Homeಮುಖಪುಟನೀವು ಕಾನೂನಿಗಿಂತ ಮೇಲಲ್ಲ: ಜಾರಿ ನಿರ್ದೇಶನಾಲಯಕ್ಕೆ ತರಾಟೆಗೆ ತೆಗೆದುಕೊಂಡ ದೆಹಲಿ ಹೈಕೋರ್ಟ್‌

ನೀವು ಕಾನೂನಿಗಿಂತ ಮೇಲಲ್ಲ: ಜಾರಿ ನಿರ್ದೇಶನಾಲಯಕ್ಕೆ ತರಾಟೆಗೆ ತೆಗೆದುಕೊಂಡ ದೆಹಲಿ ಹೈಕೋರ್ಟ್‌

- Advertisement -
- Advertisement -

ಜಾರಿ ನಿರ್ದೇಶನಾಲಯವು (ಇಡಿ) ಕಾನೂನಿನ ಚೌಕಟ್ಟಿಗೆ ಒಳಪಟ್ಟಿದೆ ಮತ್ತು ಸಾಮಾನ್ಯ ನಾಗರಿಕರ ವಿರುದ್ಧ ಬಲಪ್ರದರ್ಶನ ಮಾಡುವಂತಿಲ್ಲ ಎಂದು ದೆಹಲಿ ಹೈಕೋರ್ಟ್‌ ಜಾರಿ ನಿರ್ದೇಶನಾಲಯಕ್ಕೆ ಹೇಳಿದ್ದು, ನೀವು ಕಾನೂನಿಗಿಂತ ಮೇಲಲ್ಲ ಎಂದು ಸ್ಪಷ್ಟವಾಗಿ ಹೇಳಿದೆ.

ಮಧ್ಯಂತರ ಜಾಮೀನು ವಿಸ್ತರಣೆಯನ್ನು ವಿರೋಧಿಸಲು ಜಾರಿ ನಿರ್ದೇಶನಾಲಯ 2002ರ ಮನಿ ಲಾಂಡರಿಂಗ್ ತಡೆ ಕಾಯ್ದೆಯ ಸೆಕ್ಷನ್ 50ರ ಅಡಿಯಲ್ಲಿ ಆರೋಪಿತ ವೈದ್ಯರ ವಿರುದ್ಧ ಪ್ರಕರಣ ದಾಖಲಿಸಲು ಮುಂದಾಗಿರುವುದನ್ನು ಕೋರ್ಟ್‌ ಗಮನಿಸಿದೆ. ಹಣ ದುರುಪಯೋಗದ ಆರೋಪಿ ಮತ್ತು ವೈದ್ಯರ ನಡುವೆ ನಂಟಿನ ಆರೋಪದ ಬಗ್ಗೆ ಪುರಾವೆ ಇಲ್ಲದೇ ಪ್ರಕರಣ ಮರು ದಾಖಲಿಸಿಕೊಳ್ಳಲು ಮುಂದಾಗಿರುವುದು ಸಮರ್ಥನೀಯವಲ್ಲ ಎಂದು ನ್ಯಾಯಾಲಯ ಹೇಳಿದೆ.

ರೌಸ್ ಅವೆನ್ಯೂ ನ್ಯಾಯಾಲಯಗಳ ವಿಶೇಷ ನ್ಯಾಯಾಧೀಶ (ಪಿಸಿ ಆಕ್ಟ್) ವಿಶಾಲ್ ಗೋಗ್ನೆ ಅವರು ಆರೋಪಿಗಳ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವೈದ್ಯರು ನಂಟು ಹೊಂದಿರುವ ಆರೋಪದ ಬಗ್ಗೆ ಯಾವುದೇ ಪುರಾವೆಯಿಲ್ಲದೆ ಸಾಮಾನ್ಯ ನಾಗರಿಕರನ್ನು (ವೈದ್ಯರನ್ನು) ಸೆಕ್ಷನ್ 50 PMLAಯ ಕಠಿಣ ಪ್ರಕ್ರಿಯೆಗೆ ಒಳಪಡಿಸಲು ಇಡಿಗೆ ಯಾವುದೇ ಸಮರ್ಥನೆ ಇಲ್ಲ ಎಂದು ಹೇಳಿದ್ದಾರೆ.

ಭಾರತದಂತಹ ಪ್ರಜಾಪ್ರಭುತ್ವ ದೇಶದಲ್ಲಿ, ಪ್ರಜೆಗಳು ಹಕ್ಕುಗಳನ್ನು ಹೊಂದಿದ್ದಾರೆ. ಸರ್ಕಾರಕ್ಕೆ ಕೆಲ ಕರ್ತವ್ಯಗಳಿವೆ ಮತ್ತು ಸರ್ಕಾರಕ್ಕೆ ಕೆಲ ಹಕ್ಕುಗಳಿವೆ ಎಂಬ ವಾದ ಮಂಡಿಸಿ ಈ ಮೂಲಭೂತ ಸಂಬಂಧದಲ್ಲಿ ಹಸ್ತಕ್ಷೇಪ ಮಾಡುವಂತಿಲ್ಲ, ಸರ್ವಾಧಿಕಾರಿ ವಾದವನ್ನು ಪ್ರಚೋದಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ. ಅಂತಹ ವಾದವನ್ನು ಒಪ್ಪಿಕೊಳ್ಳುವುದು ಸಾಂವಿಧಾನಿಕ ಯೋಜನೆ ಮತ್ತು ಸಾಂವಿಧಾನದ ನೈತಿಕತೆಯ ಉಲ್ಲಂಘನೆಯಾಗಿದೆ. ಕಾನೂನು ಮತ್ತು ನ್ಯಾಯಾಲಯಗಳಿಗೆ ಜವಾಬ್ದಾರರಾಗಿರುವ ಏಜೆನ್ಸಿಯಾಗಿ ED ತನ್ನ ಅಧಿಕಾರವನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದೆ.

ಬಲವಾದ ನಾಯಕರು, ಕಾನೂನುಗಳು ಮತ್ತು ಏಜೆನ್ಸಿಗಳು ಸಾಮಾನ್ಯವಾಗಿ ಅವರು ರಕ್ಷಿಸುವುದಾಗಿ ಪ್ರತಿಜ್ಞೆ ಮಾಡುವ ನಾಗರಿಕರನ್ನು ಗುರಿಯಾಗಿಸಲು ಪ್ರಯತ್ನಿಸುತ್ತಾರೆ. ಗುರಿಪಡಿಸಲ್ಪಟ್ಟವರ ಮೇಲೆ ಕಾನೂನಿನ ಅಸ್ತ್ರವನ್ನು ಬಳಸಲಾಗುತ್ತದೆ. ಸಾಮಾನ್ಯ ಪ್ರಜೆಗಳ ವಿರುದ್ಧ ಇಂಥ ಕಾನೂನುಗಳನ್ನು ಜಾರಿ ಮಾಡಲಾಗುತ್ತದೆ ಎಂದು ನ್ಯಾಯಾಲಯ ಗಮನಿಸಿದೆ.

ತನಗೆ ನೀಡಿರುವ ಮಧ್ಯಂತರ ಜಾಮೀನನ್ನು ವಿಸ್ತರಿಸುವಂತೆ ಕೋರಿ ಉದ್ಯಮಿ ಅಮಿತ್ ಕತ್ಯಾಲ್ ಸಲ್ಲಿಸಿದ್ದ ಮನವಿ ಬಗ್ಗೆ ವಿಚಾರಣೆ ವೇಳೆ ನ್ಯಾಯಾಲಯವು ಈ ಕಠಿಣ ಅವಲೋಕನಗಳನ್ನು ಮಾಡಿದೆ. ರೈಲ್ವೇ ಉದ್ಯೋಗ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್ ಅವರ ಕುಟುಂಬದ ಸದಸ್ಯರೊಂದಿಗೆ ಕತ್ಯಾಲ್ ವ್ಯವಹಾರ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಅವರು ಏಪ್ರಿಲ್ 9ರಂದು ಗುರ್ಗಾಂವ್‌ನ ಮೇದಾಂತ ಆಸ್ಪತ್ರೆಯಲ್ಲಿ ಬಾರಿಯಾಟ್ರಿಕ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಫೆಬ್ರವರಿ 5, 2024ರಂದು ಮಧ್ಯಂತರ ಜಾಮೀನು ಪಡೆದ ನಂತರ ಅವರಿಗೆ ಚಿಕಿತ್ಸೆ ನೀಡುತ್ತಿರುವ ಅಪೊಲೊ ಮತ್ತು ಮೇದಾಂತ ಆಸ್ಪತ್ರೆಯ ವೈದ್ಯರ ಹೇಳಿಕೆಗಳನ್ನು ಇಡಿ ದಾಖಲಿಸಲು ಮುಂದಾಗಿದ್ದು, ಕತ್ಯಾಲ್ ಅವರ ವಕೀಲರು ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಇದು ಸೆಕ್ಷನ್ 50 PMLA ಅಡಿಯಲ್ಲಿನ ಕಾಯ್ದೆಯ ಉಲ್ಲಂಘನೆ ಮಾತ್ರವಲ್ಲದೆ ಆರೋಪಿಯ ಮೂಲಭೂತ ಹಕ್ಕಾಗಿರುವ ವೈದ್ಯಕೀಯ ಚಿಕಿತ್ಸೆಯ ಗೌಪ್ಯತೆಯ ಉಲ್ಲಂಘನೆಯಾಗಿದೆ ಎಂದು ವಾದಿಸಿತ್ತು.

ಇದನ್ನು ಓದಿ: ಮಣಿಪುರ ಬೆತ್ತಲೆ ಮೆರವಣಿಗೆ: ಗಲಭೆಕೋರರ ಗುಂಪಿಗೆ ಮಹಿಳೆಯರನ್ನು ಒಪ್ಪಿಸಿದ್ದ ಪೊಲೀಸರು, ಚಾರ್ಜ್‌ಶೀಟ್‌ನಲ್ಲಿ ಮಹತ್ವದ ಅಂಶಗಳು ಉಲ್ಲೇಖ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...