Homeಮುಖಪುಟ’ನೀವು ಭಾರತದಲ್ಲಿ ವಾಸಿಸಲು ಯೋಗ್ಯರಲ್ಲ’ ಎಂದು ತಬ್ಲೀಘಿ ಸದಸ್ಯರಿಗೆ ಥಳಿಸಿದ ಗುಂಪು

’ನೀವು ಭಾರತದಲ್ಲಿ ವಾಸಿಸಲು ಯೋಗ್ಯರಲ್ಲ’ ಎಂದು ತಬ್ಲೀಘಿ ಸದಸ್ಯರಿಗೆ ಥಳಿಸಿದ ಗುಂಪು

ಪ್ರಜ್ಞೆ ತಪ್ಪುವ ತನಕ ಹಲ್ಲೆ ನಡೆಸಿದ ದುಷ್ಕರ್ಮಿಗಳು, ಕೊನೆಗೆ ‘ಸತ್ತಿದ್ದಾರೆ’ ಎಂದು ತಿಳಿದು ಅಲ್ಲಿಂದ ಹೊರಟಿದ್ದಾರೆ.

- Advertisement -
- Advertisement -

“ನೀವು ಭಾರತದಲ್ಲಿ ವಾಸಿಸಲು ಯೋಗ್ಯರಲ್ಲ” ಎಂದು ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಹೋಲ್ ಗ್ರಾಮದಲ್ಲಿ ತಬ್ಲೀಘಿ ಜಮಾಅತ್‌ ಸದಸ್ಯರ ಮೇಲೆ ಜನಸಮೂಹವೊಂದು ಮಾರಣಾಂತಿಕವಾಗಿ ಹಲ್ಲೆ ನಡೆಸಿದೆ. ಹಲ್ಲೆಯು ಸೆಪ್ಟೆಂಬರ್ 16 ರ ರಾತ್ರಿ ನಡೆದಿದ್ದು, ಸಂತ್ರಸ್ಥರನ್ನು ಸುಹೇಲ್ ತಂಬೋಲಿ, ಅಸ್ಲಂ ಅಥರ್, ಸಯ್ಯದ್ ಲಯಕ್, ನಿಜಾಮುದ್ದೀನ್ ಖಾಜಿ ಎಂದು ಗುರುತಿಸಲಾಗಿದೆ.

ತಬ್ಲೀಘಿ ಜಮಾಅತ್ ಸದಸ್ಯರು ತಮ್ಮ ಸ್ನೇಹಿತನ ಅಂತ್ಯಕ್ರಿಯೆಗಾಗಿ ಧರೂರಿನಿಂದ ಅಂಬಜೋಗೈ ಗ್ರಾಮಕ್ಕೆ ಪ್ರಯಾಣಿಸುತ್ತಿದ್ದಾಗ ಈ ಘಟನೆ ನಡೆದಿದೆ.

ಇದನ್ನೂ ಓದಿ: ಕೊರೊನಾ ವಿಚಾರದಲ್ಲಿ ತಬ್ಲೀಘಿಗಳನ್ನು ’ಬಲಿಪಶು’ ಮಾಡಲಾಗಿದೆ: ಬಾಂಬೆ ಹೈಕೋರ್ಟ್

ಪ್ರಯಾಣಿಸುತ್ತಿರುವ ಕಾರಿನಲ್ಲಿ ಸಮಸ್ಯೆ ಕಾಣಿಸಿಕೊಂಡ ಕಾರಣ ಕಾರನ್ನು ನಿಲ್ಲಿಸಿ, ಕಾರಿನಲ್ಲಿದ್ದ ಸುಹೇಲ್ ಹಾಗೂ ಸೈಯದ್ ಎಂಬವರು ನೀರು ತರಲು ಹೋಗಿದ್ದರು. ಈ ಹೊತ್ತು ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಕಾರಿನಲ್ಲಿ ಉಳಿದಿದ್ದ ಅಸ್ಲಂ ಮತ್ತು ನಿಜಾಮುದ್ದೀನ್‌ ಅವರನ್ನು ನಿಂದಿಸಿದ್ದಾರೆ. ಆದರೆ ಇದನ್ನು ಶಾಂತವಾಗಿ ನಿಭಾಯಿಸಲು ಪ್ರಯತ್ನಿಸಿದರೂ ಅದು ಪ್ರಯೋಜವಾಗಲಿಲ್ಲ. ಇದರ ನಂತರ ದುಷ್ಕರ್ಮಿಗಳು ಮತ್ತೇ ಆರು ಮಂದಿಯನ್ನು ಕರೆ ಮಾಡಿ ಸ್ಥಳಕ್ಕೆ ಕರೆಸಿದ್ದು, ಅವರೆಲ್ಲದೂ ಕೈಗಳಲ್ಲಿ ಕೋಲುಗಳನ್ನು ತಯಾರು ಮಾಡಿಕೊಂಡು ಬಂದಿದ್ದರು ಎಂದು ಸಂತ್ರಸ್ಥರು ತಿಳಿಸಿದ್ದಾರೆ.

“ಅವರು ಆ ರಾತ್ರಿ ನಮ್ಮನ್ನು ಕೊಲ್ಲುತ್ತಿದ್ದರು” ಎಂದು 34 ವರ್ಷದ ಸುಹೇಲ್ ತಂಬೋಲಿ ಹೇಳಿದ್ದು, “ಅವರು ನಮ್ಮ ಗಡ್ಡವನ್ನು ಎಳೆದು, ಟೋಪಿಗಳನ್ನು ಎಸೆದರು” ಎಂದು ಹೇಳಿದ್ದಾರೆ.

ಘಟನೆಯು ನಲವತ್ತು ನಿಮಿಷಗಳ ಕಾಲ ನಡೆದಿದ್ದು, ಇದಾಗಿ ಒಂದು ಗಂಟೆಯ ನಂತರ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ ಎಂದು ಹೇಳಿದ್ಧಾರೆ. “ಗುಂಪಿನಲ್ಲಿ ಒಬ್ಬರು ತಲೆಗೆ ಎರಡು ಬಾರಿ ಇಟ್ಟಿಗೆಯಿಂದ ಹೊಡೆದಿದ್ದು, ಕೋಲಿನಿಂದ ಕೂಡಾ ಅದು ಮುರಿಯುವವರೆಗೂ ಹೊಡೆಯುತ್ತಿದ್ದರು” ಎಂದು ಸುಹೇಲ್ ಹೇಳಿದ್ದಾರೆ.

ಪ್ರಜ್ಞೆ ತಪ್ಪುವ ತನಕ ಹಲ್ಲೆ ನಡೆಸಿದ ದುಷ್ಕರ್ಮಿಗಳು, ಕೊನೆಗೆ ‘ಸತ್ತಿದ್ದಾರೆ’ ಎಂದು ತಿಳಿದು ಅಲ್ಲಿಂದ ಹೊರಟಿದ್ದಾರೆ ಎಂದು ದೂರದಲ್ಲಿ ಅಸಹಾಯಕರಾಗಿ ನಿಂತು ತಮ್ಮವರ ಮೇಲೆ ಹಲ್ಲೆ ನಡೆಯುತ್ತಿರುವುದನ್ನು ನೋಡುತ್ತಿದ್ದ ಸೈಯದ್ ಮತ್ತು ಅಸ್ಲಂ ಹೇಳಿದ್ದಾರೆ. ಇದರ ನಂತರ ಅವರು ತಮ್ಮ ಗ್ರಾಮಸ್ಥರಿಗೆ ಕರೆ ಮಾಡಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.

ಸೆಪ್ಟೆಂಬರ್ 17 ರಂದು ಪ್ರಕರಣ ಸಂಬಂಧ FIR ದಾಖಲಾಗಿದ್ದು, ಪೊಲೀಸರು ನಾರಾಯಣ ಧನರಾಜ್ ಘುಗೆ ಹಾಗೂ ರಾಹುಲ್ ತುಕಾರಾಂ ಘುಗೆ ಎಂಬವರ ಸಹಿತ ಆರು ಮಂದಿಯನ್ನು ಬಂಧಿಸಿದ್ದಾರೆಂದು ಸಬ್‌ರಂಗ್‌ ವರದಿ ಮಾಡಿದೆ.

ಇದನ್ನೂ ಓದಿ: ಪ್ಲಾಸ್ಮಾ: ಜೀವದ್ರವದ ಜರೂರತ್ತುಗಳು:`ತಬ್ಲೀಘಿ ಜಿಹಾದಿಗಳು, ತಬ್ಲೀಘಿ ಸೇನಾನಿಗಳು’ ಆಗಿದ್ದೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...