Homeಮುಖಪುಟನೀವು ಕಾನೂನಿಗಿಂತ ಮೇಲಲ್ಲ: ಜಾರಿ ನಿರ್ದೇಶನಾಲಯಕ್ಕೆ ತರಾಟೆಗೆ ತೆಗೆದುಕೊಂಡ ದೆಹಲಿ ಹೈಕೋರ್ಟ್‌

ನೀವು ಕಾನೂನಿಗಿಂತ ಮೇಲಲ್ಲ: ಜಾರಿ ನಿರ್ದೇಶನಾಲಯಕ್ಕೆ ತರಾಟೆಗೆ ತೆಗೆದುಕೊಂಡ ದೆಹಲಿ ಹೈಕೋರ್ಟ್‌

- Advertisement -
- Advertisement -

ಜಾರಿ ನಿರ್ದೇಶನಾಲಯವು (ಇಡಿ) ಕಾನೂನಿನ ಚೌಕಟ್ಟಿಗೆ ಒಳಪಟ್ಟಿದೆ ಮತ್ತು ಸಾಮಾನ್ಯ ನಾಗರಿಕರ ವಿರುದ್ಧ ಬಲಪ್ರದರ್ಶನ ಮಾಡುವಂತಿಲ್ಲ ಎಂದು ದೆಹಲಿ ಹೈಕೋರ್ಟ್‌ ಜಾರಿ ನಿರ್ದೇಶನಾಲಯಕ್ಕೆ ಹೇಳಿದ್ದು, ನೀವು ಕಾನೂನಿಗಿಂತ ಮೇಲಲ್ಲ ಎಂದು ಸ್ಪಷ್ಟವಾಗಿ ಹೇಳಿದೆ.

ಮಧ್ಯಂತರ ಜಾಮೀನು ವಿಸ್ತರಣೆಯನ್ನು ವಿರೋಧಿಸಲು ಜಾರಿ ನಿರ್ದೇಶನಾಲಯ 2002ರ ಮನಿ ಲಾಂಡರಿಂಗ್ ತಡೆ ಕಾಯ್ದೆಯ ಸೆಕ್ಷನ್ 50ರ ಅಡಿಯಲ್ಲಿ ಆರೋಪಿತ ವೈದ್ಯರ ವಿರುದ್ಧ ಪ್ರಕರಣ ದಾಖಲಿಸಲು ಮುಂದಾಗಿರುವುದನ್ನು ಕೋರ್ಟ್‌ ಗಮನಿಸಿದೆ. ಹಣ ದುರುಪಯೋಗದ ಆರೋಪಿ ಮತ್ತು ವೈದ್ಯರ ನಡುವೆ ನಂಟಿನ ಆರೋಪದ ಬಗ್ಗೆ ಪುರಾವೆ ಇಲ್ಲದೇ ಪ್ರಕರಣ ಮರು ದಾಖಲಿಸಿಕೊಳ್ಳಲು ಮುಂದಾಗಿರುವುದು ಸಮರ್ಥನೀಯವಲ್ಲ ಎಂದು ನ್ಯಾಯಾಲಯ ಹೇಳಿದೆ.

ರೌಸ್ ಅವೆನ್ಯೂ ನ್ಯಾಯಾಲಯಗಳ ವಿಶೇಷ ನ್ಯಾಯಾಧೀಶ (ಪಿಸಿ ಆಕ್ಟ್) ವಿಶಾಲ್ ಗೋಗ್ನೆ ಅವರು ಆರೋಪಿಗಳ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವೈದ್ಯರು ನಂಟು ಹೊಂದಿರುವ ಆರೋಪದ ಬಗ್ಗೆ ಯಾವುದೇ ಪುರಾವೆಯಿಲ್ಲದೆ ಸಾಮಾನ್ಯ ನಾಗರಿಕರನ್ನು (ವೈದ್ಯರನ್ನು) ಸೆಕ್ಷನ್ 50 PMLAಯ ಕಠಿಣ ಪ್ರಕ್ರಿಯೆಗೆ ಒಳಪಡಿಸಲು ಇಡಿಗೆ ಯಾವುದೇ ಸಮರ್ಥನೆ ಇಲ್ಲ ಎಂದು ಹೇಳಿದ್ದಾರೆ.

ಭಾರತದಂತಹ ಪ್ರಜಾಪ್ರಭುತ್ವ ದೇಶದಲ್ಲಿ, ಪ್ರಜೆಗಳು ಹಕ್ಕುಗಳನ್ನು ಹೊಂದಿದ್ದಾರೆ. ಸರ್ಕಾರಕ್ಕೆ ಕೆಲ ಕರ್ತವ್ಯಗಳಿವೆ ಮತ್ತು ಸರ್ಕಾರಕ್ಕೆ ಕೆಲ ಹಕ್ಕುಗಳಿವೆ ಎಂಬ ವಾದ ಮಂಡಿಸಿ ಈ ಮೂಲಭೂತ ಸಂಬಂಧದಲ್ಲಿ ಹಸ್ತಕ್ಷೇಪ ಮಾಡುವಂತಿಲ್ಲ, ಸರ್ವಾಧಿಕಾರಿ ವಾದವನ್ನು ಪ್ರಚೋದಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ. ಅಂತಹ ವಾದವನ್ನು ಒಪ್ಪಿಕೊಳ್ಳುವುದು ಸಾಂವಿಧಾನಿಕ ಯೋಜನೆ ಮತ್ತು ಸಾಂವಿಧಾನದ ನೈತಿಕತೆಯ ಉಲ್ಲಂಘನೆಯಾಗಿದೆ. ಕಾನೂನು ಮತ್ತು ನ್ಯಾಯಾಲಯಗಳಿಗೆ ಜವಾಬ್ದಾರರಾಗಿರುವ ಏಜೆನ್ಸಿಯಾಗಿ ED ತನ್ನ ಅಧಿಕಾರವನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದೆ.

ಬಲವಾದ ನಾಯಕರು, ಕಾನೂನುಗಳು ಮತ್ತು ಏಜೆನ್ಸಿಗಳು ಸಾಮಾನ್ಯವಾಗಿ ಅವರು ರಕ್ಷಿಸುವುದಾಗಿ ಪ್ರತಿಜ್ಞೆ ಮಾಡುವ ನಾಗರಿಕರನ್ನು ಗುರಿಯಾಗಿಸಲು ಪ್ರಯತ್ನಿಸುತ್ತಾರೆ. ಗುರಿಪಡಿಸಲ್ಪಟ್ಟವರ ಮೇಲೆ ಕಾನೂನಿನ ಅಸ್ತ್ರವನ್ನು ಬಳಸಲಾಗುತ್ತದೆ. ಸಾಮಾನ್ಯ ಪ್ರಜೆಗಳ ವಿರುದ್ಧ ಇಂಥ ಕಾನೂನುಗಳನ್ನು ಜಾರಿ ಮಾಡಲಾಗುತ್ತದೆ ಎಂದು ನ್ಯಾಯಾಲಯ ಗಮನಿಸಿದೆ.

ತನಗೆ ನೀಡಿರುವ ಮಧ್ಯಂತರ ಜಾಮೀನನ್ನು ವಿಸ್ತರಿಸುವಂತೆ ಕೋರಿ ಉದ್ಯಮಿ ಅಮಿತ್ ಕತ್ಯಾಲ್ ಸಲ್ಲಿಸಿದ್ದ ಮನವಿ ಬಗ್ಗೆ ವಿಚಾರಣೆ ವೇಳೆ ನ್ಯಾಯಾಲಯವು ಈ ಕಠಿಣ ಅವಲೋಕನಗಳನ್ನು ಮಾಡಿದೆ. ರೈಲ್ವೇ ಉದ್ಯೋಗ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್ ಅವರ ಕುಟುಂಬದ ಸದಸ್ಯರೊಂದಿಗೆ ಕತ್ಯಾಲ್ ವ್ಯವಹಾರ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಅವರು ಏಪ್ರಿಲ್ 9ರಂದು ಗುರ್ಗಾಂವ್‌ನ ಮೇದಾಂತ ಆಸ್ಪತ್ರೆಯಲ್ಲಿ ಬಾರಿಯಾಟ್ರಿಕ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಫೆಬ್ರವರಿ 5, 2024ರಂದು ಮಧ್ಯಂತರ ಜಾಮೀನು ಪಡೆದ ನಂತರ ಅವರಿಗೆ ಚಿಕಿತ್ಸೆ ನೀಡುತ್ತಿರುವ ಅಪೊಲೊ ಮತ್ತು ಮೇದಾಂತ ಆಸ್ಪತ್ರೆಯ ವೈದ್ಯರ ಹೇಳಿಕೆಗಳನ್ನು ಇಡಿ ದಾಖಲಿಸಲು ಮುಂದಾಗಿದ್ದು, ಕತ್ಯಾಲ್ ಅವರ ವಕೀಲರು ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಇದು ಸೆಕ್ಷನ್ 50 PMLA ಅಡಿಯಲ್ಲಿನ ಕಾಯ್ದೆಯ ಉಲ್ಲಂಘನೆ ಮಾತ್ರವಲ್ಲದೆ ಆರೋಪಿಯ ಮೂಲಭೂತ ಹಕ್ಕಾಗಿರುವ ವೈದ್ಯಕೀಯ ಚಿಕಿತ್ಸೆಯ ಗೌಪ್ಯತೆಯ ಉಲ್ಲಂಘನೆಯಾಗಿದೆ ಎಂದು ವಾದಿಸಿತ್ತು.

ಇದನ್ನು ಓದಿ: ಮಣಿಪುರ ಬೆತ್ತಲೆ ಮೆರವಣಿಗೆ: ಗಲಭೆಕೋರರ ಗುಂಪಿಗೆ ಮಹಿಳೆಯರನ್ನು ಒಪ್ಪಿಸಿದ್ದ ಪೊಲೀಸರು, ಚಾರ್ಜ್‌ಶೀಟ್‌ನಲ್ಲಿ ಮಹತ್ವದ ಅಂಶಗಳು ಉಲ್ಲೇಖ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...