Homeಅಂಕಣಗಳುಥೂತ್ತೇರಿ | ಯಾಹೂನಿನಗೆ ಬ್ಲಡ್ ಕ್ಯಾನ್ಸರ್ ಇರಬೇಕು ಕಣೋ : ಯಾಹೂ

ನಿನಗೆ ಬ್ಲಡ್ ಕ್ಯಾನ್ಸರ್ ಇರಬೇಕು ಕಣೋ : ಯಾಹೂ

- Advertisement -
- Advertisement -

ಸದ್ಯದ ಕರ್ನಾಟಕದ ರಾಜಕಾರಣ, ಅಯ್ಯೋಪಾಪ ಎಂಬ ಕನಿಕರದ ಉದ್ಘಾರಕ್ಕೆ ತುತ್ತಾಗಿದೆ. ಮುಖ್ಯಮಂತ್ರಿ ಕುರ್ಚಿಯಲ್ಲಿ ಕೂತವನ ದುಗುಡದ ಮುಖ ನೋಡಿದರೆ ಯಾರಿಗೆ ಬೇಕು ಆ ಮುಳ್ಳಿನ ಕುರ್ಚಿ ಎನ್ನುವಂತಾಗಿದೆ. ಈ ನಡುವೆ ಬಿ.ಜೆ.ಪಿ ಜನರಾಡುವ ಮಾತುಕತೆ ನೋಡಿದರೆ, ಒಂದು ಸಮೂಹವೇ ಮತೀಯ ಮನೋಕ್ಲೇಶಕ್ಕೆ ತುತ್ತಾಗಿರುವಂತಿದೆ. ಅದರಲ್ಲಿ ಅ.ಕು.ಹೆಗಡೆ ಎಂಬುವನ ತಲೆ ಸಂಪೂರ್ಣ ಹದಗೆಟ್ಟಿರುವುದರಿಂದ, ಆತನನ್ನೇ ಮಾತನಾಡಿಸಿದರೆ ಹೇಗೆ ಎಂದು ಫೋನ್ ಮಾಡಲಾಗಿ ರಿಂಗಾಯ್ತು.

ನಮಸ್ತೇ ಸದಾವತ್ಸಲೇ ಮಾತೃ ಭೂಮಿ…. “ಹಲೊ ಯಾರ್ರಿ..”
“ನಾನು ಕಣೊ ಆಂಕೋಲಾದಿಂದ ಹೊಸಮನೆ ಹೆಗಡೆ ಮಾತನಾಡ್ತಾಯಿರೋದು.”
“ಏನೇಳಿ ಹೆಗಡೆಯವರೆ.”
“ನಾನು ನಿಮ್ಮ ತಂದೆ ಕ್ಲಾಸುಮೇಟು ಕಣೋ.”
“ಹೌದಾ.”
“ಆತ ತುಂಬ ಸಂಭಾವಿತ, ನಿಮ್ಮ ತಾಯಿನೂ ಬಹಳ ಒಳ್ಳೆಯವಳು.”
“ಹೌದು, ಅಂತ ಗೌರವಾನ್ವಿತರ ಮಗ ನಾನು.”
“ಆದರೇನು ನಮ್ಮ ಮರಿಯಾದಿನೆ ಕಳದಲ್ಲೋ.”
“ನಾನೇನು ಮಾಡಿದ್ದಿನಿ.”
“ನಾನೇನು ಮಾಡಿದ್ದಿನಿ ಅಂತ ಕೇಳಿದ್ರೆ ಏನ್ಹೇಳದು. ನಿನ್ನ ಅಪರಾಧಗಳೇ ನಿನಗೆ ಗೊತ್ತಿಲ್ಲವಲ್ಲೋ?.”
“ಅಪರಾಧ ಮಾಡಿದ್ರೆ ತಾನೆ.”
“ಲೋಕಸಭೇಲಿ ನಿಂತುಕೊಂಡು ಸುಳ್ಳು ಹೇಳತಿ ಕ್ಷಮೆ ಯಾಚಿಸ್ತಿ, ನಿನ್ನ ಆರಿಸಿದವರ ಮಾನ ಕಳಿತಿಯಲ್ಲೊ.”
“ನೋಡಿ ಹೆಗಡೆಯವರೆ, ನಾನು ಸತ್ಯನೆ ಹೇಳದು. ಅದ್ಕೆ ಎಲ್ಲರಿಗೂ ಉರಿಹತ್ತಿಗಳದು.”
“ಅಲ್ಲೊ ಗಾಂಧಿ ಉಪವಾಸಕ್ಕೆದರಿ ಬ್ರಿಟಿಷರು ಓಡಲಿಲ್ಲ. ಅದನ್ನ ಓದಿದ್ರೆ ರಕ್ತ ಹೆಪ್ಪುಗಟ್ಟುತ್ತೆ ಅಂತಿಯಲ್ಲೋ.”
“ಹೌದು ಹಾಗಂದೆ.”
“ಹಾಗಿದ್ರೆ ನಿನಗೆ ಬ್ಲಡ್‍ಕ್ಯಾನ್ಸರ್ ಇರಬಹುದು ಕಣೋ. ಅಲ್ಲೇ ಅಂಕೋಲಾದಲ್ಲಿ ಒಬ್ಬ ಮಹಿಳಾ ಡಾಕ್ಟರಿದಾರೆ. ಅಲ್ಲಿಗೋಗಿ ಚೆಕಪ್ ಮಾಡಿಸಿಕೊ. ಅಂದ್ರೆ ಸುಮ್ಮನೆ ಅವುರತ್ರ ಒಂದು ಗಂಟೆ ಮಾತನಾಡು. ಬ್ಲಡ್ ಸರಿಹೋಗಬಹುದು.”
“ನೀವು ಹಿರಿಯರು ಅಂತ ಗೌರವ ಕೊಡ್ತಿನಿ ಅಂಗೆಲ್ಲ ಮಾತನಾಡಬೇಡಿ ತಿಳಿತಾ.”
“ನನ್ನ ಸ್ನೇಹಿತನ ಮಗ ಕಣೋ ನೀನು. ಅದ್ಕೆ ಹೇಳ್ತಿನಿ. ಗಾಂಧಿ ಬಗ್ಗೆ ನಿನಗೇನೊ ಗೊತ್ತು. ಭಾರತ ಜಗತ್ತಿಗೆ ಕೊಟ್ಟ ಕೊಡುಗೆನೆ ಗಾಂಧಿ. ಹಿಂದೂ ಧರ್ಮದ ಶ್ರೇಷ್ಠ ಕೊಡುಗೆನೇ ಗಾಂಧಿ ಕಣೊ. ನಿಮ್ಮ ಕೊಡುಗೆ ಯಾವುದೊ?”
“ಮೋದಿ ಸಾವರ್ಕರ್‍ಗಿಂತ್ಲೂ ಬೇಕಾ?”
“ಒಬ್ಬ ಐದು ದಿನದಲ್ಲಿ ಮೂರು ಸಾವಿರ ಜನ ಕೊಲ್ಲಿಸಿದ. ಇನ್ನೊಬ್ಬ ಮೂರು ಬಾರಿ ಬ್ರಿಟಿಷರಿಗೆ ಕ್ಷಮಾಪಣೆ ಪತ್ರ ಬರೆದು ಬಿಡುಗಡೆಯಾಗಿ, ಹಿಂದೂ ಮುಸ್ಲಿಂ ಜಗಳ ಮಾಡಸಕ್ಕೆ ಸಾಯೋವರಿಗೂ ಶ್ರಮಪಟ್ಟ ಅಲ್ವೇನೊ?”
“ನೋಡಿ ತಿಳಕಂಡು ಮಾತಾಡಿ.”
“ನೀನು ಗಾಂಧಿ ಓದಿಕಂಡು ಮಾತಾಡು.”
“ಗಾಂಧಿ ಬೇಕಾಗಿಲ್ಲ ನನಿಗೆ.”
“ಬ್ರಾಹ್ಮಣ ಕುಲಕ್ಕೆ ಅವಮಾನ ನೀನು. ಬ್ರಾಹ್ಮಣ ಮಾತನಾಡ್ತ ಇದ್ರೆ ಕೇಳಬೇಕು ಅನ್ಸುತ್ತೆ. ಆತನ ಭಾಷೆ ಅಪ್ಯಾಯಮಾನವಾಗಿರುತ್ತೆ. ಅವನ ಮಾತಲ್ಲಿ ಹಿಂಸೆ ಇರಲ್ಲ. ಕಟಕಿ ಇರಲ್ಲ. ಪ್ರಚೋದನೆ ಇರಲ್ಲ. ಅವಮಾನ ಇರಲ್ಲ. ನಿನ್ನ ಮಾತಲ್ಲಿ ಇವೆಲ್ಲಾ ಇವೆ.”
“ಅದೇ ನನ್ನ ವ್ಯಕ್ತಿತ್ವ.”
“ಆ ನಿನ್ನ ವ್ಯಕ್ತಿತ್ವನ ನೀನು ಟೀಕೆ ಮಾಡೊ ಜಾತ್ಯತೀತರು ಶೋಧನೆ ಮಾಡ್ತಯಿದಾರೆ.”
“ಆ ನನ್ನ ಮಕ್ಕಳಿಗೆ ಬುದ್ಧಿ ಕಲುಸ್ತಿನಿ.”
“ನೀನು ಆ ನನ ಮಕ್ಕಳು ಅನ್ನಬಾರದಿತ್ತು.”
“ನಾನೂ ಹರಾಜಾಕ್ತಿನಿ.”
“ನಿನ್ನಿಂದಾಗಿ ನಮ್ಮ ಜಿಲ್ಲೆಗೆ ಕೆಟ್ಟ ಹೆಸರು ಬಂತಲ್ಲೋ. ನಮ್ಮ ಜಿಲ್ಲೇಲಿ ಎಂತೆಂತಹ ಮೇಧಾವಿಗಳಿದ್ರು. ಕರ್ನಾಟಕ ಕಂಡ ಶ್ರೇಷ್ಠ ಆಡಳಿತಗಾರ ರಾಮಕೃಷ್ಣ ಹೆಗಡೆ, ತಾಯಿ ಹೃದಯದ ಮಾರ್ಗರೆಟ್ ಆಳ್ವ, ಇನ್ನ ಸಾಹಿತ್ಯ ಲೋಕಕ್ಕೆ ಬಂದ್ರೆ, ಶಾಂತಿನಾಥ ದೇಸಾಯಿ, ಯಶವಂತ ಚಿತ್ತಾಲ, ಗಂಗಾಧರ ಚಿತ್ತಾಲ, ದಿನಕರ ದೇಸಾಯಿ, ಗೌರೀಶ್ ಕಾಯ್ಕಿಣಿ, ಜಯಂತಿ, ಅನುಪಮ ಇಂತಹ ಜನಗಳ ನಾಡಲ್ಲಿ ನೀನೆಲ್ಲಿ ಉದ್ಭವಿಸಿದೆಯೋ ಮುಂಡೆದೆ.”
“ನೋಡಿ ಮುಂಡೆದೆ ಅಂದ್ರೆ ನನ್ನ ರಕ್ತ ಹೆಪ್ಪುಗಟ್ಟುತ್ತೆ.”
“ನೋಡು ನಿನ್ನನ್ನ ಬೈಯ್ಯೋದಕ್ಕೆ ಬೈಗಳನೇ ಇಲ್ಲ. ಹೆತ್ತ ತಾಯಿಗೆ ಲಾಡಿ ಬಿಚ್ಚೊ ಮಾತಾಡಬೇಡ.”
“ಏನು ಹಾಗಂದೆ.್ರ”
“ಅದೊಂದು ಕೇಳಿಸಿಕೊಳ್ಳಕ್ಕೆ ಹಿಂಸೆಯಾಗೊ ಪದ. ನಮ್ಮ ಭಾರತದ ಸಂವಿಧಾನದಡಿಯಲ್ಲಿ ಚುನಾವಣೆ ನಡೆದು ಅದರಲ್ಲಿ ಗೆದ್ದು ಬಂದು ಅದನ್ನೆ ಬದಲಾಯಿಸ್ತಿನಿ ಅಂತಿಯಲ್ಲಾ, ಅದನ್ನ ಜಾತ್ಯತೀತರು ಹೆತ್ತ ತಾಯಿಗೇ ಲಾಡಿಬಿಚ್ಚೊ ಮಾತು ಅಂತಾರೆ. ಇಷ್ಟು ಕಠೋರ ಮಾತು ನಿನಗೆ ಬೇಕಾ.”
“ಅವರಿಗೆಲ್ಲಾ ನಾನು ಉತ್ತರ ಕೊಡ್ತಿನಿ. ನೀವು ತಲೆಕೆಡಿಸಿಕೋಬೇಡಿ.”
“ಹಾಗಂದ್ರೇಗೊ ಮುಂಡೆದೆ, ನೀನು ಬ್ರಾಹ್ಮಣ, ನಾನು ಬ್ರಾಹ್ಮಣ. ಆದ್ರಿಂದ ಅವರು ನಿನಿಗಂದ ಮಾತು ನನ್ನನ್ನು ನೋಯಿಸುತ್ತೆ.”
“ಅವರ ಮಾತ ಕೇಳಿಸಿಕೋಬೇಡಿ.”
“ಹಾಗಂದ್ರೇಗೊ, ಈ ಮುಪ್ಪಿನ ಕಾಲದಲ್ಲಿ ನಾನಿರೋದೆ ಜಾತ್ಯತೀತರ ನಡುವೆ.”
“ಅವರ ಜೊತೆ ಇರಬೇಡಿ, ನಮ್ಮ ಮನೆ ಹತ್ರ ಬಂದಿರಿ.”
“ನಿನ್ನ ಮನೆ ಹತ್ರ ಬರೀ ಹುಚ್ಚರ ಸಂತೆ ಕಣೋ. ಅಲ್ಲಿ ಸೇರೊವೆಲ್ಲಾ ಪಶ್ಚಿಮದ ದಾಳಿಗೆ ಹುಟ್ಟಿದಂಗೆ ಮಾತನಾಡ್ತವೆ. ಪಾಕಿಸ್ತಾನದ ಬಗ್ಗೆ ಮಾತನಾಡ್ತವೆ. ಶೂದ್ರರನ್ನು ಆಡಿಕೊಳ್ತವೆ. ದೇಶಕ್ಕೆ ಬೆಂಕಿ ಹಚ್ಚೊ ಮಾತುಬಿಟ್ರೆ, ಅಲ್ಲಿ ಇನ್ಯಾವ ಮನಶಾಂತಿನೂ ಸಿಗಲ್ಲ. ಅಲ್ಲಿಗೆ ಬರೋದಕ್ಕಿಂತ ಆತ್ಮಹತ್ಯೆ ಮಾಡಿಕಳದೇ ಒಳ್ಳೆದು.”
“ಅಷ್ಟು ಕೆಲಸ ಮಾಡಿ.”
“ಥೂ, ಗೋಡ್ಸೆ ಸಂತಾನವೆ.”

ಥೂತ್ತೇರಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...