Homeಎಂಟರ್ತೈನ್ಮೆಂಟ್ಮಾಹಿತಿ ಹಕ್ಕು ಕಾಯಿದೆಯಡಿಯಲ್ಲಿ ನನಗೆ ವಿದ್ಯಾ ಬಾಲನ್ ಕೊಡಿ ಎಂದು ಕೇಳಬಹುದೇ?

ಮಾಹಿತಿ ಹಕ್ಕು ಕಾಯಿದೆಯಡಿಯಲ್ಲಿ ನನಗೆ ವಿದ್ಯಾ ಬಾಲನ್ ಕೊಡಿ ಎಂದು ಕೇಳಬಹುದೇ?

- Advertisement -
- Advertisement -

ಇತ್ತೀಚೆಗೆ ದೆಹಲಿ ಉಚ್ಛ ನ್ಯಾಯಾಲಯದಲ್ಲಿ ಇತ್ಯರ್ಥವಾದ ಪ್ರಕರಣವೊಂದರಲ್ಲಿ ಮಾಹಿತಿ ಅರ್ಜಿ ವಜಾಗೊಳಿಸಿದ ನ್ಯಾಯಾಧೀಶರು “ಮಾಡೆಲ್” ಎಂದ ಮಾತ್ರಕ್ಕೆ ಸರಕಾರದ ಎಲ್ಲಾ ಮಾಡೆಲ್‌ಗಳನ್ನೂ ಮಾಹಿತಿ ಹಕ್ಕು ಕಾಯಿದೆಯಡಿಯಲ್ಲಿ ನೀಡಲು ಬರುವುದಿಲ್ಲ ಎಂದು ಸ್ಪಷ್ಟಗೊಳಿಸಿರುತ್ತಾರೆ.

2018ರಲ್ಲಿ ರಝಾಕ್ ಕೆ. ಹೈದರ್ ಎನ್ನುವವರು ಕೇಂದ್ರ ಚುನಾವಣೆ ಆಯೋಗಕ್ಕೆ ಮಾಹಿತಿ ಕೋರಿ ಅರ್ಜಿ ಸಲ್ಲಿಸಿ ತಮಗೆ ಒಂದು ಎಲೆಕ್ಟ್ರಾನಿಕ್ ವೋಟಿಂಗ್ ಮಶೀನನ್ನು ನೀಡಬೇಕೆಂದು ಮತ್ತು ಅದಕ್ಕೆ ತಗಲುವ ವೆಚ್ಚ ಭರಿಸುವುದಾಗಿ ಕೇಳಿಕೊಂಡಿದ್ದರು. ಕೇಂದ್ರ ಸಾರ್ವಜನಿಕ ಮಾಹಿತಿ ಅಧಿಕಾರಿ ನಮ್ಮಲ್ಲಿ ಯಾವುದೇ ಯಂತ್ರ ಇಲ್ಲ, ನಮ್ಮ ಕಚೇರಿಯಲ್ಲಿರುವುದು ಕೇವಲ ಅದರ ಪ್ರತಿರೂಪ (ಮಾಡೆಲ್) ಮಾತ್ರ, ಅದನ್ನು ನಾವು ಅಧಿಕಾರಿಗಳ ತರಬೇತಿಗೆ ಬಳಸುತ್ತೇವೆ ಎಂದು ಜಾಣತನದ ಉತ್ತರ ನೀಡಿದ್ದರು. ಉತ್ತರದಿಂದ ಸಂತೃಪ್ತರಾಗದ ಹೈದರ್ ಪ್ರಥಮ ಮೇಲ್ಮನವಿ ದಾಖಲಿಸಿದರು. ಮೇಲ್ಮನವಿ ಪ್ರಾಧಿಕಾರ ಅದೇ ಉತ್ತರವನ್ನು ಎತ್ತಿ ಹಿಡಿಯಿತು. ಅದರಿಂದ ಬೇಸತ್ತ ಹೈದರ್ ಕೇಂದ್ರ ಮಾಹಿತಿ ಆಯೋಗಕ್ಕೆ ಎರಡನೆಯ ಮೇಲ್ಮನವಿ ಸಲ್ಲಿಸಿದರು.

2019ರಲ್ಲಿ ವಿಚಾರಣೆ ಕೈಗೆತ್ತಿಕೊಂಡ ಕೇಂದ್ರ ಮಾಹಿತಿ ಆಯೋಗವು, ಕಾಯಿದೆಯ ಸೆಕ್ಷನ್ 2(ಎಫ್) ಪ್ರಕಾರ ಸರಕಾರದಲ್ಲಿರುವ “ಮಾಡೆಲ್” ಸಹ ಮಾಹಿತಿ ಆಗುತ್ತದೆ ಎಂಬ ಅರ್ಜಿದಾರರ ವಾದವನ್ನು ಒಪ್ಪಿತು. ಆದರೆ ಸರಕಾರದ ಪರವಾಗಿ ವಾದಿಸಿದ ಮಾಹಿತಿ ಅಧಿಕಾರಿ ಯಂತ್ರದಲ್ಲಿರುವ ತಂತ್ರಾಶ (ಸಾಫ್ಟ್ವೇರ್) ಭೌದ್ಧಿಕ ಆಸ್ತಿಯಾಗಿದ್ದು ಅದನ್ನು ಯಾರಿಗೂ ನೀಡಲು ಸಾಧ್ಯವಿಲ್ಲ ಎಂದರು. ಅರ್ಜಿ ವಿಲೇವಾರಿಗೊಳಿಸಿದ ಆಯೋಗ ಅರ್ಜಿದಾರರಿಗೆ ನಾಲ್ಕು ವಾರದೊಳಗೆ ಮಾಹಿತಿ ಹಕ್ಕು ಕಾಯಿದೆಯಡಿಯಲ್ಲಿ ಸಮಂಜಸ ಉತ್ತರ ನೀಡುವಂತೆ ಆದೇಶಿಸಿತು.

ಅಷ್ಟಕ್ಕೇ ಬಿಡದ ಅರ್ಜಿದಾರ ಹೈಕೋರ್ಟ್ ಮೆಟ್ಟಿಲೇರಿ ರಿಟ್ ಅರ್ಜಿ ದಾಖಲಿಸಿದರು. ಇತ್ತೀಚೆಗೆ ಅರ್ಜಿ ವಿಚಾರಣೆ ನಡೆಸಿದ ಸಾರ್ವಜನಿಕ ಪ್ರಾಧಿಕಾರ ಒಂದು ವಸ್ತುವನ್ನು ದಾಖಲೆ ಮತ್ತು ಪ್ರತಿರೂಪ ಎಂದು ಒಪ್ಪಿಕೊಂಡ ಮಾತ್ರಕ್ಕೆ ಅದನ್ನು ಸಾರ್ವಜನಿಕರಿಗೆ ನೀಡಲು ಬರುವುದಿಲ್ಲ. ಆಕ್ಸ್ಫರ್ಡ್ ಶಬ್ದಕೋಶದ ವಿವರಣೆ ನೀಡುತ್ತಾ “ಮಾಡೆಲ್” ಎಂದರೆ ಒಂದು ವಸ್ತುವಿನ “ಸೂಕ್ಷ್ಮಾಕಾರಕ್ಕೆ ಇಳಿಸಿದ ಪ್ರತಿರೂಪ” ಆಗುತ್ತದೆಯೇ ವಿನಃ ವಸ್ತುವೇ “ಮಾಡೆಲ್” ಆಗುವುದಿಲ್ಲ ಎಂದು ನ್ಯಾಯಾಧೀಶ ಜಯಂತ್ ನಾಥ್ ತೀರ್ಪು ನೀಡಿ ಅರ್ಜಿಯನ್ನು ವಜಾ ಗೊಳಿಸಿರುತ್ತಾರೆ.

ಹಾಗಾಗಿ ಸರಕಾರ ಸ್ವಚ್ಛ ಭಾರತ್ ಅಭಿಯಾನದ “ಮಾಡೆಲ್” ಆಗಿದ್ದ ವಿದ್ಯಾ ಬಾಲನ್, ಅಮಿತಾಭ್ ಬಚ್ಚನ್ ಅಥವಾ ಇತೀಚಿನ ಅನುಶ್ಕ ಶರ್ಮ ಅವರನ್ನು ಯಾರೂ ಮಾಹಿತಿ ಹಕ್ಕು ಕಾಯಿದೆಯಡಿ ನಮಗೆ ಕೊಡಿ ಎಂದು ಕೇಳಲು ಬರುವುದಿಲ್ಲ. ನಿಮ್ಮನ್ನು ನಿರಾಶೆಗೊಳಿಸಿದಕ್ಕಾಗಿ ಕ್ಷಮೆ ಇರಲಿ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...