Homeಎಂಟರ್ತೈನ್ಮೆಂಟ್ಮಾಹಿತಿ ಹಕ್ಕು ಕಾಯಿದೆಯಡಿಯಲ್ಲಿ ನನಗೆ ವಿದ್ಯಾ ಬಾಲನ್ ಕೊಡಿ ಎಂದು ಕೇಳಬಹುದೇ?

ಮಾಹಿತಿ ಹಕ್ಕು ಕಾಯಿದೆಯಡಿಯಲ್ಲಿ ನನಗೆ ವಿದ್ಯಾ ಬಾಲನ್ ಕೊಡಿ ಎಂದು ಕೇಳಬಹುದೇ?

- Advertisement -
- Advertisement -

ಇತ್ತೀಚೆಗೆ ದೆಹಲಿ ಉಚ್ಛ ನ್ಯಾಯಾಲಯದಲ್ಲಿ ಇತ್ಯರ್ಥವಾದ ಪ್ರಕರಣವೊಂದರಲ್ಲಿ ಮಾಹಿತಿ ಅರ್ಜಿ ವಜಾಗೊಳಿಸಿದ ನ್ಯಾಯಾಧೀಶರು “ಮಾಡೆಲ್” ಎಂದ ಮಾತ್ರಕ್ಕೆ ಸರಕಾರದ ಎಲ್ಲಾ ಮಾಡೆಲ್‌ಗಳನ್ನೂ ಮಾಹಿತಿ ಹಕ್ಕು ಕಾಯಿದೆಯಡಿಯಲ್ಲಿ ನೀಡಲು ಬರುವುದಿಲ್ಲ ಎಂದು ಸ್ಪಷ್ಟಗೊಳಿಸಿರುತ್ತಾರೆ.

2018ರಲ್ಲಿ ರಝಾಕ್ ಕೆ. ಹೈದರ್ ಎನ್ನುವವರು ಕೇಂದ್ರ ಚುನಾವಣೆ ಆಯೋಗಕ್ಕೆ ಮಾಹಿತಿ ಕೋರಿ ಅರ್ಜಿ ಸಲ್ಲಿಸಿ ತಮಗೆ ಒಂದು ಎಲೆಕ್ಟ್ರಾನಿಕ್ ವೋಟಿಂಗ್ ಮಶೀನನ್ನು ನೀಡಬೇಕೆಂದು ಮತ್ತು ಅದಕ್ಕೆ ತಗಲುವ ವೆಚ್ಚ ಭರಿಸುವುದಾಗಿ ಕೇಳಿಕೊಂಡಿದ್ದರು. ಕೇಂದ್ರ ಸಾರ್ವಜನಿಕ ಮಾಹಿತಿ ಅಧಿಕಾರಿ ನಮ್ಮಲ್ಲಿ ಯಾವುದೇ ಯಂತ್ರ ಇಲ್ಲ, ನಮ್ಮ ಕಚೇರಿಯಲ್ಲಿರುವುದು ಕೇವಲ ಅದರ ಪ್ರತಿರೂಪ (ಮಾಡೆಲ್) ಮಾತ್ರ, ಅದನ್ನು ನಾವು ಅಧಿಕಾರಿಗಳ ತರಬೇತಿಗೆ ಬಳಸುತ್ತೇವೆ ಎಂದು ಜಾಣತನದ ಉತ್ತರ ನೀಡಿದ್ದರು. ಉತ್ತರದಿಂದ ಸಂತೃಪ್ತರಾಗದ ಹೈದರ್ ಪ್ರಥಮ ಮೇಲ್ಮನವಿ ದಾಖಲಿಸಿದರು. ಮೇಲ್ಮನವಿ ಪ್ರಾಧಿಕಾರ ಅದೇ ಉತ್ತರವನ್ನು ಎತ್ತಿ ಹಿಡಿಯಿತು. ಅದರಿಂದ ಬೇಸತ್ತ ಹೈದರ್ ಕೇಂದ್ರ ಮಾಹಿತಿ ಆಯೋಗಕ್ಕೆ ಎರಡನೆಯ ಮೇಲ್ಮನವಿ ಸಲ್ಲಿಸಿದರು.

2019ರಲ್ಲಿ ವಿಚಾರಣೆ ಕೈಗೆತ್ತಿಕೊಂಡ ಕೇಂದ್ರ ಮಾಹಿತಿ ಆಯೋಗವು, ಕಾಯಿದೆಯ ಸೆಕ್ಷನ್ 2(ಎಫ್) ಪ್ರಕಾರ ಸರಕಾರದಲ್ಲಿರುವ “ಮಾಡೆಲ್” ಸಹ ಮಾಹಿತಿ ಆಗುತ್ತದೆ ಎಂಬ ಅರ್ಜಿದಾರರ ವಾದವನ್ನು ಒಪ್ಪಿತು. ಆದರೆ ಸರಕಾರದ ಪರವಾಗಿ ವಾದಿಸಿದ ಮಾಹಿತಿ ಅಧಿಕಾರಿ ಯಂತ್ರದಲ್ಲಿರುವ ತಂತ್ರಾಶ (ಸಾಫ್ಟ್ವೇರ್) ಭೌದ್ಧಿಕ ಆಸ್ತಿಯಾಗಿದ್ದು ಅದನ್ನು ಯಾರಿಗೂ ನೀಡಲು ಸಾಧ್ಯವಿಲ್ಲ ಎಂದರು. ಅರ್ಜಿ ವಿಲೇವಾರಿಗೊಳಿಸಿದ ಆಯೋಗ ಅರ್ಜಿದಾರರಿಗೆ ನಾಲ್ಕು ವಾರದೊಳಗೆ ಮಾಹಿತಿ ಹಕ್ಕು ಕಾಯಿದೆಯಡಿಯಲ್ಲಿ ಸಮಂಜಸ ಉತ್ತರ ನೀಡುವಂತೆ ಆದೇಶಿಸಿತು.

ಅಷ್ಟಕ್ಕೇ ಬಿಡದ ಅರ್ಜಿದಾರ ಹೈಕೋರ್ಟ್ ಮೆಟ್ಟಿಲೇರಿ ರಿಟ್ ಅರ್ಜಿ ದಾಖಲಿಸಿದರು. ಇತ್ತೀಚೆಗೆ ಅರ್ಜಿ ವಿಚಾರಣೆ ನಡೆಸಿದ ಸಾರ್ವಜನಿಕ ಪ್ರಾಧಿಕಾರ ಒಂದು ವಸ್ತುವನ್ನು ದಾಖಲೆ ಮತ್ತು ಪ್ರತಿರೂಪ ಎಂದು ಒಪ್ಪಿಕೊಂಡ ಮಾತ್ರಕ್ಕೆ ಅದನ್ನು ಸಾರ್ವಜನಿಕರಿಗೆ ನೀಡಲು ಬರುವುದಿಲ್ಲ. ಆಕ್ಸ್ಫರ್ಡ್ ಶಬ್ದಕೋಶದ ವಿವರಣೆ ನೀಡುತ್ತಾ “ಮಾಡೆಲ್” ಎಂದರೆ ಒಂದು ವಸ್ತುವಿನ “ಸೂಕ್ಷ್ಮಾಕಾರಕ್ಕೆ ಇಳಿಸಿದ ಪ್ರತಿರೂಪ” ಆಗುತ್ತದೆಯೇ ವಿನಃ ವಸ್ತುವೇ “ಮಾಡೆಲ್” ಆಗುವುದಿಲ್ಲ ಎಂದು ನ್ಯಾಯಾಧೀಶ ಜಯಂತ್ ನಾಥ್ ತೀರ್ಪು ನೀಡಿ ಅರ್ಜಿಯನ್ನು ವಜಾ ಗೊಳಿಸಿರುತ್ತಾರೆ.

ಹಾಗಾಗಿ ಸರಕಾರ ಸ್ವಚ್ಛ ಭಾರತ್ ಅಭಿಯಾನದ “ಮಾಡೆಲ್” ಆಗಿದ್ದ ವಿದ್ಯಾ ಬಾಲನ್, ಅಮಿತಾಭ್ ಬಚ್ಚನ್ ಅಥವಾ ಇತೀಚಿನ ಅನುಶ್ಕ ಶರ್ಮ ಅವರನ್ನು ಯಾರೂ ಮಾಹಿತಿ ಹಕ್ಕು ಕಾಯಿದೆಯಡಿ ನಮಗೆ ಕೊಡಿ ಎಂದು ಕೇಳಲು ಬರುವುದಿಲ್ಲ. ನಿಮ್ಮನ್ನು ನಿರಾಶೆಗೊಳಿಸಿದಕ್ಕಾಗಿ ಕ್ಷಮೆ ಇರಲಿ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...