Homeಮುಖಪುಟನೀವು ರೈತರನ್ನು ನೋಡಿ, ಕ್ರಿಕೆಟನ್ನು ರಿಷಬ್ ಪಂತ್ ನೋಡಿಕೊಂಡಿದ್ದಾರೆ: ನರೇಂದ್ರ ಮೋದಿಗೆ ಛೀಮಾರಿ

ನೀವು ರೈತರನ್ನು ನೋಡಿ, ಕ್ರಿಕೆಟನ್ನು ರಿಷಬ್ ಪಂತ್ ನೋಡಿಕೊಂಡಿದ್ದಾರೆ: ನರೇಂದ್ರ ಮೋದಿಗೆ ಛೀಮಾರಿ

- Advertisement -
- Advertisement -

ಬ್ರಿಸ್ಬೇನ್‌‌ನಲ್ಲಿ ನಡೆದ ಆಸ್ಟ್ರೇಲಿಯಾ-ಭಾರತ ನಡುವಿನ ಬಾರ್ಡರ್ ಗವಾಸ್ಕರ್ ಸರಣಿಯ ನಾಲ್ಕನೇ ಹಾಗೂ ಕೊನೆಯ ಟೆಸ್ಟ್ ಪಂದ್ಯದಲ್ಲಿ ಭಾರತ ರೋಚಕ ಜಯಗಳಿಸಿ, 2-1 ಅಂತರದಿಂದ ಸರಣಿಯನ್ನು ತನ್ನದಾಗಿಸಿಕೊಂಡಿದೆ. ಶುಭ್‌ಮನ್ ಗಿಲ್ ಮತ್ತು ರಿಷಬ್ ಪಂತ್‌ರವರ ಅದ್ಭುತ ಬ್ಯಾಂಟಿಂಗ್‌ನಿಂದ ಭಾರತ ಮೂರು ವಿಕೆಟ್‌ಗಳ ಜಯ ಪಡೆಯಿತು. ಈ ಐತಿಹಾಸಿಕ ಗೆಲುವಿಗೆ ಭಾರತೀಯ ಕ್ರಿಕೆಟ್ ತಂಡವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿಯ ವಿರುದ್ದ ಟ್ವಿಟ್ಟರಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾರತ ಕ್ರಿಕೆಟ್ ತಂಡಕ್ಕೆ ಅಭಿನಂದನೆ ಸಲ್ಲಿಸಿ ಟ್ವೀಟ್ ಮಾಡಿರುವ ನರೇಂದ್ರ ಮೋದಿ, “ಆಸ್ಟ್ರೇಲಿಯಾದಲ್ಲಿ ನಡೆದ ಭಾರತೀಯ ಕ್ರಿಕೆಟ್ ತಂಡದ ಯಶಸ್ಸಿನಿಂದ ನಾವೆಲ್ಲರೂ ಸಂತೋಷಗೊಂಡಿದ್ದೇವೆ. ಅವರ ಗಮನಾರ್ಹ ಶಕ್ತಿ ಮತ್ತು ಉತ್ಸಾಹವು ಪಂದ್ಯದ ಉದ್ದಕ್ಕೂ ಗೋಚರಿಸಿತು. ತಂಡಕ್ಕೆ ಅಭಿನಂದನೆಗಳು! ನಿಮ್ಮ ಮುಂದಿನ ಪ್ರಯತ್ನಗಳಿಗೆ ಶುಭಾಶಯಗಳು” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಆಸ್ಟ್ರೇಲಿಯಾ ಎದುರು ಜಯ: ಐತಿಹಾಸಿಕ ಬಾರ್ಡರ್ ಗವಾಸ್ಕರ್ ಸರಣಿ ಭಾರತದ ಮಡಿಲಿಗೆ

ಟ್ವಿಟ್ಟರ್‌ನಲ್ಲಿ ಸಕ್ರಿಯವಾಗಿರುವ ಹಲವಾರು ಜನರು ಮೋದಿಯ ಟ್ವೀಟ್‌ಗೆ ಆಕ್ರೋಶ ವ್ಯಕ್ತಪಡಿಸಿ, ರೈತ ಹೋರಾಟ ಮತ್ತು ಅರುಣಾಚಲ ಪ್ರದೇಶದಲ್ಲಿ ಚೀನಾ ಕಟ್ಟಿರುವ ಹಳ್ಳಿಯ ಬಗ್ಗೆ ಗಮನ ಹರಿಸುವಂತೆ ಹೇಳಿದ್ದಾರೆ.

ಪ್ರಶಾಂತ್ ಪಾಲ್ ಅವರು, “ಅಣ್ಣಾ ನೀವು ಮೊದಲು ರೈತರನ್ನು ನೋಡಿ, ಪಂದ್ಯಾಟವನ್ನು ರಿಷಬ್ ಪಂತ್ ನೋಡಿಕೊಂಡಿದ್ದಾರೆ” ಎಂದು ಆ‌ಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್‌‌ಕುಮಾರ್‌ ಮೀನಾ ಅವರು, ” ಚೀನಾ ಅರುಣಾಚಲ ಪ್ರದೇಶದಲ್ಲಿ ಗ್ರಾಮವನ್ನು ನಿರ್ಮಿಸಿದೆ. ನಮ್ಮ ಮಾತೃಭೂಮಿಯನ್ನು ರಕ್ಷಣೆ ಮಾಡಲು ಬಿಜೆಪಿ ಸರ್ಕಾರ ಏನು ಮಾಡುತ್ತಿದೆ ಎಂದು ವಿವರಿಸಬಹುದೆ” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಸೆಪ್ಟಂಬರ್‌ ತಿಂಗಳವರೆಗೆ ಕೇಂದ್ರ ಸರ್ಕಾರ ಮಾಡಿದ ಒಟ್ಟು ಸಾಲ 107.04 ಲಕ್ಷ ಕೋಟಿ!

ಟಿಆರ್‌‌ಎಸ್ ಥೋಪು ಎಂಬ ಟ್ವಿಟ್ಟರ್‌ ಹ್ಯಾಂಡಲ್, “ಅರುಣಾಚಲ್ ಪ್ರದೇಶದಲ್ಲಿ ಆಗುತ್ತಿರುವ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಭಿವೃದ್ದಿ ಕೆಲಸಗಳ ಬಗ್ಗೆ ಕೂಡಾ ಖುಷಿ ಪಡಿ” ಎಂದು ಹೇಳಿದ್ದಾರೆ.

ರವಿ ಕುಮಾರ್‌ ಅವರು, ಕೇವಲ ಕ್ರಿಕೆಟ್ ನೋಡುವುದಲ್ಲ, ಇದನ್ನು ಕೂಡಾ ನೋಡಿ ಎಂದು ಅರುಣಾಚಲ ಪ್ರದೇಶದಲ್ಲಿ ಚೀನಾ ಕಟ್ಟುತ್ತಿರುವ ಮನೆಗಳ ಫೋಟೋ ಹಾಕಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಹಿಂದಿ ಹೇರಿಕೆ ವಿರೋಧಿ ಚಿತ್ರಗಳನ್ನು ರೈತರ ಅರಾಜಕತೆ ಎಂದು ಪೋಸ್ಟ್ ಮಾಡಿದ ಬಿಜೆಪಿಗರು!

ತಮಿಳನ್ ಸತ್ಯಾ ಟ್ವಿಟ್ಟರ್‌ ಹ್ಯಾಂಡಲ್, “4.5 ಕಿಲೋ ಮೀಟರ್‌ ಭಾರತದ ಭೂಪ್ರದೇಶದ ಒಳಗಡೆ ಚೀನಾ ಮನೆಗಳನ್ನು ಕಟ್ಟಿದೆ. ಕಳೆದ 60 ದಿನಗಳಿಂದ ರೈತರು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಎರಡು ದೊಡ್ಡ ಸಮಸ್ಯೆಗಳ ಬಗ್ಗೆ ಯಾವುದೆ ಕ್ರಮ ತೆಗೆದುಕೊಂಡಿಲ್ಲ. ಆದರೆ ಕ್ರಿಕೆಟ್‌ಗೆ ಅಭಿನಂದಿಸುತ್ತಾರೆ. ನೀವು ಭಾರತದ ಪ್ರಧಾನಿಯಾಗಲು ಅರ್ಹತೆ ಇಲ್ಲದವರು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ’ಬಾಲಾಕೋಟ್ ದಾಳಿಯಲ್ಲಿ 300 ಜನರ ಸಾವನ್ನು ಪಾಕಿಸ್ತಾನ ಒಪ್ಪಿಕೊಂಡಿದೆ’ ಎಂದು ಸುಳ್ಳು ಸುದ್ದಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...