Homeಅಂಕಣಗಳುಥೂತ್ತೇರಿ | ಯಾಹೂನಿನಗೆ ಬ್ಲಡ್ ಕ್ಯಾನ್ಸರ್ ಇರಬೇಕು ಕಣೋ : ಯಾಹೂ

ನಿನಗೆ ಬ್ಲಡ್ ಕ್ಯಾನ್ಸರ್ ಇರಬೇಕು ಕಣೋ : ಯಾಹೂ

- Advertisement -
- Advertisement -

ಸದ್ಯದ ಕರ್ನಾಟಕದ ರಾಜಕಾರಣ, ಅಯ್ಯೋಪಾಪ ಎಂಬ ಕನಿಕರದ ಉದ್ಘಾರಕ್ಕೆ ತುತ್ತಾಗಿದೆ. ಮುಖ್ಯಮಂತ್ರಿ ಕುರ್ಚಿಯಲ್ಲಿ ಕೂತವನ ದುಗುಡದ ಮುಖ ನೋಡಿದರೆ ಯಾರಿಗೆ ಬೇಕು ಆ ಮುಳ್ಳಿನ ಕುರ್ಚಿ ಎನ್ನುವಂತಾಗಿದೆ. ಈ ನಡುವೆ ಬಿ.ಜೆ.ಪಿ ಜನರಾಡುವ ಮಾತುಕತೆ ನೋಡಿದರೆ, ಒಂದು ಸಮೂಹವೇ ಮತೀಯ ಮನೋಕ್ಲೇಶಕ್ಕೆ ತುತ್ತಾಗಿರುವಂತಿದೆ. ಅದರಲ್ಲಿ ಅ.ಕು.ಹೆಗಡೆ ಎಂಬುವನ ತಲೆ ಸಂಪೂರ್ಣ ಹದಗೆಟ್ಟಿರುವುದರಿಂದ, ಆತನನ್ನೇ ಮಾತನಾಡಿಸಿದರೆ ಹೇಗೆ ಎಂದು ಫೋನ್ ಮಾಡಲಾಗಿ ರಿಂಗಾಯ್ತು.

ನಮಸ್ತೇ ಸದಾವತ್ಸಲೇ ಮಾತೃ ಭೂಮಿ…. “ಹಲೊ ಯಾರ್ರಿ..”
“ನಾನು ಕಣೊ ಆಂಕೋಲಾದಿಂದ ಹೊಸಮನೆ ಹೆಗಡೆ ಮಾತನಾಡ್ತಾಯಿರೋದು.”
“ಏನೇಳಿ ಹೆಗಡೆಯವರೆ.”
“ನಾನು ನಿಮ್ಮ ತಂದೆ ಕ್ಲಾಸುಮೇಟು ಕಣೋ.”
“ಹೌದಾ.”
“ಆತ ತುಂಬ ಸಂಭಾವಿತ, ನಿಮ್ಮ ತಾಯಿನೂ ಬಹಳ ಒಳ್ಳೆಯವಳು.”
“ಹೌದು, ಅಂತ ಗೌರವಾನ್ವಿತರ ಮಗ ನಾನು.”
“ಆದರೇನು ನಮ್ಮ ಮರಿಯಾದಿನೆ ಕಳದಲ್ಲೋ.”
“ನಾನೇನು ಮಾಡಿದ್ದಿನಿ.”
“ನಾನೇನು ಮಾಡಿದ್ದಿನಿ ಅಂತ ಕೇಳಿದ್ರೆ ಏನ್ಹೇಳದು. ನಿನ್ನ ಅಪರಾಧಗಳೇ ನಿನಗೆ ಗೊತ್ತಿಲ್ಲವಲ್ಲೋ?.”
“ಅಪರಾಧ ಮಾಡಿದ್ರೆ ತಾನೆ.”
“ಲೋಕಸಭೇಲಿ ನಿಂತುಕೊಂಡು ಸುಳ್ಳು ಹೇಳತಿ ಕ್ಷಮೆ ಯಾಚಿಸ್ತಿ, ನಿನ್ನ ಆರಿಸಿದವರ ಮಾನ ಕಳಿತಿಯಲ್ಲೊ.”
“ನೋಡಿ ಹೆಗಡೆಯವರೆ, ನಾನು ಸತ್ಯನೆ ಹೇಳದು. ಅದ್ಕೆ ಎಲ್ಲರಿಗೂ ಉರಿಹತ್ತಿಗಳದು.”
“ಅಲ್ಲೊ ಗಾಂಧಿ ಉಪವಾಸಕ್ಕೆದರಿ ಬ್ರಿಟಿಷರು ಓಡಲಿಲ್ಲ. ಅದನ್ನ ಓದಿದ್ರೆ ರಕ್ತ ಹೆಪ್ಪುಗಟ್ಟುತ್ತೆ ಅಂತಿಯಲ್ಲೋ.”
“ಹೌದು ಹಾಗಂದೆ.”
“ಹಾಗಿದ್ರೆ ನಿನಗೆ ಬ್ಲಡ್‍ಕ್ಯಾನ್ಸರ್ ಇರಬಹುದು ಕಣೋ. ಅಲ್ಲೇ ಅಂಕೋಲಾದಲ್ಲಿ ಒಬ್ಬ ಮಹಿಳಾ ಡಾಕ್ಟರಿದಾರೆ. ಅಲ್ಲಿಗೋಗಿ ಚೆಕಪ್ ಮಾಡಿಸಿಕೊ. ಅಂದ್ರೆ ಸುಮ್ಮನೆ ಅವುರತ್ರ ಒಂದು ಗಂಟೆ ಮಾತನಾಡು. ಬ್ಲಡ್ ಸರಿಹೋಗಬಹುದು.”
“ನೀವು ಹಿರಿಯರು ಅಂತ ಗೌರವ ಕೊಡ್ತಿನಿ ಅಂಗೆಲ್ಲ ಮಾತನಾಡಬೇಡಿ ತಿಳಿತಾ.”
“ನನ್ನ ಸ್ನೇಹಿತನ ಮಗ ಕಣೋ ನೀನು. ಅದ್ಕೆ ಹೇಳ್ತಿನಿ. ಗಾಂಧಿ ಬಗ್ಗೆ ನಿನಗೇನೊ ಗೊತ್ತು. ಭಾರತ ಜಗತ್ತಿಗೆ ಕೊಟ್ಟ ಕೊಡುಗೆನೆ ಗಾಂಧಿ. ಹಿಂದೂ ಧರ್ಮದ ಶ್ರೇಷ್ಠ ಕೊಡುಗೆನೇ ಗಾಂಧಿ ಕಣೊ. ನಿಮ್ಮ ಕೊಡುಗೆ ಯಾವುದೊ?”
“ಮೋದಿ ಸಾವರ್ಕರ್‍ಗಿಂತ್ಲೂ ಬೇಕಾ?”
“ಒಬ್ಬ ಐದು ದಿನದಲ್ಲಿ ಮೂರು ಸಾವಿರ ಜನ ಕೊಲ್ಲಿಸಿದ. ಇನ್ನೊಬ್ಬ ಮೂರು ಬಾರಿ ಬ್ರಿಟಿಷರಿಗೆ ಕ್ಷಮಾಪಣೆ ಪತ್ರ ಬರೆದು ಬಿಡುಗಡೆಯಾಗಿ, ಹಿಂದೂ ಮುಸ್ಲಿಂ ಜಗಳ ಮಾಡಸಕ್ಕೆ ಸಾಯೋವರಿಗೂ ಶ್ರಮಪಟ್ಟ ಅಲ್ವೇನೊ?”
“ನೋಡಿ ತಿಳಕಂಡು ಮಾತಾಡಿ.”
“ನೀನು ಗಾಂಧಿ ಓದಿಕಂಡು ಮಾತಾಡು.”
“ಗಾಂಧಿ ಬೇಕಾಗಿಲ್ಲ ನನಿಗೆ.”
“ಬ್ರಾಹ್ಮಣ ಕುಲಕ್ಕೆ ಅವಮಾನ ನೀನು. ಬ್ರಾಹ್ಮಣ ಮಾತನಾಡ್ತ ಇದ್ರೆ ಕೇಳಬೇಕು ಅನ್ಸುತ್ತೆ. ಆತನ ಭಾಷೆ ಅಪ್ಯಾಯಮಾನವಾಗಿರುತ್ತೆ. ಅವನ ಮಾತಲ್ಲಿ ಹಿಂಸೆ ಇರಲ್ಲ. ಕಟಕಿ ಇರಲ್ಲ. ಪ್ರಚೋದನೆ ಇರಲ್ಲ. ಅವಮಾನ ಇರಲ್ಲ. ನಿನ್ನ ಮಾತಲ್ಲಿ ಇವೆಲ್ಲಾ ಇವೆ.”
“ಅದೇ ನನ್ನ ವ್ಯಕ್ತಿತ್ವ.”
“ಆ ನಿನ್ನ ವ್ಯಕ್ತಿತ್ವನ ನೀನು ಟೀಕೆ ಮಾಡೊ ಜಾತ್ಯತೀತರು ಶೋಧನೆ ಮಾಡ್ತಯಿದಾರೆ.”
“ಆ ನನ್ನ ಮಕ್ಕಳಿಗೆ ಬುದ್ಧಿ ಕಲುಸ್ತಿನಿ.”
“ನೀನು ಆ ನನ ಮಕ್ಕಳು ಅನ್ನಬಾರದಿತ್ತು.”
“ನಾನೂ ಹರಾಜಾಕ್ತಿನಿ.”
“ನಿನ್ನಿಂದಾಗಿ ನಮ್ಮ ಜಿಲ್ಲೆಗೆ ಕೆಟ್ಟ ಹೆಸರು ಬಂತಲ್ಲೋ. ನಮ್ಮ ಜಿಲ್ಲೇಲಿ ಎಂತೆಂತಹ ಮೇಧಾವಿಗಳಿದ್ರು. ಕರ್ನಾಟಕ ಕಂಡ ಶ್ರೇಷ್ಠ ಆಡಳಿತಗಾರ ರಾಮಕೃಷ್ಣ ಹೆಗಡೆ, ತಾಯಿ ಹೃದಯದ ಮಾರ್ಗರೆಟ್ ಆಳ್ವ, ಇನ್ನ ಸಾಹಿತ್ಯ ಲೋಕಕ್ಕೆ ಬಂದ್ರೆ, ಶಾಂತಿನಾಥ ದೇಸಾಯಿ, ಯಶವಂತ ಚಿತ್ತಾಲ, ಗಂಗಾಧರ ಚಿತ್ತಾಲ, ದಿನಕರ ದೇಸಾಯಿ, ಗೌರೀಶ್ ಕಾಯ್ಕಿಣಿ, ಜಯಂತಿ, ಅನುಪಮ ಇಂತಹ ಜನಗಳ ನಾಡಲ್ಲಿ ನೀನೆಲ್ಲಿ ಉದ್ಭವಿಸಿದೆಯೋ ಮುಂಡೆದೆ.”
“ನೋಡಿ ಮುಂಡೆದೆ ಅಂದ್ರೆ ನನ್ನ ರಕ್ತ ಹೆಪ್ಪುಗಟ್ಟುತ್ತೆ.”
“ನೋಡು ನಿನ್ನನ್ನ ಬೈಯ್ಯೋದಕ್ಕೆ ಬೈಗಳನೇ ಇಲ್ಲ. ಹೆತ್ತ ತಾಯಿಗೆ ಲಾಡಿ ಬಿಚ್ಚೊ ಮಾತಾಡಬೇಡ.”
“ಏನು ಹಾಗಂದೆ.್ರ”
“ಅದೊಂದು ಕೇಳಿಸಿಕೊಳ್ಳಕ್ಕೆ ಹಿಂಸೆಯಾಗೊ ಪದ. ನಮ್ಮ ಭಾರತದ ಸಂವಿಧಾನದಡಿಯಲ್ಲಿ ಚುನಾವಣೆ ನಡೆದು ಅದರಲ್ಲಿ ಗೆದ್ದು ಬಂದು ಅದನ್ನೆ ಬದಲಾಯಿಸ್ತಿನಿ ಅಂತಿಯಲ್ಲಾ, ಅದನ್ನ ಜಾತ್ಯತೀತರು ಹೆತ್ತ ತಾಯಿಗೇ ಲಾಡಿಬಿಚ್ಚೊ ಮಾತು ಅಂತಾರೆ. ಇಷ್ಟು ಕಠೋರ ಮಾತು ನಿನಗೆ ಬೇಕಾ.”
“ಅವರಿಗೆಲ್ಲಾ ನಾನು ಉತ್ತರ ಕೊಡ್ತಿನಿ. ನೀವು ತಲೆಕೆಡಿಸಿಕೋಬೇಡಿ.”
“ಹಾಗಂದ್ರೇಗೊ ಮುಂಡೆದೆ, ನೀನು ಬ್ರಾಹ್ಮಣ, ನಾನು ಬ್ರಾಹ್ಮಣ. ಆದ್ರಿಂದ ಅವರು ನಿನಿಗಂದ ಮಾತು ನನ್ನನ್ನು ನೋಯಿಸುತ್ತೆ.”
“ಅವರ ಮಾತ ಕೇಳಿಸಿಕೋಬೇಡಿ.”
“ಹಾಗಂದ್ರೇಗೊ, ಈ ಮುಪ್ಪಿನ ಕಾಲದಲ್ಲಿ ನಾನಿರೋದೆ ಜಾತ್ಯತೀತರ ನಡುವೆ.”
“ಅವರ ಜೊತೆ ಇರಬೇಡಿ, ನಮ್ಮ ಮನೆ ಹತ್ರ ಬಂದಿರಿ.”
“ನಿನ್ನ ಮನೆ ಹತ್ರ ಬರೀ ಹುಚ್ಚರ ಸಂತೆ ಕಣೋ. ಅಲ್ಲಿ ಸೇರೊವೆಲ್ಲಾ ಪಶ್ಚಿಮದ ದಾಳಿಗೆ ಹುಟ್ಟಿದಂಗೆ ಮಾತನಾಡ್ತವೆ. ಪಾಕಿಸ್ತಾನದ ಬಗ್ಗೆ ಮಾತನಾಡ್ತವೆ. ಶೂದ್ರರನ್ನು ಆಡಿಕೊಳ್ತವೆ. ದೇಶಕ್ಕೆ ಬೆಂಕಿ ಹಚ್ಚೊ ಮಾತುಬಿಟ್ರೆ, ಅಲ್ಲಿ ಇನ್ಯಾವ ಮನಶಾಂತಿನೂ ಸಿಗಲ್ಲ. ಅಲ್ಲಿಗೆ ಬರೋದಕ್ಕಿಂತ ಆತ್ಮಹತ್ಯೆ ಮಾಡಿಕಳದೇ ಒಳ್ಳೆದು.”
“ಅಷ್ಟು ಕೆಲಸ ಮಾಡಿ.”
“ಥೂ, ಗೋಡ್ಸೆ ಸಂತಾನವೆ.”

ಥೂತ್ತೇರಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...