Homeಮುಖಪುಟಪೌರತ್ವ ಕಾಯ್ದೆಯ ಕುರಿತು ಹಬ್ಬಿದ ಫೇಕ್‌ನ್ಯೂಸ್‌ಗಳು ಯಾವುವು ಗೊತ್ತೆ? ಇಲ್ಲಿವೆ ನೋಡಿ

ಪೌರತ್ವ ಕಾಯ್ದೆಯ ಕುರಿತು ಹಬ್ಬಿದ ಫೇಕ್‌ನ್ಯೂಸ್‌ಗಳು ಯಾವುವು ಗೊತ್ತೆ? ಇಲ್ಲಿವೆ ನೋಡಿ

- Advertisement -
- Advertisement -

ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಕೇಂದ್ರ ಸರ್ಕಾರ ಜಾರಿಗೊಳಿಸಿದ ನಂತರ ಎಲ್ಲೆಡೆ ಪ್ರತಿಭಟನೆಗಳು ಭುಗಿಲೆದ್ದಿವೆ. ಇದು ಕೇಂದ್ರ ಸರ್ಕಾರಕ್ಕೆ ದೊಡ್ಡ ತಲೆನೋವಾಗಿದೆ. ಇಂತಹ ಸಂದರ್ಭದಲ್ಲಿ ಹೋರಾಟವನ್ನು ದಿಕ್ಕುತಪ್ಪಿಸಲು ಕೆಲವರು ಫೇಕ್‌ ನ್ಯೂಸ್‌ಗಳ ಮೊರೆ ಹೋಗಿದ್ದಾರೆ. ಅಂತಹ ಕೆಲವು ಫೇಕ್‌ನ್ಯೂಸ್‌ಗಳನ್ನು ಇಲ್ಲಿ ಕೊಡಲಾಗಿದೆ.

1 ನಾವು ಮುಸ್ಲಿಮರು. ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಬೆಂಬಲಿಸುತ್ತೇವೆ.

ದೇಶಾದ್ಯಂತ ಭಾರೀ ಹೋರಾಟಗಳಿಗೆ ಕಾರಣವಾಗಿರುವ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ನಾವು ಮುಸ್ಲಿಂರಾದರೂ ಬೆಂಬಲಿಸುತ್ತೇವೆ ಎಂಬ ಸಂದೇಶವನ್ನು ನೂರಾರು ಜನ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಈ ಕಾಯ್ದೆಯು ಮುಸ್ಲಿಮರನ್ನು ಹೊರತುಪಡಿಸಿ ಇತರೆ ಧರ್ಮಿಯರು 2015ಕ್ಕೂ ಮುಂಚೆ ಭಾರತಕ್ಕೆ ವಲಸೆ ಬಂದಿದ್ದರೆ ಅವರಿಗೆ ಭಾರತದ ಪೌರತ್ವವನ್ನು ನೀಡುತ್ತದೆ.

ಈ ಕುರಿತು ನಿಜಕ್ಕೂ ಅವರು ಮುಸ್ಲಿಮರೆ ಎಂದು ಫ್ಯಾಕ್ಟ್ಚೆಕ್ ಮಾಡಿದಾಗ ಆಘಾತಕಾರಿ ಅಂಶಗಳು ಬಯಲಾಗಿವೆ. ಈಗ ಯಾರೆಲ್ಲಾ ತಾವು ಮುಸ್ಲಿಮರು ಎನ್ನುತ್ತಿದ್ದಾರೆ ಅದೇ ಅಕೌಂಟ್‌ಗಳು ಕೆಲವು ತಿಂಗಳುಗಳ ಹಿಂದೆಯಷ್ಟೇ ನಾವು ಹಿಂದೂಗಳು. ಹಿಂದೂಗಳಾಗಿದ್ದಕ್ಕೆ ಹೆಮ್ಮೆ ಇದೆ ಎಂದು ಬರೆದುಕೊಂಡಿರುವುದು ಕಂಡುಬಂದಿದೆ.

ಅಂದರೆ ಹಿಂದೂಗಳಾಗಿದ್ದರೂ ಸಹ ಮುಸ್ಲಿಂ ಹೆಸರಿಗೆ ಬದಲಿಸಿಕೊಂಡು ಅಥವಾ ಫೇಕ್ ಐಡಿಗಳನ್ನು ಬಳಸಿಕೊಂಡು ಪೌರತ್ವ ಕಾಯ್ದೆಯನ್ನು ಬೆಂಬಲಿಸಲು ಮುಂದಾಗಿದ್ದಾರೆ. ಅರ್ಥಾತ್ ಮುಸ್ಲಿಂ ವಿರುದ್ಧದ ಕಾನೂನನ್ನು ಮುಸ್ಲಿಮರೆ ಬೆಂಬಲಿಸುತ್ತಿದ್ದಾರೆ ಎಂಬ ಭಾವನೆ ಮೂಡಿಸಲು ಕಿಡಿಗೇಡಿಗಳು ಮುಂದಾಗಿದ್ದಾರೆ.

2 ಟಿಎಂಸಿ ಮುಖಂಡ, ಕೋಲ್ಕತ್ತದ ಮೇಯರ್ ಕೂಡ ಪೌರತ್ವ ಕಾಯ್ದೆಯನ್ನು ಬೆಂಬಲಿಸಿದ್ದಾರೆ?

ಸಿಎಬಿ ವಿರುದ್ಧ ದಂಗೆ ಎದ್ದಿರುವವರೆ ಕೇಳಿ. ಅಕಸ್ಮಾತ್ 70% ಇರುವ ಹಿಂದೂಗಳೇನಾದರೂ ಅಮಿತ್ ಶಾ ಬೆಂಬಲಕ್ಕೆ ನಿಂತರೆ ನಾಳೆ ನೀವು ರಸ್ತೆಯಲ್ಲಿಯೂ ಸಹ ಓಡಾಡಲು ಆಗುವುದಿಲ್ಲ ಎಂದು ಫಿರ್ಹಾದ್ ಬಾಬಿ ಹಕೀಂ ಹೇಳಿದ್ದಾರೆ ಎಂಬ ಪೋಸ್ಟರ್ ಅನ್ನು ಢಮರುಗ ಎಂಬ ಫೇಸ್‌ಬುಕ್ ಪೇಜ್‌ನಲ್ಲಿ ಷೇರ್ ಮಾಡಿದ್ದಾರೆ.

ಫಿರ್ಹಾದ್ ಬಾಬಿ ಹಕೀಂ ಮುಸ್ಲಿಂ ಸಮುದಾಯಕ್ಕೆ ಸೇರಿರುವ ಟಿಎಂಸಿ ಪಕ್ಷದ ಕೋಲ್ಕತ್ತಾ ಮೇಯರ್. ಟಿಎಂಸಿ ಪಕ್ಷವೇ ಖಡಾಖಂಡಿತವಾಗಿ ಸಿಎಬಿ ವಿರೋಧಿಸಿರುತ್ತಿರುವಾಗ ಈ ರೀತಿಯ ಹೇಳಿಕೆ ಕೊಟ್ಟಿದ್ದಾರೆ ಎಂದು ಅವರ ವೈಯಕ್ತಿಕ ಫೇಸ್‌ಬುಕ್ ಪೋಸ್ಟ್ ನೋಡಿದರೆ ಇದು ಸುಳ್ಳು ಎಂದು ಗೊತ್ತಾಗುತ್ತದೆ.

ನಿಜವೆಂದರೆ ಅವರ ಪೌರತ್ವ ಕಾಯ್ದೆ ವಿರೋಧಿಸಿ ತಮ್ಮ ವಾಲ್‌ನಲ್ಲಿ ಬರೆದುಕೊಂಡಿದ್ದಾರೆ ಮಾತ್ರವಲ್ಲ ಟಿವಿ ಚರ್ಚೆ ಮತ್ತು ಸಿಎಬಿ ವಿರೋಧಿ ಪ್ರತಿಭಟನೆಗಳಲ್ಲಿ ಭಾಗವಹಿಸಿದ್ದಾರೆ. ಯಥಾಪ್ರಕಾರ ನೇರವಾಗಿ ಎದುರಿಸಲಾಗದ ಬಿಜೆಪಿ ಕಾರ್ಯಕರ್ತರು ಈ ಸುಳ್ಳು ಸುದ್ದಿಯನ್ನು ಹರಡಿದ್ದಾರೆ.

5 ಅಲಿಘರ್ ವಿವಿಯ ವಿದ್ಯಾರ್ಥಿಗಳು ಹಿಂದೂಗಳಿಂದ ಸ್ವಾತಂತ್ರ ಬೇಕು ಎಂದು ಘೋಷಣೆ ಕೂಗಿದರೆ?

ಪೌರತ್ವ ಕಾಯ್ದೆ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆಗಳು ಭುಗಿಲೆದ್ದಿವೆ. ಇದು ನರೇಂದ್ರ ಮೋದಿ ಮತ್ತು ಅಮಿತ್ ಶಾರವರ ನಿದ್ದೆಗೆಡಿಸಿವೆ. ಇನ್ನು ಎಲ್ಲಾ ವಿ.ವಿಗಳಲ್ಲಿ ವಿದ್ಯಾರ್ಥಿಗಳು ಬೀದಿಗಿಳಿದಿದ್ದಾರೆ. ಜಾಮೀಯ ವಿವಿ ಮತ್ತು ಅಲಿಘರ್ ವಿವಿಯಲ್ಲಿ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿವೆ. ಇಂತಹ ಸಂದರ್ಭದಲ್ಲಿ ಅಲಿಘರ್ ವಿವಿಯ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಹಿಂದೂಗಳಿಂದ ಸ್ವಾತಂತ್ರ್ಯ ಬೇಕು ಎಂಬ ಘೋಷಣೆ ಕೂಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಇದರ ಅಸಲಿ ವಿಡಿಯೋವನ್ನು ನೋಡಿದರೆ ಇದು ಸುಳ್ಳು ಎಂದು ಗೊತ್ತಾಗುತ್ತದೆ. ವಿದ್ಯಾರ್ಥಿಗಳು ಹಿಂದೂತ್ವದಿಂದ ಸ್ವಾತಂತ್ರ್ಯ ಬೇಕು ಎಂದು ಕೂಗಿದ್ದಾರೆ. ಆದರೆ ಹೇಡಿಗಳು ಸುಳ್ಳು ಸುದ್ದಿ ಹರಡಿದ್ದಾರೆ. ಪೂರ್ತಿ ವಿಡಿಯೋ ಇಲ್ಲಿದೆ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....