Homeಮುಖಪುಟ"ನೀವು ನನಗೆ ವೋಟ್‌ ಹಾಕಿಲ್ಲ, ಇನ್ಮುಂದೆ ನಿಮ್ಮ ದಿನಗಳು ಚೆನ್ನಾಗಿರಲ್ಲ": ಮತದಾರರಿಗೆ ಬೆದರಿಕೆ ಹಾಕಿದ ಬಿಜೆಪಿ...

“ನೀವು ನನಗೆ ವೋಟ್‌ ಹಾಕಿಲ್ಲ, ಇನ್ಮುಂದೆ ನಿಮ್ಮ ದಿನಗಳು ಚೆನ್ನಾಗಿರಲ್ಲ”: ಮತದಾರರಿಗೆ ಬೆದರಿಕೆ ಹಾಕಿದ ಬಿಜೆಪಿ ಸಂಸದ!

- Advertisement -
- Advertisement -

“ಮುಸ್ಲಿಮರು ಮತ್ತು ಯಾದವರು ನನಗೆ ಮತ ಹಾಕಿಲ್ಲ. ಹಾಗಾಗಿ, ನಾನು ಅವರಿಗಾಗಿ ಕೆಲಸ ಮಾಡಲ್ಲ” ಎಂದು ಬಿಹಾರದ ಜೆಡಿಯು ಸಂಸದ ದೇವೇಶ್ ಚಂದ್ರ ಠಾಕೂರ್ ಹೇಳಿಕೆ ನೀಡಿರುವುದು ವಿವಾದಕ್ಕೆ ಕಾರಣವಾಗಿರುವ ನಡುವೆ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ನೂತನ ಬಿಜೆಪಿ ಸಂಸದ ಬಿಷ್ಣು ಪದಾ ರೇ ಮತದಾರರಿಗೆ ಬೆದರಿಕೆ ಹಾಕಿರುವ ವಿಡಿಯೋ ಒಂದು ತಡವಾಗಿ ವೈರಲ್ ಆಗಿದೆ.

“ನಿಕೋಬಾರ್ ದ್ವೀಪದ ಜನರು ನನಗೆ ಮತ ಹಾಕಿಲ್ಲ. ಹಾಗಾಗಿ ಅವರು ಭೀಕರ ಪರಿಣಾಮ ಎದುರಿಸಬೇಕಾಗುತ್ತದೆ” ಎಂದು ಸಂಸದ ಬಿಷ್ಣು ಪದಾ ರೇ ಹೇಳಿದ್ದಾರೆ. ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟಗೊಂಡ ಮರುದಿನ, ಅಂದರೆ ಜೂನ್‌ 5ರಂದು ಈ ಹೇಳಿಕೆ ನೀಡಿದ್ದು, ಈಗ ವಿಡಿಯೋ ಹರಿದಾಡುತ್ತಿದೆ.

“ನಾವು ಜನರಿಗಾಗಿ ಕೆಲಸ ಮಾಡುತ್ತೇವೆ. ಆದರೆ, ನಮಗೆ ಮತ ಹಾಕದವರು ಯೋಚಿಸಬೇಕು. ನಿಕೋಬಾರ್ ದ್ವೀಪದ ಜನರು ನನಗೆ ಮತ ನೀಡಿಲ್ಲ. ಕಾರ್ ನಿಕೋಬಾರ್, ಈಗ ನಿಮಗೆ ಏನಾಗಲಿದೆ ಎಂದು ಯೋಚಿಸಿ” ಎಂದು ರೇ ವಿಜಯ ಭಾಷಣದಲ್ಲಿ ಹೇಳಿದ್ದಾರೆ.

“ನಿಕೋಬಾರ್ ಹೆಸರಿನಲ್ಲಿ ನೀವು ಹಣ, ಮದ್ಯ ತಗೊಳ್ತೀರಿ. ಆದರೆ, ವೋಟ್ ಮಾತ್ರ ಕೊಡಲ್ಲ. ಎಚ್ಚರವಾಗಿರಿ, ಎಚ್ಚರವಾಗಿರಿ, ಎಚ್ಚರವಾಗಿರಿ. ಈಗ, ನಿಮ್ಮ ಕೆಟ್ಟ ದಿನಗಳು ಪ್ರಾರಂಭವಾಗಿವೆ. ಇನ್ಮುಂದೆ ನೀವು ಅಂಡಮಾನ್- ನಿಕೋಬಾರ್ ಅನ್ನು ಮೋಸ ಮಾಡಲು ಸಾಧ್ಯವಿಲ್ಲ. ಇನ್ಮುಂದೆ ನಿಮ್ಮ ದಿನಗಳು ಚೆನ್ನಾಗಿರಲ್ಲ” ಎಂದಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ಕೇಳಲು ಕರೆ ಮಾಡಿದಾಗ ಬಿಷ್ಣು ಪದಾ ರೇ ಕರೆ ಸ್ವೀಕರಿಸಿಲ್ಲ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಆದರೆ, ನಂತರ ಅವರು ಘಟನೆಗೆ ಸಂಬಂಧಿಸಿದಂತೆ ಪತ್ರಿಕಾ ಪ್ರಕಟನೆ ಕಳುಹಿಸಿದ್ದಾರೆ. ಅದರಲ್ಲಿ ಘಟನೆಯ ನಂತರ ಕಾರ್ ನಿಕೋಬಾರ್‌ನ ಪ್ರಮುಖ ಬುಡಕಟ್ಟು ನಾಯಕನ ನೇತೃತ್ವದ ನಿಕೋಬಾರ್‌ನ ಹಿರಿಯರು ಪೋರ್ಟ್ ಬ್ಲೇರ್‌ನಲ್ಲಿ ಸಂಸದರನ್ನು ಭೇಟಿಯಾಗಿ ಚುನಾವಣೆಯಲ್ಲಿ ಗೆದ್ದಿದ್ದಕ್ಕಾಗಿ ಅಭಿನಂದಿಸಿದ್ದಾಗಿ ತಿಳಿಸಲಾಗಿದೆ” ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ಹೇಳಿದೆ.

“ನಿಕೋಬಾರ್‌ನ ಜನರು ತಮ್ಮ ಸಮಸ್ಯೆಗಳನ್ನು ಸಂಸದರೊಂದಿಗೆ ಹಂಚಿಕೊಂಡಿದ್ದು, ಸಂಸದರು ಕೋಬಾರ್‌ನ ಜನರ ಮೇಲಿನ ಆಳವಾದ ಪ್ರೀತಿ ಮತ್ತು ಅವರು ತಮ್ಮ ಹಿಂದಿನ ಅಧಿಕಾರಾವಧಿಯಲ್ಲಿ ಸಮುದಾಯಕ್ಕಾಗಿ ಕೈಗೊಂಡ ಕೆಲಸಗಳ ಬಗ್ಗೆ ಮಾತನಾಡಿದ್ದಾರೆ. ಅಲ್ಲದೆ, ಅವರು ಈ ಹಿಂದಿನದನ್ನು ಮರೆತುಬಿಡುವಂತೆ ಹಿರಿಯರನ್ನು ಕೇಳಿಕೊಂಡಿದ್ದಾರೆ. ಬುಡಕಟ್ಟು ಸಮುದಾಯದ ಸಮಸ್ಯೆಗಳನ್ನು ಪರಿಹರಿಸಲು ಇನ್ನೂ ಹೆಚ್ಚಿನ ಬದ್ಧತೆಯಿಂದ ಕೆಲಸ ಮಾಡುವುದಾಗಿ ಭರವಸೆ ನೀಡಿದ್ದಾರೆ” ಎಂದು ಪತ್ರಿಕಾ ಪ್ರಕಟನೆಯಲ್ಲಿ ಹೇಳಲಾಗಿದೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌ ತಿಳಿಸಿದೆ.

“ನಿಕೋಬಾರ್‌ಗೆ ಭೇಟಿ ನೀಡುವಂತೆ ಮುಖ್ಯ ಕ್ಯಾಪ್ಟನ್ ಅವರು ನೀಡಿರುವ ಆಹ್ವಾನವನ್ನು ಸಂಸದರು ಸ್ವೀಕರಿಸಿದ್ದಾರೆ. ಅವರ ಅಧಿಕಾರಾವಧಿಯಲ್ಲಿ ಸಾಧ್ಯವಾದಷ್ಟು ಜನರಿಗೆ ಸೇವೆ ಸಲ್ಲಿಸುವ ಭರವಸೆ ನೀಡಿದ್ದಾರೆ.
ಎಲ್ಲಾ ಕ್ಷೇತ್ರಗಳಲ್ಲಿ ಯಶಸ್ಸನ್ನು ಸಾಧಿಸಲು ಬುಡಕಟ್ಟು ಹಿರಿಯರು ಶಕ್ತಿಯ ಆಧಾರ ಸ್ತಂಭಗಳಾಗಿರಲು ವಿನಂತಿಸಿದ್ದಾರೆ” ಎಂದು ಪತ್ರಿಕಾ ಪ್ರಕಟಣೆ ಹೇಳಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವಿವರಿಸಿದೆ.

ಇದನ್ನೂ ಓದಿ : ನೀಟ್-ಯುಜಿ ವಿವಾದ: ಕೇಂದ್ರದಿಂದ ಉನ್ನತ ಮಟ್ಟದ ಸಮಿತಿ ರಚನೆ, ‘ಯಾರನ್ನೂ ಬಿಡುವುದಿಲ್ಲ’ ಎಂದ ಪ್ರಧಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...

ವಾರಣಾಸಿಯಲ್ಲಿ ಆಚರಿಸುವ ಪ್ರಸಿದ್ಧ ‘ಭಸ್ಮ ಹೋಳಿ’ಗೆ ಸಂಸ್ಕೃತ ವಿದ್ವಾಂಸರು ಮತ್ತು ಕಾಶಿ ವಿದ್ವತ್ ಪರಿಷತ್ ವಿರೋಧ 

ವಾರಣಾಸಿ (ಉತ್ತರ ಪ್ರದೇಶ): ನಗರದ ಸ್ಮಶಾನ ಭೂಮಿಗಳಾದ ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಾಟ್‌ಗಳಲ್ಲಿ 'ಮಸಾನೆ ಕಿ ಹೋ ಲಿ ' ನುಡಿಸುವ ಸಂಪ್ರದಾಯವನ್ನು ಸಂಸ್ಕೃತ ವಿದ್ವಾಂಸರು ಮತ್ತು ಹಿಂದೂ ಧರ್ಮಗ್ರಂಥಗಳ ತಜ್ಞರ ಪರಿಷತ್ತು...

ಮುಸ್ಲಿಮರೆಂದು ತಿಳಿದು ಮಹಿಳೆಯರಿಗೆ ವಿತರಿಸಿದ್ದ ಕಂಬಳಿ ವಾಪಸ್ ಪಡೆದ ಬಿಜೆಪಿ ಮಾಜಿ ಸಂಸದ

ಬಿಜೆಪಿಯ ಮಾಜಿ ಸಂಸದ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಅವರು, ಮುಸ್ಲಿಮರೆಂದು ಗೊತ್ತಾದ ಬಳಿಕ ಮಹಿಳೆಯರಿಗೆ ವಿತರಿಸಿದ್ದ ಕಂಬಳಿಯನ್ನು ವಾಪಸ್ ಪಡೆದಿದ್ದಾರೆ ಎಂದು ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಟಿಕರಾಮ್ ಜುಲ್ಲಿ ಭಾನುವಾರ...

ಜೆಎನ್‌ಯು: ಎಡಪಂಥೀಯ ವಿದ್ಯಾರ್ಥಿ ಸಂಘಟನೆ ಮತ್ತು ಎಬಿವಿಪಿ ನಡುವೆ ಘರ್ಷಣೆ: ಉದ್ವಿಗ್ನತೆ  

ಸೋಮವಾರ ಮುಂಜಾನೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಎಡಪಂಥೀಯ ಮತ್ತು ಬಲಪಂಥೀಯ ವಿದ್ಯಾರ್ಥಿ ಗುಂಪುಗಳು ಪರಸ್ಪರ ಹಿಂಸಾಚಾರವನ್ನು ಬಿಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಆವರಣದಲ್ಲಿ ಉದ್ವಿಗ್ನತೆ ಉಂಟಾಗಿದೆ.  ಸೋಮವಾರ ಬೆಳಗಿನ...

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

'ಎಲ್ ಮೆಂಚೊ' ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು...

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...