Homeಮುಖಪುಟ"ನೀವು ನನಗೆ ವೋಟ್‌ ಹಾಕಿಲ್ಲ, ಇನ್ಮುಂದೆ ನಿಮ್ಮ ದಿನಗಳು ಚೆನ್ನಾಗಿರಲ್ಲ": ಮತದಾರರಿಗೆ ಬೆದರಿಕೆ ಹಾಕಿದ ಬಿಜೆಪಿ...

“ನೀವು ನನಗೆ ವೋಟ್‌ ಹಾಕಿಲ್ಲ, ಇನ್ಮುಂದೆ ನಿಮ್ಮ ದಿನಗಳು ಚೆನ್ನಾಗಿರಲ್ಲ”: ಮತದಾರರಿಗೆ ಬೆದರಿಕೆ ಹಾಕಿದ ಬಿಜೆಪಿ ಸಂಸದ!

- Advertisement -
- Advertisement -

“ಮುಸ್ಲಿಮರು ಮತ್ತು ಯಾದವರು ನನಗೆ ಮತ ಹಾಕಿಲ್ಲ. ಹಾಗಾಗಿ, ನಾನು ಅವರಿಗಾಗಿ ಕೆಲಸ ಮಾಡಲ್ಲ” ಎಂದು ಬಿಹಾರದ ಜೆಡಿಯು ಸಂಸದ ದೇವೇಶ್ ಚಂದ್ರ ಠಾಕೂರ್ ಹೇಳಿಕೆ ನೀಡಿರುವುದು ವಿವಾದಕ್ಕೆ ಕಾರಣವಾಗಿರುವ ನಡುವೆ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ನೂತನ ಬಿಜೆಪಿ ಸಂಸದ ಬಿಷ್ಣು ಪದಾ ರೇ ಮತದಾರರಿಗೆ ಬೆದರಿಕೆ ಹಾಕಿರುವ ವಿಡಿಯೋ ಒಂದು ತಡವಾಗಿ ವೈರಲ್ ಆಗಿದೆ.

“ನಿಕೋಬಾರ್ ದ್ವೀಪದ ಜನರು ನನಗೆ ಮತ ಹಾಕಿಲ್ಲ. ಹಾಗಾಗಿ ಅವರು ಭೀಕರ ಪರಿಣಾಮ ಎದುರಿಸಬೇಕಾಗುತ್ತದೆ” ಎಂದು ಸಂಸದ ಬಿಷ್ಣು ಪದಾ ರೇ ಹೇಳಿದ್ದಾರೆ. ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟಗೊಂಡ ಮರುದಿನ, ಅಂದರೆ ಜೂನ್‌ 5ರಂದು ಈ ಹೇಳಿಕೆ ನೀಡಿದ್ದು, ಈಗ ವಿಡಿಯೋ ಹರಿದಾಡುತ್ತಿದೆ.

“ನಾವು ಜನರಿಗಾಗಿ ಕೆಲಸ ಮಾಡುತ್ತೇವೆ. ಆದರೆ, ನಮಗೆ ಮತ ಹಾಕದವರು ಯೋಚಿಸಬೇಕು. ನಿಕೋಬಾರ್ ದ್ವೀಪದ ಜನರು ನನಗೆ ಮತ ನೀಡಿಲ್ಲ. ಕಾರ್ ನಿಕೋಬಾರ್, ಈಗ ನಿಮಗೆ ಏನಾಗಲಿದೆ ಎಂದು ಯೋಚಿಸಿ” ಎಂದು ರೇ ವಿಜಯ ಭಾಷಣದಲ್ಲಿ ಹೇಳಿದ್ದಾರೆ.

“ನಿಕೋಬಾರ್ ಹೆಸರಿನಲ್ಲಿ ನೀವು ಹಣ, ಮದ್ಯ ತಗೊಳ್ತೀರಿ. ಆದರೆ, ವೋಟ್ ಮಾತ್ರ ಕೊಡಲ್ಲ. ಎಚ್ಚರವಾಗಿರಿ, ಎಚ್ಚರವಾಗಿರಿ, ಎಚ್ಚರವಾಗಿರಿ. ಈಗ, ನಿಮ್ಮ ಕೆಟ್ಟ ದಿನಗಳು ಪ್ರಾರಂಭವಾಗಿವೆ. ಇನ್ಮುಂದೆ ನೀವು ಅಂಡಮಾನ್- ನಿಕೋಬಾರ್ ಅನ್ನು ಮೋಸ ಮಾಡಲು ಸಾಧ್ಯವಿಲ್ಲ. ಇನ್ಮುಂದೆ ನಿಮ್ಮ ದಿನಗಳು ಚೆನ್ನಾಗಿರಲ್ಲ” ಎಂದಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ಕೇಳಲು ಕರೆ ಮಾಡಿದಾಗ ಬಿಷ್ಣು ಪದಾ ರೇ ಕರೆ ಸ್ವೀಕರಿಸಿಲ್ಲ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಆದರೆ, ನಂತರ ಅವರು ಘಟನೆಗೆ ಸಂಬಂಧಿಸಿದಂತೆ ಪತ್ರಿಕಾ ಪ್ರಕಟನೆ ಕಳುಹಿಸಿದ್ದಾರೆ. ಅದರಲ್ಲಿ ಘಟನೆಯ ನಂತರ ಕಾರ್ ನಿಕೋಬಾರ್‌ನ ಪ್ರಮುಖ ಬುಡಕಟ್ಟು ನಾಯಕನ ನೇತೃತ್ವದ ನಿಕೋಬಾರ್‌ನ ಹಿರಿಯರು ಪೋರ್ಟ್ ಬ್ಲೇರ್‌ನಲ್ಲಿ ಸಂಸದರನ್ನು ಭೇಟಿಯಾಗಿ ಚುನಾವಣೆಯಲ್ಲಿ ಗೆದ್ದಿದ್ದಕ್ಕಾಗಿ ಅಭಿನಂದಿಸಿದ್ದಾಗಿ ತಿಳಿಸಲಾಗಿದೆ” ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ಹೇಳಿದೆ.

“ನಿಕೋಬಾರ್‌ನ ಜನರು ತಮ್ಮ ಸಮಸ್ಯೆಗಳನ್ನು ಸಂಸದರೊಂದಿಗೆ ಹಂಚಿಕೊಂಡಿದ್ದು, ಸಂಸದರು ಕೋಬಾರ್‌ನ ಜನರ ಮೇಲಿನ ಆಳವಾದ ಪ್ರೀತಿ ಮತ್ತು ಅವರು ತಮ್ಮ ಹಿಂದಿನ ಅಧಿಕಾರಾವಧಿಯಲ್ಲಿ ಸಮುದಾಯಕ್ಕಾಗಿ ಕೈಗೊಂಡ ಕೆಲಸಗಳ ಬಗ್ಗೆ ಮಾತನಾಡಿದ್ದಾರೆ. ಅಲ್ಲದೆ, ಅವರು ಈ ಹಿಂದಿನದನ್ನು ಮರೆತುಬಿಡುವಂತೆ ಹಿರಿಯರನ್ನು ಕೇಳಿಕೊಂಡಿದ್ದಾರೆ. ಬುಡಕಟ್ಟು ಸಮುದಾಯದ ಸಮಸ್ಯೆಗಳನ್ನು ಪರಿಹರಿಸಲು ಇನ್ನೂ ಹೆಚ್ಚಿನ ಬದ್ಧತೆಯಿಂದ ಕೆಲಸ ಮಾಡುವುದಾಗಿ ಭರವಸೆ ನೀಡಿದ್ದಾರೆ” ಎಂದು ಪತ್ರಿಕಾ ಪ್ರಕಟನೆಯಲ್ಲಿ ಹೇಳಲಾಗಿದೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌ ತಿಳಿಸಿದೆ.

“ನಿಕೋಬಾರ್‌ಗೆ ಭೇಟಿ ನೀಡುವಂತೆ ಮುಖ್ಯ ಕ್ಯಾಪ್ಟನ್ ಅವರು ನೀಡಿರುವ ಆಹ್ವಾನವನ್ನು ಸಂಸದರು ಸ್ವೀಕರಿಸಿದ್ದಾರೆ. ಅವರ ಅಧಿಕಾರಾವಧಿಯಲ್ಲಿ ಸಾಧ್ಯವಾದಷ್ಟು ಜನರಿಗೆ ಸೇವೆ ಸಲ್ಲಿಸುವ ಭರವಸೆ ನೀಡಿದ್ದಾರೆ.
ಎಲ್ಲಾ ಕ್ಷೇತ್ರಗಳಲ್ಲಿ ಯಶಸ್ಸನ್ನು ಸಾಧಿಸಲು ಬುಡಕಟ್ಟು ಹಿರಿಯರು ಶಕ್ತಿಯ ಆಧಾರ ಸ್ತಂಭಗಳಾಗಿರಲು ವಿನಂತಿಸಿದ್ದಾರೆ” ಎಂದು ಪತ್ರಿಕಾ ಪ್ರಕಟಣೆ ಹೇಳಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವಿವರಿಸಿದೆ.

ಇದನ್ನೂ ಓದಿ : ನೀಟ್-ಯುಜಿ ವಿವಾದ: ಕೇಂದ್ರದಿಂದ ಉನ್ನತ ಮಟ್ಟದ ಸಮಿತಿ ರಚನೆ, ‘ಯಾರನ್ನೂ ಬಿಡುವುದಿಲ್ಲ’ ಎಂದ ಪ್ರಧಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...