Homeಮುಖಪುಟ"ನೀವು ನನಗೆ ವೋಟ್‌ ಹಾಕಿಲ್ಲ, ಇನ್ಮುಂದೆ ನಿಮ್ಮ ದಿನಗಳು ಚೆನ್ನಾಗಿರಲ್ಲ": ಮತದಾರರಿಗೆ ಬೆದರಿಕೆ ಹಾಕಿದ ಬಿಜೆಪಿ...

“ನೀವು ನನಗೆ ವೋಟ್‌ ಹಾಕಿಲ್ಲ, ಇನ್ಮುಂದೆ ನಿಮ್ಮ ದಿನಗಳು ಚೆನ್ನಾಗಿರಲ್ಲ”: ಮತದಾರರಿಗೆ ಬೆದರಿಕೆ ಹಾಕಿದ ಬಿಜೆಪಿ ಸಂಸದ!

- Advertisement -
- Advertisement -

“ಮುಸ್ಲಿಮರು ಮತ್ತು ಯಾದವರು ನನಗೆ ಮತ ಹಾಕಿಲ್ಲ. ಹಾಗಾಗಿ, ನಾನು ಅವರಿಗಾಗಿ ಕೆಲಸ ಮಾಡಲ್ಲ” ಎಂದು ಬಿಹಾರದ ಜೆಡಿಯು ಸಂಸದ ದೇವೇಶ್ ಚಂದ್ರ ಠಾಕೂರ್ ಹೇಳಿಕೆ ನೀಡಿರುವುದು ವಿವಾದಕ್ಕೆ ಕಾರಣವಾಗಿರುವ ನಡುವೆ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ನೂತನ ಬಿಜೆಪಿ ಸಂಸದ ಬಿಷ್ಣು ಪದಾ ರೇ ಮತದಾರರಿಗೆ ಬೆದರಿಕೆ ಹಾಕಿರುವ ವಿಡಿಯೋ ಒಂದು ತಡವಾಗಿ ವೈರಲ್ ಆಗಿದೆ.

“ನಿಕೋಬಾರ್ ದ್ವೀಪದ ಜನರು ನನಗೆ ಮತ ಹಾಕಿಲ್ಲ. ಹಾಗಾಗಿ ಅವರು ಭೀಕರ ಪರಿಣಾಮ ಎದುರಿಸಬೇಕಾಗುತ್ತದೆ” ಎಂದು ಸಂಸದ ಬಿಷ್ಣು ಪದಾ ರೇ ಹೇಳಿದ್ದಾರೆ. ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟಗೊಂಡ ಮರುದಿನ, ಅಂದರೆ ಜೂನ್‌ 5ರಂದು ಈ ಹೇಳಿಕೆ ನೀಡಿದ್ದು, ಈಗ ವಿಡಿಯೋ ಹರಿದಾಡುತ್ತಿದೆ.

“ನಾವು ಜನರಿಗಾಗಿ ಕೆಲಸ ಮಾಡುತ್ತೇವೆ. ಆದರೆ, ನಮಗೆ ಮತ ಹಾಕದವರು ಯೋಚಿಸಬೇಕು. ನಿಕೋಬಾರ್ ದ್ವೀಪದ ಜನರು ನನಗೆ ಮತ ನೀಡಿಲ್ಲ. ಕಾರ್ ನಿಕೋಬಾರ್, ಈಗ ನಿಮಗೆ ಏನಾಗಲಿದೆ ಎಂದು ಯೋಚಿಸಿ” ಎಂದು ರೇ ವಿಜಯ ಭಾಷಣದಲ್ಲಿ ಹೇಳಿದ್ದಾರೆ.

“ನಿಕೋಬಾರ್ ಹೆಸರಿನಲ್ಲಿ ನೀವು ಹಣ, ಮದ್ಯ ತಗೊಳ್ತೀರಿ. ಆದರೆ, ವೋಟ್ ಮಾತ್ರ ಕೊಡಲ್ಲ. ಎಚ್ಚರವಾಗಿರಿ, ಎಚ್ಚರವಾಗಿರಿ, ಎಚ್ಚರವಾಗಿರಿ. ಈಗ, ನಿಮ್ಮ ಕೆಟ್ಟ ದಿನಗಳು ಪ್ರಾರಂಭವಾಗಿವೆ. ಇನ್ಮುಂದೆ ನೀವು ಅಂಡಮಾನ್- ನಿಕೋಬಾರ್ ಅನ್ನು ಮೋಸ ಮಾಡಲು ಸಾಧ್ಯವಿಲ್ಲ. ಇನ್ಮುಂದೆ ನಿಮ್ಮ ದಿನಗಳು ಚೆನ್ನಾಗಿರಲ್ಲ” ಎಂದಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ಕೇಳಲು ಕರೆ ಮಾಡಿದಾಗ ಬಿಷ್ಣು ಪದಾ ರೇ ಕರೆ ಸ್ವೀಕರಿಸಿಲ್ಲ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಆದರೆ, ನಂತರ ಅವರು ಘಟನೆಗೆ ಸಂಬಂಧಿಸಿದಂತೆ ಪತ್ರಿಕಾ ಪ್ರಕಟನೆ ಕಳುಹಿಸಿದ್ದಾರೆ. ಅದರಲ್ಲಿ ಘಟನೆಯ ನಂತರ ಕಾರ್ ನಿಕೋಬಾರ್‌ನ ಪ್ರಮುಖ ಬುಡಕಟ್ಟು ನಾಯಕನ ನೇತೃತ್ವದ ನಿಕೋಬಾರ್‌ನ ಹಿರಿಯರು ಪೋರ್ಟ್ ಬ್ಲೇರ್‌ನಲ್ಲಿ ಸಂಸದರನ್ನು ಭೇಟಿಯಾಗಿ ಚುನಾವಣೆಯಲ್ಲಿ ಗೆದ್ದಿದ್ದಕ್ಕಾಗಿ ಅಭಿನಂದಿಸಿದ್ದಾಗಿ ತಿಳಿಸಲಾಗಿದೆ” ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ಹೇಳಿದೆ.

“ನಿಕೋಬಾರ್‌ನ ಜನರು ತಮ್ಮ ಸಮಸ್ಯೆಗಳನ್ನು ಸಂಸದರೊಂದಿಗೆ ಹಂಚಿಕೊಂಡಿದ್ದು, ಸಂಸದರು ಕೋಬಾರ್‌ನ ಜನರ ಮೇಲಿನ ಆಳವಾದ ಪ್ರೀತಿ ಮತ್ತು ಅವರು ತಮ್ಮ ಹಿಂದಿನ ಅಧಿಕಾರಾವಧಿಯಲ್ಲಿ ಸಮುದಾಯಕ್ಕಾಗಿ ಕೈಗೊಂಡ ಕೆಲಸಗಳ ಬಗ್ಗೆ ಮಾತನಾಡಿದ್ದಾರೆ. ಅಲ್ಲದೆ, ಅವರು ಈ ಹಿಂದಿನದನ್ನು ಮರೆತುಬಿಡುವಂತೆ ಹಿರಿಯರನ್ನು ಕೇಳಿಕೊಂಡಿದ್ದಾರೆ. ಬುಡಕಟ್ಟು ಸಮುದಾಯದ ಸಮಸ್ಯೆಗಳನ್ನು ಪರಿಹರಿಸಲು ಇನ್ನೂ ಹೆಚ್ಚಿನ ಬದ್ಧತೆಯಿಂದ ಕೆಲಸ ಮಾಡುವುದಾಗಿ ಭರವಸೆ ನೀಡಿದ್ದಾರೆ” ಎಂದು ಪತ್ರಿಕಾ ಪ್ರಕಟನೆಯಲ್ಲಿ ಹೇಳಲಾಗಿದೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌ ತಿಳಿಸಿದೆ.

“ನಿಕೋಬಾರ್‌ಗೆ ಭೇಟಿ ನೀಡುವಂತೆ ಮುಖ್ಯ ಕ್ಯಾಪ್ಟನ್ ಅವರು ನೀಡಿರುವ ಆಹ್ವಾನವನ್ನು ಸಂಸದರು ಸ್ವೀಕರಿಸಿದ್ದಾರೆ. ಅವರ ಅಧಿಕಾರಾವಧಿಯಲ್ಲಿ ಸಾಧ್ಯವಾದಷ್ಟು ಜನರಿಗೆ ಸೇವೆ ಸಲ್ಲಿಸುವ ಭರವಸೆ ನೀಡಿದ್ದಾರೆ.
ಎಲ್ಲಾ ಕ್ಷೇತ್ರಗಳಲ್ಲಿ ಯಶಸ್ಸನ್ನು ಸಾಧಿಸಲು ಬುಡಕಟ್ಟು ಹಿರಿಯರು ಶಕ್ತಿಯ ಆಧಾರ ಸ್ತಂಭಗಳಾಗಿರಲು ವಿನಂತಿಸಿದ್ದಾರೆ” ಎಂದು ಪತ್ರಿಕಾ ಪ್ರಕಟಣೆ ಹೇಳಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವಿವರಿಸಿದೆ.

ಇದನ್ನೂ ಓದಿ : ನೀಟ್-ಯುಜಿ ವಿವಾದ: ಕೇಂದ್ರದಿಂದ ಉನ್ನತ ಮಟ್ಟದ ಸಮಿತಿ ರಚನೆ, ‘ಯಾರನ್ನೂ ಬಿಡುವುದಿಲ್ಲ’ ಎಂದ ಪ್ರಧಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...