತ್ತಾರೆ ಎಂದು ಪ್ರತಿಭಟನಾನಿರತ ವಕೀಲರು ಪ್ರಶ್ನಿಸಿದ್ದಾರೆ. ಮೆಟ್ರೋ ಡೈರಿಯ ಷೇರುಗಳನ್ನು ಖಾಸಗಿ ಕಂಪನಿಗೆ ಮಾರಾಟ ಮಾಡುವ ಟಿಎಂಸಿ ಸರ್ಕಾರದ ನಿರ್ಧಾರವನ್ನು ಚೌಧರಿ ಪ್ರಶ್ನಿಸಿದ್ದಾರೆ.

ಪ್ರತಿಭಟನಾಕಾರರಲ್ಲಿ ಒಬ್ಬರಾದ ವಕೀಲ ಕೌಸ್ತವ್ ಬಾಗ್ಚಿ, “ಕಾಂಗ್ರೆಸ್‌ನ ರಾಜ್ಯ ಘಟಕದ ಅಧ್ಯಕ್ಷರು ಯಾವ ಶೇರುಗಳ ಖರೀದಿಯನ್ನು ಆಕ್ಷೇಪಿಸುತ್ತಿದ್ದಾರೋ ಅದರ ವಿರುದ್ಧ ಚಿದಂಬರಂ ಹಾಜರಾಗಿದ್ದಾರೆ” ಎಂದು ಟೀಕಿಸಿದ್ದಾರೆ. ಚಿದಂಬರಂ ಅವರು ಸಿಡಬ್ಲ್ಯೂಸಿ (ಕಾಂಗ್ರೆಸ್ ಕಾರ್ಯಕಾರಿ ಸಮಿತಿ) ಸದಸ್ಯರಾಗಿದ್ದಾರೆ ಹಾಗೂ ಪ್ರಮುಖ ನಾಯಕರಾಗಿದ್ದಾರೆ ಎಂದು ಬಾಗ್ಚಿ ಉಲ್ಲೇಖಿಸಿದ್ದಾರೆ.

“ಕಾಂಗ್ರೆಸ್ ಕಾರ್ಯಕರ್ತರಾಗಿ ಪ್ರತಿಭಟನೆಯನ್ನು ನಡೆಸಿದ್ದೇನೆ. ವಕೀಲರಾಗಿ ಅಲ್ಲ. ಪಶ್ಚಿಮ ಬಂಗಾಳದಲ್ಲಿ ಪಕ್ಷದ ಹಿತಾಸಕ್ತಿಯ ವಿರುದ್ಧ ನಡೆದುಕೊಳ್ಳುವ ಯಾವುದೇ ನಾಯಕನ ವಿರುದ್ಧ ಪಕ್ಷದ ಕಾರ್ಯಕರ್ತರು ಇದೇ ರೀತಿಯ ಪ್ರತಿಭಟನೆಗಳನ್ನು ನಡೆಸುತ್ತಾರೆ” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿರಿ: ಸರ್ಕಾರದ 40% ಕಮಿಷನ್ ಭ್ರಷ್ಟಾಚಾರಕ್ಕೆ ಅಮಿತ್ ಶಾ ಅಧಿಕೃತ ಒಪ್ಪಿಗೆ: ಸಿದ್ದರಾಮಯ್ಯ ಟೀಕೆ

ಘಟನೆಯ ಕುರಿತು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಚೌದರಿ ಮಾತನಾಡಿದ್ದು, “ಕಾಂಗ್ರೆಸ್ ಬೆಂಬಲಿಗರಿಂದ ಪ್ರತಿಭಟನೆಗಳು ಸ್ವಾಭಾವಿಕವಾಗಿ ನಡೆಯುತ್ತವೆ. ಪ್ರತಿಭಟನೆಗಳು ಕಾಂಗ್ರೆಸ್‌ನ ಸ್ವಭಾವ” ಎಂದಿದ್ದಾರೆ.

“ಕಲ್ಕತ್ತಾ ಹೈಕೋರ್ಟ್‌ನಲ್ಲಿ ಹಾಜರಿದ್ದ ಕೆಲವು ಕಾಂಗ್ರೆಸ್ ಬೆಂಬಲಿಗರು ಪ್ರತಿಭಟಿಸಿದ್ದಾರೆ ಎಂದು ನಾನು ಕೇಳಿದ್ದೇನೆ. ಇದು ಅವರ ಸಹಜ ಪ್ರತಿಕ್ರಿಯೆ ಎಂದು ನಾನು ನಂಬುತ್ತೇನೆ” ಎಂದು ಚೌಧರಿ ತಿಳಿಸಿದ್ದಾರೆ.

ಚಿದಂಬರಂ ಅವರು ಪ್ರಕರಣದಲ್ಲಿ ವಕೀಲರಾಗಿ ಕಾಣಿಸಿಕೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಚೌಧ, “ವೃತ್ತಿಪರ ಜಗತ್ತಿನಲ್ಲಿ ತಮ್ಮ ಆಯ್ಕೆಗಳನ್ನು ಆಯ್ಕೆ ಮಾಡುವ ಹಕ್ಕನ್ನು ಅವರು ಹೊಂದಿದ್ದಾರೆ” ಎಂದು ಸ್ಪಷ್ಟಪಡಿಸಿದ್ದಾರೆ.

“ಇದು ವೃತ್ತಿಪರ ಜಗತ್ತು. ಇದು ವ್ಯಕ್ತಿಯ ಮೇಲೆ ಅವಲಂಬಿತವಾಗಿರುತ್ತದೆ … ಯಾರು ಯಾರಿಗೂ ನಿರ್ದೇಶಿಸಲು ಸಾಧ್ಯವಿಲ್ಲ” ಎಂದು ಚೌದರಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...