Homeಎಂಟರ್ತೈನ್ಮೆಂಟ್ಮಾಹಿತಿ ಹಕ್ಕು ಕಾಯಿದೆಯಡಿಯಲ್ಲಿ ನನಗೆ ವಿದ್ಯಾ ಬಾಲನ್ ಕೊಡಿ ಎಂದು ಕೇಳಬಹುದೇ?

ಮಾಹಿತಿ ಹಕ್ಕು ಕಾಯಿದೆಯಡಿಯಲ್ಲಿ ನನಗೆ ವಿದ್ಯಾ ಬಾಲನ್ ಕೊಡಿ ಎಂದು ಕೇಳಬಹುದೇ?

- Advertisement -
- Advertisement -

ಇತ್ತೀಚೆಗೆ ದೆಹಲಿ ಉಚ್ಛ ನ್ಯಾಯಾಲಯದಲ್ಲಿ ಇತ್ಯರ್ಥವಾದ ಪ್ರಕರಣವೊಂದರಲ್ಲಿ ಮಾಹಿತಿ ಅರ್ಜಿ ವಜಾಗೊಳಿಸಿದ ನ್ಯಾಯಾಧೀಶರು “ಮಾಡೆಲ್” ಎಂದ ಮಾತ್ರಕ್ಕೆ ಸರಕಾರದ ಎಲ್ಲಾ ಮಾಡೆಲ್‌ಗಳನ್ನೂ ಮಾಹಿತಿ ಹಕ್ಕು ಕಾಯಿದೆಯಡಿಯಲ್ಲಿ ನೀಡಲು ಬರುವುದಿಲ್ಲ ಎಂದು ಸ್ಪಷ್ಟಗೊಳಿಸಿರುತ್ತಾರೆ.

2018ರಲ್ಲಿ ರಝಾಕ್ ಕೆ. ಹೈದರ್ ಎನ್ನುವವರು ಕೇಂದ್ರ ಚುನಾವಣೆ ಆಯೋಗಕ್ಕೆ ಮಾಹಿತಿ ಕೋರಿ ಅರ್ಜಿ ಸಲ್ಲಿಸಿ ತಮಗೆ ಒಂದು ಎಲೆಕ್ಟ್ರಾನಿಕ್ ವೋಟಿಂಗ್ ಮಶೀನನ್ನು ನೀಡಬೇಕೆಂದು ಮತ್ತು ಅದಕ್ಕೆ ತಗಲುವ ವೆಚ್ಚ ಭರಿಸುವುದಾಗಿ ಕೇಳಿಕೊಂಡಿದ್ದರು. ಕೇಂದ್ರ ಸಾರ್ವಜನಿಕ ಮಾಹಿತಿ ಅಧಿಕಾರಿ ನಮ್ಮಲ್ಲಿ ಯಾವುದೇ ಯಂತ್ರ ಇಲ್ಲ, ನಮ್ಮ ಕಚೇರಿಯಲ್ಲಿರುವುದು ಕೇವಲ ಅದರ ಪ್ರತಿರೂಪ (ಮಾಡೆಲ್) ಮಾತ್ರ, ಅದನ್ನು ನಾವು ಅಧಿಕಾರಿಗಳ ತರಬೇತಿಗೆ ಬಳಸುತ್ತೇವೆ ಎಂದು ಜಾಣತನದ ಉತ್ತರ ನೀಡಿದ್ದರು. ಉತ್ತರದಿಂದ ಸಂತೃಪ್ತರಾಗದ ಹೈದರ್ ಪ್ರಥಮ ಮೇಲ್ಮನವಿ ದಾಖಲಿಸಿದರು. ಮೇಲ್ಮನವಿ ಪ್ರಾಧಿಕಾರ ಅದೇ ಉತ್ತರವನ್ನು ಎತ್ತಿ ಹಿಡಿಯಿತು. ಅದರಿಂದ ಬೇಸತ್ತ ಹೈದರ್ ಕೇಂದ್ರ ಮಾಹಿತಿ ಆಯೋಗಕ್ಕೆ ಎರಡನೆಯ ಮೇಲ್ಮನವಿ ಸಲ್ಲಿಸಿದರು.

2019ರಲ್ಲಿ ವಿಚಾರಣೆ ಕೈಗೆತ್ತಿಕೊಂಡ ಕೇಂದ್ರ ಮಾಹಿತಿ ಆಯೋಗವು, ಕಾಯಿದೆಯ ಸೆಕ್ಷನ್ 2(ಎಫ್) ಪ್ರಕಾರ ಸರಕಾರದಲ್ಲಿರುವ “ಮಾಡೆಲ್” ಸಹ ಮಾಹಿತಿ ಆಗುತ್ತದೆ ಎಂಬ ಅರ್ಜಿದಾರರ ವಾದವನ್ನು ಒಪ್ಪಿತು. ಆದರೆ ಸರಕಾರದ ಪರವಾಗಿ ವಾದಿಸಿದ ಮಾಹಿತಿ ಅಧಿಕಾರಿ ಯಂತ್ರದಲ್ಲಿರುವ ತಂತ್ರಾಶ (ಸಾಫ್ಟ್ವೇರ್) ಭೌದ್ಧಿಕ ಆಸ್ತಿಯಾಗಿದ್ದು ಅದನ್ನು ಯಾರಿಗೂ ನೀಡಲು ಸಾಧ್ಯವಿಲ್ಲ ಎಂದರು. ಅರ್ಜಿ ವಿಲೇವಾರಿಗೊಳಿಸಿದ ಆಯೋಗ ಅರ್ಜಿದಾರರಿಗೆ ನಾಲ್ಕು ವಾರದೊಳಗೆ ಮಾಹಿತಿ ಹಕ್ಕು ಕಾಯಿದೆಯಡಿಯಲ್ಲಿ ಸಮಂಜಸ ಉತ್ತರ ನೀಡುವಂತೆ ಆದೇಶಿಸಿತು.

ಅಷ್ಟಕ್ಕೇ ಬಿಡದ ಅರ್ಜಿದಾರ ಹೈಕೋರ್ಟ್ ಮೆಟ್ಟಿಲೇರಿ ರಿಟ್ ಅರ್ಜಿ ದಾಖಲಿಸಿದರು. ಇತ್ತೀಚೆಗೆ ಅರ್ಜಿ ವಿಚಾರಣೆ ನಡೆಸಿದ ಸಾರ್ವಜನಿಕ ಪ್ರಾಧಿಕಾರ ಒಂದು ವಸ್ತುವನ್ನು ದಾಖಲೆ ಮತ್ತು ಪ್ರತಿರೂಪ ಎಂದು ಒಪ್ಪಿಕೊಂಡ ಮಾತ್ರಕ್ಕೆ ಅದನ್ನು ಸಾರ್ವಜನಿಕರಿಗೆ ನೀಡಲು ಬರುವುದಿಲ್ಲ. ಆಕ್ಸ್ಫರ್ಡ್ ಶಬ್ದಕೋಶದ ವಿವರಣೆ ನೀಡುತ್ತಾ “ಮಾಡೆಲ್” ಎಂದರೆ ಒಂದು ವಸ್ತುವಿನ “ಸೂಕ್ಷ್ಮಾಕಾರಕ್ಕೆ ಇಳಿಸಿದ ಪ್ರತಿರೂಪ” ಆಗುತ್ತದೆಯೇ ವಿನಃ ವಸ್ತುವೇ “ಮಾಡೆಲ್” ಆಗುವುದಿಲ್ಲ ಎಂದು ನ್ಯಾಯಾಧೀಶ ಜಯಂತ್ ನಾಥ್ ತೀರ್ಪು ನೀಡಿ ಅರ್ಜಿಯನ್ನು ವಜಾ ಗೊಳಿಸಿರುತ್ತಾರೆ.

ಹಾಗಾಗಿ ಸರಕಾರ ಸ್ವಚ್ಛ ಭಾರತ್ ಅಭಿಯಾನದ “ಮಾಡೆಲ್” ಆಗಿದ್ದ ವಿದ್ಯಾ ಬಾಲನ್, ಅಮಿತಾಭ್ ಬಚ್ಚನ್ ಅಥವಾ ಇತೀಚಿನ ಅನುಶ್ಕ ಶರ್ಮ ಅವರನ್ನು ಯಾರೂ ಮಾಹಿತಿ ಹಕ್ಕು ಕಾಯಿದೆಯಡಿ ನಮಗೆ ಕೊಡಿ ಎಂದು ಕೇಳಲು ಬರುವುದಿಲ್ಲ. ನಿಮ್ಮನ್ನು ನಿರಾಶೆಗೊಳಿಸಿದಕ್ಕಾಗಿ ಕ್ಷಮೆ ಇರಲಿ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...