Homeಮುಖಪುಟ’ನೀವು ಭಾರತದಲ್ಲಿ ವಾಸಿಸಲು ಯೋಗ್ಯರಲ್ಲ’ ಎಂದು ತಬ್ಲೀಘಿ ಸದಸ್ಯರಿಗೆ ಥಳಿಸಿದ ಗುಂಪು

’ನೀವು ಭಾರತದಲ್ಲಿ ವಾಸಿಸಲು ಯೋಗ್ಯರಲ್ಲ’ ಎಂದು ತಬ್ಲೀಘಿ ಸದಸ್ಯರಿಗೆ ಥಳಿಸಿದ ಗುಂಪು

ಪ್ರಜ್ಞೆ ತಪ್ಪುವ ತನಕ ಹಲ್ಲೆ ನಡೆಸಿದ ದುಷ್ಕರ್ಮಿಗಳು, ಕೊನೆಗೆ ‘ಸತ್ತಿದ್ದಾರೆ’ ಎಂದು ತಿಳಿದು ಅಲ್ಲಿಂದ ಹೊರಟಿದ್ದಾರೆ.

- Advertisement -
- Advertisement -

“ನೀವು ಭಾರತದಲ್ಲಿ ವಾಸಿಸಲು ಯೋಗ್ಯರಲ್ಲ” ಎಂದು ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಹೋಲ್ ಗ್ರಾಮದಲ್ಲಿ ತಬ್ಲೀಘಿ ಜಮಾಅತ್‌ ಸದಸ್ಯರ ಮೇಲೆ ಜನಸಮೂಹವೊಂದು ಮಾರಣಾಂತಿಕವಾಗಿ ಹಲ್ಲೆ ನಡೆಸಿದೆ. ಹಲ್ಲೆಯು ಸೆಪ್ಟೆಂಬರ್ 16 ರ ರಾತ್ರಿ ನಡೆದಿದ್ದು, ಸಂತ್ರಸ್ಥರನ್ನು ಸುಹೇಲ್ ತಂಬೋಲಿ, ಅಸ್ಲಂ ಅಥರ್, ಸಯ್ಯದ್ ಲಯಕ್, ನಿಜಾಮುದ್ದೀನ್ ಖಾಜಿ ಎಂದು ಗುರುತಿಸಲಾಗಿದೆ.

ತಬ್ಲೀಘಿ ಜಮಾಅತ್ ಸದಸ್ಯರು ತಮ್ಮ ಸ್ನೇಹಿತನ ಅಂತ್ಯಕ್ರಿಯೆಗಾಗಿ ಧರೂರಿನಿಂದ ಅಂಬಜೋಗೈ ಗ್ರಾಮಕ್ಕೆ ಪ್ರಯಾಣಿಸುತ್ತಿದ್ದಾಗ ಈ ಘಟನೆ ನಡೆದಿದೆ.

ಇದನ್ನೂ ಓದಿ: ಕೊರೊನಾ ವಿಚಾರದಲ್ಲಿ ತಬ್ಲೀಘಿಗಳನ್ನು ’ಬಲಿಪಶು’ ಮಾಡಲಾಗಿದೆ: ಬಾಂಬೆ ಹೈಕೋರ್ಟ್

ಪ್ರಯಾಣಿಸುತ್ತಿರುವ ಕಾರಿನಲ್ಲಿ ಸಮಸ್ಯೆ ಕಾಣಿಸಿಕೊಂಡ ಕಾರಣ ಕಾರನ್ನು ನಿಲ್ಲಿಸಿ, ಕಾರಿನಲ್ಲಿದ್ದ ಸುಹೇಲ್ ಹಾಗೂ ಸೈಯದ್ ಎಂಬವರು ನೀರು ತರಲು ಹೋಗಿದ್ದರು. ಈ ಹೊತ್ತು ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಕಾರಿನಲ್ಲಿ ಉಳಿದಿದ್ದ ಅಸ್ಲಂ ಮತ್ತು ನಿಜಾಮುದ್ದೀನ್‌ ಅವರನ್ನು ನಿಂದಿಸಿದ್ದಾರೆ. ಆದರೆ ಇದನ್ನು ಶಾಂತವಾಗಿ ನಿಭಾಯಿಸಲು ಪ್ರಯತ್ನಿಸಿದರೂ ಅದು ಪ್ರಯೋಜವಾಗಲಿಲ್ಲ. ಇದರ ನಂತರ ದುಷ್ಕರ್ಮಿಗಳು ಮತ್ತೇ ಆರು ಮಂದಿಯನ್ನು ಕರೆ ಮಾಡಿ ಸ್ಥಳಕ್ಕೆ ಕರೆಸಿದ್ದು, ಅವರೆಲ್ಲದೂ ಕೈಗಳಲ್ಲಿ ಕೋಲುಗಳನ್ನು ತಯಾರು ಮಾಡಿಕೊಂಡು ಬಂದಿದ್ದರು ಎಂದು ಸಂತ್ರಸ್ಥರು ತಿಳಿಸಿದ್ದಾರೆ.

“ಅವರು ಆ ರಾತ್ರಿ ನಮ್ಮನ್ನು ಕೊಲ್ಲುತ್ತಿದ್ದರು” ಎಂದು 34 ವರ್ಷದ ಸುಹೇಲ್ ತಂಬೋಲಿ ಹೇಳಿದ್ದು, “ಅವರು ನಮ್ಮ ಗಡ್ಡವನ್ನು ಎಳೆದು, ಟೋಪಿಗಳನ್ನು ಎಸೆದರು” ಎಂದು ಹೇಳಿದ್ದಾರೆ.

ಘಟನೆಯು ನಲವತ್ತು ನಿಮಿಷಗಳ ಕಾಲ ನಡೆದಿದ್ದು, ಇದಾಗಿ ಒಂದು ಗಂಟೆಯ ನಂತರ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ ಎಂದು ಹೇಳಿದ್ಧಾರೆ. “ಗುಂಪಿನಲ್ಲಿ ಒಬ್ಬರು ತಲೆಗೆ ಎರಡು ಬಾರಿ ಇಟ್ಟಿಗೆಯಿಂದ ಹೊಡೆದಿದ್ದು, ಕೋಲಿನಿಂದ ಕೂಡಾ ಅದು ಮುರಿಯುವವರೆಗೂ ಹೊಡೆಯುತ್ತಿದ್ದರು” ಎಂದು ಸುಹೇಲ್ ಹೇಳಿದ್ದಾರೆ.

ಪ್ರಜ್ಞೆ ತಪ್ಪುವ ತನಕ ಹಲ್ಲೆ ನಡೆಸಿದ ದುಷ್ಕರ್ಮಿಗಳು, ಕೊನೆಗೆ ‘ಸತ್ತಿದ್ದಾರೆ’ ಎಂದು ತಿಳಿದು ಅಲ್ಲಿಂದ ಹೊರಟಿದ್ದಾರೆ ಎಂದು ದೂರದಲ್ಲಿ ಅಸಹಾಯಕರಾಗಿ ನಿಂತು ತಮ್ಮವರ ಮೇಲೆ ಹಲ್ಲೆ ನಡೆಯುತ್ತಿರುವುದನ್ನು ನೋಡುತ್ತಿದ್ದ ಸೈಯದ್ ಮತ್ತು ಅಸ್ಲಂ ಹೇಳಿದ್ದಾರೆ. ಇದರ ನಂತರ ಅವರು ತಮ್ಮ ಗ್ರಾಮಸ್ಥರಿಗೆ ಕರೆ ಮಾಡಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.

ಸೆಪ್ಟೆಂಬರ್ 17 ರಂದು ಪ್ರಕರಣ ಸಂಬಂಧ FIR ದಾಖಲಾಗಿದ್ದು, ಪೊಲೀಸರು ನಾರಾಯಣ ಧನರಾಜ್ ಘುಗೆ ಹಾಗೂ ರಾಹುಲ್ ತುಕಾರಾಂ ಘುಗೆ ಎಂಬವರ ಸಹಿತ ಆರು ಮಂದಿಯನ್ನು ಬಂಧಿಸಿದ್ದಾರೆಂದು ಸಬ್‌ರಂಗ್‌ ವರದಿ ಮಾಡಿದೆ.

ಇದನ್ನೂ ಓದಿ: ಪ್ಲಾಸ್ಮಾ: ಜೀವದ್ರವದ ಜರೂರತ್ತುಗಳು:`ತಬ್ಲೀಘಿ ಜಿಹಾದಿಗಳು, ತಬ್ಲೀಘಿ ಸೇನಾನಿಗಳು’ ಆಗಿದ್ದೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...