Homeಮುಖಪುಟ’ನೀವು ಭಾರತದಲ್ಲಿ ವಾಸಿಸಲು ಯೋಗ್ಯರಲ್ಲ’ ಎಂದು ತಬ್ಲೀಘಿ ಸದಸ್ಯರಿಗೆ ಥಳಿಸಿದ ಗುಂಪು

’ನೀವು ಭಾರತದಲ್ಲಿ ವಾಸಿಸಲು ಯೋಗ್ಯರಲ್ಲ’ ಎಂದು ತಬ್ಲೀಘಿ ಸದಸ್ಯರಿಗೆ ಥಳಿಸಿದ ಗುಂಪು

ಪ್ರಜ್ಞೆ ತಪ್ಪುವ ತನಕ ಹಲ್ಲೆ ನಡೆಸಿದ ದುಷ್ಕರ್ಮಿಗಳು, ಕೊನೆಗೆ ‘ಸತ್ತಿದ್ದಾರೆ’ ಎಂದು ತಿಳಿದು ಅಲ್ಲಿಂದ ಹೊರಟಿದ್ದಾರೆ.

- Advertisement -
- Advertisement -

“ನೀವು ಭಾರತದಲ್ಲಿ ವಾಸಿಸಲು ಯೋಗ್ಯರಲ್ಲ” ಎಂದು ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಹೋಲ್ ಗ್ರಾಮದಲ್ಲಿ ತಬ್ಲೀಘಿ ಜಮಾಅತ್‌ ಸದಸ್ಯರ ಮೇಲೆ ಜನಸಮೂಹವೊಂದು ಮಾರಣಾಂತಿಕವಾಗಿ ಹಲ್ಲೆ ನಡೆಸಿದೆ. ಹಲ್ಲೆಯು ಸೆಪ್ಟೆಂಬರ್ 16 ರ ರಾತ್ರಿ ನಡೆದಿದ್ದು, ಸಂತ್ರಸ್ಥರನ್ನು ಸುಹೇಲ್ ತಂಬೋಲಿ, ಅಸ್ಲಂ ಅಥರ್, ಸಯ್ಯದ್ ಲಯಕ್, ನಿಜಾಮುದ್ದೀನ್ ಖಾಜಿ ಎಂದು ಗುರುತಿಸಲಾಗಿದೆ.

ತಬ್ಲೀಘಿ ಜಮಾಅತ್ ಸದಸ್ಯರು ತಮ್ಮ ಸ್ನೇಹಿತನ ಅಂತ್ಯಕ್ರಿಯೆಗಾಗಿ ಧರೂರಿನಿಂದ ಅಂಬಜೋಗೈ ಗ್ರಾಮಕ್ಕೆ ಪ್ರಯಾಣಿಸುತ್ತಿದ್ದಾಗ ಈ ಘಟನೆ ನಡೆದಿದೆ.

ಇದನ್ನೂ ಓದಿ: ಕೊರೊನಾ ವಿಚಾರದಲ್ಲಿ ತಬ್ಲೀಘಿಗಳನ್ನು ’ಬಲಿಪಶು’ ಮಾಡಲಾಗಿದೆ: ಬಾಂಬೆ ಹೈಕೋರ್ಟ್

ಪ್ರಯಾಣಿಸುತ್ತಿರುವ ಕಾರಿನಲ್ಲಿ ಸಮಸ್ಯೆ ಕಾಣಿಸಿಕೊಂಡ ಕಾರಣ ಕಾರನ್ನು ನಿಲ್ಲಿಸಿ, ಕಾರಿನಲ್ಲಿದ್ದ ಸುಹೇಲ್ ಹಾಗೂ ಸೈಯದ್ ಎಂಬವರು ನೀರು ತರಲು ಹೋಗಿದ್ದರು. ಈ ಹೊತ್ತು ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಕಾರಿನಲ್ಲಿ ಉಳಿದಿದ್ದ ಅಸ್ಲಂ ಮತ್ತು ನಿಜಾಮುದ್ದೀನ್‌ ಅವರನ್ನು ನಿಂದಿಸಿದ್ದಾರೆ. ಆದರೆ ಇದನ್ನು ಶಾಂತವಾಗಿ ನಿಭಾಯಿಸಲು ಪ್ರಯತ್ನಿಸಿದರೂ ಅದು ಪ್ರಯೋಜವಾಗಲಿಲ್ಲ. ಇದರ ನಂತರ ದುಷ್ಕರ್ಮಿಗಳು ಮತ್ತೇ ಆರು ಮಂದಿಯನ್ನು ಕರೆ ಮಾಡಿ ಸ್ಥಳಕ್ಕೆ ಕರೆಸಿದ್ದು, ಅವರೆಲ್ಲದೂ ಕೈಗಳಲ್ಲಿ ಕೋಲುಗಳನ್ನು ತಯಾರು ಮಾಡಿಕೊಂಡು ಬಂದಿದ್ದರು ಎಂದು ಸಂತ್ರಸ್ಥರು ತಿಳಿಸಿದ್ದಾರೆ.

“ಅವರು ಆ ರಾತ್ರಿ ನಮ್ಮನ್ನು ಕೊಲ್ಲುತ್ತಿದ್ದರು” ಎಂದು 34 ವರ್ಷದ ಸುಹೇಲ್ ತಂಬೋಲಿ ಹೇಳಿದ್ದು, “ಅವರು ನಮ್ಮ ಗಡ್ಡವನ್ನು ಎಳೆದು, ಟೋಪಿಗಳನ್ನು ಎಸೆದರು” ಎಂದು ಹೇಳಿದ್ದಾರೆ.

ಘಟನೆಯು ನಲವತ್ತು ನಿಮಿಷಗಳ ಕಾಲ ನಡೆದಿದ್ದು, ಇದಾಗಿ ಒಂದು ಗಂಟೆಯ ನಂತರ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ ಎಂದು ಹೇಳಿದ್ಧಾರೆ. “ಗುಂಪಿನಲ್ಲಿ ಒಬ್ಬರು ತಲೆಗೆ ಎರಡು ಬಾರಿ ಇಟ್ಟಿಗೆಯಿಂದ ಹೊಡೆದಿದ್ದು, ಕೋಲಿನಿಂದ ಕೂಡಾ ಅದು ಮುರಿಯುವವರೆಗೂ ಹೊಡೆಯುತ್ತಿದ್ದರು” ಎಂದು ಸುಹೇಲ್ ಹೇಳಿದ್ದಾರೆ.

ಪ್ರಜ್ಞೆ ತಪ್ಪುವ ತನಕ ಹಲ್ಲೆ ನಡೆಸಿದ ದುಷ್ಕರ್ಮಿಗಳು, ಕೊನೆಗೆ ‘ಸತ್ತಿದ್ದಾರೆ’ ಎಂದು ತಿಳಿದು ಅಲ್ಲಿಂದ ಹೊರಟಿದ್ದಾರೆ ಎಂದು ದೂರದಲ್ಲಿ ಅಸಹಾಯಕರಾಗಿ ನಿಂತು ತಮ್ಮವರ ಮೇಲೆ ಹಲ್ಲೆ ನಡೆಯುತ್ತಿರುವುದನ್ನು ನೋಡುತ್ತಿದ್ದ ಸೈಯದ್ ಮತ್ತು ಅಸ್ಲಂ ಹೇಳಿದ್ದಾರೆ. ಇದರ ನಂತರ ಅವರು ತಮ್ಮ ಗ್ರಾಮಸ್ಥರಿಗೆ ಕರೆ ಮಾಡಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.

ಸೆಪ್ಟೆಂಬರ್ 17 ರಂದು ಪ್ರಕರಣ ಸಂಬಂಧ FIR ದಾಖಲಾಗಿದ್ದು, ಪೊಲೀಸರು ನಾರಾಯಣ ಧನರಾಜ್ ಘುಗೆ ಹಾಗೂ ರಾಹುಲ್ ತುಕಾರಾಂ ಘುಗೆ ಎಂಬವರ ಸಹಿತ ಆರು ಮಂದಿಯನ್ನು ಬಂಧಿಸಿದ್ದಾರೆಂದು ಸಬ್‌ರಂಗ್‌ ವರದಿ ಮಾಡಿದೆ.

ಇದನ್ನೂ ಓದಿ: ಪ್ಲಾಸ್ಮಾ: ಜೀವದ್ರವದ ಜರೂರತ್ತುಗಳು:`ತಬ್ಲೀಘಿ ಜಿಹಾದಿಗಳು, ತಬ್ಲೀಘಿ ಸೇನಾನಿಗಳು’ ಆಗಿದ್ದೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...