Homeಮುಖಪುಟನೀವೀಗ ಕಾಶ್ಮೀರಿ ಸುಂದರಿಯರನ್ನು ಮದುವೆಯಾಗಬಹದು: ಬಿಜೆಪಿ ಶಾಸಕನ ವಿವಾದಾತ್ಮಕ ಹೇಳಿಕೆ

ನೀವೀಗ ಕಾಶ್ಮೀರಿ ಸುಂದರಿಯರನ್ನು ಮದುವೆಯಾಗಬಹದು: ಬಿಜೆಪಿ ಶಾಸಕನ ವಿವಾದಾತ್ಮಕ ಹೇಳಿಕೆ

- Advertisement -
- Advertisement -

370 ನೇ ವಿಧಿ ರದ್ಧತಿ ಮೂಲಕ ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಕೊನೆಗಾಣಿಸಿರುವುದರಿಂದ ಇನ್ನು ಮುಂದೆ ನಮ್ಮ ಪಕ್ಷದ ಕಾರ್ಯಕರ್ತರು ಕಾಶ್ಮೀರದ ಸುಂದರ ಮಹಿಳೆಯರನ್ನು ಮದುವೆಯಾಗಬಹುದು. ಹೀಗೆಂದು ಹೇಳುವ ಮೂಲಕ ಕೇಂದ್ರ ಸರ್ಕಾರದ ನಡೆಯ ಉಪಯೋಗಗಳನ್ನು ತಿಳಿಸಿರುವುದು ಯಾವುದೋ ಸಾಮಾನ್ಯ ಜನರಲ್ಲ, ಬದಲಿಗೆ ಉತ್ತರ ಪ್ರದೇಶದ ಬಿಜೆಪಿ ಶಾಸಕ ವಿಕ್ರಮ್ ಸೈನಿ..

ಕೇಂದ್ರದ ಈ ಕ್ರಮಗಳ ಯೋಗ್ಯತೆಯನ್ನು ವಿವರಿಸುವ ಶಾಸಕರೊಬ್ಬರು ಈ ಭಯಾನಕ ಅಂಶವನ್ನು ಹೊರಹಾಕಿದ್ದಾರೆ. ಮುಂದುವರೆದು ಅವರು ಸರ್ಕಾರದ ಕಾಶ್ಮೀರದ ನಿರ್ಧಾರದಿಂದ, ಬಿಜೆಪಿ ಕಾರ್ಯಕರ್ತರು ಈಗ ಅಲ್ಲಿಗೆ ಹೋಗಬಹುದು, ಜಮೀನುಗಳನ್ನು ಖರೀದಿಸಬಹುದು ಮತ್ತು ಮದುವೆಯಾಗಬಹುದು ಎಂದು ವಿಕ್ರಮ್ ಸೈನಿ ಮಂಗಳವಾರ ಮುಜಫರ್ ನಗರದಲ್ಲಿ ನಡೆದ ಸಮಾರಂಭದಲ್ಲಿ ಹೇಳಿದ್ದಾರೆ.

“ಇದರಿಂದ ನಮ್ಮ ಪಕ್ಷದ ಕಾರ್ಯಕರ್ತರು ತುಂಬಾ ಉತ್ಸುಕರಾಗಿದ್ದಾರೆ ಇನ್ನೂ ಮದುವೆಯಾಗದಿರುವವರು ಅಲ್ಲಿ ಮದುವೆಯಾಗಬಹುದು. ಈಗ ಯಾವುದೇ ಸಮಸ್ಯೆ ಇಲ್ಲ. ಈ ಹಿಂದೆ ಅಲ್ಲಿ ಮಹಿಳೆಯರ ಮೇಲೆ ಸಾಕಷ್ಟು ದೌರ್ಜನ್ಯಗಳು ನಡೆದಿವೆ. ಕಾಶ್ಮೀರದ ಮಹಿಳೆಯೊಬ್ಬರು ಉತ್ತರ ಪ್ರದೇಶದ ಪುರುಷನನ್ನು ಮದುವೆಯಾದರೆ, ಅವರ ಪೌರತ್ವ ರದ್ದುಪಡಿಸಲಾಗಿದೆ. ಭಾರತ ಮತ್ತು ಕಾಶ್ಮೀರಕ್ಕೆ ವಿಭಿನ್ನ ಪೌರತ್ವವಿತ್ತು” ಎಂದು ಶಾಸಕರು ಹೇಳಿದ್ದಾರೆ.

“ಮುಸ್ಲಿಂ ಕಾರ್ಯಕರ್ತರು ಸಹ ಸಂಭ್ರಮ ಆಚರಿಸಬೇಕು. ಅವರು ಸುಂದರ ಕಾಶ್ಮೀರಿ ಹುಡುಗಿಯರನ್ನು ಮದುವೆಯಾಗಬಹುದು. ಹಾಗಾಗಿ  ಹಿಂದೂಗಳಾಗಿರಲಿ ಅಥವಾ ಮುಸ್ಲಿಮರಾಗಿರಲಿ ಸಂಭ್ರಮ ಆಚರಿಸಬೇಕು. ಇದು ಇಡೀ ದೇಶ ಸಂಭ್ರಮಪಡಬೇಕಾದ ವಿಷಯ.” ಎಂದಿದ್ದಾರೆ.

ಈ ಸುದ್ದಿ ಎಲ್ಲೆಡೆ ವೈರಲ್ ಆದ ಕೂಡಲೇ ಪಕ್ಷದಿಂದಲೇ ಆಕ್ಷೇಪಣೆಗಳು ಕೇಳಿಬಂದಿವೆ. ನಂತರ ಅವರ ಈ ಹೇಳಿಕೆಯ ಬಗ್ಗೆ ಕೇಳಿದಾಗ, ಪಶ್ಚಾತ್ತಾಪಪಡದ ಶಾಸಕರು, ನಾನು ಹೇಳಿದ್ದರಲ್ಲಿ ಆಕ್ಷೇಪಾರ್ಹ ಏನೂ ಇಲ್ಲ ಎಂದು ಹೇಳಿದ್ದಾರೆ.

“ಈಗ ಯಾರಾದರೂ ಯಾವುದೇ ಸಮಸ್ಯೆಯಿಲ್ಲದೆ ಕಾಶ್ಮೀರಿ ಹುಡುಗಿಯನ್ನು ಮದುವೆಯಾಗಬಹುದು. ಎಂದು ನಾನು ಹೇಳಿದ್ದು ಅಷ್ಟೆ ಮತ್ತು ಇದು ಸತ್ಯ. ಇದು ಕಾಶ್ಮೀರದ ಜನರಿಗೆ ಸ್ವಾತಂತ್ರ್ಯ. ಅದಕ್ಕಾಗಿಯೇ ನಾವು ಈ ಕಾರ್ಯಕ್ರಮವನ್ನು ಆಯೋಜಿಸಿದ್ದೇವೆ. ಈಗ ಕಾಶ್ಮೀರಿಗಳು ಸ್ವಾತಂತ್ರ್ಯವನ್ನು ಪಡೆದಿದ್ದಾರೆ. “ಮೋದಿಜಿ ನಮ್ಮ ಕನಸನ್ನು ಈಡೇರಿಸಿದ್ದಾರೆ” ಎಂದು ವಿಕ್ರಮ್ ಸೈನಿ ಪ್ರತಿಕ್ರಿಯಿಸಿದ್ದಾರೆ.

ಉತ್ತರ ಪ್ರದೇಶದ ಖತೌಲಿ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ಸೈನಿ, ಈ ಹಿಂದೆಯೂ, ಭಾರತದಲ್ಲಿ ಅಸುರಕ್ಷಿತರೆಂದು ಭಾವಿಸಿದವರಿಗೆ “ಬಾಂಬ್” ಹಾಕುವ ಬೆದರಿಕೆ ಹಾಕುವ ಮೂಲಕ ಕುಖ್ಯಾತಿಯನ್ನು ಗಳಿಸಿದ್ದರು.

“ಈ ದೇಶದಲ್ಲಿ ಅಸುರಕ್ಷಿತರಾದವರು ದೇಶ ವಿರೋಧಿಗಳು, ಅವರು ಇಲ್ಲಿ ವಾಸಿಸಲು ಅರ್ಹರಲ್ಲ. ನನಗೆ ಒಂದು ಸಚಿವಾಲಯವನ್ನು ನೀಡಿ ಮತ್ತು ನಾನು ಅವರಿಗೆ ಬಾಂಬ್‌ಗಳನ್ನು ಕಟ್ಟಿ ಅವುಗಳನ್ನು ಸ್ಫೋಟಿಸುತ್ತೇನೆ” ಎಂದು ಜನವರಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅವರು ಹೇಳಿ ವಿವಾದಕ್ಕೀಡಾಗಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...