Homeಮುಖಪುಟ'ನಾನಲ್ಲ, ನೀವೇ ಅವರ ಟಾರ್ಗೆಟ್': ದೆಹಲಿ ಸಿಎಂ ಕೇಜ್ರಿವಾಲ್‌ಗೆ ಸಿಸೋಡಿಯಾ ಪತ್ರ

‘ನಾನಲ್ಲ, ನೀವೇ ಅವರ ಟಾರ್ಗೆಟ್’: ದೆಹಲಿ ಸಿಎಂ ಕೇಜ್ರಿವಾಲ್‌ಗೆ ಸಿಸೋಡಿಯಾ ಪತ್ರ

- Advertisement -
- Advertisement -

”8 ವರ್ಷಗಳ ಕಾಲ ಪ್ರಾಮಾಣಿಕವಾಗಿ ಕೆಲಸ ಮಾಡಿದ ನನ್ನ ವಿರುದ್ಧ ಭ್ರಷ್ಟಾಚಾರದ ಆರೋಪಗಳು ಬಂದಿರುವುದು ದುರದೃಷ್ಟಕರ” ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಮನೀಶ್ ಸಿಸೋಡಿಯಾ ನೀಡಿರುವ ರಾಜೀನಾಮೆ ಪತ್ರದಲ್ಲಿ ಹೇಳಿದ್ದಾರೆ.

ಅಬಕಾರಿ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಸಿಸೋಡಿಯಾ ಅವರನ್ನು ಕೇಂದ್ರ ತನಿಖಾ ದಳ (ಸಿಬಿಐ) ಭಾನುವಾರ ಬಂಧಿಸಿದೆ. ಸೋಮವಾರ ದೆಹಲಿ ನ್ಯಾಯಾಲಯ ಅವರನ್ನು ಮಾರ್ಚ್ 4ರವರೆಗೆ ಸಿಬಿಐ ಕಸ್ಟಡಿಗೆ ಒಪ್ಪಿಸಿದೆ. ಅದರ ಬೆನ್ನಲ್ಲೇ ಮಂಗಳವಾರ (ಫೆ28)ರಂದು ಸಿಸೋಡಿಯಾ ಅವರು ದೆಹಲಿ ಸರ್ಕಾರದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಅಕ್ರಮ ಹಣ ವರ್ಗಾವಣೆ ಆರೋಪ ಎದುರಿಸುತ್ತಿರುವ ಸಿಸೋಡಿಯಾ ಮತ್ತು ಸಂಪುಟದಲ್ಲಿರುವ ಅವರ ಸಹೋದ್ಯೋಗಿ ಸತ್ಯೇಂದ್ರ ಜೈನ್ ಮಂಗಳವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಎಎಪಿಯ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ರಾಜೀನಾಮೆ ಪತ್ರಗಳನ್ನು ಅಂಗೀಕರಿಸಿದ್ದಾರೆ.

ಇದನ್ನೂ ಓದಿ: ಸಿಸೋಡಿಯಾ ಬಂಧನ: ಕೇಂದ್ರದ ವಿರುದ್ಧ ದೇಶಾದ್ಯಂತ ಪ್ರತಿಭಟನೆಗೆ ಎಎಪಿ ಕರೆ

ಸಿಸೋಡಿಯಾ ತಮ್ಮ ರಾಜೀನಾಮೆ ಪತ್ರದಲ್ಲಿ, ”8 ವರ್ಷಗಳ ಕಾಲ ಪ್ರಾಮಾಣಿಕವಾಗಿ ಕೆಲಸ ಮಾಡಿದ ನನ್ನ ವಿರುದ್ಧ ಭ್ರಷ್ಟಾಚಾರದ ಆರೋಪಗಳು ಬಂದಿರುವುದು ದುರದೃಷ್ಟಕರ. ನನ್ನ ವಿರುದ್ಧದ ಆರೋಪಗಳು ಸುಳ್ಳು ಮತ್ತು ಅರವಿಂದ್ ಕೇಜ್ರಿವಾಲ್ ಅವರ ಸತ್ಯದ ರಾಜಕಾರಣಕ್ಕೆ ಹೆದರುವ ಹೇಡಿಗಳು ಮತ್ತು ದುರ್ಬಲರು ನಮ್ಮ ವಿರುದ್ಧ ಪಿತೂರಿ ನಡೆಸಿದ್ದಾರೆ” ಎಂದು ಹೇಳಿದ್ದಾರೆ.

”ಅವರ ಗುರಿ ನಾನಲ್ಲ, ನೀವು (ಕೇಜ್ರಿವಾಲ್) ಏಕೆಂದರೆ, ಇಂದು ದೆಹಲಿಯ ಜನರು ಮತ್ತು ದೇಶದ ಇತರ ಜನರು ನಿಮ್ಮನ್ನು ದೇಶದ ದೂರದೃಷ್ಟಿಯುಳ್ಳ ನಾಯಕ ಎಂದು ನೋಡುತ್ತಿದ್ದಾರೆ” ಎಂದು ಸಿಸೋಡಿಯಾ ಹೇಳಿದ್ದಾರೆ

”ನನ್ನ ವಿರುದ್ಧ ಇನ್ನಷ್ಟು ಪ್ರಕರಣಗಳನ್ನು ದಾಖಲಿಸಲು ಸಿದ್ಧತೆ ನಡೆಸಲಾಗುತ್ತಿದೆ. ನಾನು ನಿಮ್ಮಿಂದ (ಕೇಜ್ರಿವಾಲ್) ದೂರವಾಗಿ ಪಕ್ಷ ತೊರೆಯಬೇಕು ಎಂದು ಪ್ರಯತ್ನಿಸಿದರು. ನಾನು ಅವರ ಮುಂದೆ ತಲೆಬಾಗದಿರುವುದಕ್ಕೆ ಇಂದು ಅವರು ನನ್ನನ್ನು ಬಂಧಿಸಿ ಜೈಲಿಗೆ ಹಾಕಿದ್ದಾರೆ” ಎಂದು ಕೇಜ್ರಿವಾಲ್‌ಗೆ ಸಿಸೋಡಿಯಾ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.

ನವೆಂಬರ್ 2021ರಲ್ಲಿ ಜಾರಿಗೆ ಬಂದ ದೆಹಲಿ ಸರ್ಕಾರದ ಹೊಸ ಅಬಕಾರಿ ನೀತಿಗೆ ಸಂಬಂಧಿಸಿದಂತೆ ಸಿಸೋಡಿಯಾ ಅವರನ್ನು ಬಂಧಿಸಲಾಗಿದೆ. ಹೊಸ ಅಬಕಾರಿ ನೀತಿಯಡಿಯಲ್ಲಿ 849 ಮದ್ಯದಂಗಡಿಗಳ ಪರವಾನಗಿಯನ್ನು ಖಾಸಗಿ ಸಂಸ್ಥೆಗಳಿಗೆ ಮುಕ್ತ ಬಿಡ್ಡಿಂಗ್ ಮೂಲಕ ನೀಡಲಾಯಿತು. ಈ ಹಿಂದೆ ನಾಲ್ಕು ಸರ್ಕಾರಿ ನಿಗಮಗಳು 475 ಮದ್ಯದಂಗಡಿಗಳನ್ನು ನಡೆಸುತ್ತಿದ್ದು, ಉಳಿದ 389 ಖಾಸಗಿ ಅಂಗಡಿಗಳಾಗಿದ್ದವು.

ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಅವರು, ಈ ಹೊಸ ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ, ಸಿಬಿಐ ತನಿಖೆಗೆ ಶಿಫಾರಸು ಮಾಡಿದರು. ಆ ನಂತರ ಜುಲೈ 30ರಂದು ಎಎಪಿ ನೇತೃತ್ವದ ಸರ್ಕಾರವು ನೀತಿಯನ್ನು ಹಿಂತೆಗೆದುಕೊಂಡಿತು.

”ಸಿಸೋಡಿಯಾ ಅವರು ಪ್ರಕರಣದಿಂದ ನುಣುಚಿಕೊಳ್ಳುವ ಪ್ರಯತ್ನ ಮಾಡಿದರು ಮತ್ತು ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷ್ಯಾಧಾರಗಳಿದ್ದರೂ ಅವರು ತನಿಖೆಗೆ ಸಹಕರಿಸಲಿಲ್ಲ ಹಾಗಾಗಿ ಅವರನ್ನು ಬಂಧಿಸಲಾಗಿದೆ” ಎಂದು ಸಿಬಿಐ ಹೇಳಿಕೊಂಡಿದೆ.

ಎಎಪಿ ನಾಯಕ ಸಿಸೋಡಿಯಾ ಅವರು ಮಂಗಳವಾರ ತಮ್ಮ ಬಂಧನವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿದ್ದರು. ಆದರೆ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಪಿ ಎಸ್ ನರಸಿಂಹ ಅವರನ್ನೊಳಗೊಂಡ ಪೀಠವು ಸಿಸೋಡಿಯಾ ಅವರ ಮನವಿಯನ್ನು ಆಲಿಸಲು ನಿರಾಕರಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...