Homeಮುಖಪುಟಮಕ್ಕಳನ್ನು ಹೆರುವುದು ನೀವು, ಸರ್ಕಾರ ವೆಚ್ಚ ಭರಿಸಬೇಕಾ?: ಬಿಜೆಪಿ ಶಾಸಕನ ವಿವಾದಾತ್ಮಕ ಹೇಳಿಕೆ

ಮಕ್ಕಳನ್ನು ಹೆರುವುದು ನೀವು, ಸರ್ಕಾರ ವೆಚ್ಚ ಭರಿಸಬೇಕಾ?: ಬಿಜೆಪಿ ಶಾಸಕನ ವಿವಾದಾತ್ಮಕ ಹೇಳಿಕೆ

- Advertisement -
- Advertisement -

ಉತ್ತರ ಪ್ರದೇಶ ಸರ್ಕಾರ ಕಳೆದ ನವರಾತ್ರಿಯಿಂದ ಮಹಿಳೆಯರಿಗಾಗಿ ಮಿಷನ್ ಶಕ್ತಿ ಅಭಿಯಾನವನ್ನು ನಡೆಸುತ್ತಿದೆ. ಮಹಿಳಾ ಸಬಲೀಕರಣಕ್ಕೆ ಸಹಾಯಕವಾಗಲಿದೆ ಎಂದು ಹೇಳುತ್ತ ಹಲವಾರು ಕಾರ್ಯಕ್ರಮಗಳನ್ನು ನಡೆಸುತ್ತಿದೆ. ಆದರೆ ಇತ್ತ ಆಡಳಿತರೂಢ ಬಿಜೆಪಿ ಶಾಸಕ ರಮೇಶ್ ದಿವಾಕರ್, ಮಹಿಳೆಯರ ಬಗ್ಗೆ ನಾಲಿಗೆ ಹರಿಯಬಿಟ್ಟಿದ್ದುಮ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಶಾಲಾ ಶುಲ್ಕ ಮನ್ನಾ ಮಾಡಿ ಎಂದು ಮನವಿ ಮಾಡಲು ಹೋಗಿದ್ದ ಮಹಿಳೆಯರ ಬಗ್ಗೆ ಬಿಜೆಪಿ ಶಾಸಕ ರಮೇಶ್ ದಿವಾಕರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ಕೆಲವು ಮಹಿಳೆಯರು ತಮ್ಮ ಮಕ್ಕಳ ಶುಲ್ಕವನ್ನು ಮನ್ನಾ ಮಾಡಲು ಶಾಸಕರ ಬಳಿಗೆ ಹೋಗಿದ್ದರು. ಆಗ “ನೀವು ಮಕ್ಕಳನ್ನು ಹೆರುತ್ತೀರಿ… ನಿಮ್ಮ ಮಕ್ಕಳ ಶುಲ್ಕವನ್ನು ಸರ್ಕಾರ ಭರಿಸಬೇಕೆ” ಎಂದು ಕೀಳುಮಟ್ಟದಲ್ಲಿ ಮಾತನಾಡಿದ್ದಾರೆ.

ಉತ್ತರ ಪ್ರದೇಶದ ಔರೈಯ ಎಂಬಲ್ಲಿ ಮಹಿಳೆಯರು ತಮ್ಮ ಮಕ್ಕಳ ಶಿಕ್ಷಣದ ಶುಲ್ಕ ಮನ್ನಾ ಮಾಡುವಂತೆ ತಮ್ಮ ಮನವಿಯನ್ನು ಬಿಜೆಪಿ ಶಾಸಕ ರಮೇಶ್ ದಿವಾಕರ್ ಅವರ ಮುಂದಿಡುತ್ತಾರೆ. ಈ ಸಂದರ್ಭದಲ್ಲಿ ತಮ್ಮ ಎಲ್ಲೆ ಮೀರಿ ಶಾಸಕರು ಮಹಿಳೆಯರ ಬಗ್ಗೆ ಮಾತನಾಡಿದ್ದಾರೆ.

ಇದನ್ನೂ ಓದಿ: “ಮಗಳು ಬೇರೊಬ್ಬರ ಸ್ವತ್ತು, ಕಳುಹಿಸಿ ಕೊಡಲಾಗುವುದು”: ವಿವಾದಾತ್ಮಕ ಟ್ವೀಟ್‌ಗೆ ಸ್ಪಷ್ಟನೆ ನೀಡಿದ ಸಚಿವ

ಶಾಸಕರು ಮತ್ತು ಮಹಿಳೆಯರ ನಡುವಿನ ಮಾತುಕತೆಯನ್ನು ಕೆಲವರು ವಿಡಿಯೋ ಚಿತ್ರಿಕರಣ ಮಾಡಿಕೊಂಡಿದ್ದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಈ ವಿಡಿಯೋ ವೈರಲ್ ಆದ ನಂತರ ಶಾಸಕರ ಹೇಳಿಕೆ ಜನರ ಗಮನಕ್ಕೆ ಬಂದಿದೆ. ಶಾಸಕ ರಮೇಶ್ ದಿವಾಕರ್‌ ವರ್ತನೆಗೆ ಜನರು ಆಕ್ರೋಶ ಹೊರಹಾಕಿದ್ದಾರೆ.

ಇಷ್ಟಕ್ಕೆ ಸುಮ್ಮನಾಗದ ಶಾಸಕ ರಮೇಶ್ ದಿವಾಕರ್‌ ಮಹಿಳೆಯರಿಗೆ ಬಿಟ್ಟಿ ಸಲಹೆಗಳನ್ನು ನೀಡಿದ್ದಾರೆ. ಮಕ್ಕಳನ್ನು ಖಾಸಗಿ ಶಾಲೆಗಳಿಂದ ಬಿಡಿಸಿ ಸರ್ಕಾರಿ ಶಾಲೆಗಳಿಗೆ ಕಳುಹಿಸಲು ತಿಳಿಸಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಉಚಿತ ಶಿಕ್ಷಣ ದೊರೆಯುತ್ತದೆ ಅಲ್ಲಿಗೆ ಕಳುಹಿಸಿ ಎಂದಿದ್ದಾರೆ.

ಮಹಿಳೆಯರು ಕೂಡ ನಾವು ನಿಮಗೆ ಮತ ನೀಡಿ ಆಯ್ಕೆ ಮಾಡಿದ್ದೇವೆ. ನಿಮ್ಮ ಮಾತುಗಳು ಸರಿಯಾಗಿಲ್ಲ ಎಂದು ಶಾಸಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಸರ್ಕಾರಿ ಶಾಲೆಗಳನ್ನು ಮೊದಲು ಚೆನ್ನಾಗಿ ಮಾಡಿ, ನಂತರ ನಮಗೆ ಸಲಹೆ ನೀಡಿ ಎಂದು ಆಗ್ರಹಿಸಿದ್ದಾರೆ. ಸದ್ಯಕ್ಕೆ ಈ ಬಗ್ಗೆ ಶಾಸಕರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ ಸಾಮಾಜಿಕ ಜಾಲತಾಣಗಳಲ್ಲಿ ಅವರ ಈ ವಿಡಿಯೋ ವೈರಲ್ ಆಗುತ್ತಿದೆ.

ಉತ್ತರ ಪ್ರದೇಶದ ಸರ್ಕಾರಿ ಶಾಲೆಗಳ ಬಗ್ಗೆ ಕಳೆದ ಡಿಸೆಂಬರ್‌ ತಿಂಗಳಲ್ಲಿ ಆಮ್ ಆದ್ಮಿ ಪಾರ್ಟಿ  #SelfieWithSarkaariSchool ಅಭಿಯಾನ ಆರಂಭಿಸಿ, ಉತ್ತರ ಪ್ರದೇಶದ ಶಾಲೆಗಳ ಚಿತ್ರಣವನ್ನು ಬಯಲಿಗೆಳೆದಿತ್ತು. ಉತ್ತರ ಪ್ರದೇಶದ ಪಾಳುಬಿದ್ದ ಶಾಲೆಗಳು, ದನದ ಕೊಟ್ಟಿಗೆಗಳಾಗಿರುವ ಶಾಲೆಗಳು, ಸ್ವಚ್ಛತೆ ಮಾಯವಾಗಿರುವ, ಸುಣ್ಣ-ಬಣ್ಣ ಕಾಣದೇ ಅದೇಷ್ಟೋ ವರ್ಷಗಳಾಗಿರುವ ಶಾಲೆಗಳ ಚಿತ್ರಗಳನ್ನು ಈ ಅಭಿಯಾನದಲ್ಲಿ ಹಂಚಿಕೊಳ್ಳಲಾಗಿತ್ತು.


ಇದನ್ನೂ ಓದಿ: ಗುಜರಾತ್ ಮಾಡೆಲ್: ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳು & ಕೊಬ್ಬುತ್ತಿರುವ ಉದ್ಯಮಿಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...