Homeಮುಖಪುಟಪೌರತ್ವ ಕಾಯ್ದೆಯ ಕುರಿತು ಹಬ್ಬಿದ ಫೇಕ್‌ನ್ಯೂಸ್‌ಗಳು ಯಾವುವು ಗೊತ್ತೆ? ಇಲ್ಲಿವೆ ನೋಡಿ

ಪೌರತ್ವ ಕಾಯ್ದೆಯ ಕುರಿತು ಹಬ್ಬಿದ ಫೇಕ್‌ನ್ಯೂಸ್‌ಗಳು ಯಾವುವು ಗೊತ್ತೆ? ಇಲ್ಲಿವೆ ನೋಡಿ

- Advertisement -
- Advertisement -

ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಕೇಂದ್ರ ಸರ್ಕಾರ ಜಾರಿಗೊಳಿಸಿದ ನಂತರ ಎಲ್ಲೆಡೆ ಪ್ರತಿಭಟನೆಗಳು ಭುಗಿಲೆದ್ದಿವೆ. ಇದು ಕೇಂದ್ರ ಸರ್ಕಾರಕ್ಕೆ ದೊಡ್ಡ ತಲೆನೋವಾಗಿದೆ. ಇಂತಹ ಸಂದರ್ಭದಲ್ಲಿ ಹೋರಾಟವನ್ನು ದಿಕ್ಕುತಪ್ಪಿಸಲು ಕೆಲವರು ಫೇಕ್‌ ನ್ಯೂಸ್‌ಗಳ ಮೊರೆ ಹೋಗಿದ್ದಾರೆ. ಅಂತಹ ಕೆಲವು ಫೇಕ್‌ನ್ಯೂಸ್‌ಗಳನ್ನು ಇಲ್ಲಿ ಕೊಡಲಾಗಿದೆ.

1 ನಾವು ಮುಸ್ಲಿಮರು. ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಬೆಂಬಲಿಸುತ್ತೇವೆ.

ದೇಶಾದ್ಯಂತ ಭಾರೀ ಹೋರಾಟಗಳಿಗೆ ಕಾರಣವಾಗಿರುವ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ನಾವು ಮುಸ್ಲಿಂರಾದರೂ ಬೆಂಬಲಿಸುತ್ತೇವೆ ಎಂಬ ಸಂದೇಶವನ್ನು ನೂರಾರು ಜನ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಈ ಕಾಯ್ದೆಯು ಮುಸ್ಲಿಮರನ್ನು ಹೊರತುಪಡಿಸಿ ಇತರೆ ಧರ್ಮಿಯರು 2015ಕ್ಕೂ ಮುಂಚೆ ಭಾರತಕ್ಕೆ ವಲಸೆ ಬಂದಿದ್ದರೆ ಅವರಿಗೆ ಭಾರತದ ಪೌರತ್ವವನ್ನು ನೀಡುತ್ತದೆ.

ಈ ಕುರಿತು ನಿಜಕ್ಕೂ ಅವರು ಮುಸ್ಲಿಮರೆ ಎಂದು ಫ್ಯಾಕ್ಟ್ಚೆಕ್ ಮಾಡಿದಾಗ ಆಘಾತಕಾರಿ ಅಂಶಗಳು ಬಯಲಾಗಿವೆ. ಈಗ ಯಾರೆಲ್ಲಾ ತಾವು ಮುಸ್ಲಿಮರು ಎನ್ನುತ್ತಿದ್ದಾರೆ ಅದೇ ಅಕೌಂಟ್‌ಗಳು ಕೆಲವು ತಿಂಗಳುಗಳ ಹಿಂದೆಯಷ್ಟೇ ನಾವು ಹಿಂದೂಗಳು. ಹಿಂದೂಗಳಾಗಿದ್ದಕ್ಕೆ ಹೆಮ್ಮೆ ಇದೆ ಎಂದು ಬರೆದುಕೊಂಡಿರುವುದು ಕಂಡುಬಂದಿದೆ.

ಅಂದರೆ ಹಿಂದೂಗಳಾಗಿದ್ದರೂ ಸಹ ಮುಸ್ಲಿಂ ಹೆಸರಿಗೆ ಬದಲಿಸಿಕೊಂಡು ಅಥವಾ ಫೇಕ್ ಐಡಿಗಳನ್ನು ಬಳಸಿಕೊಂಡು ಪೌರತ್ವ ಕಾಯ್ದೆಯನ್ನು ಬೆಂಬಲಿಸಲು ಮುಂದಾಗಿದ್ದಾರೆ. ಅರ್ಥಾತ್ ಮುಸ್ಲಿಂ ವಿರುದ್ಧದ ಕಾನೂನನ್ನು ಮುಸ್ಲಿಮರೆ ಬೆಂಬಲಿಸುತ್ತಿದ್ದಾರೆ ಎಂಬ ಭಾವನೆ ಮೂಡಿಸಲು ಕಿಡಿಗೇಡಿಗಳು ಮುಂದಾಗಿದ್ದಾರೆ.

2 ಟಿಎಂಸಿ ಮುಖಂಡ, ಕೋಲ್ಕತ್ತದ ಮೇಯರ್ ಕೂಡ ಪೌರತ್ವ ಕಾಯ್ದೆಯನ್ನು ಬೆಂಬಲಿಸಿದ್ದಾರೆ?

ಸಿಎಬಿ ವಿರುದ್ಧ ದಂಗೆ ಎದ್ದಿರುವವರೆ ಕೇಳಿ. ಅಕಸ್ಮಾತ್ 70% ಇರುವ ಹಿಂದೂಗಳೇನಾದರೂ ಅಮಿತ್ ಶಾ ಬೆಂಬಲಕ್ಕೆ ನಿಂತರೆ ನಾಳೆ ನೀವು ರಸ್ತೆಯಲ್ಲಿಯೂ ಸಹ ಓಡಾಡಲು ಆಗುವುದಿಲ್ಲ ಎಂದು ಫಿರ್ಹಾದ್ ಬಾಬಿ ಹಕೀಂ ಹೇಳಿದ್ದಾರೆ ಎಂಬ ಪೋಸ್ಟರ್ ಅನ್ನು ಢಮರುಗ ಎಂಬ ಫೇಸ್‌ಬುಕ್ ಪೇಜ್‌ನಲ್ಲಿ ಷೇರ್ ಮಾಡಿದ್ದಾರೆ.

ಫಿರ್ಹಾದ್ ಬಾಬಿ ಹಕೀಂ ಮುಸ್ಲಿಂ ಸಮುದಾಯಕ್ಕೆ ಸೇರಿರುವ ಟಿಎಂಸಿ ಪಕ್ಷದ ಕೋಲ್ಕತ್ತಾ ಮೇಯರ್. ಟಿಎಂಸಿ ಪಕ್ಷವೇ ಖಡಾಖಂಡಿತವಾಗಿ ಸಿಎಬಿ ವಿರೋಧಿಸಿರುತ್ತಿರುವಾಗ ಈ ರೀತಿಯ ಹೇಳಿಕೆ ಕೊಟ್ಟಿದ್ದಾರೆ ಎಂದು ಅವರ ವೈಯಕ್ತಿಕ ಫೇಸ್‌ಬುಕ್ ಪೋಸ್ಟ್ ನೋಡಿದರೆ ಇದು ಸುಳ್ಳು ಎಂದು ಗೊತ್ತಾಗುತ್ತದೆ.

ನಿಜವೆಂದರೆ ಅವರ ಪೌರತ್ವ ಕಾಯ್ದೆ ವಿರೋಧಿಸಿ ತಮ್ಮ ವಾಲ್‌ನಲ್ಲಿ ಬರೆದುಕೊಂಡಿದ್ದಾರೆ ಮಾತ್ರವಲ್ಲ ಟಿವಿ ಚರ್ಚೆ ಮತ್ತು ಸಿಎಬಿ ವಿರೋಧಿ ಪ್ರತಿಭಟನೆಗಳಲ್ಲಿ ಭಾಗವಹಿಸಿದ್ದಾರೆ. ಯಥಾಪ್ರಕಾರ ನೇರವಾಗಿ ಎದುರಿಸಲಾಗದ ಬಿಜೆಪಿ ಕಾರ್ಯಕರ್ತರು ಈ ಸುಳ್ಳು ಸುದ್ದಿಯನ್ನು ಹರಡಿದ್ದಾರೆ.

5 ಅಲಿಘರ್ ವಿವಿಯ ವಿದ್ಯಾರ್ಥಿಗಳು ಹಿಂದೂಗಳಿಂದ ಸ್ವಾತಂತ್ರ ಬೇಕು ಎಂದು ಘೋಷಣೆ ಕೂಗಿದರೆ?

ಪೌರತ್ವ ಕಾಯ್ದೆ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆಗಳು ಭುಗಿಲೆದ್ದಿವೆ. ಇದು ನರೇಂದ್ರ ಮೋದಿ ಮತ್ತು ಅಮಿತ್ ಶಾರವರ ನಿದ್ದೆಗೆಡಿಸಿವೆ. ಇನ್ನು ಎಲ್ಲಾ ವಿ.ವಿಗಳಲ್ಲಿ ವಿದ್ಯಾರ್ಥಿಗಳು ಬೀದಿಗಿಳಿದಿದ್ದಾರೆ. ಜಾಮೀಯ ವಿವಿ ಮತ್ತು ಅಲಿಘರ್ ವಿವಿಯಲ್ಲಿ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿವೆ. ಇಂತಹ ಸಂದರ್ಭದಲ್ಲಿ ಅಲಿಘರ್ ವಿವಿಯ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಹಿಂದೂಗಳಿಂದ ಸ್ವಾತಂತ್ರ್ಯ ಬೇಕು ಎಂಬ ಘೋಷಣೆ ಕೂಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಇದರ ಅಸಲಿ ವಿಡಿಯೋವನ್ನು ನೋಡಿದರೆ ಇದು ಸುಳ್ಳು ಎಂದು ಗೊತ್ತಾಗುತ್ತದೆ. ವಿದ್ಯಾರ್ಥಿಗಳು ಹಿಂದೂತ್ವದಿಂದ ಸ್ವಾತಂತ್ರ್ಯ ಬೇಕು ಎಂದು ಕೂಗಿದ್ದಾರೆ. ಆದರೆ ಹೇಡಿಗಳು ಸುಳ್ಳು ಸುದ್ದಿ ಹರಡಿದ್ದಾರೆ. ಪೂರ್ತಿ ವಿಡಿಯೋ ಇಲ್ಲಿದೆ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...