Homeಮುಖಪುಟನೀವೀಗ ಕಾಶ್ಮೀರಿ ಸುಂದರಿಯರನ್ನು ಮದುವೆಯಾಗಬಹದು: ಬಿಜೆಪಿ ಶಾಸಕನ ವಿವಾದಾತ್ಮಕ ಹೇಳಿಕೆ

ನೀವೀಗ ಕಾಶ್ಮೀರಿ ಸುಂದರಿಯರನ್ನು ಮದುವೆಯಾಗಬಹದು: ಬಿಜೆಪಿ ಶಾಸಕನ ವಿವಾದಾತ್ಮಕ ಹೇಳಿಕೆ

- Advertisement -
- Advertisement -

370 ನೇ ವಿಧಿ ರದ್ಧತಿ ಮೂಲಕ ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಕೊನೆಗಾಣಿಸಿರುವುದರಿಂದ ಇನ್ನು ಮುಂದೆ ನಮ್ಮ ಪಕ್ಷದ ಕಾರ್ಯಕರ್ತರು ಕಾಶ್ಮೀರದ ಸುಂದರ ಮಹಿಳೆಯರನ್ನು ಮದುವೆಯಾಗಬಹುದು. ಹೀಗೆಂದು ಹೇಳುವ ಮೂಲಕ ಕೇಂದ್ರ ಸರ್ಕಾರದ ನಡೆಯ ಉಪಯೋಗಗಳನ್ನು ತಿಳಿಸಿರುವುದು ಯಾವುದೋ ಸಾಮಾನ್ಯ ಜನರಲ್ಲ, ಬದಲಿಗೆ ಉತ್ತರ ಪ್ರದೇಶದ ಬಿಜೆಪಿ ಶಾಸಕ ವಿಕ್ರಮ್ ಸೈನಿ..

ಕೇಂದ್ರದ ಈ ಕ್ರಮಗಳ ಯೋಗ್ಯತೆಯನ್ನು ವಿವರಿಸುವ ಶಾಸಕರೊಬ್ಬರು ಈ ಭಯಾನಕ ಅಂಶವನ್ನು ಹೊರಹಾಕಿದ್ದಾರೆ. ಮುಂದುವರೆದು ಅವರು ಸರ್ಕಾರದ ಕಾಶ್ಮೀರದ ನಿರ್ಧಾರದಿಂದ, ಬಿಜೆಪಿ ಕಾರ್ಯಕರ್ತರು ಈಗ ಅಲ್ಲಿಗೆ ಹೋಗಬಹುದು, ಜಮೀನುಗಳನ್ನು ಖರೀದಿಸಬಹುದು ಮತ್ತು ಮದುವೆಯಾಗಬಹುದು ಎಂದು ವಿಕ್ರಮ್ ಸೈನಿ ಮಂಗಳವಾರ ಮುಜಫರ್ ನಗರದಲ್ಲಿ ನಡೆದ ಸಮಾರಂಭದಲ್ಲಿ ಹೇಳಿದ್ದಾರೆ.

“ಇದರಿಂದ ನಮ್ಮ ಪಕ್ಷದ ಕಾರ್ಯಕರ್ತರು ತುಂಬಾ ಉತ್ಸುಕರಾಗಿದ್ದಾರೆ ಇನ್ನೂ ಮದುವೆಯಾಗದಿರುವವರು ಅಲ್ಲಿ ಮದುವೆಯಾಗಬಹುದು. ಈಗ ಯಾವುದೇ ಸಮಸ್ಯೆ ಇಲ್ಲ. ಈ ಹಿಂದೆ ಅಲ್ಲಿ ಮಹಿಳೆಯರ ಮೇಲೆ ಸಾಕಷ್ಟು ದೌರ್ಜನ್ಯಗಳು ನಡೆದಿವೆ. ಕಾಶ್ಮೀರದ ಮಹಿಳೆಯೊಬ್ಬರು ಉತ್ತರ ಪ್ರದೇಶದ ಪುರುಷನನ್ನು ಮದುವೆಯಾದರೆ, ಅವರ ಪೌರತ್ವ ರದ್ದುಪಡಿಸಲಾಗಿದೆ. ಭಾರತ ಮತ್ತು ಕಾಶ್ಮೀರಕ್ಕೆ ವಿಭಿನ್ನ ಪೌರತ್ವವಿತ್ತು” ಎಂದು ಶಾಸಕರು ಹೇಳಿದ್ದಾರೆ.

“ಮುಸ್ಲಿಂ ಕಾರ್ಯಕರ್ತರು ಸಹ ಸಂಭ್ರಮ ಆಚರಿಸಬೇಕು. ಅವರು ಸುಂದರ ಕಾಶ್ಮೀರಿ ಹುಡುಗಿಯರನ್ನು ಮದುವೆಯಾಗಬಹುದು. ಹಾಗಾಗಿ  ಹಿಂದೂಗಳಾಗಿರಲಿ ಅಥವಾ ಮುಸ್ಲಿಮರಾಗಿರಲಿ ಸಂಭ್ರಮ ಆಚರಿಸಬೇಕು. ಇದು ಇಡೀ ದೇಶ ಸಂಭ್ರಮಪಡಬೇಕಾದ ವಿಷಯ.” ಎಂದಿದ್ದಾರೆ.

ಈ ಸುದ್ದಿ ಎಲ್ಲೆಡೆ ವೈರಲ್ ಆದ ಕೂಡಲೇ ಪಕ್ಷದಿಂದಲೇ ಆಕ್ಷೇಪಣೆಗಳು ಕೇಳಿಬಂದಿವೆ. ನಂತರ ಅವರ ಈ ಹೇಳಿಕೆಯ ಬಗ್ಗೆ ಕೇಳಿದಾಗ, ಪಶ್ಚಾತ್ತಾಪಪಡದ ಶಾಸಕರು, ನಾನು ಹೇಳಿದ್ದರಲ್ಲಿ ಆಕ್ಷೇಪಾರ್ಹ ಏನೂ ಇಲ್ಲ ಎಂದು ಹೇಳಿದ್ದಾರೆ.

“ಈಗ ಯಾರಾದರೂ ಯಾವುದೇ ಸಮಸ್ಯೆಯಿಲ್ಲದೆ ಕಾಶ್ಮೀರಿ ಹುಡುಗಿಯನ್ನು ಮದುವೆಯಾಗಬಹುದು. ಎಂದು ನಾನು ಹೇಳಿದ್ದು ಅಷ್ಟೆ ಮತ್ತು ಇದು ಸತ್ಯ. ಇದು ಕಾಶ್ಮೀರದ ಜನರಿಗೆ ಸ್ವಾತಂತ್ರ್ಯ. ಅದಕ್ಕಾಗಿಯೇ ನಾವು ಈ ಕಾರ್ಯಕ್ರಮವನ್ನು ಆಯೋಜಿಸಿದ್ದೇವೆ. ಈಗ ಕಾಶ್ಮೀರಿಗಳು ಸ್ವಾತಂತ್ರ್ಯವನ್ನು ಪಡೆದಿದ್ದಾರೆ. “ಮೋದಿಜಿ ನಮ್ಮ ಕನಸನ್ನು ಈಡೇರಿಸಿದ್ದಾರೆ” ಎಂದು ವಿಕ್ರಮ್ ಸೈನಿ ಪ್ರತಿಕ್ರಿಯಿಸಿದ್ದಾರೆ.

ಉತ್ತರ ಪ್ರದೇಶದ ಖತೌಲಿ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ಸೈನಿ, ಈ ಹಿಂದೆಯೂ, ಭಾರತದಲ್ಲಿ ಅಸುರಕ್ಷಿತರೆಂದು ಭಾವಿಸಿದವರಿಗೆ “ಬಾಂಬ್” ಹಾಕುವ ಬೆದರಿಕೆ ಹಾಕುವ ಮೂಲಕ ಕುಖ್ಯಾತಿಯನ್ನು ಗಳಿಸಿದ್ದರು.

“ಈ ದೇಶದಲ್ಲಿ ಅಸುರಕ್ಷಿತರಾದವರು ದೇಶ ವಿರೋಧಿಗಳು, ಅವರು ಇಲ್ಲಿ ವಾಸಿಸಲು ಅರ್ಹರಲ್ಲ. ನನಗೆ ಒಂದು ಸಚಿವಾಲಯವನ್ನು ನೀಡಿ ಮತ್ತು ನಾನು ಅವರಿಗೆ ಬಾಂಬ್‌ಗಳನ್ನು ಕಟ್ಟಿ ಅವುಗಳನ್ನು ಸ್ಫೋಟಿಸುತ್ತೇನೆ” ಎಂದು ಜನವರಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅವರು ಹೇಳಿ ವಿವಾದಕ್ಕೀಡಾಗಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...