Homeಮುಖಪುಟಪೌರತ್ವ ಕಾಯ್ದೆಯ ಕುರಿತು ಹಬ್ಬಿದ ಫೇಕ್‌ನ್ಯೂಸ್‌ಗಳು ಯಾವುವು ಗೊತ್ತೆ? ಇಲ್ಲಿವೆ ನೋಡಿ

ಪೌರತ್ವ ಕಾಯ್ದೆಯ ಕುರಿತು ಹಬ್ಬಿದ ಫೇಕ್‌ನ್ಯೂಸ್‌ಗಳು ಯಾವುವು ಗೊತ್ತೆ? ಇಲ್ಲಿವೆ ನೋಡಿ

- Advertisement -
- Advertisement -

ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಕೇಂದ್ರ ಸರ್ಕಾರ ಜಾರಿಗೊಳಿಸಿದ ನಂತರ ಎಲ್ಲೆಡೆ ಪ್ರತಿಭಟನೆಗಳು ಭುಗಿಲೆದ್ದಿವೆ. ಇದು ಕೇಂದ್ರ ಸರ್ಕಾರಕ್ಕೆ ದೊಡ್ಡ ತಲೆನೋವಾಗಿದೆ. ಇಂತಹ ಸಂದರ್ಭದಲ್ಲಿ ಹೋರಾಟವನ್ನು ದಿಕ್ಕುತಪ್ಪಿಸಲು ಕೆಲವರು ಫೇಕ್‌ ನ್ಯೂಸ್‌ಗಳ ಮೊರೆ ಹೋಗಿದ್ದಾರೆ. ಅಂತಹ ಕೆಲವು ಫೇಕ್‌ನ್ಯೂಸ್‌ಗಳನ್ನು ಇಲ್ಲಿ ಕೊಡಲಾಗಿದೆ.

1 ನಾವು ಮುಸ್ಲಿಮರು. ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಬೆಂಬಲಿಸುತ್ತೇವೆ.

ದೇಶಾದ್ಯಂತ ಭಾರೀ ಹೋರಾಟಗಳಿಗೆ ಕಾರಣವಾಗಿರುವ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ನಾವು ಮುಸ್ಲಿಂರಾದರೂ ಬೆಂಬಲಿಸುತ್ತೇವೆ ಎಂಬ ಸಂದೇಶವನ್ನು ನೂರಾರು ಜನ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಈ ಕಾಯ್ದೆಯು ಮುಸ್ಲಿಮರನ್ನು ಹೊರತುಪಡಿಸಿ ಇತರೆ ಧರ್ಮಿಯರು 2015ಕ್ಕೂ ಮುಂಚೆ ಭಾರತಕ್ಕೆ ವಲಸೆ ಬಂದಿದ್ದರೆ ಅವರಿಗೆ ಭಾರತದ ಪೌರತ್ವವನ್ನು ನೀಡುತ್ತದೆ.

ಈ ಕುರಿತು ನಿಜಕ್ಕೂ ಅವರು ಮುಸ್ಲಿಮರೆ ಎಂದು ಫ್ಯಾಕ್ಟ್ಚೆಕ್ ಮಾಡಿದಾಗ ಆಘಾತಕಾರಿ ಅಂಶಗಳು ಬಯಲಾಗಿವೆ. ಈಗ ಯಾರೆಲ್ಲಾ ತಾವು ಮುಸ್ಲಿಮರು ಎನ್ನುತ್ತಿದ್ದಾರೆ ಅದೇ ಅಕೌಂಟ್‌ಗಳು ಕೆಲವು ತಿಂಗಳುಗಳ ಹಿಂದೆಯಷ್ಟೇ ನಾವು ಹಿಂದೂಗಳು. ಹಿಂದೂಗಳಾಗಿದ್ದಕ್ಕೆ ಹೆಮ್ಮೆ ಇದೆ ಎಂದು ಬರೆದುಕೊಂಡಿರುವುದು ಕಂಡುಬಂದಿದೆ.

ಅಂದರೆ ಹಿಂದೂಗಳಾಗಿದ್ದರೂ ಸಹ ಮುಸ್ಲಿಂ ಹೆಸರಿಗೆ ಬದಲಿಸಿಕೊಂಡು ಅಥವಾ ಫೇಕ್ ಐಡಿಗಳನ್ನು ಬಳಸಿಕೊಂಡು ಪೌರತ್ವ ಕಾಯ್ದೆಯನ್ನು ಬೆಂಬಲಿಸಲು ಮುಂದಾಗಿದ್ದಾರೆ. ಅರ್ಥಾತ್ ಮುಸ್ಲಿಂ ವಿರುದ್ಧದ ಕಾನೂನನ್ನು ಮುಸ್ಲಿಮರೆ ಬೆಂಬಲಿಸುತ್ತಿದ್ದಾರೆ ಎಂಬ ಭಾವನೆ ಮೂಡಿಸಲು ಕಿಡಿಗೇಡಿಗಳು ಮುಂದಾಗಿದ್ದಾರೆ.

2 ಟಿಎಂಸಿ ಮುಖಂಡ, ಕೋಲ್ಕತ್ತದ ಮೇಯರ್ ಕೂಡ ಪೌರತ್ವ ಕಾಯ್ದೆಯನ್ನು ಬೆಂಬಲಿಸಿದ್ದಾರೆ?

ಸಿಎಬಿ ವಿರುದ್ಧ ದಂಗೆ ಎದ್ದಿರುವವರೆ ಕೇಳಿ. ಅಕಸ್ಮಾತ್ 70% ಇರುವ ಹಿಂದೂಗಳೇನಾದರೂ ಅಮಿತ್ ಶಾ ಬೆಂಬಲಕ್ಕೆ ನಿಂತರೆ ನಾಳೆ ನೀವು ರಸ್ತೆಯಲ್ಲಿಯೂ ಸಹ ಓಡಾಡಲು ಆಗುವುದಿಲ್ಲ ಎಂದು ಫಿರ್ಹಾದ್ ಬಾಬಿ ಹಕೀಂ ಹೇಳಿದ್ದಾರೆ ಎಂಬ ಪೋಸ್ಟರ್ ಅನ್ನು ಢಮರುಗ ಎಂಬ ಫೇಸ್‌ಬುಕ್ ಪೇಜ್‌ನಲ್ಲಿ ಷೇರ್ ಮಾಡಿದ್ದಾರೆ.

ಫಿರ್ಹಾದ್ ಬಾಬಿ ಹಕೀಂ ಮುಸ್ಲಿಂ ಸಮುದಾಯಕ್ಕೆ ಸೇರಿರುವ ಟಿಎಂಸಿ ಪಕ್ಷದ ಕೋಲ್ಕತ್ತಾ ಮೇಯರ್. ಟಿಎಂಸಿ ಪಕ್ಷವೇ ಖಡಾಖಂಡಿತವಾಗಿ ಸಿಎಬಿ ವಿರೋಧಿಸಿರುತ್ತಿರುವಾಗ ಈ ರೀತಿಯ ಹೇಳಿಕೆ ಕೊಟ್ಟಿದ್ದಾರೆ ಎಂದು ಅವರ ವೈಯಕ್ತಿಕ ಫೇಸ್‌ಬುಕ್ ಪೋಸ್ಟ್ ನೋಡಿದರೆ ಇದು ಸುಳ್ಳು ಎಂದು ಗೊತ್ತಾಗುತ್ತದೆ.

ನಿಜವೆಂದರೆ ಅವರ ಪೌರತ್ವ ಕಾಯ್ದೆ ವಿರೋಧಿಸಿ ತಮ್ಮ ವಾಲ್‌ನಲ್ಲಿ ಬರೆದುಕೊಂಡಿದ್ದಾರೆ ಮಾತ್ರವಲ್ಲ ಟಿವಿ ಚರ್ಚೆ ಮತ್ತು ಸಿಎಬಿ ವಿರೋಧಿ ಪ್ರತಿಭಟನೆಗಳಲ್ಲಿ ಭಾಗವಹಿಸಿದ್ದಾರೆ. ಯಥಾಪ್ರಕಾರ ನೇರವಾಗಿ ಎದುರಿಸಲಾಗದ ಬಿಜೆಪಿ ಕಾರ್ಯಕರ್ತರು ಈ ಸುಳ್ಳು ಸುದ್ದಿಯನ್ನು ಹರಡಿದ್ದಾರೆ.

5 ಅಲಿಘರ್ ವಿವಿಯ ವಿದ್ಯಾರ್ಥಿಗಳು ಹಿಂದೂಗಳಿಂದ ಸ್ವಾತಂತ್ರ ಬೇಕು ಎಂದು ಘೋಷಣೆ ಕೂಗಿದರೆ?

ಪೌರತ್ವ ಕಾಯ್ದೆ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆಗಳು ಭುಗಿಲೆದ್ದಿವೆ. ಇದು ನರೇಂದ್ರ ಮೋದಿ ಮತ್ತು ಅಮಿತ್ ಶಾರವರ ನಿದ್ದೆಗೆಡಿಸಿವೆ. ಇನ್ನು ಎಲ್ಲಾ ವಿ.ವಿಗಳಲ್ಲಿ ವಿದ್ಯಾರ್ಥಿಗಳು ಬೀದಿಗಿಳಿದಿದ್ದಾರೆ. ಜಾಮೀಯ ವಿವಿ ಮತ್ತು ಅಲಿಘರ್ ವಿವಿಯಲ್ಲಿ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿವೆ. ಇಂತಹ ಸಂದರ್ಭದಲ್ಲಿ ಅಲಿಘರ್ ವಿವಿಯ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಹಿಂದೂಗಳಿಂದ ಸ್ವಾತಂತ್ರ್ಯ ಬೇಕು ಎಂಬ ಘೋಷಣೆ ಕೂಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಇದರ ಅಸಲಿ ವಿಡಿಯೋವನ್ನು ನೋಡಿದರೆ ಇದು ಸುಳ್ಳು ಎಂದು ಗೊತ್ತಾಗುತ್ತದೆ. ವಿದ್ಯಾರ್ಥಿಗಳು ಹಿಂದೂತ್ವದಿಂದ ಸ್ವಾತಂತ್ರ್ಯ ಬೇಕು ಎಂದು ಕೂಗಿದ್ದಾರೆ. ಆದರೆ ಹೇಡಿಗಳು ಸುಳ್ಳು ಸುದ್ದಿ ಹರಡಿದ್ದಾರೆ. ಪೂರ್ತಿ ವಿಡಿಯೋ ಇಲ್ಲಿದೆ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...