Homeಮುಖಪುಟ"ನೀವು ನನಗೆ ವೋಟ್‌ ಹಾಕಿಲ್ಲ, ಇನ್ಮುಂದೆ ನಿಮ್ಮ ದಿನಗಳು ಚೆನ್ನಾಗಿರಲ್ಲ": ಮತದಾರರಿಗೆ ಬೆದರಿಕೆ ಹಾಕಿದ ಬಿಜೆಪಿ...

“ನೀವು ನನಗೆ ವೋಟ್‌ ಹಾಕಿಲ್ಲ, ಇನ್ಮುಂದೆ ನಿಮ್ಮ ದಿನಗಳು ಚೆನ್ನಾಗಿರಲ್ಲ”: ಮತದಾರರಿಗೆ ಬೆದರಿಕೆ ಹಾಕಿದ ಬಿಜೆಪಿ ಸಂಸದ!

- Advertisement -
- Advertisement -

“ಮುಸ್ಲಿಮರು ಮತ್ತು ಯಾದವರು ನನಗೆ ಮತ ಹಾಕಿಲ್ಲ. ಹಾಗಾಗಿ, ನಾನು ಅವರಿಗಾಗಿ ಕೆಲಸ ಮಾಡಲ್ಲ” ಎಂದು ಬಿಹಾರದ ಜೆಡಿಯು ಸಂಸದ ದೇವೇಶ್ ಚಂದ್ರ ಠಾಕೂರ್ ಹೇಳಿಕೆ ನೀಡಿರುವುದು ವಿವಾದಕ್ಕೆ ಕಾರಣವಾಗಿರುವ ನಡುವೆ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ನೂತನ ಬಿಜೆಪಿ ಸಂಸದ ಬಿಷ್ಣು ಪದಾ ರೇ ಮತದಾರರಿಗೆ ಬೆದರಿಕೆ ಹಾಕಿರುವ ವಿಡಿಯೋ ಒಂದು ತಡವಾಗಿ ವೈರಲ್ ಆಗಿದೆ.

“ನಿಕೋಬಾರ್ ದ್ವೀಪದ ಜನರು ನನಗೆ ಮತ ಹಾಕಿಲ್ಲ. ಹಾಗಾಗಿ ಅವರು ಭೀಕರ ಪರಿಣಾಮ ಎದುರಿಸಬೇಕಾಗುತ್ತದೆ” ಎಂದು ಸಂಸದ ಬಿಷ್ಣು ಪದಾ ರೇ ಹೇಳಿದ್ದಾರೆ. ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟಗೊಂಡ ಮರುದಿನ, ಅಂದರೆ ಜೂನ್‌ 5ರಂದು ಈ ಹೇಳಿಕೆ ನೀಡಿದ್ದು, ಈಗ ವಿಡಿಯೋ ಹರಿದಾಡುತ್ತಿದೆ.

“ನಾವು ಜನರಿಗಾಗಿ ಕೆಲಸ ಮಾಡುತ್ತೇವೆ. ಆದರೆ, ನಮಗೆ ಮತ ಹಾಕದವರು ಯೋಚಿಸಬೇಕು. ನಿಕೋಬಾರ್ ದ್ವೀಪದ ಜನರು ನನಗೆ ಮತ ನೀಡಿಲ್ಲ. ಕಾರ್ ನಿಕೋಬಾರ್, ಈಗ ನಿಮಗೆ ಏನಾಗಲಿದೆ ಎಂದು ಯೋಚಿಸಿ” ಎಂದು ರೇ ವಿಜಯ ಭಾಷಣದಲ್ಲಿ ಹೇಳಿದ್ದಾರೆ.

“ನಿಕೋಬಾರ್ ಹೆಸರಿನಲ್ಲಿ ನೀವು ಹಣ, ಮದ್ಯ ತಗೊಳ್ತೀರಿ. ಆದರೆ, ವೋಟ್ ಮಾತ್ರ ಕೊಡಲ್ಲ. ಎಚ್ಚರವಾಗಿರಿ, ಎಚ್ಚರವಾಗಿರಿ, ಎಚ್ಚರವಾಗಿರಿ. ಈಗ, ನಿಮ್ಮ ಕೆಟ್ಟ ದಿನಗಳು ಪ್ರಾರಂಭವಾಗಿವೆ. ಇನ್ಮುಂದೆ ನೀವು ಅಂಡಮಾನ್- ನಿಕೋಬಾರ್ ಅನ್ನು ಮೋಸ ಮಾಡಲು ಸಾಧ್ಯವಿಲ್ಲ. ಇನ್ಮುಂದೆ ನಿಮ್ಮ ದಿನಗಳು ಚೆನ್ನಾಗಿರಲ್ಲ” ಎಂದಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ಕೇಳಲು ಕರೆ ಮಾಡಿದಾಗ ಬಿಷ್ಣು ಪದಾ ರೇ ಕರೆ ಸ್ವೀಕರಿಸಿಲ್ಲ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಆದರೆ, ನಂತರ ಅವರು ಘಟನೆಗೆ ಸಂಬಂಧಿಸಿದಂತೆ ಪತ್ರಿಕಾ ಪ್ರಕಟನೆ ಕಳುಹಿಸಿದ್ದಾರೆ. ಅದರಲ್ಲಿ ಘಟನೆಯ ನಂತರ ಕಾರ್ ನಿಕೋಬಾರ್‌ನ ಪ್ರಮುಖ ಬುಡಕಟ್ಟು ನಾಯಕನ ನೇತೃತ್ವದ ನಿಕೋಬಾರ್‌ನ ಹಿರಿಯರು ಪೋರ್ಟ್ ಬ್ಲೇರ್‌ನಲ್ಲಿ ಸಂಸದರನ್ನು ಭೇಟಿಯಾಗಿ ಚುನಾವಣೆಯಲ್ಲಿ ಗೆದ್ದಿದ್ದಕ್ಕಾಗಿ ಅಭಿನಂದಿಸಿದ್ದಾಗಿ ತಿಳಿಸಲಾಗಿದೆ” ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ಹೇಳಿದೆ.

“ನಿಕೋಬಾರ್‌ನ ಜನರು ತಮ್ಮ ಸಮಸ್ಯೆಗಳನ್ನು ಸಂಸದರೊಂದಿಗೆ ಹಂಚಿಕೊಂಡಿದ್ದು, ಸಂಸದರು ಕೋಬಾರ್‌ನ ಜನರ ಮೇಲಿನ ಆಳವಾದ ಪ್ರೀತಿ ಮತ್ತು ಅವರು ತಮ್ಮ ಹಿಂದಿನ ಅಧಿಕಾರಾವಧಿಯಲ್ಲಿ ಸಮುದಾಯಕ್ಕಾಗಿ ಕೈಗೊಂಡ ಕೆಲಸಗಳ ಬಗ್ಗೆ ಮಾತನಾಡಿದ್ದಾರೆ. ಅಲ್ಲದೆ, ಅವರು ಈ ಹಿಂದಿನದನ್ನು ಮರೆತುಬಿಡುವಂತೆ ಹಿರಿಯರನ್ನು ಕೇಳಿಕೊಂಡಿದ್ದಾರೆ. ಬುಡಕಟ್ಟು ಸಮುದಾಯದ ಸಮಸ್ಯೆಗಳನ್ನು ಪರಿಹರಿಸಲು ಇನ್ನೂ ಹೆಚ್ಚಿನ ಬದ್ಧತೆಯಿಂದ ಕೆಲಸ ಮಾಡುವುದಾಗಿ ಭರವಸೆ ನೀಡಿದ್ದಾರೆ” ಎಂದು ಪತ್ರಿಕಾ ಪ್ರಕಟನೆಯಲ್ಲಿ ಹೇಳಲಾಗಿದೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌ ತಿಳಿಸಿದೆ.

“ನಿಕೋಬಾರ್‌ಗೆ ಭೇಟಿ ನೀಡುವಂತೆ ಮುಖ್ಯ ಕ್ಯಾಪ್ಟನ್ ಅವರು ನೀಡಿರುವ ಆಹ್ವಾನವನ್ನು ಸಂಸದರು ಸ್ವೀಕರಿಸಿದ್ದಾರೆ. ಅವರ ಅಧಿಕಾರಾವಧಿಯಲ್ಲಿ ಸಾಧ್ಯವಾದಷ್ಟು ಜನರಿಗೆ ಸೇವೆ ಸಲ್ಲಿಸುವ ಭರವಸೆ ನೀಡಿದ್ದಾರೆ.
ಎಲ್ಲಾ ಕ್ಷೇತ್ರಗಳಲ್ಲಿ ಯಶಸ್ಸನ್ನು ಸಾಧಿಸಲು ಬುಡಕಟ್ಟು ಹಿರಿಯರು ಶಕ್ತಿಯ ಆಧಾರ ಸ್ತಂಭಗಳಾಗಿರಲು ವಿನಂತಿಸಿದ್ದಾರೆ” ಎಂದು ಪತ್ರಿಕಾ ಪ್ರಕಟಣೆ ಹೇಳಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವಿವರಿಸಿದೆ.

ಇದನ್ನೂ ಓದಿ : ನೀಟ್-ಯುಜಿ ವಿವಾದ: ಕೇಂದ್ರದಿಂದ ಉನ್ನತ ಮಟ್ಟದ ಸಮಿತಿ ರಚನೆ, ‘ಯಾರನ್ನೂ ಬಿಡುವುದಿಲ್ಲ’ ಎಂದ ಪ್ರಧಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...