Homeಎಂಟರ್ತೈನ್ಮೆಂಟ್ಮಾಹಿತಿ ಹಕ್ಕು ಕಾಯಿದೆಯಡಿಯಲ್ಲಿ ನನಗೆ ವಿದ್ಯಾ ಬಾಲನ್ ಕೊಡಿ ಎಂದು ಕೇಳಬಹುದೇ?

ಮಾಹಿತಿ ಹಕ್ಕು ಕಾಯಿದೆಯಡಿಯಲ್ಲಿ ನನಗೆ ವಿದ್ಯಾ ಬಾಲನ್ ಕೊಡಿ ಎಂದು ಕೇಳಬಹುದೇ?

- Advertisement -
- Advertisement -

ಇತ್ತೀಚೆಗೆ ದೆಹಲಿ ಉಚ್ಛ ನ್ಯಾಯಾಲಯದಲ್ಲಿ ಇತ್ಯರ್ಥವಾದ ಪ್ರಕರಣವೊಂದರಲ್ಲಿ ಮಾಹಿತಿ ಅರ್ಜಿ ವಜಾಗೊಳಿಸಿದ ನ್ಯಾಯಾಧೀಶರು “ಮಾಡೆಲ್” ಎಂದ ಮಾತ್ರಕ್ಕೆ ಸರಕಾರದ ಎಲ್ಲಾ ಮಾಡೆಲ್‌ಗಳನ್ನೂ ಮಾಹಿತಿ ಹಕ್ಕು ಕಾಯಿದೆಯಡಿಯಲ್ಲಿ ನೀಡಲು ಬರುವುದಿಲ್ಲ ಎಂದು ಸ್ಪಷ್ಟಗೊಳಿಸಿರುತ್ತಾರೆ.

2018ರಲ್ಲಿ ರಝಾಕ್ ಕೆ. ಹೈದರ್ ಎನ್ನುವವರು ಕೇಂದ್ರ ಚುನಾವಣೆ ಆಯೋಗಕ್ಕೆ ಮಾಹಿತಿ ಕೋರಿ ಅರ್ಜಿ ಸಲ್ಲಿಸಿ ತಮಗೆ ಒಂದು ಎಲೆಕ್ಟ್ರಾನಿಕ್ ವೋಟಿಂಗ್ ಮಶೀನನ್ನು ನೀಡಬೇಕೆಂದು ಮತ್ತು ಅದಕ್ಕೆ ತಗಲುವ ವೆಚ್ಚ ಭರಿಸುವುದಾಗಿ ಕೇಳಿಕೊಂಡಿದ್ದರು. ಕೇಂದ್ರ ಸಾರ್ವಜನಿಕ ಮಾಹಿತಿ ಅಧಿಕಾರಿ ನಮ್ಮಲ್ಲಿ ಯಾವುದೇ ಯಂತ್ರ ಇಲ್ಲ, ನಮ್ಮ ಕಚೇರಿಯಲ್ಲಿರುವುದು ಕೇವಲ ಅದರ ಪ್ರತಿರೂಪ (ಮಾಡೆಲ್) ಮಾತ್ರ, ಅದನ್ನು ನಾವು ಅಧಿಕಾರಿಗಳ ತರಬೇತಿಗೆ ಬಳಸುತ್ತೇವೆ ಎಂದು ಜಾಣತನದ ಉತ್ತರ ನೀಡಿದ್ದರು. ಉತ್ತರದಿಂದ ಸಂತೃಪ್ತರಾಗದ ಹೈದರ್ ಪ್ರಥಮ ಮೇಲ್ಮನವಿ ದಾಖಲಿಸಿದರು. ಮೇಲ್ಮನವಿ ಪ್ರಾಧಿಕಾರ ಅದೇ ಉತ್ತರವನ್ನು ಎತ್ತಿ ಹಿಡಿಯಿತು. ಅದರಿಂದ ಬೇಸತ್ತ ಹೈದರ್ ಕೇಂದ್ರ ಮಾಹಿತಿ ಆಯೋಗಕ್ಕೆ ಎರಡನೆಯ ಮೇಲ್ಮನವಿ ಸಲ್ಲಿಸಿದರು.

2019ರಲ್ಲಿ ವಿಚಾರಣೆ ಕೈಗೆತ್ತಿಕೊಂಡ ಕೇಂದ್ರ ಮಾಹಿತಿ ಆಯೋಗವು, ಕಾಯಿದೆಯ ಸೆಕ್ಷನ್ 2(ಎಫ್) ಪ್ರಕಾರ ಸರಕಾರದಲ್ಲಿರುವ “ಮಾಡೆಲ್” ಸಹ ಮಾಹಿತಿ ಆಗುತ್ತದೆ ಎಂಬ ಅರ್ಜಿದಾರರ ವಾದವನ್ನು ಒಪ್ಪಿತು. ಆದರೆ ಸರಕಾರದ ಪರವಾಗಿ ವಾದಿಸಿದ ಮಾಹಿತಿ ಅಧಿಕಾರಿ ಯಂತ್ರದಲ್ಲಿರುವ ತಂತ್ರಾಶ (ಸಾಫ್ಟ್ವೇರ್) ಭೌದ್ಧಿಕ ಆಸ್ತಿಯಾಗಿದ್ದು ಅದನ್ನು ಯಾರಿಗೂ ನೀಡಲು ಸಾಧ್ಯವಿಲ್ಲ ಎಂದರು. ಅರ್ಜಿ ವಿಲೇವಾರಿಗೊಳಿಸಿದ ಆಯೋಗ ಅರ್ಜಿದಾರರಿಗೆ ನಾಲ್ಕು ವಾರದೊಳಗೆ ಮಾಹಿತಿ ಹಕ್ಕು ಕಾಯಿದೆಯಡಿಯಲ್ಲಿ ಸಮಂಜಸ ಉತ್ತರ ನೀಡುವಂತೆ ಆದೇಶಿಸಿತು.

ಅಷ್ಟಕ್ಕೇ ಬಿಡದ ಅರ್ಜಿದಾರ ಹೈಕೋರ್ಟ್ ಮೆಟ್ಟಿಲೇರಿ ರಿಟ್ ಅರ್ಜಿ ದಾಖಲಿಸಿದರು. ಇತ್ತೀಚೆಗೆ ಅರ್ಜಿ ವಿಚಾರಣೆ ನಡೆಸಿದ ಸಾರ್ವಜನಿಕ ಪ್ರಾಧಿಕಾರ ಒಂದು ವಸ್ತುವನ್ನು ದಾಖಲೆ ಮತ್ತು ಪ್ರತಿರೂಪ ಎಂದು ಒಪ್ಪಿಕೊಂಡ ಮಾತ್ರಕ್ಕೆ ಅದನ್ನು ಸಾರ್ವಜನಿಕರಿಗೆ ನೀಡಲು ಬರುವುದಿಲ್ಲ. ಆಕ್ಸ್ಫರ್ಡ್ ಶಬ್ದಕೋಶದ ವಿವರಣೆ ನೀಡುತ್ತಾ “ಮಾಡೆಲ್” ಎಂದರೆ ಒಂದು ವಸ್ತುವಿನ “ಸೂಕ್ಷ್ಮಾಕಾರಕ್ಕೆ ಇಳಿಸಿದ ಪ್ರತಿರೂಪ” ಆಗುತ್ತದೆಯೇ ವಿನಃ ವಸ್ತುವೇ “ಮಾಡೆಲ್” ಆಗುವುದಿಲ್ಲ ಎಂದು ನ್ಯಾಯಾಧೀಶ ಜಯಂತ್ ನಾಥ್ ತೀರ್ಪು ನೀಡಿ ಅರ್ಜಿಯನ್ನು ವಜಾ ಗೊಳಿಸಿರುತ್ತಾರೆ.

ಹಾಗಾಗಿ ಸರಕಾರ ಸ್ವಚ್ಛ ಭಾರತ್ ಅಭಿಯಾನದ “ಮಾಡೆಲ್” ಆಗಿದ್ದ ವಿದ್ಯಾ ಬಾಲನ್, ಅಮಿತಾಭ್ ಬಚ್ಚನ್ ಅಥವಾ ಇತೀಚಿನ ಅನುಶ್ಕ ಶರ್ಮ ಅವರನ್ನು ಯಾರೂ ಮಾಹಿತಿ ಹಕ್ಕು ಕಾಯಿದೆಯಡಿ ನಮಗೆ ಕೊಡಿ ಎಂದು ಕೇಳಲು ಬರುವುದಿಲ್ಲ. ನಿಮ್ಮನ್ನು ನಿರಾಶೆಗೊಳಿಸಿದಕ್ಕಾಗಿ ಕ್ಷಮೆ ಇರಲಿ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....