Homeಎಂಟರ್ತೈನ್ಮೆಂಟ್ಮಾಹಿತಿ ಹಕ್ಕು ಕಾಯಿದೆಯಡಿಯಲ್ಲಿ ನನಗೆ ವಿದ್ಯಾ ಬಾಲನ್ ಕೊಡಿ ಎಂದು ಕೇಳಬಹುದೇ?

ಮಾಹಿತಿ ಹಕ್ಕು ಕಾಯಿದೆಯಡಿಯಲ್ಲಿ ನನಗೆ ವಿದ್ಯಾ ಬಾಲನ್ ಕೊಡಿ ಎಂದು ಕೇಳಬಹುದೇ?

- Advertisement -
- Advertisement -

ಇತ್ತೀಚೆಗೆ ದೆಹಲಿ ಉಚ್ಛ ನ್ಯಾಯಾಲಯದಲ್ಲಿ ಇತ್ಯರ್ಥವಾದ ಪ್ರಕರಣವೊಂದರಲ್ಲಿ ಮಾಹಿತಿ ಅರ್ಜಿ ವಜಾಗೊಳಿಸಿದ ನ್ಯಾಯಾಧೀಶರು “ಮಾಡೆಲ್” ಎಂದ ಮಾತ್ರಕ್ಕೆ ಸರಕಾರದ ಎಲ್ಲಾ ಮಾಡೆಲ್‌ಗಳನ್ನೂ ಮಾಹಿತಿ ಹಕ್ಕು ಕಾಯಿದೆಯಡಿಯಲ್ಲಿ ನೀಡಲು ಬರುವುದಿಲ್ಲ ಎಂದು ಸ್ಪಷ್ಟಗೊಳಿಸಿರುತ್ತಾರೆ.

2018ರಲ್ಲಿ ರಝಾಕ್ ಕೆ. ಹೈದರ್ ಎನ್ನುವವರು ಕೇಂದ್ರ ಚುನಾವಣೆ ಆಯೋಗಕ್ಕೆ ಮಾಹಿತಿ ಕೋರಿ ಅರ್ಜಿ ಸಲ್ಲಿಸಿ ತಮಗೆ ಒಂದು ಎಲೆಕ್ಟ್ರಾನಿಕ್ ವೋಟಿಂಗ್ ಮಶೀನನ್ನು ನೀಡಬೇಕೆಂದು ಮತ್ತು ಅದಕ್ಕೆ ತಗಲುವ ವೆಚ್ಚ ಭರಿಸುವುದಾಗಿ ಕೇಳಿಕೊಂಡಿದ್ದರು. ಕೇಂದ್ರ ಸಾರ್ವಜನಿಕ ಮಾಹಿತಿ ಅಧಿಕಾರಿ ನಮ್ಮಲ್ಲಿ ಯಾವುದೇ ಯಂತ್ರ ಇಲ್ಲ, ನಮ್ಮ ಕಚೇರಿಯಲ್ಲಿರುವುದು ಕೇವಲ ಅದರ ಪ್ರತಿರೂಪ (ಮಾಡೆಲ್) ಮಾತ್ರ, ಅದನ್ನು ನಾವು ಅಧಿಕಾರಿಗಳ ತರಬೇತಿಗೆ ಬಳಸುತ್ತೇವೆ ಎಂದು ಜಾಣತನದ ಉತ್ತರ ನೀಡಿದ್ದರು. ಉತ್ತರದಿಂದ ಸಂತೃಪ್ತರಾಗದ ಹೈದರ್ ಪ್ರಥಮ ಮೇಲ್ಮನವಿ ದಾಖಲಿಸಿದರು. ಮೇಲ್ಮನವಿ ಪ್ರಾಧಿಕಾರ ಅದೇ ಉತ್ತರವನ್ನು ಎತ್ತಿ ಹಿಡಿಯಿತು. ಅದರಿಂದ ಬೇಸತ್ತ ಹೈದರ್ ಕೇಂದ್ರ ಮಾಹಿತಿ ಆಯೋಗಕ್ಕೆ ಎರಡನೆಯ ಮೇಲ್ಮನವಿ ಸಲ್ಲಿಸಿದರು.

2019ರಲ್ಲಿ ವಿಚಾರಣೆ ಕೈಗೆತ್ತಿಕೊಂಡ ಕೇಂದ್ರ ಮಾಹಿತಿ ಆಯೋಗವು, ಕಾಯಿದೆಯ ಸೆಕ್ಷನ್ 2(ಎಫ್) ಪ್ರಕಾರ ಸರಕಾರದಲ್ಲಿರುವ “ಮಾಡೆಲ್” ಸಹ ಮಾಹಿತಿ ಆಗುತ್ತದೆ ಎಂಬ ಅರ್ಜಿದಾರರ ವಾದವನ್ನು ಒಪ್ಪಿತು. ಆದರೆ ಸರಕಾರದ ಪರವಾಗಿ ವಾದಿಸಿದ ಮಾಹಿತಿ ಅಧಿಕಾರಿ ಯಂತ್ರದಲ್ಲಿರುವ ತಂತ್ರಾಶ (ಸಾಫ್ಟ್ವೇರ್) ಭೌದ್ಧಿಕ ಆಸ್ತಿಯಾಗಿದ್ದು ಅದನ್ನು ಯಾರಿಗೂ ನೀಡಲು ಸಾಧ್ಯವಿಲ್ಲ ಎಂದರು. ಅರ್ಜಿ ವಿಲೇವಾರಿಗೊಳಿಸಿದ ಆಯೋಗ ಅರ್ಜಿದಾರರಿಗೆ ನಾಲ್ಕು ವಾರದೊಳಗೆ ಮಾಹಿತಿ ಹಕ್ಕು ಕಾಯಿದೆಯಡಿಯಲ್ಲಿ ಸಮಂಜಸ ಉತ್ತರ ನೀಡುವಂತೆ ಆದೇಶಿಸಿತು.

ಅಷ್ಟಕ್ಕೇ ಬಿಡದ ಅರ್ಜಿದಾರ ಹೈಕೋರ್ಟ್ ಮೆಟ್ಟಿಲೇರಿ ರಿಟ್ ಅರ್ಜಿ ದಾಖಲಿಸಿದರು. ಇತ್ತೀಚೆಗೆ ಅರ್ಜಿ ವಿಚಾರಣೆ ನಡೆಸಿದ ಸಾರ್ವಜನಿಕ ಪ್ರಾಧಿಕಾರ ಒಂದು ವಸ್ತುವನ್ನು ದಾಖಲೆ ಮತ್ತು ಪ್ರತಿರೂಪ ಎಂದು ಒಪ್ಪಿಕೊಂಡ ಮಾತ್ರಕ್ಕೆ ಅದನ್ನು ಸಾರ್ವಜನಿಕರಿಗೆ ನೀಡಲು ಬರುವುದಿಲ್ಲ. ಆಕ್ಸ್ಫರ್ಡ್ ಶಬ್ದಕೋಶದ ವಿವರಣೆ ನೀಡುತ್ತಾ “ಮಾಡೆಲ್” ಎಂದರೆ ಒಂದು ವಸ್ತುವಿನ “ಸೂಕ್ಷ್ಮಾಕಾರಕ್ಕೆ ಇಳಿಸಿದ ಪ್ರತಿರೂಪ” ಆಗುತ್ತದೆಯೇ ವಿನಃ ವಸ್ತುವೇ “ಮಾಡೆಲ್” ಆಗುವುದಿಲ್ಲ ಎಂದು ನ್ಯಾಯಾಧೀಶ ಜಯಂತ್ ನಾಥ್ ತೀರ್ಪು ನೀಡಿ ಅರ್ಜಿಯನ್ನು ವಜಾ ಗೊಳಿಸಿರುತ್ತಾರೆ.

ಹಾಗಾಗಿ ಸರಕಾರ ಸ್ವಚ್ಛ ಭಾರತ್ ಅಭಿಯಾನದ “ಮಾಡೆಲ್” ಆಗಿದ್ದ ವಿದ್ಯಾ ಬಾಲನ್, ಅಮಿತಾಭ್ ಬಚ್ಚನ್ ಅಥವಾ ಇತೀಚಿನ ಅನುಶ್ಕ ಶರ್ಮ ಅವರನ್ನು ಯಾರೂ ಮಾಹಿತಿ ಹಕ್ಕು ಕಾಯಿದೆಯಡಿ ನಮಗೆ ಕೊಡಿ ಎಂದು ಕೇಳಲು ಬರುವುದಿಲ್ಲ. ನಿಮ್ಮನ್ನು ನಿರಾಶೆಗೊಳಿಸಿದಕ್ಕಾಗಿ ಕ್ಷಮೆ ಇರಲಿ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...