Homeಮುಖಪುಟನೀವೀಗ ಕಾಶ್ಮೀರಿ ಸುಂದರಿಯರನ್ನು ಮದುವೆಯಾಗಬಹದು: ಬಿಜೆಪಿ ಶಾಸಕನ ವಿವಾದಾತ್ಮಕ ಹೇಳಿಕೆ

ನೀವೀಗ ಕಾಶ್ಮೀರಿ ಸುಂದರಿಯರನ್ನು ಮದುವೆಯಾಗಬಹದು: ಬಿಜೆಪಿ ಶಾಸಕನ ವಿವಾದಾತ್ಮಕ ಹೇಳಿಕೆ

- Advertisement -
- Advertisement -

370 ನೇ ವಿಧಿ ರದ್ಧತಿ ಮೂಲಕ ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಕೊನೆಗಾಣಿಸಿರುವುದರಿಂದ ಇನ್ನು ಮುಂದೆ ನಮ್ಮ ಪಕ್ಷದ ಕಾರ್ಯಕರ್ತರು ಕಾಶ್ಮೀರದ ಸುಂದರ ಮಹಿಳೆಯರನ್ನು ಮದುವೆಯಾಗಬಹುದು. ಹೀಗೆಂದು ಹೇಳುವ ಮೂಲಕ ಕೇಂದ್ರ ಸರ್ಕಾರದ ನಡೆಯ ಉಪಯೋಗಗಳನ್ನು ತಿಳಿಸಿರುವುದು ಯಾವುದೋ ಸಾಮಾನ್ಯ ಜನರಲ್ಲ, ಬದಲಿಗೆ ಉತ್ತರ ಪ್ರದೇಶದ ಬಿಜೆಪಿ ಶಾಸಕ ವಿಕ್ರಮ್ ಸೈನಿ..

ಕೇಂದ್ರದ ಈ ಕ್ರಮಗಳ ಯೋಗ್ಯತೆಯನ್ನು ವಿವರಿಸುವ ಶಾಸಕರೊಬ್ಬರು ಈ ಭಯಾನಕ ಅಂಶವನ್ನು ಹೊರಹಾಕಿದ್ದಾರೆ. ಮುಂದುವರೆದು ಅವರು ಸರ್ಕಾರದ ಕಾಶ್ಮೀರದ ನಿರ್ಧಾರದಿಂದ, ಬಿಜೆಪಿ ಕಾರ್ಯಕರ್ತರು ಈಗ ಅಲ್ಲಿಗೆ ಹೋಗಬಹುದು, ಜಮೀನುಗಳನ್ನು ಖರೀದಿಸಬಹುದು ಮತ್ತು ಮದುವೆಯಾಗಬಹುದು ಎಂದು ವಿಕ್ರಮ್ ಸೈನಿ ಮಂಗಳವಾರ ಮುಜಫರ್ ನಗರದಲ್ಲಿ ನಡೆದ ಸಮಾರಂಭದಲ್ಲಿ ಹೇಳಿದ್ದಾರೆ.

“ಇದರಿಂದ ನಮ್ಮ ಪಕ್ಷದ ಕಾರ್ಯಕರ್ತರು ತುಂಬಾ ಉತ್ಸುಕರಾಗಿದ್ದಾರೆ ಇನ್ನೂ ಮದುವೆಯಾಗದಿರುವವರು ಅಲ್ಲಿ ಮದುವೆಯಾಗಬಹುದು. ಈಗ ಯಾವುದೇ ಸಮಸ್ಯೆ ಇಲ್ಲ. ಈ ಹಿಂದೆ ಅಲ್ಲಿ ಮಹಿಳೆಯರ ಮೇಲೆ ಸಾಕಷ್ಟು ದೌರ್ಜನ್ಯಗಳು ನಡೆದಿವೆ. ಕಾಶ್ಮೀರದ ಮಹಿಳೆಯೊಬ್ಬರು ಉತ್ತರ ಪ್ರದೇಶದ ಪುರುಷನನ್ನು ಮದುವೆಯಾದರೆ, ಅವರ ಪೌರತ್ವ ರದ್ದುಪಡಿಸಲಾಗಿದೆ. ಭಾರತ ಮತ್ತು ಕಾಶ್ಮೀರಕ್ಕೆ ವಿಭಿನ್ನ ಪೌರತ್ವವಿತ್ತು” ಎಂದು ಶಾಸಕರು ಹೇಳಿದ್ದಾರೆ.

“ಮುಸ್ಲಿಂ ಕಾರ್ಯಕರ್ತರು ಸಹ ಸಂಭ್ರಮ ಆಚರಿಸಬೇಕು. ಅವರು ಸುಂದರ ಕಾಶ್ಮೀರಿ ಹುಡುಗಿಯರನ್ನು ಮದುವೆಯಾಗಬಹುದು. ಹಾಗಾಗಿ  ಹಿಂದೂಗಳಾಗಿರಲಿ ಅಥವಾ ಮುಸ್ಲಿಮರಾಗಿರಲಿ ಸಂಭ್ರಮ ಆಚರಿಸಬೇಕು. ಇದು ಇಡೀ ದೇಶ ಸಂಭ್ರಮಪಡಬೇಕಾದ ವಿಷಯ.” ಎಂದಿದ್ದಾರೆ.

ಈ ಸುದ್ದಿ ಎಲ್ಲೆಡೆ ವೈರಲ್ ಆದ ಕೂಡಲೇ ಪಕ್ಷದಿಂದಲೇ ಆಕ್ಷೇಪಣೆಗಳು ಕೇಳಿಬಂದಿವೆ. ನಂತರ ಅವರ ಈ ಹೇಳಿಕೆಯ ಬಗ್ಗೆ ಕೇಳಿದಾಗ, ಪಶ್ಚಾತ್ತಾಪಪಡದ ಶಾಸಕರು, ನಾನು ಹೇಳಿದ್ದರಲ್ಲಿ ಆಕ್ಷೇಪಾರ್ಹ ಏನೂ ಇಲ್ಲ ಎಂದು ಹೇಳಿದ್ದಾರೆ.

“ಈಗ ಯಾರಾದರೂ ಯಾವುದೇ ಸಮಸ್ಯೆಯಿಲ್ಲದೆ ಕಾಶ್ಮೀರಿ ಹುಡುಗಿಯನ್ನು ಮದುವೆಯಾಗಬಹುದು. ಎಂದು ನಾನು ಹೇಳಿದ್ದು ಅಷ್ಟೆ ಮತ್ತು ಇದು ಸತ್ಯ. ಇದು ಕಾಶ್ಮೀರದ ಜನರಿಗೆ ಸ್ವಾತಂತ್ರ್ಯ. ಅದಕ್ಕಾಗಿಯೇ ನಾವು ಈ ಕಾರ್ಯಕ್ರಮವನ್ನು ಆಯೋಜಿಸಿದ್ದೇವೆ. ಈಗ ಕಾಶ್ಮೀರಿಗಳು ಸ್ವಾತಂತ್ರ್ಯವನ್ನು ಪಡೆದಿದ್ದಾರೆ. “ಮೋದಿಜಿ ನಮ್ಮ ಕನಸನ್ನು ಈಡೇರಿಸಿದ್ದಾರೆ” ಎಂದು ವಿಕ್ರಮ್ ಸೈನಿ ಪ್ರತಿಕ್ರಿಯಿಸಿದ್ದಾರೆ.

ಉತ್ತರ ಪ್ರದೇಶದ ಖತೌಲಿ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ಸೈನಿ, ಈ ಹಿಂದೆಯೂ, ಭಾರತದಲ್ಲಿ ಅಸುರಕ್ಷಿತರೆಂದು ಭಾವಿಸಿದವರಿಗೆ “ಬಾಂಬ್” ಹಾಕುವ ಬೆದರಿಕೆ ಹಾಕುವ ಮೂಲಕ ಕುಖ್ಯಾತಿಯನ್ನು ಗಳಿಸಿದ್ದರು.

“ಈ ದೇಶದಲ್ಲಿ ಅಸುರಕ್ಷಿತರಾದವರು ದೇಶ ವಿರೋಧಿಗಳು, ಅವರು ಇಲ್ಲಿ ವಾಸಿಸಲು ಅರ್ಹರಲ್ಲ. ನನಗೆ ಒಂದು ಸಚಿವಾಲಯವನ್ನು ನೀಡಿ ಮತ್ತು ನಾನು ಅವರಿಗೆ ಬಾಂಬ್‌ಗಳನ್ನು ಕಟ್ಟಿ ಅವುಗಳನ್ನು ಸ್ಫೋಟಿಸುತ್ತೇನೆ” ಎಂದು ಜನವರಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅವರು ಹೇಳಿ ವಿವಾದಕ್ಕೀಡಾಗಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...