Homeಮುಖಪುಟಪೌರತ್ವ ಕಾಯ್ದೆಯ ಕುರಿತು ಹಬ್ಬಿದ ಫೇಕ್‌ನ್ಯೂಸ್‌ಗಳು ಯಾವುವು ಗೊತ್ತೆ? ಇಲ್ಲಿವೆ ನೋಡಿ

ಪೌರತ್ವ ಕಾಯ್ದೆಯ ಕುರಿತು ಹಬ್ಬಿದ ಫೇಕ್‌ನ್ಯೂಸ್‌ಗಳು ಯಾವುವು ಗೊತ್ತೆ? ಇಲ್ಲಿವೆ ನೋಡಿ

- Advertisement -
- Advertisement -

ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಕೇಂದ್ರ ಸರ್ಕಾರ ಜಾರಿಗೊಳಿಸಿದ ನಂತರ ಎಲ್ಲೆಡೆ ಪ್ರತಿಭಟನೆಗಳು ಭುಗಿಲೆದ್ದಿವೆ. ಇದು ಕೇಂದ್ರ ಸರ್ಕಾರಕ್ಕೆ ದೊಡ್ಡ ತಲೆನೋವಾಗಿದೆ. ಇಂತಹ ಸಂದರ್ಭದಲ್ಲಿ ಹೋರಾಟವನ್ನು ದಿಕ್ಕುತಪ್ಪಿಸಲು ಕೆಲವರು ಫೇಕ್‌ ನ್ಯೂಸ್‌ಗಳ ಮೊರೆ ಹೋಗಿದ್ದಾರೆ. ಅಂತಹ ಕೆಲವು ಫೇಕ್‌ನ್ಯೂಸ್‌ಗಳನ್ನು ಇಲ್ಲಿ ಕೊಡಲಾಗಿದೆ.

1 ನಾವು ಮುಸ್ಲಿಮರು. ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಬೆಂಬಲಿಸುತ್ತೇವೆ.

ದೇಶಾದ್ಯಂತ ಭಾರೀ ಹೋರಾಟಗಳಿಗೆ ಕಾರಣವಾಗಿರುವ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ನಾವು ಮುಸ್ಲಿಂರಾದರೂ ಬೆಂಬಲಿಸುತ್ತೇವೆ ಎಂಬ ಸಂದೇಶವನ್ನು ನೂರಾರು ಜನ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಈ ಕಾಯ್ದೆಯು ಮುಸ್ಲಿಮರನ್ನು ಹೊರತುಪಡಿಸಿ ಇತರೆ ಧರ್ಮಿಯರು 2015ಕ್ಕೂ ಮುಂಚೆ ಭಾರತಕ್ಕೆ ವಲಸೆ ಬಂದಿದ್ದರೆ ಅವರಿಗೆ ಭಾರತದ ಪೌರತ್ವವನ್ನು ನೀಡುತ್ತದೆ.

ಈ ಕುರಿತು ನಿಜಕ್ಕೂ ಅವರು ಮುಸ್ಲಿಮರೆ ಎಂದು ಫ್ಯಾಕ್ಟ್ಚೆಕ್ ಮಾಡಿದಾಗ ಆಘಾತಕಾರಿ ಅಂಶಗಳು ಬಯಲಾಗಿವೆ. ಈಗ ಯಾರೆಲ್ಲಾ ತಾವು ಮುಸ್ಲಿಮರು ಎನ್ನುತ್ತಿದ್ದಾರೆ ಅದೇ ಅಕೌಂಟ್‌ಗಳು ಕೆಲವು ತಿಂಗಳುಗಳ ಹಿಂದೆಯಷ್ಟೇ ನಾವು ಹಿಂದೂಗಳು. ಹಿಂದೂಗಳಾಗಿದ್ದಕ್ಕೆ ಹೆಮ್ಮೆ ಇದೆ ಎಂದು ಬರೆದುಕೊಂಡಿರುವುದು ಕಂಡುಬಂದಿದೆ.

ಅಂದರೆ ಹಿಂದೂಗಳಾಗಿದ್ದರೂ ಸಹ ಮುಸ್ಲಿಂ ಹೆಸರಿಗೆ ಬದಲಿಸಿಕೊಂಡು ಅಥವಾ ಫೇಕ್ ಐಡಿಗಳನ್ನು ಬಳಸಿಕೊಂಡು ಪೌರತ್ವ ಕಾಯ್ದೆಯನ್ನು ಬೆಂಬಲಿಸಲು ಮುಂದಾಗಿದ್ದಾರೆ. ಅರ್ಥಾತ್ ಮುಸ್ಲಿಂ ವಿರುದ್ಧದ ಕಾನೂನನ್ನು ಮುಸ್ಲಿಮರೆ ಬೆಂಬಲಿಸುತ್ತಿದ್ದಾರೆ ಎಂಬ ಭಾವನೆ ಮೂಡಿಸಲು ಕಿಡಿಗೇಡಿಗಳು ಮುಂದಾಗಿದ್ದಾರೆ.

2 ಟಿಎಂಸಿ ಮುಖಂಡ, ಕೋಲ್ಕತ್ತದ ಮೇಯರ್ ಕೂಡ ಪೌರತ್ವ ಕಾಯ್ದೆಯನ್ನು ಬೆಂಬಲಿಸಿದ್ದಾರೆ?

ಸಿಎಬಿ ವಿರುದ್ಧ ದಂಗೆ ಎದ್ದಿರುವವರೆ ಕೇಳಿ. ಅಕಸ್ಮಾತ್ 70% ಇರುವ ಹಿಂದೂಗಳೇನಾದರೂ ಅಮಿತ್ ಶಾ ಬೆಂಬಲಕ್ಕೆ ನಿಂತರೆ ನಾಳೆ ನೀವು ರಸ್ತೆಯಲ್ಲಿಯೂ ಸಹ ಓಡಾಡಲು ಆಗುವುದಿಲ್ಲ ಎಂದು ಫಿರ್ಹಾದ್ ಬಾಬಿ ಹಕೀಂ ಹೇಳಿದ್ದಾರೆ ಎಂಬ ಪೋಸ್ಟರ್ ಅನ್ನು ಢಮರುಗ ಎಂಬ ಫೇಸ್‌ಬುಕ್ ಪೇಜ್‌ನಲ್ಲಿ ಷೇರ್ ಮಾಡಿದ್ದಾರೆ.

ಫಿರ್ಹಾದ್ ಬಾಬಿ ಹಕೀಂ ಮುಸ್ಲಿಂ ಸಮುದಾಯಕ್ಕೆ ಸೇರಿರುವ ಟಿಎಂಸಿ ಪಕ್ಷದ ಕೋಲ್ಕತ್ತಾ ಮೇಯರ್. ಟಿಎಂಸಿ ಪಕ್ಷವೇ ಖಡಾಖಂಡಿತವಾಗಿ ಸಿಎಬಿ ವಿರೋಧಿಸಿರುತ್ತಿರುವಾಗ ಈ ರೀತಿಯ ಹೇಳಿಕೆ ಕೊಟ್ಟಿದ್ದಾರೆ ಎಂದು ಅವರ ವೈಯಕ್ತಿಕ ಫೇಸ್‌ಬುಕ್ ಪೋಸ್ಟ್ ನೋಡಿದರೆ ಇದು ಸುಳ್ಳು ಎಂದು ಗೊತ್ತಾಗುತ್ತದೆ.

ನಿಜವೆಂದರೆ ಅವರ ಪೌರತ್ವ ಕಾಯ್ದೆ ವಿರೋಧಿಸಿ ತಮ್ಮ ವಾಲ್‌ನಲ್ಲಿ ಬರೆದುಕೊಂಡಿದ್ದಾರೆ ಮಾತ್ರವಲ್ಲ ಟಿವಿ ಚರ್ಚೆ ಮತ್ತು ಸಿಎಬಿ ವಿರೋಧಿ ಪ್ರತಿಭಟನೆಗಳಲ್ಲಿ ಭಾಗವಹಿಸಿದ್ದಾರೆ. ಯಥಾಪ್ರಕಾರ ನೇರವಾಗಿ ಎದುರಿಸಲಾಗದ ಬಿಜೆಪಿ ಕಾರ್ಯಕರ್ತರು ಈ ಸುಳ್ಳು ಸುದ್ದಿಯನ್ನು ಹರಡಿದ್ದಾರೆ.

5 ಅಲಿಘರ್ ವಿವಿಯ ವಿದ್ಯಾರ್ಥಿಗಳು ಹಿಂದೂಗಳಿಂದ ಸ್ವಾತಂತ್ರ ಬೇಕು ಎಂದು ಘೋಷಣೆ ಕೂಗಿದರೆ?

ಪೌರತ್ವ ಕಾಯ್ದೆ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆಗಳು ಭುಗಿಲೆದ್ದಿವೆ. ಇದು ನರೇಂದ್ರ ಮೋದಿ ಮತ್ತು ಅಮಿತ್ ಶಾರವರ ನಿದ್ದೆಗೆಡಿಸಿವೆ. ಇನ್ನು ಎಲ್ಲಾ ವಿ.ವಿಗಳಲ್ಲಿ ವಿದ್ಯಾರ್ಥಿಗಳು ಬೀದಿಗಿಳಿದಿದ್ದಾರೆ. ಜಾಮೀಯ ವಿವಿ ಮತ್ತು ಅಲಿಘರ್ ವಿವಿಯಲ್ಲಿ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿವೆ. ಇಂತಹ ಸಂದರ್ಭದಲ್ಲಿ ಅಲಿಘರ್ ವಿವಿಯ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಹಿಂದೂಗಳಿಂದ ಸ್ವಾತಂತ್ರ್ಯ ಬೇಕು ಎಂಬ ಘೋಷಣೆ ಕೂಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಇದರ ಅಸಲಿ ವಿಡಿಯೋವನ್ನು ನೋಡಿದರೆ ಇದು ಸುಳ್ಳು ಎಂದು ಗೊತ್ತಾಗುತ್ತದೆ. ವಿದ್ಯಾರ್ಥಿಗಳು ಹಿಂದೂತ್ವದಿಂದ ಸ್ವಾತಂತ್ರ್ಯ ಬೇಕು ಎಂದು ಕೂಗಿದ್ದಾರೆ. ಆದರೆ ಹೇಡಿಗಳು ಸುಳ್ಳು ಸುದ್ದಿ ಹರಡಿದ್ದಾರೆ. ಪೂರ್ತಿ ವಿಡಿಯೋ ಇಲ್ಲಿದೆ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...