Homeಮುಖಪುಟನೀವೀಗ ಕಾಶ್ಮೀರಿ ಸುಂದರಿಯರನ್ನು ಮದುವೆಯಾಗಬಹದು: ಬಿಜೆಪಿ ಶಾಸಕನ ವಿವಾದಾತ್ಮಕ ಹೇಳಿಕೆ

ನೀವೀಗ ಕಾಶ್ಮೀರಿ ಸುಂದರಿಯರನ್ನು ಮದುವೆಯಾಗಬಹದು: ಬಿಜೆಪಿ ಶಾಸಕನ ವಿವಾದಾತ್ಮಕ ಹೇಳಿಕೆ

- Advertisement -
- Advertisement -

370 ನೇ ವಿಧಿ ರದ್ಧತಿ ಮೂಲಕ ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಕೊನೆಗಾಣಿಸಿರುವುದರಿಂದ ಇನ್ನು ಮುಂದೆ ನಮ್ಮ ಪಕ್ಷದ ಕಾರ್ಯಕರ್ತರು ಕಾಶ್ಮೀರದ ಸುಂದರ ಮಹಿಳೆಯರನ್ನು ಮದುವೆಯಾಗಬಹುದು. ಹೀಗೆಂದು ಹೇಳುವ ಮೂಲಕ ಕೇಂದ್ರ ಸರ್ಕಾರದ ನಡೆಯ ಉಪಯೋಗಗಳನ್ನು ತಿಳಿಸಿರುವುದು ಯಾವುದೋ ಸಾಮಾನ್ಯ ಜನರಲ್ಲ, ಬದಲಿಗೆ ಉತ್ತರ ಪ್ರದೇಶದ ಬಿಜೆಪಿ ಶಾಸಕ ವಿಕ್ರಮ್ ಸೈನಿ..

ಕೇಂದ್ರದ ಈ ಕ್ರಮಗಳ ಯೋಗ್ಯತೆಯನ್ನು ವಿವರಿಸುವ ಶಾಸಕರೊಬ್ಬರು ಈ ಭಯಾನಕ ಅಂಶವನ್ನು ಹೊರಹಾಕಿದ್ದಾರೆ. ಮುಂದುವರೆದು ಅವರು ಸರ್ಕಾರದ ಕಾಶ್ಮೀರದ ನಿರ್ಧಾರದಿಂದ, ಬಿಜೆಪಿ ಕಾರ್ಯಕರ್ತರು ಈಗ ಅಲ್ಲಿಗೆ ಹೋಗಬಹುದು, ಜಮೀನುಗಳನ್ನು ಖರೀದಿಸಬಹುದು ಮತ್ತು ಮದುವೆಯಾಗಬಹುದು ಎಂದು ವಿಕ್ರಮ್ ಸೈನಿ ಮಂಗಳವಾರ ಮುಜಫರ್ ನಗರದಲ್ಲಿ ನಡೆದ ಸಮಾರಂಭದಲ್ಲಿ ಹೇಳಿದ್ದಾರೆ.

“ಇದರಿಂದ ನಮ್ಮ ಪಕ್ಷದ ಕಾರ್ಯಕರ್ತರು ತುಂಬಾ ಉತ್ಸುಕರಾಗಿದ್ದಾರೆ ಇನ್ನೂ ಮದುವೆಯಾಗದಿರುವವರು ಅಲ್ಲಿ ಮದುವೆಯಾಗಬಹುದು. ಈಗ ಯಾವುದೇ ಸಮಸ್ಯೆ ಇಲ್ಲ. ಈ ಹಿಂದೆ ಅಲ್ಲಿ ಮಹಿಳೆಯರ ಮೇಲೆ ಸಾಕಷ್ಟು ದೌರ್ಜನ್ಯಗಳು ನಡೆದಿವೆ. ಕಾಶ್ಮೀರದ ಮಹಿಳೆಯೊಬ್ಬರು ಉತ್ತರ ಪ್ರದೇಶದ ಪುರುಷನನ್ನು ಮದುವೆಯಾದರೆ, ಅವರ ಪೌರತ್ವ ರದ್ದುಪಡಿಸಲಾಗಿದೆ. ಭಾರತ ಮತ್ತು ಕಾಶ್ಮೀರಕ್ಕೆ ವಿಭಿನ್ನ ಪೌರತ್ವವಿತ್ತು” ಎಂದು ಶಾಸಕರು ಹೇಳಿದ್ದಾರೆ.

“ಮುಸ್ಲಿಂ ಕಾರ್ಯಕರ್ತರು ಸಹ ಸಂಭ್ರಮ ಆಚರಿಸಬೇಕು. ಅವರು ಸುಂದರ ಕಾಶ್ಮೀರಿ ಹುಡುಗಿಯರನ್ನು ಮದುವೆಯಾಗಬಹುದು. ಹಾಗಾಗಿ  ಹಿಂದೂಗಳಾಗಿರಲಿ ಅಥವಾ ಮುಸ್ಲಿಮರಾಗಿರಲಿ ಸಂಭ್ರಮ ಆಚರಿಸಬೇಕು. ಇದು ಇಡೀ ದೇಶ ಸಂಭ್ರಮಪಡಬೇಕಾದ ವಿಷಯ.” ಎಂದಿದ್ದಾರೆ.

ಈ ಸುದ್ದಿ ಎಲ್ಲೆಡೆ ವೈರಲ್ ಆದ ಕೂಡಲೇ ಪಕ್ಷದಿಂದಲೇ ಆಕ್ಷೇಪಣೆಗಳು ಕೇಳಿಬಂದಿವೆ. ನಂತರ ಅವರ ಈ ಹೇಳಿಕೆಯ ಬಗ್ಗೆ ಕೇಳಿದಾಗ, ಪಶ್ಚಾತ್ತಾಪಪಡದ ಶಾಸಕರು, ನಾನು ಹೇಳಿದ್ದರಲ್ಲಿ ಆಕ್ಷೇಪಾರ್ಹ ಏನೂ ಇಲ್ಲ ಎಂದು ಹೇಳಿದ್ದಾರೆ.

“ಈಗ ಯಾರಾದರೂ ಯಾವುದೇ ಸಮಸ್ಯೆಯಿಲ್ಲದೆ ಕಾಶ್ಮೀರಿ ಹುಡುಗಿಯನ್ನು ಮದುವೆಯಾಗಬಹುದು. ಎಂದು ನಾನು ಹೇಳಿದ್ದು ಅಷ್ಟೆ ಮತ್ತು ಇದು ಸತ್ಯ. ಇದು ಕಾಶ್ಮೀರದ ಜನರಿಗೆ ಸ್ವಾತಂತ್ರ್ಯ. ಅದಕ್ಕಾಗಿಯೇ ನಾವು ಈ ಕಾರ್ಯಕ್ರಮವನ್ನು ಆಯೋಜಿಸಿದ್ದೇವೆ. ಈಗ ಕಾಶ್ಮೀರಿಗಳು ಸ್ವಾತಂತ್ರ್ಯವನ್ನು ಪಡೆದಿದ್ದಾರೆ. “ಮೋದಿಜಿ ನಮ್ಮ ಕನಸನ್ನು ಈಡೇರಿಸಿದ್ದಾರೆ” ಎಂದು ವಿಕ್ರಮ್ ಸೈನಿ ಪ್ರತಿಕ್ರಿಯಿಸಿದ್ದಾರೆ.

ಉತ್ತರ ಪ್ರದೇಶದ ಖತೌಲಿ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ಸೈನಿ, ಈ ಹಿಂದೆಯೂ, ಭಾರತದಲ್ಲಿ ಅಸುರಕ್ಷಿತರೆಂದು ಭಾವಿಸಿದವರಿಗೆ “ಬಾಂಬ್” ಹಾಕುವ ಬೆದರಿಕೆ ಹಾಕುವ ಮೂಲಕ ಕುಖ್ಯಾತಿಯನ್ನು ಗಳಿಸಿದ್ದರು.

“ಈ ದೇಶದಲ್ಲಿ ಅಸುರಕ್ಷಿತರಾದವರು ದೇಶ ವಿರೋಧಿಗಳು, ಅವರು ಇಲ್ಲಿ ವಾಸಿಸಲು ಅರ್ಹರಲ್ಲ. ನನಗೆ ಒಂದು ಸಚಿವಾಲಯವನ್ನು ನೀಡಿ ಮತ್ತು ನಾನು ಅವರಿಗೆ ಬಾಂಬ್‌ಗಳನ್ನು ಕಟ್ಟಿ ಅವುಗಳನ್ನು ಸ್ಫೋಟಿಸುತ್ತೇನೆ” ಎಂದು ಜನವರಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅವರು ಹೇಳಿ ವಿವಾದಕ್ಕೀಡಾಗಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...