Homeಮುಖಪುಟ"ನೀವು ನನಗೆ ವೋಟ್‌ ಹಾಕಿಲ್ಲ, ಇನ್ಮುಂದೆ ನಿಮ್ಮ ದಿನಗಳು ಚೆನ್ನಾಗಿರಲ್ಲ": ಮತದಾರರಿಗೆ ಬೆದರಿಕೆ ಹಾಕಿದ ಬಿಜೆಪಿ...

“ನೀವು ನನಗೆ ವೋಟ್‌ ಹಾಕಿಲ್ಲ, ಇನ್ಮುಂದೆ ನಿಮ್ಮ ದಿನಗಳು ಚೆನ್ನಾಗಿರಲ್ಲ”: ಮತದಾರರಿಗೆ ಬೆದರಿಕೆ ಹಾಕಿದ ಬಿಜೆಪಿ ಸಂಸದ!

- Advertisement -
- Advertisement -

“ಮುಸ್ಲಿಮರು ಮತ್ತು ಯಾದವರು ನನಗೆ ಮತ ಹಾಕಿಲ್ಲ. ಹಾಗಾಗಿ, ನಾನು ಅವರಿಗಾಗಿ ಕೆಲಸ ಮಾಡಲ್ಲ” ಎಂದು ಬಿಹಾರದ ಜೆಡಿಯು ಸಂಸದ ದೇವೇಶ್ ಚಂದ್ರ ಠಾಕೂರ್ ಹೇಳಿಕೆ ನೀಡಿರುವುದು ವಿವಾದಕ್ಕೆ ಕಾರಣವಾಗಿರುವ ನಡುವೆ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ನೂತನ ಬಿಜೆಪಿ ಸಂಸದ ಬಿಷ್ಣು ಪದಾ ರೇ ಮತದಾರರಿಗೆ ಬೆದರಿಕೆ ಹಾಕಿರುವ ವಿಡಿಯೋ ಒಂದು ತಡವಾಗಿ ವೈರಲ್ ಆಗಿದೆ.

“ನಿಕೋಬಾರ್ ದ್ವೀಪದ ಜನರು ನನಗೆ ಮತ ಹಾಕಿಲ್ಲ. ಹಾಗಾಗಿ ಅವರು ಭೀಕರ ಪರಿಣಾಮ ಎದುರಿಸಬೇಕಾಗುತ್ತದೆ” ಎಂದು ಸಂಸದ ಬಿಷ್ಣು ಪದಾ ರೇ ಹೇಳಿದ್ದಾರೆ. ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟಗೊಂಡ ಮರುದಿನ, ಅಂದರೆ ಜೂನ್‌ 5ರಂದು ಈ ಹೇಳಿಕೆ ನೀಡಿದ್ದು, ಈಗ ವಿಡಿಯೋ ಹರಿದಾಡುತ್ತಿದೆ.

“ನಾವು ಜನರಿಗಾಗಿ ಕೆಲಸ ಮಾಡುತ್ತೇವೆ. ಆದರೆ, ನಮಗೆ ಮತ ಹಾಕದವರು ಯೋಚಿಸಬೇಕು. ನಿಕೋಬಾರ್ ದ್ವೀಪದ ಜನರು ನನಗೆ ಮತ ನೀಡಿಲ್ಲ. ಕಾರ್ ನಿಕೋಬಾರ್, ಈಗ ನಿಮಗೆ ಏನಾಗಲಿದೆ ಎಂದು ಯೋಚಿಸಿ” ಎಂದು ರೇ ವಿಜಯ ಭಾಷಣದಲ್ಲಿ ಹೇಳಿದ್ದಾರೆ.

“ನಿಕೋಬಾರ್ ಹೆಸರಿನಲ್ಲಿ ನೀವು ಹಣ, ಮದ್ಯ ತಗೊಳ್ತೀರಿ. ಆದರೆ, ವೋಟ್ ಮಾತ್ರ ಕೊಡಲ್ಲ. ಎಚ್ಚರವಾಗಿರಿ, ಎಚ್ಚರವಾಗಿರಿ, ಎಚ್ಚರವಾಗಿರಿ. ಈಗ, ನಿಮ್ಮ ಕೆಟ್ಟ ದಿನಗಳು ಪ್ರಾರಂಭವಾಗಿವೆ. ಇನ್ಮುಂದೆ ನೀವು ಅಂಡಮಾನ್- ನಿಕೋಬಾರ್ ಅನ್ನು ಮೋಸ ಮಾಡಲು ಸಾಧ್ಯವಿಲ್ಲ. ಇನ್ಮುಂದೆ ನಿಮ್ಮ ದಿನಗಳು ಚೆನ್ನಾಗಿರಲ್ಲ” ಎಂದಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ಕೇಳಲು ಕರೆ ಮಾಡಿದಾಗ ಬಿಷ್ಣು ಪದಾ ರೇ ಕರೆ ಸ್ವೀಕರಿಸಿಲ್ಲ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಆದರೆ, ನಂತರ ಅವರು ಘಟನೆಗೆ ಸಂಬಂಧಿಸಿದಂತೆ ಪತ್ರಿಕಾ ಪ್ರಕಟನೆ ಕಳುಹಿಸಿದ್ದಾರೆ. ಅದರಲ್ಲಿ ಘಟನೆಯ ನಂತರ ಕಾರ್ ನಿಕೋಬಾರ್‌ನ ಪ್ರಮುಖ ಬುಡಕಟ್ಟು ನಾಯಕನ ನೇತೃತ್ವದ ನಿಕೋಬಾರ್‌ನ ಹಿರಿಯರು ಪೋರ್ಟ್ ಬ್ಲೇರ್‌ನಲ್ಲಿ ಸಂಸದರನ್ನು ಭೇಟಿಯಾಗಿ ಚುನಾವಣೆಯಲ್ಲಿ ಗೆದ್ದಿದ್ದಕ್ಕಾಗಿ ಅಭಿನಂದಿಸಿದ್ದಾಗಿ ತಿಳಿಸಲಾಗಿದೆ” ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ಹೇಳಿದೆ.

“ನಿಕೋಬಾರ್‌ನ ಜನರು ತಮ್ಮ ಸಮಸ್ಯೆಗಳನ್ನು ಸಂಸದರೊಂದಿಗೆ ಹಂಚಿಕೊಂಡಿದ್ದು, ಸಂಸದರು ಕೋಬಾರ್‌ನ ಜನರ ಮೇಲಿನ ಆಳವಾದ ಪ್ರೀತಿ ಮತ್ತು ಅವರು ತಮ್ಮ ಹಿಂದಿನ ಅಧಿಕಾರಾವಧಿಯಲ್ಲಿ ಸಮುದಾಯಕ್ಕಾಗಿ ಕೈಗೊಂಡ ಕೆಲಸಗಳ ಬಗ್ಗೆ ಮಾತನಾಡಿದ್ದಾರೆ. ಅಲ್ಲದೆ, ಅವರು ಈ ಹಿಂದಿನದನ್ನು ಮರೆತುಬಿಡುವಂತೆ ಹಿರಿಯರನ್ನು ಕೇಳಿಕೊಂಡಿದ್ದಾರೆ. ಬುಡಕಟ್ಟು ಸಮುದಾಯದ ಸಮಸ್ಯೆಗಳನ್ನು ಪರಿಹರಿಸಲು ಇನ್ನೂ ಹೆಚ್ಚಿನ ಬದ್ಧತೆಯಿಂದ ಕೆಲಸ ಮಾಡುವುದಾಗಿ ಭರವಸೆ ನೀಡಿದ್ದಾರೆ” ಎಂದು ಪತ್ರಿಕಾ ಪ್ರಕಟನೆಯಲ್ಲಿ ಹೇಳಲಾಗಿದೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌ ತಿಳಿಸಿದೆ.

“ನಿಕೋಬಾರ್‌ಗೆ ಭೇಟಿ ನೀಡುವಂತೆ ಮುಖ್ಯ ಕ್ಯಾಪ್ಟನ್ ಅವರು ನೀಡಿರುವ ಆಹ್ವಾನವನ್ನು ಸಂಸದರು ಸ್ವೀಕರಿಸಿದ್ದಾರೆ. ಅವರ ಅಧಿಕಾರಾವಧಿಯಲ್ಲಿ ಸಾಧ್ಯವಾದಷ್ಟು ಜನರಿಗೆ ಸೇವೆ ಸಲ್ಲಿಸುವ ಭರವಸೆ ನೀಡಿದ್ದಾರೆ.
ಎಲ್ಲಾ ಕ್ಷೇತ್ರಗಳಲ್ಲಿ ಯಶಸ್ಸನ್ನು ಸಾಧಿಸಲು ಬುಡಕಟ್ಟು ಹಿರಿಯರು ಶಕ್ತಿಯ ಆಧಾರ ಸ್ತಂಭಗಳಾಗಿರಲು ವಿನಂತಿಸಿದ್ದಾರೆ” ಎಂದು ಪತ್ರಿಕಾ ಪ್ರಕಟಣೆ ಹೇಳಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವಿವರಿಸಿದೆ.

ಇದನ್ನೂ ಓದಿ : ನೀಟ್-ಯುಜಿ ವಿವಾದ: ಕೇಂದ್ರದಿಂದ ಉನ್ನತ ಮಟ್ಟದ ಸಮಿತಿ ರಚನೆ, ‘ಯಾರನ್ನೂ ಬಿಡುವುದಿಲ್ಲ’ ಎಂದ ಪ್ರಧಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...