Homeಮುಖಪುಟನೀವೀಗ ಕಾಶ್ಮೀರಿ ಸುಂದರಿಯರನ್ನು ಮದುವೆಯಾಗಬಹದು: ಬಿಜೆಪಿ ಶಾಸಕನ ವಿವಾದಾತ್ಮಕ ಹೇಳಿಕೆ

ನೀವೀಗ ಕಾಶ್ಮೀರಿ ಸುಂದರಿಯರನ್ನು ಮದುವೆಯಾಗಬಹದು: ಬಿಜೆಪಿ ಶಾಸಕನ ವಿವಾದಾತ್ಮಕ ಹೇಳಿಕೆ

- Advertisement -
- Advertisement -

370 ನೇ ವಿಧಿ ರದ್ಧತಿ ಮೂಲಕ ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಕೊನೆಗಾಣಿಸಿರುವುದರಿಂದ ಇನ್ನು ಮುಂದೆ ನಮ್ಮ ಪಕ್ಷದ ಕಾರ್ಯಕರ್ತರು ಕಾಶ್ಮೀರದ ಸುಂದರ ಮಹಿಳೆಯರನ್ನು ಮದುವೆಯಾಗಬಹುದು. ಹೀಗೆಂದು ಹೇಳುವ ಮೂಲಕ ಕೇಂದ್ರ ಸರ್ಕಾರದ ನಡೆಯ ಉಪಯೋಗಗಳನ್ನು ತಿಳಿಸಿರುವುದು ಯಾವುದೋ ಸಾಮಾನ್ಯ ಜನರಲ್ಲ, ಬದಲಿಗೆ ಉತ್ತರ ಪ್ರದೇಶದ ಬಿಜೆಪಿ ಶಾಸಕ ವಿಕ್ರಮ್ ಸೈನಿ..

ಕೇಂದ್ರದ ಈ ಕ್ರಮಗಳ ಯೋಗ್ಯತೆಯನ್ನು ವಿವರಿಸುವ ಶಾಸಕರೊಬ್ಬರು ಈ ಭಯಾನಕ ಅಂಶವನ್ನು ಹೊರಹಾಕಿದ್ದಾರೆ. ಮುಂದುವರೆದು ಅವರು ಸರ್ಕಾರದ ಕಾಶ್ಮೀರದ ನಿರ್ಧಾರದಿಂದ, ಬಿಜೆಪಿ ಕಾರ್ಯಕರ್ತರು ಈಗ ಅಲ್ಲಿಗೆ ಹೋಗಬಹುದು, ಜಮೀನುಗಳನ್ನು ಖರೀದಿಸಬಹುದು ಮತ್ತು ಮದುವೆಯಾಗಬಹುದು ಎಂದು ವಿಕ್ರಮ್ ಸೈನಿ ಮಂಗಳವಾರ ಮುಜಫರ್ ನಗರದಲ್ಲಿ ನಡೆದ ಸಮಾರಂಭದಲ್ಲಿ ಹೇಳಿದ್ದಾರೆ.

“ಇದರಿಂದ ನಮ್ಮ ಪಕ್ಷದ ಕಾರ್ಯಕರ್ತರು ತುಂಬಾ ಉತ್ಸುಕರಾಗಿದ್ದಾರೆ ಇನ್ನೂ ಮದುವೆಯಾಗದಿರುವವರು ಅಲ್ಲಿ ಮದುವೆಯಾಗಬಹುದು. ಈಗ ಯಾವುದೇ ಸಮಸ್ಯೆ ಇಲ್ಲ. ಈ ಹಿಂದೆ ಅಲ್ಲಿ ಮಹಿಳೆಯರ ಮೇಲೆ ಸಾಕಷ್ಟು ದೌರ್ಜನ್ಯಗಳು ನಡೆದಿವೆ. ಕಾಶ್ಮೀರದ ಮಹಿಳೆಯೊಬ್ಬರು ಉತ್ತರ ಪ್ರದೇಶದ ಪುರುಷನನ್ನು ಮದುವೆಯಾದರೆ, ಅವರ ಪೌರತ್ವ ರದ್ದುಪಡಿಸಲಾಗಿದೆ. ಭಾರತ ಮತ್ತು ಕಾಶ್ಮೀರಕ್ಕೆ ವಿಭಿನ್ನ ಪೌರತ್ವವಿತ್ತು” ಎಂದು ಶಾಸಕರು ಹೇಳಿದ್ದಾರೆ.

“ಮುಸ್ಲಿಂ ಕಾರ್ಯಕರ್ತರು ಸಹ ಸಂಭ್ರಮ ಆಚರಿಸಬೇಕು. ಅವರು ಸುಂದರ ಕಾಶ್ಮೀರಿ ಹುಡುಗಿಯರನ್ನು ಮದುವೆಯಾಗಬಹುದು. ಹಾಗಾಗಿ  ಹಿಂದೂಗಳಾಗಿರಲಿ ಅಥವಾ ಮುಸ್ಲಿಮರಾಗಿರಲಿ ಸಂಭ್ರಮ ಆಚರಿಸಬೇಕು. ಇದು ಇಡೀ ದೇಶ ಸಂಭ್ರಮಪಡಬೇಕಾದ ವಿಷಯ.” ಎಂದಿದ್ದಾರೆ.

ಈ ಸುದ್ದಿ ಎಲ್ಲೆಡೆ ವೈರಲ್ ಆದ ಕೂಡಲೇ ಪಕ್ಷದಿಂದಲೇ ಆಕ್ಷೇಪಣೆಗಳು ಕೇಳಿಬಂದಿವೆ. ನಂತರ ಅವರ ಈ ಹೇಳಿಕೆಯ ಬಗ್ಗೆ ಕೇಳಿದಾಗ, ಪಶ್ಚಾತ್ತಾಪಪಡದ ಶಾಸಕರು, ನಾನು ಹೇಳಿದ್ದರಲ್ಲಿ ಆಕ್ಷೇಪಾರ್ಹ ಏನೂ ಇಲ್ಲ ಎಂದು ಹೇಳಿದ್ದಾರೆ.

“ಈಗ ಯಾರಾದರೂ ಯಾವುದೇ ಸಮಸ್ಯೆಯಿಲ್ಲದೆ ಕಾಶ್ಮೀರಿ ಹುಡುಗಿಯನ್ನು ಮದುವೆಯಾಗಬಹುದು. ಎಂದು ನಾನು ಹೇಳಿದ್ದು ಅಷ್ಟೆ ಮತ್ತು ಇದು ಸತ್ಯ. ಇದು ಕಾಶ್ಮೀರದ ಜನರಿಗೆ ಸ್ವಾತಂತ್ರ್ಯ. ಅದಕ್ಕಾಗಿಯೇ ನಾವು ಈ ಕಾರ್ಯಕ್ರಮವನ್ನು ಆಯೋಜಿಸಿದ್ದೇವೆ. ಈಗ ಕಾಶ್ಮೀರಿಗಳು ಸ್ವಾತಂತ್ರ್ಯವನ್ನು ಪಡೆದಿದ್ದಾರೆ. “ಮೋದಿಜಿ ನಮ್ಮ ಕನಸನ್ನು ಈಡೇರಿಸಿದ್ದಾರೆ” ಎಂದು ವಿಕ್ರಮ್ ಸೈನಿ ಪ್ರತಿಕ್ರಿಯಿಸಿದ್ದಾರೆ.

ಉತ್ತರ ಪ್ರದೇಶದ ಖತೌಲಿ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ಸೈನಿ, ಈ ಹಿಂದೆಯೂ, ಭಾರತದಲ್ಲಿ ಅಸುರಕ್ಷಿತರೆಂದು ಭಾವಿಸಿದವರಿಗೆ “ಬಾಂಬ್” ಹಾಕುವ ಬೆದರಿಕೆ ಹಾಕುವ ಮೂಲಕ ಕುಖ್ಯಾತಿಯನ್ನು ಗಳಿಸಿದ್ದರು.

“ಈ ದೇಶದಲ್ಲಿ ಅಸುರಕ್ಷಿತರಾದವರು ದೇಶ ವಿರೋಧಿಗಳು, ಅವರು ಇಲ್ಲಿ ವಾಸಿಸಲು ಅರ್ಹರಲ್ಲ. ನನಗೆ ಒಂದು ಸಚಿವಾಲಯವನ್ನು ನೀಡಿ ಮತ್ತು ನಾನು ಅವರಿಗೆ ಬಾಂಬ್‌ಗಳನ್ನು ಕಟ್ಟಿ ಅವುಗಳನ್ನು ಸ್ಫೋಟಿಸುತ್ತೇನೆ” ಎಂದು ಜನವರಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅವರು ಹೇಳಿ ವಿವಾದಕ್ಕೀಡಾಗಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...