Homeಮುಖಪುಟಕಾರ್ಮಿಕರಿಗೆ ಊರಿಗೆ ತೆರಳಲು ಅವಕಾಶ ಕೊಟ್ಟಿದ್ದಕ್ಕೆ ಕೇಜ್ರಿವಾಲ್ ವಿರುದ್ಧ ಕೇಂದ್ರದ ಕಿಡಿ

ಕಾರ್ಮಿಕರಿಗೆ ಊರಿಗೆ ತೆರಳಲು ಅವಕಾಶ ಕೊಟ್ಟಿದ್ದಕ್ಕೆ ಕೇಜ್ರಿವಾಲ್ ವಿರುದ್ಧ ಕೇಂದ್ರದ ಕಿಡಿ

- Advertisement -
- Advertisement -

ಲಾಕ್‌ಡೌನ್ ಸಂಧರ್ಭದಲ್ಲಿ ಭಾರೀ ಸಂಖ್ಯೆಯಲ್ಲಿ ದೆಹಲಿಯಿಂದ ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ಹೊರಡಲು ಅವಕಾಶ ಮಾಡಿಕೊಟ್ಟಿದ್ದಕ್ಕಾಗಿ ಅರವಿಂದ್‌ ಕೇಜ್ರಿವಾಲ್ ನೇತೃತ್ವದ ದೆಹಲಿ ಸರಕಾರಕ್ಕೆ ಕೇಂದ್ರ ತೀಕ್ಷ್ಣ ಪತ್ರ ಕಳುಹಿಸಿದೆ.

ಶನಿವಾರದಂದು ದೆಹಲಿಯಿಂದ ಹತ್ತಾರು ಸಾವಿರ ಕಾರ್ಮಿಕರು ವಲಸೆ ಹೋಗುತ್ತಿರುವ ಕುರಿತು ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ತೀಕ್ಷ್ಣವಾಗಿ ಪತ್ರ ಬರೆದಿದ್ದಾರೆ.

ರಾಷ್ಟ್ರ ರಾಜಧಾನಿ ದೆಹಲಿಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕರು ವಲಸೆ ಹೋಗುತ್ತಿರುವ ಹಿನ್ನಲೆಯಲ್ಲಿ ದೆಹಲಿಯೊಂದಿಗೆ ಗಡಿ ಹಂಚಿಕೊಂಡಿರುವ ರಾಜ್ಯಗಳು ತಮ್ಮ ಗಡಿಗಳನ್ನು ಮುಚ್ಚುವಂತೆ ಕೇಂದ್ರ ಸರಕಾರವನ್ನು ಕೋರಿಕೊಂಡಿವೆ. ಲಾಕ್‌ಡೌನ್ ಸಮಯದಲ್ಲಿ ವಲಸಿಗರು ಆರೋಗ್ಯಕ್ಕೆ ಅಪಾಯ ಒಡ್ಡಿಕೊಳ್ಳುವ ಬಗ್ಗೆ ಪ್ರಧಾನಿ ಹಾಗೂ ಗೃಹಮಂತ್ರಿ  ತೀವ್ರ ಕಳವಳ ವ್ಯಕ್ತಪಡಿಸಿದ ಬೆನ್ನಿಗೆ ಈ ಪತ್ರವನ್ನು ಕಳುಹಿಸಲಾಗಿದೆ.

ಗೃಹ ಸಚಿವ ಅಮಿತ್ ಶಾ ಅವರು ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಅವರನ್ನು ಕರೆದು ಯಾವುದೇ ವಲಸೆಗಳಿಗೆ ಅವಕಾಶ ನೀಡಬಾರದು ಎಂಬ ಸ್ಪಷ್ಟ ಸೂಚನೆಗಳನ್ನು ನೀಡಿದ ನಂತರ ಭಾನುವಾರ ಸಂಜೆ ಈ ಪತ್ರವನ್ನು ಕಳುಹಿಸಲಾಗಿದೆ ಎಂದು ಗೃಹ ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪಿಎಂ ಮೋದಿ ಮತ್ತು ಗೃಹ ಸಚಿವ ಅಮಿತ್‌ ಷಾ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಅವರೊಂದಿಗೆ ಈ ಕುರಿತು ಈ ಹಿಂದೆ ಮಾತನಾಡಿದ್ದರು ಎಂದು ತಿಳಿದುಬಂದಿದೆ.

ವಲಸಿಗರನ್ನು ಯುಪಿ ಗಡಿಯವರೆಗೆ ತಲುಪಿಸಲು ಡಿಟಿಸಿ ಬಸ್ಸುಗಳನ್ನು ಬಳಸಲು ಅನುಮತಿಸಿದ ದೆಹಲಿ ಸರ್ಕಾರದ ನಿರ್ಧಾರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಅವರು ದೆಹಲಿ ಮುಖ್ಯ ಕಾರ್ಯದರ್ಶಿಗೆ ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳನ್ನು ಲಾಕ್ ಡೌನ್ ಜಾರಿಗೊಳಿಸುವಲ್ಲಿನ ವಿಫಲತೆಗಳಿಗಾಗಿ ಅಮಾನತುಗೊಳಿಸಬೇಕೆಂದು ಹೇಳಿದ್ದಾರೆ.

ದೆಹಲಿಯಿಂದ ನಿರ್ಗಮಿಸಿದ ಎಲ್ಲಾ ವಲಸಿಗರನ್ನು ಹದಿನಾಲ್ಕು ದಿನಗಳ ಕಾಲ ಸಂಪರ್ಕ ತಡೆಯಲ್ಲಿರಿಸುವಂತೆ ರಾಜ್ಯಸರಕಾರಗಳಿಗೆ ಕೇಂದ್ರ ಆದೇಶ ನೀಡಲು ಒತ್ತಾಯಿಸಲಾಗಿದೆ.

“ಲಾಕ್‌ಡೌನ್ ಅನ್ನು ಕಾರ್ಯಗತಗೊಳಿಸಲು ದೆಹಲಿ ಸರ್ಕಾರವು ಅಗತ್ಯವಿರುವ ಎಲ್ಲಾ ಅಧಿಕಾರಗಳನ್ನು ಹೊಂದಿದೆ” ಎಂದು ಅಧಿಕಾರಿ ಹೇಳಿದ್ದಾರೆ. ಕೇಜ್ರಿವಾಲ್ ಸರ್ಕಾರದ ಅಧಿಕಾರಗಳ ಬಗ್ಗೆ ಸ್ಪಷ್ಟವಾದ ಉಲ್ಲೇಖವು ರಾಷ್ಟ್ರೀಯ ರಾಜಧಾನಿಯಲ್ಲಿ ವ್ಯವಹಾರಗಳನ್ನು ನಡೆಸಲು ಹಾಗೂ ಅಧಿಕಾರ ವಿತರಣೆಯ ಬಗ್ಗೆ ಕೇಂದ್ರ ಮತ್ತು ದೆಹಲಿ ಸರ್ಕಾರದ ನಡುವೆ ದೀರ್ಘಕಾಲದವರೆಗೆ ನಡೆದ ಸಂಘರ್ಷವನ್ನು ಇದು ಸೂಚಿಸುತ್ತದೆ.

ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ದೆಹಲಿ ಸರ್ಕಾರವನ್ನು ವಲಸೆ ಕಾರ್ಮಿಕರನ್ನು ಮಾನವೀಯ ರೀತಿಯಲ್ಲಿ ಮನವೊಲಿಸುವಂತೆ ಕೇಳಿಕೊಂಡಿದ್ದಾರೆ ಅಥವಾ ಸರ್ಕಾರವು ನಡೆಸುವ ಆಶ್ರಯ ಮನೆಗಳಿಗೆ ತೆರಳಲು ಅಥವಾ ಅಲ್ಲಿಗೆ ಹೋಗಲು ಎಲ್ಲಾ ಮೂಲಭೂತ ಸೌಲಭ್ಯಗಳನ್ನು ರಾಜ್ಯವು ಒದಗಿಸುವಂತೆ ಕೇಳಿಕೊಂಡಿದ್ದಾರೆ.

ಲಾಕ್‌ಡೌನ್ ಮತ್ತು ಕೆಲಸದ ದಿನಗಳ ನಷ್ಟದ ಕಾರಣದಿಂದಾಗಿ ಉದ್ಯೋಗದಾತರು ಕಾರ್ಮಿಕರಿಗೆ ತಮ್ಮ ಬಾಕಿಗಳನ್ನು ಯಾವುದೇ ಕಡಿತವಿಲ್ಲದೆ ಪಾವತಿಸಿದ್ದಾರೆನ್ನುವುದನ್ನು ಖಚಿತಪಡಿಸಿಕೊಳ್ಳಲು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರದ ಸೂಚನೆಗಳನ್ನು ಬೈಜಾಲ್ ಪುನರುಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...