Homeಮುಖಪುಟ'ಸನಾತನ ವಿರೋಧಿ ಘೋಷಣೆ ಕೂಗಲು ಸಾಧ್ಯವಿಲ್ಲ..'; ಕಾಂಗ್ರೆಸ್ ತೊರೆದಿದ್ದಕ್ಕೆ ಕಾರಣ ಕೊಟ್ಟ ಗೌರವ್ ವಲ್ಲಭ್

‘ಸನಾತನ ವಿರೋಧಿ ಘೋಷಣೆ ಕೂಗಲು ಸಾಧ್ಯವಿಲ್ಲ..’; ಕಾಂಗ್ರೆಸ್ ತೊರೆದಿದ್ದಕ್ಕೆ ಕಾರಣ ಕೊಟ್ಟ ಗೌರವ್ ವಲ್ಲಭ್

- Advertisement -
- Advertisement -

‘ಸನಾತನ ವಿರೋಧಿ ಘೋಷಣೆ ಕೂಗಲು ಸಾಧ್ಯವಿಲ್ಲ..’ ಎಂದು ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ಕೆಲವೇ ಗಂಟೆಗಳ ನಂತರ ಗೌರವ್ ವಲ್ಲಭ್ ಅವರು ಗುರುವಾರ ಭಾರತೀಯ ಜನತಾ ಪಕ್ಷಕ್ಕೆ ಸೇರಿದ್ದಾರೆ. “ಸನಾತನ ವಿರೋಧಿ ಘೋಷಣೆಗಳನ್ನು ಎತ್ತುವುದಕ್ಕೆ ಸಾಧ್ಯವಿಲ್ಲ; ಸಂಪತ್ತು ಸೃಷ್ಟಿಕರ್ತರನ್ನು ದಿನವೂ ನಿಂದಿಸಲು ಸಾಧ್ಯವಿಲ್ಲ” ಎಂದು ಹೇಳುವ ಮೂಲಕ ತಮ್ಮ ಬಿಜೆಪಿ ಮೇಲಿನ ಪ್ರೇಮವನ್ನು ರಾಜೀನಾಮೆ ಪತ್ರದಲ್ಲಿ ಬಿಚ್ಚಿಟ್ಟಿದ್ದಾರೆ.

ಸುದ್ದಿ ವಾಹಿನಿಗಳಲ್ಲಿ ಆಗಾಗ್ಗೆ ಕಂಡುಬರುತ್ತಿದ್ದ ಕಾಂಗ್ರೆಸ್ ವಕ್ತಾರ ಗೌರವ್ ವಲ್ಲಭ್ ಅವರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬರೆದ ರಾಜೀನಾಮೆ ಪತ್ರವನ್ನು ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ. “ಪಕ್ಷವು ಈಗ ಚಲಿಸುತ್ತಿರುವ ದಿಕ್ಕಿನ ರೀತಿಯಲ್ಲಿ, ಅದು ಆರಾಮದಾಯಕವಾಗಿಲ್ಲ’ ಎಂದು ಅವರು ಹೇಳಿದ್ದಾರೆ.

ಬಿಜೆಪಿ ಸೇರ್ಪಡೆ ಸಮಾರಂಭದಲ್ಲಿ ಗೌರವ್ ವಲ್ಲಭ್ ಅವರು ಕಾಂಗ್ರೆಸ್ ನಾಯಲರ ನೀತಿಗಳ ಬಗ್ಗೆ ವಾಗ್ದಾಳಿ ನಡೆಸಿದರು.”ಕಾಂಗ್ರೆಸ್ ಪಕ್ಷವು ಪ್ರಸ್ತುತ ಅನುಸರಿಸುತ್ತಿರುವ ದಿಕ್ಕಿಲ್ಲದ ಹಾದಿಯು ನನಗೆ ಅನಾನುಕೂಲವಾಗಿದೆ. ನಾನು ಸನಾತನ ವಿರೋಧಿ ಘೋಷಣೆಗಳನ್ನು ಬೆಂಬಲಿಸಲು ಸಾಧ್ಯವಿಲ್ಲ ಅಥವಾ ದೇಶದ ಸಂಪತ್ತನ್ನು ಸೃಷ್ಟಿಸಿದವರನ್ನು ನಾನು ದಿನ ಬಿಟ್ಟು ದಿನ ಟೀಕಿಸಲು ಸಾಧ್ಯವಿಲ್ಲ. ಆದ್ದರಿಂದ ನಾನು ಎಲ್ಲಾ ಸ್ಥಾನಗಳಿಗೆ ಮತ್ತು ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ” ಎಂದಿದ್ದದಾರೆ.

ವಲ್ಲಭ ಅವರು ಎರಡು ಪುಟಗಳ ರಾಜೀನಾಮೆ ಪತ್ರವನ್ನು ಹಂಚಿಕೊಂಡಿದ್ದು, ಅದನ್ನು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಳುಹಿಸಿದ್ದಾರೆ.

“ನಾನು ಭಾವುಕನಾಗಿದ್ದೇನೆ, ನನ್ನ ಹೃದಯ ಭಾರವಾಗಿದೆ. ನಾನು ಭಾವನೆ ವ್ಯಕ್ತಪಡಿಸಲು, ಬರೆಯಲು ಮತ್ತು ಹಂಚಿಕೊಳ್ಳಲು ಬಹಳಷ್ಟು ಇದೆ. ಆದರೆ, ನನ್ನ ತತ್ವಗಳು ಇತರರಿಗೆ ಹಾನಿಯನ್ನುಂಟುಮಾಡುವ ಯಾವುದನ್ನಾದರೂ ಹೇಳುವುದನ್ನು ನಿಷೇಧಿಸಿದೆ. ಅದೇನೇ ಇದ್ದರೂ, ಇಂದು ನಾನು ನನ್ನ ಆಲೋಚನೆಗಳನ್ನು ಪ್ರಸ್ತುತಪಡಿಸುತ್ತಿದ್ದೇನೆ. ನೀವು ಸತ್ಯವನ್ನು ಮರೆಮಾಚುವುದು ಸಹ ಅಪರಾಧ ಎಂದು ನಾನು ದೃಢವಾಗಿ ನಂಬಿದ್ದೇನೆ; ಅದರಲ್ಲಿ ಭಾಗಿಯಾಗಲು ನಾನು ನಿರಾಕರಿಸುತ್ತೇನೆ” ಎಂದು ಅವರು ಪತ್ರದಲ್ಲಿ ಬರೆದಿದ್ದಾರೆ.

ವಲ್ಲಭ್ ಅವರು 2023 ರಲ್ಲಿ ಉದಯಪುರ ಕ್ಷೇತ್ರದಿಂದ ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದರು. ಬಿಜೆಪಿ ಅಭ್ಯರ್ಥಿಯು 32,000 ಮತಗಳ ಅಂತರದಿಂದ ಗೆಲುವು ಸಾಧಿಸಿದರು. ನಂತರ ಅವರು, 2019 ರಲ್ಲಿ ಜಾರ್ಖಂಡ್‌ನ ಜಮ್‌ಶೆಡ್‌ಪುರ ಪೂರ್ವದಿಂದ ತಮ್ಮ ಲೋಕಸಭಾ ಚುನಾವಣಾ ಚೊಚ್ಚಲ ಪ್ರವೇಶ ಮಾಡಿದರು. ಅಲ್ಲಿ ಅವರು 18,000 ಕ್ಕಿಂತ ಹೆಚ್ಚು ಗಳಿಸಿದರು. ಆಗಿನ ಸಿಟ್ಟಿಂಗ್ ಮುಖ್ಯಮಂತ್ರಿ ರಘುಬರ್ ದಾಸ್ ಮತ್ತು ಸರಯು ರಾಯ್ ಅವರ ನಂತರ ಮೂರನೇ ಸ್ಥಾನಕ್ಕೆ ಬಂದರು.

“ಕಾಂಗ್ರೆಸ್ ಪಕ್ಷವು ‘ಪಕ್ಷದ ಮೂಲ ತತ್ವ’ಕ್ಕೆ ವಿರುದ್ಧವಾಗಿ ತಪ್ಪು ದಿಕ್ಕಿನಲ್ಲಿ ಸಾಗುತ್ತಿದೆ” ಎಂದು ಆರೋಪಿಸಿದರು.

“ಇತ್ತೀಚಿನ ದಿನಗಳಲ್ಲಿ ಪಕ್ಷವು ತಪ್ಪು ದಾರಿಯಲ್ಲಿ ಸಾಗುತ್ತಿದೆ, ಒಂದೆಡೆ ಜಾತಿವಾರು ಜನಗಣತಿಯ ಬಗ್ಗೆ ಮಾತನಾಡುತ್ತೇವೆ, ಮತ್ತೊಂದೆಡೆ ಪಕ್ಷವು ಇಡೀ ಹಿಂದೂ ಸಮಾಜವನ್ನು ವಿರೋಧಿಸುತ್ತಿದೆ ಎಂದು ತೋರುತ್ತದೆ. ಈ ರೀತಿಯ ಕಾರ್ಯವು ಜನರಿಗೆ ದಾರಿ ತಪ್ಪಿಸುವ ಸಂದೇಶವನ್ನು ನೀಡುತ್ತದೆ. ಪಕ್ಷವು ಒಂದು ನಿರ್ದಿಷ್ಟ ಧರ್ಮದ ಬೆಂಬಲಿಗ ಎಂದು ಸಾರ್ವಜನಿಕರು ಹೇಳುತ್ತಿದ್ದಾರೆ. ಇದು ಕಾಂಗ್ರೆಸ್‌ನ ಮೂಲ ತತ್ವಗಳಿಗೆ ವಿರುದ್ಧವಾಗಿದೆ” ಎಂದು ಅವರು ಹೇಳಿದರು.

ಇದನ್ನೂ ಓದಿ; ‘ಬಿಪಿನ್ ರಾವತ್ ನಿಧನರಾದ ನಂತರ ಪಿಎಂ ನೀಲಗಿರಿಗೆ ಭೇಟಿ ಕೊಟ್ಟಿಲ್ಲ..’; ಮೋದಿ ವಿರುದ್ಧ ರಾಜಾ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...