Homeಮುಖಪುಟ’ನೀವು ಭಾರತದಲ್ಲಿ ವಾಸಿಸಲು ಯೋಗ್ಯರಲ್ಲ’ ಎಂದು ತಬ್ಲೀಘಿ ಸದಸ್ಯರಿಗೆ ಥಳಿಸಿದ ಗುಂಪು

’ನೀವು ಭಾರತದಲ್ಲಿ ವಾಸಿಸಲು ಯೋಗ್ಯರಲ್ಲ’ ಎಂದು ತಬ್ಲೀಘಿ ಸದಸ್ಯರಿಗೆ ಥಳಿಸಿದ ಗುಂಪು

ಪ್ರಜ್ಞೆ ತಪ್ಪುವ ತನಕ ಹಲ್ಲೆ ನಡೆಸಿದ ದುಷ್ಕರ್ಮಿಗಳು, ಕೊನೆಗೆ ‘ಸತ್ತಿದ್ದಾರೆ’ ಎಂದು ತಿಳಿದು ಅಲ್ಲಿಂದ ಹೊರಟಿದ್ದಾರೆ.

- Advertisement -
- Advertisement -

“ನೀವು ಭಾರತದಲ್ಲಿ ವಾಸಿಸಲು ಯೋಗ್ಯರಲ್ಲ” ಎಂದು ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಹೋಲ್ ಗ್ರಾಮದಲ್ಲಿ ತಬ್ಲೀಘಿ ಜಮಾಅತ್‌ ಸದಸ್ಯರ ಮೇಲೆ ಜನಸಮೂಹವೊಂದು ಮಾರಣಾಂತಿಕವಾಗಿ ಹಲ್ಲೆ ನಡೆಸಿದೆ. ಹಲ್ಲೆಯು ಸೆಪ್ಟೆಂಬರ್ 16 ರ ರಾತ್ರಿ ನಡೆದಿದ್ದು, ಸಂತ್ರಸ್ಥರನ್ನು ಸುಹೇಲ್ ತಂಬೋಲಿ, ಅಸ್ಲಂ ಅಥರ್, ಸಯ್ಯದ್ ಲಯಕ್, ನಿಜಾಮುದ್ದೀನ್ ಖಾಜಿ ಎಂದು ಗುರುತಿಸಲಾಗಿದೆ.

ತಬ್ಲೀಘಿ ಜಮಾಅತ್ ಸದಸ್ಯರು ತಮ್ಮ ಸ್ನೇಹಿತನ ಅಂತ್ಯಕ್ರಿಯೆಗಾಗಿ ಧರೂರಿನಿಂದ ಅಂಬಜೋಗೈ ಗ್ರಾಮಕ್ಕೆ ಪ್ರಯಾಣಿಸುತ್ತಿದ್ದಾಗ ಈ ಘಟನೆ ನಡೆದಿದೆ.

ಇದನ್ನೂ ಓದಿ: ಕೊರೊನಾ ವಿಚಾರದಲ್ಲಿ ತಬ್ಲೀಘಿಗಳನ್ನು ’ಬಲಿಪಶು’ ಮಾಡಲಾಗಿದೆ: ಬಾಂಬೆ ಹೈಕೋರ್ಟ್

ಪ್ರಯಾಣಿಸುತ್ತಿರುವ ಕಾರಿನಲ್ಲಿ ಸಮಸ್ಯೆ ಕಾಣಿಸಿಕೊಂಡ ಕಾರಣ ಕಾರನ್ನು ನಿಲ್ಲಿಸಿ, ಕಾರಿನಲ್ಲಿದ್ದ ಸುಹೇಲ್ ಹಾಗೂ ಸೈಯದ್ ಎಂಬವರು ನೀರು ತರಲು ಹೋಗಿದ್ದರು. ಈ ಹೊತ್ತು ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಕಾರಿನಲ್ಲಿ ಉಳಿದಿದ್ದ ಅಸ್ಲಂ ಮತ್ತು ನಿಜಾಮುದ್ದೀನ್‌ ಅವರನ್ನು ನಿಂದಿಸಿದ್ದಾರೆ. ಆದರೆ ಇದನ್ನು ಶಾಂತವಾಗಿ ನಿಭಾಯಿಸಲು ಪ್ರಯತ್ನಿಸಿದರೂ ಅದು ಪ್ರಯೋಜವಾಗಲಿಲ್ಲ. ಇದರ ನಂತರ ದುಷ್ಕರ್ಮಿಗಳು ಮತ್ತೇ ಆರು ಮಂದಿಯನ್ನು ಕರೆ ಮಾಡಿ ಸ್ಥಳಕ್ಕೆ ಕರೆಸಿದ್ದು, ಅವರೆಲ್ಲದೂ ಕೈಗಳಲ್ಲಿ ಕೋಲುಗಳನ್ನು ತಯಾರು ಮಾಡಿಕೊಂಡು ಬಂದಿದ್ದರು ಎಂದು ಸಂತ್ರಸ್ಥರು ತಿಳಿಸಿದ್ದಾರೆ.

“ಅವರು ಆ ರಾತ್ರಿ ನಮ್ಮನ್ನು ಕೊಲ್ಲುತ್ತಿದ್ದರು” ಎಂದು 34 ವರ್ಷದ ಸುಹೇಲ್ ತಂಬೋಲಿ ಹೇಳಿದ್ದು, “ಅವರು ನಮ್ಮ ಗಡ್ಡವನ್ನು ಎಳೆದು, ಟೋಪಿಗಳನ್ನು ಎಸೆದರು” ಎಂದು ಹೇಳಿದ್ದಾರೆ.

ಘಟನೆಯು ನಲವತ್ತು ನಿಮಿಷಗಳ ಕಾಲ ನಡೆದಿದ್ದು, ಇದಾಗಿ ಒಂದು ಗಂಟೆಯ ನಂತರ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ ಎಂದು ಹೇಳಿದ್ಧಾರೆ. “ಗುಂಪಿನಲ್ಲಿ ಒಬ್ಬರು ತಲೆಗೆ ಎರಡು ಬಾರಿ ಇಟ್ಟಿಗೆಯಿಂದ ಹೊಡೆದಿದ್ದು, ಕೋಲಿನಿಂದ ಕೂಡಾ ಅದು ಮುರಿಯುವವರೆಗೂ ಹೊಡೆಯುತ್ತಿದ್ದರು” ಎಂದು ಸುಹೇಲ್ ಹೇಳಿದ್ದಾರೆ.

ಪ್ರಜ್ಞೆ ತಪ್ಪುವ ತನಕ ಹಲ್ಲೆ ನಡೆಸಿದ ದುಷ್ಕರ್ಮಿಗಳು, ಕೊನೆಗೆ ‘ಸತ್ತಿದ್ದಾರೆ’ ಎಂದು ತಿಳಿದು ಅಲ್ಲಿಂದ ಹೊರಟಿದ್ದಾರೆ ಎಂದು ದೂರದಲ್ಲಿ ಅಸಹಾಯಕರಾಗಿ ನಿಂತು ತಮ್ಮವರ ಮೇಲೆ ಹಲ್ಲೆ ನಡೆಯುತ್ತಿರುವುದನ್ನು ನೋಡುತ್ತಿದ್ದ ಸೈಯದ್ ಮತ್ತು ಅಸ್ಲಂ ಹೇಳಿದ್ದಾರೆ. ಇದರ ನಂತರ ಅವರು ತಮ್ಮ ಗ್ರಾಮಸ್ಥರಿಗೆ ಕರೆ ಮಾಡಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.

ಸೆಪ್ಟೆಂಬರ್ 17 ರಂದು ಪ್ರಕರಣ ಸಂಬಂಧ FIR ದಾಖಲಾಗಿದ್ದು, ಪೊಲೀಸರು ನಾರಾಯಣ ಧನರಾಜ್ ಘುಗೆ ಹಾಗೂ ರಾಹುಲ್ ತುಕಾರಾಂ ಘುಗೆ ಎಂಬವರ ಸಹಿತ ಆರು ಮಂದಿಯನ್ನು ಬಂಧಿಸಿದ್ದಾರೆಂದು ಸಬ್‌ರಂಗ್‌ ವರದಿ ಮಾಡಿದೆ.

ಇದನ್ನೂ ಓದಿ: ಪ್ಲಾಸ್ಮಾ: ಜೀವದ್ರವದ ಜರೂರತ್ತುಗಳು:`ತಬ್ಲೀಘಿ ಜಿಹಾದಿಗಳು, ತಬ್ಲೀಘಿ ಸೇನಾನಿಗಳು’ ಆಗಿದ್ದೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...