Homeಮುಖಪುಟಕಾರ್ಮಿಕರಿಗೆ ಊರಿಗೆ ತೆರಳಲು ಅವಕಾಶ ಕೊಟ್ಟಿದ್ದಕ್ಕೆ ಕೇಜ್ರಿವಾಲ್ ವಿರುದ್ಧ ಕೇಂದ್ರದ ಕಿಡಿ

ಕಾರ್ಮಿಕರಿಗೆ ಊರಿಗೆ ತೆರಳಲು ಅವಕಾಶ ಕೊಟ್ಟಿದ್ದಕ್ಕೆ ಕೇಜ್ರಿವಾಲ್ ವಿರುದ್ಧ ಕೇಂದ್ರದ ಕಿಡಿ

- Advertisement -
- Advertisement -

ಲಾಕ್‌ಡೌನ್ ಸಂಧರ್ಭದಲ್ಲಿ ಭಾರೀ ಸಂಖ್ಯೆಯಲ್ಲಿ ದೆಹಲಿಯಿಂದ ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ಹೊರಡಲು ಅವಕಾಶ ಮಾಡಿಕೊಟ್ಟಿದ್ದಕ್ಕಾಗಿ ಅರವಿಂದ್‌ ಕೇಜ್ರಿವಾಲ್ ನೇತೃತ್ವದ ದೆಹಲಿ ಸರಕಾರಕ್ಕೆ ಕೇಂದ್ರ ತೀಕ್ಷ್ಣ ಪತ್ರ ಕಳುಹಿಸಿದೆ.

ಶನಿವಾರದಂದು ದೆಹಲಿಯಿಂದ ಹತ್ತಾರು ಸಾವಿರ ಕಾರ್ಮಿಕರು ವಲಸೆ ಹೋಗುತ್ತಿರುವ ಕುರಿತು ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ತೀಕ್ಷ್ಣವಾಗಿ ಪತ್ರ ಬರೆದಿದ್ದಾರೆ.

ರಾಷ್ಟ್ರ ರಾಜಧಾನಿ ದೆಹಲಿಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕರು ವಲಸೆ ಹೋಗುತ್ತಿರುವ ಹಿನ್ನಲೆಯಲ್ಲಿ ದೆಹಲಿಯೊಂದಿಗೆ ಗಡಿ ಹಂಚಿಕೊಂಡಿರುವ ರಾಜ್ಯಗಳು ತಮ್ಮ ಗಡಿಗಳನ್ನು ಮುಚ್ಚುವಂತೆ ಕೇಂದ್ರ ಸರಕಾರವನ್ನು ಕೋರಿಕೊಂಡಿವೆ. ಲಾಕ್‌ಡೌನ್ ಸಮಯದಲ್ಲಿ ವಲಸಿಗರು ಆರೋಗ್ಯಕ್ಕೆ ಅಪಾಯ ಒಡ್ಡಿಕೊಳ್ಳುವ ಬಗ್ಗೆ ಪ್ರಧಾನಿ ಹಾಗೂ ಗೃಹಮಂತ್ರಿ  ತೀವ್ರ ಕಳವಳ ವ್ಯಕ್ತಪಡಿಸಿದ ಬೆನ್ನಿಗೆ ಈ ಪತ್ರವನ್ನು ಕಳುಹಿಸಲಾಗಿದೆ.

ಗೃಹ ಸಚಿವ ಅಮಿತ್ ಶಾ ಅವರು ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಅವರನ್ನು ಕರೆದು ಯಾವುದೇ ವಲಸೆಗಳಿಗೆ ಅವಕಾಶ ನೀಡಬಾರದು ಎಂಬ ಸ್ಪಷ್ಟ ಸೂಚನೆಗಳನ್ನು ನೀಡಿದ ನಂತರ ಭಾನುವಾರ ಸಂಜೆ ಈ ಪತ್ರವನ್ನು ಕಳುಹಿಸಲಾಗಿದೆ ಎಂದು ಗೃಹ ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪಿಎಂ ಮೋದಿ ಮತ್ತು ಗೃಹ ಸಚಿವ ಅಮಿತ್‌ ಷಾ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಅವರೊಂದಿಗೆ ಈ ಕುರಿತು ಈ ಹಿಂದೆ ಮಾತನಾಡಿದ್ದರು ಎಂದು ತಿಳಿದುಬಂದಿದೆ.

ವಲಸಿಗರನ್ನು ಯುಪಿ ಗಡಿಯವರೆಗೆ ತಲುಪಿಸಲು ಡಿಟಿಸಿ ಬಸ್ಸುಗಳನ್ನು ಬಳಸಲು ಅನುಮತಿಸಿದ ದೆಹಲಿ ಸರ್ಕಾರದ ನಿರ್ಧಾರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಅವರು ದೆಹಲಿ ಮುಖ್ಯ ಕಾರ್ಯದರ್ಶಿಗೆ ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳನ್ನು ಲಾಕ್ ಡೌನ್ ಜಾರಿಗೊಳಿಸುವಲ್ಲಿನ ವಿಫಲತೆಗಳಿಗಾಗಿ ಅಮಾನತುಗೊಳಿಸಬೇಕೆಂದು ಹೇಳಿದ್ದಾರೆ.

ದೆಹಲಿಯಿಂದ ನಿರ್ಗಮಿಸಿದ ಎಲ್ಲಾ ವಲಸಿಗರನ್ನು ಹದಿನಾಲ್ಕು ದಿನಗಳ ಕಾಲ ಸಂಪರ್ಕ ತಡೆಯಲ್ಲಿರಿಸುವಂತೆ ರಾಜ್ಯಸರಕಾರಗಳಿಗೆ ಕೇಂದ್ರ ಆದೇಶ ನೀಡಲು ಒತ್ತಾಯಿಸಲಾಗಿದೆ.

“ಲಾಕ್‌ಡೌನ್ ಅನ್ನು ಕಾರ್ಯಗತಗೊಳಿಸಲು ದೆಹಲಿ ಸರ್ಕಾರವು ಅಗತ್ಯವಿರುವ ಎಲ್ಲಾ ಅಧಿಕಾರಗಳನ್ನು ಹೊಂದಿದೆ” ಎಂದು ಅಧಿಕಾರಿ ಹೇಳಿದ್ದಾರೆ. ಕೇಜ್ರಿವಾಲ್ ಸರ್ಕಾರದ ಅಧಿಕಾರಗಳ ಬಗ್ಗೆ ಸ್ಪಷ್ಟವಾದ ಉಲ್ಲೇಖವು ರಾಷ್ಟ್ರೀಯ ರಾಜಧಾನಿಯಲ್ಲಿ ವ್ಯವಹಾರಗಳನ್ನು ನಡೆಸಲು ಹಾಗೂ ಅಧಿಕಾರ ವಿತರಣೆಯ ಬಗ್ಗೆ ಕೇಂದ್ರ ಮತ್ತು ದೆಹಲಿ ಸರ್ಕಾರದ ನಡುವೆ ದೀರ್ಘಕಾಲದವರೆಗೆ ನಡೆದ ಸಂಘರ್ಷವನ್ನು ಇದು ಸೂಚಿಸುತ್ತದೆ.

ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ದೆಹಲಿ ಸರ್ಕಾರವನ್ನು ವಲಸೆ ಕಾರ್ಮಿಕರನ್ನು ಮಾನವೀಯ ರೀತಿಯಲ್ಲಿ ಮನವೊಲಿಸುವಂತೆ ಕೇಳಿಕೊಂಡಿದ್ದಾರೆ ಅಥವಾ ಸರ್ಕಾರವು ನಡೆಸುವ ಆಶ್ರಯ ಮನೆಗಳಿಗೆ ತೆರಳಲು ಅಥವಾ ಅಲ್ಲಿಗೆ ಹೋಗಲು ಎಲ್ಲಾ ಮೂಲಭೂತ ಸೌಲಭ್ಯಗಳನ್ನು ರಾಜ್ಯವು ಒದಗಿಸುವಂತೆ ಕೇಳಿಕೊಂಡಿದ್ದಾರೆ.

ಲಾಕ್‌ಡೌನ್ ಮತ್ತು ಕೆಲಸದ ದಿನಗಳ ನಷ್ಟದ ಕಾರಣದಿಂದಾಗಿ ಉದ್ಯೋಗದಾತರು ಕಾರ್ಮಿಕರಿಗೆ ತಮ್ಮ ಬಾಕಿಗಳನ್ನು ಯಾವುದೇ ಕಡಿತವಿಲ್ಲದೆ ಪಾವತಿಸಿದ್ದಾರೆನ್ನುವುದನ್ನು ಖಚಿತಪಡಿಸಿಕೊಳ್ಳಲು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರದ ಸೂಚನೆಗಳನ್ನು ಬೈಜಾಲ್ ಪುನರುಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...