Homeಅಂಕಣಗಳುಥೂತ್ತೇರಿ | ಯಾಹೂನಿನಗೆ ಬ್ಲಡ್ ಕ್ಯಾನ್ಸರ್ ಇರಬೇಕು ಕಣೋ : ಯಾಹೂ

ನಿನಗೆ ಬ್ಲಡ್ ಕ್ಯಾನ್ಸರ್ ಇರಬೇಕು ಕಣೋ : ಯಾಹೂ

- Advertisement -
- Advertisement -

ಸದ್ಯದ ಕರ್ನಾಟಕದ ರಾಜಕಾರಣ, ಅಯ್ಯೋಪಾಪ ಎಂಬ ಕನಿಕರದ ಉದ್ಘಾರಕ್ಕೆ ತುತ್ತಾಗಿದೆ. ಮುಖ್ಯಮಂತ್ರಿ ಕುರ್ಚಿಯಲ್ಲಿ ಕೂತವನ ದುಗುಡದ ಮುಖ ನೋಡಿದರೆ ಯಾರಿಗೆ ಬೇಕು ಆ ಮುಳ್ಳಿನ ಕುರ್ಚಿ ಎನ್ನುವಂತಾಗಿದೆ. ಈ ನಡುವೆ ಬಿ.ಜೆ.ಪಿ ಜನರಾಡುವ ಮಾತುಕತೆ ನೋಡಿದರೆ, ಒಂದು ಸಮೂಹವೇ ಮತೀಯ ಮನೋಕ್ಲೇಶಕ್ಕೆ ತುತ್ತಾಗಿರುವಂತಿದೆ. ಅದರಲ್ಲಿ ಅ.ಕು.ಹೆಗಡೆ ಎಂಬುವನ ತಲೆ ಸಂಪೂರ್ಣ ಹದಗೆಟ್ಟಿರುವುದರಿಂದ, ಆತನನ್ನೇ ಮಾತನಾಡಿಸಿದರೆ ಹೇಗೆ ಎಂದು ಫೋನ್ ಮಾಡಲಾಗಿ ರಿಂಗಾಯ್ತು.

ನಮಸ್ತೇ ಸದಾವತ್ಸಲೇ ಮಾತೃ ಭೂಮಿ…. “ಹಲೊ ಯಾರ್ರಿ..”
“ನಾನು ಕಣೊ ಆಂಕೋಲಾದಿಂದ ಹೊಸಮನೆ ಹೆಗಡೆ ಮಾತನಾಡ್ತಾಯಿರೋದು.”
“ಏನೇಳಿ ಹೆಗಡೆಯವರೆ.”
“ನಾನು ನಿಮ್ಮ ತಂದೆ ಕ್ಲಾಸುಮೇಟು ಕಣೋ.”
“ಹೌದಾ.”
“ಆತ ತುಂಬ ಸಂಭಾವಿತ, ನಿಮ್ಮ ತಾಯಿನೂ ಬಹಳ ಒಳ್ಳೆಯವಳು.”
“ಹೌದು, ಅಂತ ಗೌರವಾನ್ವಿತರ ಮಗ ನಾನು.”
“ಆದರೇನು ನಮ್ಮ ಮರಿಯಾದಿನೆ ಕಳದಲ್ಲೋ.”
“ನಾನೇನು ಮಾಡಿದ್ದಿನಿ.”
“ನಾನೇನು ಮಾಡಿದ್ದಿನಿ ಅಂತ ಕೇಳಿದ್ರೆ ಏನ್ಹೇಳದು. ನಿನ್ನ ಅಪರಾಧಗಳೇ ನಿನಗೆ ಗೊತ್ತಿಲ್ಲವಲ್ಲೋ?.”
“ಅಪರಾಧ ಮಾಡಿದ್ರೆ ತಾನೆ.”
“ಲೋಕಸಭೇಲಿ ನಿಂತುಕೊಂಡು ಸುಳ್ಳು ಹೇಳತಿ ಕ್ಷಮೆ ಯಾಚಿಸ್ತಿ, ನಿನ್ನ ಆರಿಸಿದವರ ಮಾನ ಕಳಿತಿಯಲ್ಲೊ.”
“ನೋಡಿ ಹೆಗಡೆಯವರೆ, ನಾನು ಸತ್ಯನೆ ಹೇಳದು. ಅದ್ಕೆ ಎಲ್ಲರಿಗೂ ಉರಿಹತ್ತಿಗಳದು.”
“ಅಲ್ಲೊ ಗಾಂಧಿ ಉಪವಾಸಕ್ಕೆದರಿ ಬ್ರಿಟಿಷರು ಓಡಲಿಲ್ಲ. ಅದನ್ನ ಓದಿದ್ರೆ ರಕ್ತ ಹೆಪ್ಪುಗಟ್ಟುತ್ತೆ ಅಂತಿಯಲ್ಲೋ.”
“ಹೌದು ಹಾಗಂದೆ.”
“ಹಾಗಿದ್ರೆ ನಿನಗೆ ಬ್ಲಡ್‍ಕ್ಯಾನ್ಸರ್ ಇರಬಹುದು ಕಣೋ. ಅಲ್ಲೇ ಅಂಕೋಲಾದಲ್ಲಿ ಒಬ್ಬ ಮಹಿಳಾ ಡಾಕ್ಟರಿದಾರೆ. ಅಲ್ಲಿಗೋಗಿ ಚೆಕಪ್ ಮಾಡಿಸಿಕೊ. ಅಂದ್ರೆ ಸುಮ್ಮನೆ ಅವುರತ್ರ ಒಂದು ಗಂಟೆ ಮಾತನಾಡು. ಬ್ಲಡ್ ಸರಿಹೋಗಬಹುದು.”
“ನೀವು ಹಿರಿಯರು ಅಂತ ಗೌರವ ಕೊಡ್ತಿನಿ ಅಂಗೆಲ್ಲ ಮಾತನಾಡಬೇಡಿ ತಿಳಿತಾ.”
“ನನ್ನ ಸ್ನೇಹಿತನ ಮಗ ಕಣೋ ನೀನು. ಅದ್ಕೆ ಹೇಳ್ತಿನಿ. ಗಾಂಧಿ ಬಗ್ಗೆ ನಿನಗೇನೊ ಗೊತ್ತು. ಭಾರತ ಜಗತ್ತಿಗೆ ಕೊಟ್ಟ ಕೊಡುಗೆನೆ ಗಾಂಧಿ. ಹಿಂದೂ ಧರ್ಮದ ಶ್ರೇಷ್ಠ ಕೊಡುಗೆನೇ ಗಾಂಧಿ ಕಣೊ. ನಿಮ್ಮ ಕೊಡುಗೆ ಯಾವುದೊ?”
“ಮೋದಿ ಸಾವರ್ಕರ್‍ಗಿಂತ್ಲೂ ಬೇಕಾ?”
“ಒಬ್ಬ ಐದು ದಿನದಲ್ಲಿ ಮೂರು ಸಾವಿರ ಜನ ಕೊಲ್ಲಿಸಿದ. ಇನ್ನೊಬ್ಬ ಮೂರು ಬಾರಿ ಬ್ರಿಟಿಷರಿಗೆ ಕ್ಷಮಾಪಣೆ ಪತ್ರ ಬರೆದು ಬಿಡುಗಡೆಯಾಗಿ, ಹಿಂದೂ ಮುಸ್ಲಿಂ ಜಗಳ ಮಾಡಸಕ್ಕೆ ಸಾಯೋವರಿಗೂ ಶ್ರಮಪಟ್ಟ ಅಲ್ವೇನೊ?”
“ನೋಡಿ ತಿಳಕಂಡು ಮಾತಾಡಿ.”
“ನೀನು ಗಾಂಧಿ ಓದಿಕಂಡು ಮಾತಾಡು.”
“ಗಾಂಧಿ ಬೇಕಾಗಿಲ್ಲ ನನಿಗೆ.”
“ಬ್ರಾಹ್ಮಣ ಕುಲಕ್ಕೆ ಅವಮಾನ ನೀನು. ಬ್ರಾಹ್ಮಣ ಮಾತನಾಡ್ತ ಇದ್ರೆ ಕೇಳಬೇಕು ಅನ್ಸುತ್ತೆ. ಆತನ ಭಾಷೆ ಅಪ್ಯಾಯಮಾನವಾಗಿರುತ್ತೆ. ಅವನ ಮಾತಲ್ಲಿ ಹಿಂಸೆ ಇರಲ್ಲ. ಕಟಕಿ ಇರಲ್ಲ. ಪ್ರಚೋದನೆ ಇರಲ್ಲ. ಅವಮಾನ ಇರಲ್ಲ. ನಿನ್ನ ಮಾತಲ್ಲಿ ಇವೆಲ್ಲಾ ಇವೆ.”
“ಅದೇ ನನ್ನ ವ್ಯಕ್ತಿತ್ವ.”
“ಆ ನಿನ್ನ ವ್ಯಕ್ತಿತ್ವನ ನೀನು ಟೀಕೆ ಮಾಡೊ ಜಾತ್ಯತೀತರು ಶೋಧನೆ ಮಾಡ್ತಯಿದಾರೆ.”
“ಆ ನನ್ನ ಮಕ್ಕಳಿಗೆ ಬುದ್ಧಿ ಕಲುಸ್ತಿನಿ.”
“ನೀನು ಆ ನನ ಮಕ್ಕಳು ಅನ್ನಬಾರದಿತ್ತು.”
“ನಾನೂ ಹರಾಜಾಕ್ತಿನಿ.”
“ನಿನ್ನಿಂದಾಗಿ ನಮ್ಮ ಜಿಲ್ಲೆಗೆ ಕೆಟ್ಟ ಹೆಸರು ಬಂತಲ್ಲೋ. ನಮ್ಮ ಜಿಲ್ಲೇಲಿ ಎಂತೆಂತಹ ಮೇಧಾವಿಗಳಿದ್ರು. ಕರ್ನಾಟಕ ಕಂಡ ಶ್ರೇಷ್ಠ ಆಡಳಿತಗಾರ ರಾಮಕೃಷ್ಣ ಹೆಗಡೆ, ತಾಯಿ ಹೃದಯದ ಮಾರ್ಗರೆಟ್ ಆಳ್ವ, ಇನ್ನ ಸಾಹಿತ್ಯ ಲೋಕಕ್ಕೆ ಬಂದ್ರೆ, ಶಾಂತಿನಾಥ ದೇಸಾಯಿ, ಯಶವಂತ ಚಿತ್ತಾಲ, ಗಂಗಾಧರ ಚಿತ್ತಾಲ, ದಿನಕರ ದೇಸಾಯಿ, ಗೌರೀಶ್ ಕಾಯ್ಕಿಣಿ, ಜಯಂತಿ, ಅನುಪಮ ಇಂತಹ ಜನಗಳ ನಾಡಲ್ಲಿ ನೀನೆಲ್ಲಿ ಉದ್ಭವಿಸಿದೆಯೋ ಮುಂಡೆದೆ.”
“ನೋಡಿ ಮುಂಡೆದೆ ಅಂದ್ರೆ ನನ್ನ ರಕ್ತ ಹೆಪ್ಪುಗಟ್ಟುತ್ತೆ.”
“ನೋಡು ನಿನ್ನನ್ನ ಬೈಯ್ಯೋದಕ್ಕೆ ಬೈಗಳನೇ ಇಲ್ಲ. ಹೆತ್ತ ತಾಯಿಗೆ ಲಾಡಿ ಬಿಚ್ಚೊ ಮಾತಾಡಬೇಡ.”
“ಏನು ಹಾಗಂದೆ.್ರ”
“ಅದೊಂದು ಕೇಳಿಸಿಕೊಳ್ಳಕ್ಕೆ ಹಿಂಸೆಯಾಗೊ ಪದ. ನಮ್ಮ ಭಾರತದ ಸಂವಿಧಾನದಡಿಯಲ್ಲಿ ಚುನಾವಣೆ ನಡೆದು ಅದರಲ್ಲಿ ಗೆದ್ದು ಬಂದು ಅದನ್ನೆ ಬದಲಾಯಿಸ್ತಿನಿ ಅಂತಿಯಲ್ಲಾ, ಅದನ್ನ ಜಾತ್ಯತೀತರು ಹೆತ್ತ ತಾಯಿಗೇ ಲಾಡಿಬಿಚ್ಚೊ ಮಾತು ಅಂತಾರೆ. ಇಷ್ಟು ಕಠೋರ ಮಾತು ನಿನಗೆ ಬೇಕಾ.”
“ಅವರಿಗೆಲ್ಲಾ ನಾನು ಉತ್ತರ ಕೊಡ್ತಿನಿ. ನೀವು ತಲೆಕೆಡಿಸಿಕೋಬೇಡಿ.”
“ಹಾಗಂದ್ರೇಗೊ ಮುಂಡೆದೆ, ನೀನು ಬ್ರಾಹ್ಮಣ, ನಾನು ಬ್ರಾಹ್ಮಣ. ಆದ್ರಿಂದ ಅವರು ನಿನಿಗಂದ ಮಾತು ನನ್ನನ್ನು ನೋಯಿಸುತ್ತೆ.”
“ಅವರ ಮಾತ ಕೇಳಿಸಿಕೋಬೇಡಿ.”
“ಹಾಗಂದ್ರೇಗೊ, ಈ ಮುಪ್ಪಿನ ಕಾಲದಲ್ಲಿ ನಾನಿರೋದೆ ಜಾತ್ಯತೀತರ ನಡುವೆ.”
“ಅವರ ಜೊತೆ ಇರಬೇಡಿ, ನಮ್ಮ ಮನೆ ಹತ್ರ ಬಂದಿರಿ.”
“ನಿನ್ನ ಮನೆ ಹತ್ರ ಬರೀ ಹುಚ್ಚರ ಸಂತೆ ಕಣೋ. ಅಲ್ಲಿ ಸೇರೊವೆಲ್ಲಾ ಪಶ್ಚಿಮದ ದಾಳಿಗೆ ಹುಟ್ಟಿದಂಗೆ ಮಾತನಾಡ್ತವೆ. ಪಾಕಿಸ್ತಾನದ ಬಗ್ಗೆ ಮಾತನಾಡ್ತವೆ. ಶೂದ್ರರನ್ನು ಆಡಿಕೊಳ್ತವೆ. ದೇಶಕ್ಕೆ ಬೆಂಕಿ ಹಚ್ಚೊ ಮಾತುಬಿಟ್ರೆ, ಅಲ್ಲಿ ಇನ್ಯಾವ ಮನಶಾಂತಿನೂ ಸಿಗಲ್ಲ. ಅಲ್ಲಿಗೆ ಬರೋದಕ್ಕಿಂತ ಆತ್ಮಹತ್ಯೆ ಮಾಡಿಕಳದೇ ಒಳ್ಳೆದು.”
“ಅಷ್ಟು ಕೆಲಸ ಮಾಡಿ.”
“ಥೂ, ಗೋಡ್ಸೆ ಸಂತಾನವೆ.”

ಥೂತ್ತೇರಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...