Homeಎಂಟರ್ತೈನ್ಮೆಂಟ್ಮಾಹಿತಿ ಹಕ್ಕು ಕಾಯಿದೆಯಡಿಯಲ್ಲಿ ನನಗೆ ವಿದ್ಯಾ ಬಾಲನ್ ಕೊಡಿ ಎಂದು ಕೇಳಬಹುದೇ?

ಮಾಹಿತಿ ಹಕ್ಕು ಕಾಯಿದೆಯಡಿಯಲ್ಲಿ ನನಗೆ ವಿದ್ಯಾ ಬಾಲನ್ ಕೊಡಿ ಎಂದು ಕೇಳಬಹುದೇ?

- Advertisement -
- Advertisement -

ಇತ್ತೀಚೆಗೆ ದೆಹಲಿ ಉಚ್ಛ ನ್ಯಾಯಾಲಯದಲ್ಲಿ ಇತ್ಯರ್ಥವಾದ ಪ್ರಕರಣವೊಂದರಲ್ಲಿ ಮಾಹಿತಿ ಅರ್ಜಿ ವಜಾಗೊಳಿಸಿದ ನ್ಯಾಯಾಧೀಶರು “ಮಾಡೆಲ್” ಎಂದ ಮಾತ್ರಕ್ಕೆ ಸರಕಾರದ ಎಲ್ಲಾ ಮಾಡೆಲ್‌ಗಳನ್ನೂ ಮಾಹಿತಿ ಹಕ್ಕು ಕಾಯಿದೆಯಡಿಯಲ್ಲಿ ನೀಡಲು ಬರುವುದಿಲ್ಲ ಎಂದು ಸ್ಪಷ್ಟಗೊಳಿಸಿರುತ್ತಾರೆ.

2018ರಲ್ಲಿ ರಝಾಕ್ ಕೆ. ಹೈದರ್ ಎನ್ನುವವರು ಕೇಂದ್ರ ಚುನಾವಣೆ ಆಯೋಗಕ್ಕೆ ಮಾಹಿತಿ ಕೋರಿ ಅರ್ಜಿ ಸಲ್ಲಿಸಿ ತಮಗೆ ಒಂದು ಎಲೆಕ್ಟ್ರಾನಿಕ್ ವೋಟಿಂಗ್ ಮಶೀನನ್ನು ನೀಡಬೇಕೆಂದು ಮತ್ತು ಅದಕ್ಕೆ ತಗಲುವ ವೆಚ್ಚ ಭರಿಸುವುದಾಗಿ ಕೇಳಿಕೊಂಡಿದ್ದರು. ಕೇಂದ್ರ ಸಾರ್ವಜನಿಕ ಮಾಹಿತಿ ಅಧಿಕಾರಿ ನಮ್ಮಲ್ಲಿ ಯಾವುದೇ ಯಂತ್ರ ಇಲ್ಲ, ನಮ್ಮ ಕಚೇರಿಯಲ್ಲಿರುವುದು ಕೇವಲ ಅದರ ಪ್ರತಿರೂಪ (ಮಾಡೆಲ್) ಮಾತ್ರ, ಅದನ್ನು ನಾವು ಅಧಿಕಾರಿಗಳ ತರಬೇತಿಗೆ ಬಳಸುತ್ತೇವೆ ಎಂದು ಜಾಣತನದ ಉತ್ತರ ನೀಡಿದ್ದರು. ಉತ್ತರದಿಂದ ಸಂತೃಪ್ತರಾಗದ ಹೈದರ್ ಪ್ರಥಮ ಮೇಲ್ಮನವಿ ದಾಖಲಿಸಿದರು. ಮೇಲ್ಮನವಿ ಪ್ರಾಧಿಕಾರ ಅದೇ ಉತ್ತರವನ್ನು ಎತ್ತಿ ಹಿಡಿಯಿತು. ಅದರಿಂದ ಬೇಸತ್ತ ಹೈದರ್ ಕೇಂದ್ರ ಮಾಹಿತಿ ಆಯೋಗಕ್ಕೆ ಎರಡನೆಯ ಮೇಲ್ಮನವಿ ಸಲ್ಲಿಸಿದರು.

2019ರಲ್ಲಿ ವಿಚಾರಣೆ ಕೈಗೆತ್ತಿಕೊಂಡ ಕೇಂದ್ರ ಮಾಹಿತಿ ಆಯೋಗವು, ಕಾಯಿದೆಯ ಸೆಕ್ಷನ್ 2(ಎಫ್) ಪ್ರಕಾರ ಸರಕಾರದಲ್ಲಿರುವ “ಮಾಡೆಲ್” ಸಹ ಮಾಹಿತಿ ಆಗುತ್ತದೆ ಎಂಬ ಅರ್ಜಿದಾರರ ವಾದವನ್ನು ಒಪ್ಪಿತು. ಆದರೆ ಸರಕಾರದ ಪರವಾಗಿ ವಾದಿಸಿದ ಮಾಹಿತಿ ಅಧಿಕಾರಿ ಯಂತ್ರದಲ್ಲಿರುವ ತಂತ್ರಾಶ (ಸಾಫ್ಟ್ವೇರ್) ಭೌದ್ಧಿಕ ಆಸ್ತಿಯಾಗಿದ್ದು ಅದನ್ನು ಯಾರಿಗೂ ನೀಡಲು ಸಾಧ್ಯವಿಲ್ಲ ಎಂದರು. ಅರ್ಜಿ ವಿಲೇವಾರಿಗೊಳಿಸಿದ ಆಯೋಗ ಅರ್ಜಿದಾರರಿಗೆ ನಾಲ್ಕು ವಾರದೊಳಗೆ ಮಾಹಿತಿ ಹಕ್ಕು ಕಾಯಿದೆಯಡಿಯಲ್ಲಿ ಸಮಂಜಸ ಉತ್ತರ ನೀಡುವಂತೆ ಆದೇಶಿಸಿತು.

ಅಷ್ಟಕ್ಕೇ ಬಿಡದ ಅರ್ಜಿದಾರ ಹೈಕೋರ್ಟ್ ಮೆಟ್ಟಿಲೇರಿ ರಿಟ್ ಅರ್ಜಿ ದಾಖಲಿಸಿದರು. ಇತ್ತೀಚೆಗೆ ಅರ್ಜಿ ವಿಚಾರಣೆ ನಡೆಸಿದ ಸಾರ್ವಜನಿಕ ಪ್ರಾಧಿಕಾರ ಒಂದು ವಸ್ತುವನ್ನು ದಾಖಲೆ ಮತ್ತು ಪ್ರತಿರೂಪ ಎಂದು ಒಪ್ಪಿಕೊಂಡ ಮಾತ್ರಕ್ಕೆ ಅದನ್ನು ಸಾರ್ವಜನಿಕರಿಗೆ ನೀಡಲು ಬರುವುದಿಲ್ಲ. ಆಕ್ಸ್ಫರ್ಡ್ ಶಬ್ದಕೋಶದ ವಿವರಣೆ ನೀಡುತ್ತಾ “ಮಾಡೆಲ್” ಎಂದರೆ ಒಂದು ವಸ್ತುವಿನ “ಸೂಕ್ಷ್ಮಾಕಾರಕ್ಕೆ ಇಳಿಸಿದ ಪ್ರತಿರೂಪ” ಆಗುತ್ತದೆಯೇ ವಿನಃ ವಸ್ತುವೇ “ಮಾಡೆಲ್” ಆಗುವುದಿಲ್ಲ ಎಂದು ನ್ಯಾಯಾಧೀಶ ಜಯಂತ್ ನಾಥ್ ತೀರ್ಪು ನೀಡಿ ಅರ್ಜಿಯನ್ನು ವಜಾ ಗೊಳಿಸಿರುತ್ತಾರೆ.

ಹಾಗಾಗಿ ಸರಕಾರ ಸ್ವಚ್ಛ ಭಾರತ್ ಅಭಿಯಾನದ “ಮಾಡೆಲ್” ಆಗಿದ್ದ ವಿದ್ಯಾ ಬಾಲನ್, ಅಮಿತಾಭ್ ಬಚ್ಚನ್ ಅಥವಾ ಇತೀಚಿನ ಅನುಶ್ಕ ಶರ್ಮ ಅವರನ್ನು ಯಾರೂ ಮಾಹಿತಿ ಹಕ್ಕು ಕಾಯಿದೆಯಡಿ ನಮಗೆ ಕೊಡಿ ಎಂದು ಕೇಳಲು ಬರುವುದಿಲ್ಲ. ನಿಮ್ಮನ್ನು ನಿರಾಶೆಗೊಳಿಸಿದಕ್ಕಾಗಿ ಕ್ಷಮೆ ಇರಲಿ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...